Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:6 - ಪರಿಶುದ್ದ ಬೈಬಲ್‌

6 ಯಾಜಕನು ಸಜೀವವಾದ ಎರಡನೆಯ ಪಕ್ಷಿಯನ್ನು, ದೇವದಾರು ಮರದ ತುಂಡನ್ನು, ಕೆಂಪುಬಣ್ಣದ ಬಟ್ಟೆಯ ತುಂಡನ್ನು ಮತ್ತು ಹಿಸ್ಸೋಪ್ ಗಿಡವನ್ನು ತೆಗೆದುಕೊಳ್ಳಬೇಕು. ಸೆಲೇ ನೀರಿನ ಮೇಲೆ ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಜೀವಂತವಾಗಿರುವ ಪಕ್ಷಿಯನ್ನು ಮತ್ತು ಇತರ ವಸ್ತುಗಳನ್ನು ಅದ್ದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಅವನು ಮತ್ತೊಂದು ಪಕ್ಷಿಯನ್ನು, ಆ ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಹರಿಯುವ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಈ ಎಲ್ಲಾ ವಸ್ತುಗಳನ್ನು ಮತ್ತು ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ ಗಿಡದ ಬರಲನ್ನೂ ತೆಗೆದುಕೊಂಡು ಒರತೆ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಅವುಗಳನ್ನೆಲ್ಲಾ ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮತ್ತೊಂದು ಪಕ್ಷಿಯನ್ನೂ ಆ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ ಗಿಡದ ಬರಲನ್ನೂ ತೆಗೆದುಕೊಂಡು ಸೆಲೇ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಅವುಗಳನ್ನೆಲ್ಲಾ ಆ ಪಕ್ಷಿಯನ್ನೂ ಸಜೀವವಾಗಿಯೇ ಅದ್ದಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ, ದೇವದಾರು ಕಟ್ಟಿಗೆಯನ್ನೂ, ರಕ್ತವರ್ಣದ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಂಡು, ಹರಿಯುವ ನೀರಿನ ಬಳಿಯಲ್ಲಿ ವಧಿಸಿದ ಆ ಪಕ್ಷಿಯ ರಕ್ತದಲ್ಲಿ ಅದ್ದಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:6
13 ತಿಳಿವುಗಳ ಹೋಲಿಕೆ  

ನಾನೇ ಜೀವಿಸುವಾತನು. ನಾನು ಸತ್ತೆನು, ಆದರೆ ಇಗೋ ನೋಡು, ನಾನು ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿವೆ.


ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ಯೇಸು ನಂಬಿಗಸ್ತ ಸಾಕ್ಷಿಯಾಗಿದ್ದಾನೆ. ಸತ್ತವರೊಳಗಿಂದ ಮೇಲೆದ್ದು ಬಂದವರಲ್ಲಿ ಆತನೇ ಮೊದಲಿಗನಾಗಿದ್ದಾನೆ. ಆತನು ಲೋಕದ ರಾಜರುಗಳಿಗೆ ಅಧಿಪತಿಯಾಗಿದ್ದಾನೆ. ಯೇಸು ನಮ್ಮನ್ನು ಪ್ರೀತಿಸುತ್ತಾನೆ. ಆತನು ತನ್ನ ರಕ್ತದಿಂದ (ಮರಣ) ನಮ್ಮ ಪಾಪಗಳನ್ನು ನಿವಾರಿಸಿ ಬಿಡುಗಡೆಗೊಳಿಸಿದನು;


ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಅಂದರೆ, ನಾವು ದೇವರ ಶತ್ರುಗಳಾಗಿದ್ದಾಗಲೇ, ದೇವರು ತನ್ನ ಮಗನ ಮರಣದ ಮೂಲಕವಾಗಿ ನಮ್ಮನ್ನು ತನ್ನ ಸ್ನೇಹಿತರನ್ನಾಗಿ ಮಾಡಿಕೊಂಡಿದ್ದಾನೆ. ಈಗ ನಾವು ದೇವರ ಸ್ನೇಹಿತರಾಗಿರುವುದರಿಂದ ದೇವರು ತನ್ನ ಮಗನ ಪ್ರಾಣದ ಮೂಲಕ ನಮ್ಮನ್ನು ರಕ್ಷಿಸುವುದು ಮತ್ತಷ್ಟು ನಿಶ್ಚಯವಾಗಿದೆ.


ನಮ್ಮ ಪಾಪಗಳ ದೆಸೆಯಿಂದ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು. ನಮ್ಮನ್ನು ನೀತಿವಂತರನ್ನಾಗಿ ಮಾಡುವುದಕ್ಕಾಗಿ ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಲಾಯಿತು.


ಇನ್ನು ಸ್ವಲ್ಪ ಕಾಲವಾದ ಮೇಲೆ ಈ ಲೋಕದ ಜನರು ನನ್ನನ್ನು ಇನ್ನೆಂದಿಗೂ ಕಾಣುವುದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವೂ ಜೀವಿಸುವಿರಿ.


ಆದರೆ ಆ ಸಮಯದಲ್ಲಿ ಜೆರುಸಲೇಮಿನಲ್ಲಿ ವಾಸಿಸುವ ಜನರಿಗೂ ದಾವೀದನ ಕುಟುಂಬದವರಿಗೂ ಒಂದು ಹೊಸ ಬುಗ್ಗೆಯ ನೀರು ಚಿಮ್ಮುವದು. ಆ ಬುಗ್ಗೆಯು ಜನರ ಪಾಪಗಳನ್ನು ತೊಳೆದು ಶುದ್ಧಮಾಡುವದಕ್ಕಾಗಿ ಇರುವದು.


ಆ ವ್ಯಕ್ತಿಯು ಆರೋಗ್ಯವಂತನಾಗಿದ್ದರೆ, ಆಗ ಯಾಜಕನು ಈ ಸಂಗತಿಗಳನ್ನು ಮಾಡುವುದಕ್ಕೆ ಅವನಿಗೆ ಹೇಳುವನು. ಆ ವ್ಯಕ್ತಿಯು ಎರಡು ಜೀವಂತವಾದ ಶುದ್ಧ ಪಕ್ಷಿಗಳನ್ನು ತರಬೇಕು. ಅಲ್ಲದೆ, ಅವನು ದೇವದಾರುಮರದ ತುಂಡನ್ನು, ಕೆಂಪು ಬಣ್ಣದ ಬಟ್ಟೆಯ ತುಂಡನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕು.


ಬಳಿಕ ಒಂದು ಪಕ್ಷಿಯನ್ನು ಸೆಲೇ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕೆಂದು ಯಾಜಕನು ಅಪ್ಪಣೆ ಕೊಡಬೇಕು.


ಹಿಸ್ಸೋಪ್ ಗಿಡದ ಬರಲಿನಿಂದ ನನ್ನನ್ನು ತೊಳೆದು ಶುದ್ಧೀಕರಿಸು; ನಾನು ಹಿಮಕ್ಕಿಂತಲೂ ಬಿಳುಪಾಗುವ ತನಕ ನನ್ನನ್ನು ತೊಳೆ!


ಯಾಜಕನು ಒಂದು ಪಕ್ಷಿಯನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಬಟ್ಟಲಲ್ಲಿ ವಧಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು