Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:43 - ಪರಿಶುದ್ದ ಬೈಬಲ್‌

43 “ಒಂದುವೇಳೆ ಒಬ್ಬನು ಹಳೆಯ ಕಲ್ಲುಗಳನ್ನು ಮತ್ತು ಮಣ್ಣನ್ನು ತೆಗೆಸಿ ಹೊಸ ಕಲ್ಲುಗಳನ್ನು, ಮಣ್ಣನ್ನು ಮತ್ತು ಹೊಸ ಮಡ್ಡಿಯನ್ನು ಹಾಕಿಸಿದ್ದರೂ ಬೂಷ್ಟು ಮತ್ತೆ ಆ ಮನೆಯಲ್ಲಿ ಕಾಣಿಸಿಕೊಂಡರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 “ಅವನು ಆ ಕಲ್ಲುಗಳನ್ನು ತೆಗಿಸಿ, ಮನೆಯ ಗೋಡೆಗಳನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ರೋಗದ ಗುರುತು ಪುನಃ ಕಂಡುಬಂದರೆ ಯಾಜಕನು ಬಂದು ಅದನ್ನು ನೋಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಅವನು ಆ ಕಲ್ಲುಗಳನ್ನು ತೆಗೆಸಿ ಮನೆಯ ಗೋಡೆಗಳನ್ನು ಗೀಚಿಸಿ ಮಣ್ಣು ಮೆತ್ತಿದ ಮೇಲೆ ಆ ರೋಗದ ಗುರುತು ತಿರಿಗಿ ಕಾಣಬಂದರೆ ಯಾಜಕನು ಬಂದು ಪರೀಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಅವನು ಆ ಕಲ್ಲುಗಳನ್ನು ತೆಗಿಸಿ ಮನೆಯ ಗೋಡೆಗಳನ್ನು ಗೀಚಿಸಿ ಗಿಲಾವು ಮಾಡಿಸಿದ ಮೇಲೆ ಆ ರೋಗದ ಗುರುತು ತಿರಿಗಿ ಕಾಣಬಂದರೆ ಯಾಜಕನು ಬಂದು ನೋಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 “ಅವನು ಆ ಮನೆಯ ಕಲ್ಲುಗಳನ್ನು ತೆಗೆಸಿ ಅದನ್ನು ಕೆತ್ತಿ ಗಿಲಾವು ಮಾಡಿಸಿದ ಮೇಲೆ ಆ ಬೂಜು ತಿರುಗಿ ಕಾಣಬಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:43
9 ತಿಳಿವುಗಳ ಹೋಲಿಕೆ  

ನಿಮ್ಮ ಅನ್ಯೋನ್ಯತೆಯ ಭೋಜನದಲ್ಲಿ ಈ ಜನರು ಮುಳುಗಿಹೋದ ಬಂಡೆಗಳಂತಿದ್ದಾರೆ. ಅವರು ಭಯವಿಲ್ಲದೆ ನಿಮ್ಮ ಜೊತೆಯಲ್ಲಿ ತಿನ್ನುತ್ತಾರೆ. ಅವರು ತಮ್ಮ ಬಗ್ಗೆ ಮಾತ್ರ ಚಿಂತಿಸುವ ಕುರುಬರಾಗಿದ್ದಾರೆ. ಅವರು ನೀರಿಲ್ಲದ ಮೋಡಗಳಂತಿದ್ದಾರೆ. ಗಾಳಿಯು ಆ ಮೋಡಗಳನ್ನು ಬಡಿದುಕೊಂಡು ಹೋಗುವುದು. ಅವರು ಕಾಲಕ್ಕೆ ತಕ್ಕಂತೆ ಫಲಬಿಡದ ಮತ್ತು ಬೇರುಸಹಿತ ಕಿತ್ತುಬಂದು ಉರುಳಿಹೋದ ಮರಗಳಿಂತಿದ್ದಾರೆ.


ನಿಜವಾಗಿ ಈ ಗಾದೆಗಳಂತೆಯೇ ಅವರು ಮಾಡಿದರು: “ನಾಯಿಯು ತಾನು ಕಕ್ಕಿದ್ದನ್ನೇ ನೆಕ್ಕಲು ತಿರುಗಿಕೊಂಡಿತು” ಮತ್ತು “ತೊಳೆದ ಹಂದಿಯು ಕೆಸರಿನಲ್ಲಿ ಹೊರಳಾಡಲು ಹೋಯಿತು.”


ಈ ಲೋಕದಲ್ಲಿನ ಕೆಟ್ಟಕಾರ್ಯಗಳಿಂದ ಆ ಜನರನ್ನು ಪಾರುಮಾಡಲಾಯಿತು. ನಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದರ ಮೂಲಕ ಅವರಿಗೆ ಬಿಡುಗಡೆಯಾಯಿತು. ಆದರೆ ಆ ಜನರು ತಮ್ಮ ಹಿಂದಿನ ಸಂಗತಿಗಳ ಕಡೆಗೆ ಹಿಂದಿರುಗಿಹೋದರೆ ಮತ್ತು ಅವುಗಳು ಅವರನ್ನು ತಮ್ಮ ಹತೋಟಿಯಲ್ಲಿಟ್ಟುಕೊಂಡಿದ್ದರೆ ಅವರು ಮೊದಲಿಗಿಂತಲೂ ಹೆಚ್ಚು ಕೆಟ್ಟುಹೋಗುತ್ತಾರೆ.


“‘ನಿನ್ನ ವಿರುದ್ಧ ನನಗಿರುವ ಕೋಪ ತೃಪ್ತಿಗೊಳ್ಳುವ ತನಕ ನೀನು ಮತ್ತೆಂದಿಗೂ ಶುದ್ಧಳಾಗುವುದಿಲ್ಲ. ನಿನ್ನನ್ನು ತೊಳೆದು ಕಲೆಗಳನ್ನು ತೆಗೆಯಲು ನನಗೆ ಮನಸ್ಸಿತ್ತು. ಆದರೆ ಕಲೆಗಳು ಹೋಗಲಿಲ್ಲ. ಆದ್ದರಿಂದ ನಿನ್ನ ಮೇಲಿನ ನನ್ನ ಕೋಪವು ತಣ್ಣಗಾಗುವ ತನಕ ನಾನು ನಿನ್ನನ್ನು ತೊಳೆಯುವುದೇ ಇಲ್ಲ.


ಬಳಿಕ ಆ ವ್ಯಕ್ತಿಯು ಗೋಡೆಗಳಲ್ಲಿ ಹೊಸ ಕಲ್ಲುಗಳನ್ನು ಇಡಿಸಿ ಹೊಸ ಮಡ್ಡಿ ಮಾಡಿಸಬೇಕು.


ಯಾಜಕನು ಬಂದು ಆ ಮನೆಯನ್ನು ಪರೀಕ್ಷಿಸಬೇಕು. ರೋಗದ ಗುರುತು ಮನೆಯಲ್ಲಿ ಹರಡಿದ್ದರೆ, ಆಗ ಅದು ಬಹುಬೇಗನೆ ಇತರ ಸ್ಥಳಗಳಿಗೆ ಹರಡುವ ರೋಗವಾಗಿದೆ. ಆದ್ದರಿಂದ ಆ ಮನೆಯು ಅಶುದ್ಧವಾಗಿದೆ.


“ಒಂದು ಮನೆಯಲ್ಲಿ ಹೊಸ ಕಲ್ಲುಗಳನ್ನು ಮತ್ತು ಮಣ್ಣನ್ನು ಹಾಕಿಸಿದ ನಂತರ ಯಾಜಕನು ಅದನ್ನು ಪರೀಕ್ಷಿಸಬೇಕು. ಬೂಷ್ಟು ಮನೆಯಲ್ಲಿ ಹರಡದಿದ್ದರೆ, ಯಾಜಕನು ಮನೆಯನ್ನು ಶುದ್ಧವೆಂದು ಪ್ರಕಟಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು