Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:45 - ಪರಿಶುದ್ದ ಬೈಬಲ್‌

45 ಆ ವ್ಯಕ್ತಿಯು ಆ ಮನೆಯನ್ನು ಕೆಡವಿಹಾಕಿಸಬೇಕು. ಅವರು ಅದರ ಎಲ್ಲಾ ಕಲ್ಲುಗಳನ್ನು, ಮಣ್ಣನ್ನು ಮತ್ತು ಮರದ ತುಂಡುಗಳನ್ನು ಪಟ್ಟಣದ ಹೊರಗಿರುವ ಪ್ರತ್ಯೇಕವಾದ ಅಶುದ್ಧ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಅವನು ಆ ಮನೆಯನ್ನು ಕೆಡವಿ, ಅದರ ಎಲ್ಲಾ ಕಲ್ಲುಗಳನ್ನು, ತೊಲೆಗಳನ್ನು ಮತ್ತು ಮಣ್ಣನ್ನು ಊರಿನ ಹೊರಗೆ ಅಪವಿತ್ರಸ್ಥಳದಲ್ಲಿ ಹಾಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಅವನು ಆ ಮನೆಯನ್ನು ಕೆಡವಿ ಅದರ ಎಲ್ಲಾ ಕಲ್ಲುಗಳನ್ನೂ ತೊಲೆಗಳನ್ನೂ ಮಣ್ಣನ್ನೂ ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಅವನು ಆ ಮನೆಯನ್ನು ಕೆಡಹಿಸಿ ಅದರ ಎಲ್ಲಾ ಕಲ್ಲುಗಳನ್ನೂ ತೊಲೆಗಳನ್ನೂ ಮಣ್ಣನ್ನೂ ಊರಿನ ಹೊರಗೆ ಅಪವಿತ್ರಸ್ಥಳದಲ್ಲಿ ಹಾಕಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಅವನು ಆ ಮನೆಯನ್ನು ಕೆಡವಿಹಾಕಿ, ಅದರ ಕಲ್ಲುಗಳನ್ನೂ, ಮರಗಳನ್ನೂ, ಆ ಮನೆಯ ಎಲ್ಲಾ ಧೂಳನ್ನೂ ತೆಗೆದು, ಅವುಗಳನ್ನು ಪಟ್ಟಣದ ಹೊರಗೆ ಅಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:45
14 ತಿಳಿವುಗಳ ಹೋಲಿಕೆ  

ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳತೆ ಮಾಡದೆ ಬಿಟ್ಟುಬಿಡು. ಅದನ್ನು ಯೆಹೂದ್ಯರಲ್ಲದ ಜನರಿಗೆ ಬಿಟ್ಟಿದೆ. ಆ ಜನರು ಪವಿತ್ರ ನಗರದ ಮೇಲೆ ನಲವತ್ತೆರಡು ತಿಂಗಳ ಕಾಲ ತುಳಿದಾಡುವರು.


ಆಗ ಯೇಸು “ಈ ಕಟ್ಟಡಗಳನ್ನೆಲ್ಲ ನೋಡುತ್ತಿದ್ದೀರಾ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇವುಗಳೆಲ್ಲಾ ನಾಶವಾಗುತ್ತವೆ. ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದಂತೆ ಎಲ್ಲಾ ಕಲ್ಲುಗಳು ಕೆಡವಲ್ಪಡುತ್ತವೆ” ಎಂದು ಹೇಳಿದನು.


ಆಗ ರಾಜನು ಬಹು ಕೋಪಗೊಂಡು ತನ್ನ ಸೈನ್ಯವನ್ನು ಕಳುಹಿಸಿ ಆ ಕೊಲೆಗಾರರನ್ನು ಕೊಲ್ಲಿಸಿದನು ಮತ್ತು ಅವರ ಪಟ್ಟಣವನ್ನು ಸುಟ್ಟುಹಾಕಿಸಿದನು.


ಬಳಿಕ ಕೂದಲಲ್ಲಿ ಸ್ವಲ್ಪವನ್ನು ಮತ್ತೆ ತೆಗೆದುಕೊಂಡು ಬೆಂಕಿಯಲ್ಲಿ ಹಾಕಿ ಸುಟ್ಟುಬಿಡು. ಅಲ್ಲಿಂದ ಬೆಂಕಿಯು ಹಬ್ಬಿ ಇಡೀ ಇಸ್ರೇಲ್ ಜನಾಂಗವನ್ನು ನಾಶಮಾಡುವುದು.”


ನೆಬೂಜರದಾನನು ಯೆಹೋವನ ಆಲಯವನ್ನು ಸುಟ್ಟನು. ಅವನು ಜೆರುಸಲೇಮಿನಲ್ಲಿದ್ದ ಅರಮನೆಯನ್ನು ಮತ್ತು ಉಳಿದೆಲ್ಲ ಮನೆಗಳನ್ನು ಸುಟ್ಟುಬಿಟ್ಟನು. ಅವನು ಜೆರುಸಲೇಮಿನ ಎಲ್ಲಾ ಮುಖ್ಯ ಕಟ್ಟಡಗಳನ್ನು ಸುಟ್ಟುಹಾಕಿದನು.


ಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಆ ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ಈ ತಾಮ್ರಸರ್ಪವನ್ನು “ನೆಹುಷ್ಟಾನ್” ಎಂದು ಕರೆಯುತ್ತಿದ್ದರು. ಜನರು ಈ ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ಈ ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.


ಬಾಳನ ಆಲಯವನ್ನೂ ಅವರು ಹಾಳುಗೆಡವಿದರು. ಅವರು ಬಾಳನ ಆಲಯವನ್ನು ಶೌಚಗೃಹವನ್ನಾಗಿ ಮಾಡಿದರು. ಇಂದೂ ಸಹ ಅದನ್ನು ಶೌಚಗೃಹವಾಗಿ ಬಳಸುತ್ತಾರೆ.


ತರುವಾಯ ಯಾಜಕನು ಮನೆಯ ಒಳಗಿನ ಗೋಡೆಯನ್ನೆಲ್ಲಾ ಕೆರೆಯಿಸಬೇಕು. ಜನರು ಕೆರೆದುಹಾಕುವ ಮಣ್ಣನ್ನು ಪಟ್ಟಣದ ಹೊರಗೆ ಎಸೆದುಬಿಡಬೇಕು. ಅವರು ಅದನ್ನು ಪಟ್ಟಣದ ಹೊರಗಿರುವ ಪ್ರತ್ಯೇಕವಾದ ಅಶುದ್ಧ ಸ್ಥಳದಲ್ಲಿ ಹಾಕಬೇಕು.


ಮುಚ್ಚಲ್ಪಟ್ಟಿರುವ ಆ ಮನೆಯೊಳಗೆ ಯಾವನಾದರೂ ಹೋದರೆ, ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು