Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:31 - ಪರಿಶುದ್ದ ಬೈಬಲ್‌

31 “ಆದ್ದರಿಂದ ಅಶುದ್ಧತ್ವದ ಕುರಿತು ನೀವು ಇಸ್ರೇಲರನ್ನು ಎಚ್ಚರಿಸಬೇಕು. ನೀವು ಜನರನ್ನು ಎಚ್ಚರಿಸದಿದ್ದರೆ ಅವರು ನನ್ನ ಪವಿತ್ರ ಗುಡಾರವನ್ನು ಅಶುದ್ಧಮಾಡಿ ಸಾವಿಗೀಡಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 “‘ಇಸ್ರಾಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 “ಇಸ್ರಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾದಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಇಸ್ರಾಯೇಲ್ಯರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾದಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ ‘ಹೀಗೆ ನೀವು ಇಸ್ರಾಯೇಲರನ್ನು ಅಶುದ್ಧತೆಯಿಂದ ದೂರವಾಗಿರುವಂತೆ ನೋಡಿಕೊಳ್ಳಬೇಕು. ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಅಶುದ್ಧ ಮಾಡದೆ, ತಮ್ಮ ಅಶುದ್ಧತ್ವದಿಂದ ಸಾಯುವುದಿಲ್ಲ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:31
22 ತಿಳಿವುಗಳ ಹೋಲಿಕೆ  

“ಅಶುದ್ಧನಾಗಿದ್ದರೂ ತನ್ನನ್ನು ಶುದ್ಧಮಾಡಿಕೊಳ್ಳದವನು ಯೆಹೋವನ ಗುಡಾರವನ್ನು ಅಶುದ್ಧಮಾಡಿದವನಾಗಿರುತ್ತಾನೆ. ಆದ್ದರಿಂದ ಅವನನ್ನು ಇಸ್ರೇಲರಿಂದ ಬಹಿಷ್ಕರಿಸಬೇಕು. ಶುದ್ಧಪಡಿಸಿಕೊಳ್ಳುವ ನೀರನ್ನು ಚಿಮಿಕಿಸಿಕೊಳ್ಳದೆ ಹೋದದರಿಂದ ಅವನು ಅಶುದ್ಧನೇ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮೇ, ನನ್ನ ಜೀವದಾಣೆ! ನಾನು ನಿನ್ನನ್ನು ಶಿಕ್ಷಿಸುವೆನು. ಯಾಕೆಂದರೆ ನೀನು ನನ್ನ ಪವಿತ್ರ ಸ್ಥಳಕ್ಕೆ ಮಹತ್ವವನ್ನು ಕೊಡಲಿಲ್ಲ. ಅಸಹ್ಯವಾದ ಮತ್ತು ಗಾಬರಿಗೊಳಿಸುವ ನಿನ್ನ ಎಲ್ಲಾ ಕಾರ್ಯಗಳಿಂದ ನೀನು ಅದನ್ನು ಅಶುದ್ಧಗೊಳಿಸಿರುವೆ. ನಾನು ನಿನಗೆ ಕನಿಕರತೋರಿಸದೆ ಶಿಕ್ಷಿಸುವೆನು. ನಿನ್ನ ಮೇಲೆ ನನಗೆ ದಯೆಯಿರದು.


ಒಬ್ಬನು ಮನುಷ್ಯನ ಶವವನ್ನು ಮುಟ್ಟಿ ತನ್ನನ್ನು ಶುದ್ಧೀಕರಿಸಿಕೊಳ್ಳದೆ ಹೋದರೆ ಅವನು ಯೆಹೋವನ ಪವಿತ್ರ ಗುಡಾರವನ್ನು ಅಶುದ್ಧಮಾಡುತ್ತಾನೆ. ಆದ್ದರಿಂದ ಆ ವ್ಯಕ್ತಿಯನ್ನು ಇಸ್ರೇಲರಿಂದ ಬಹಿಷ್ಕರಿಸಬೇಕು. ಶುದ್ಧೀಕರಣದ ವಿಶೇಷ ನೀರು ಅವನ ಮೇಲೆ ಚಿಮಿಕಿಸಲ್ಪಡದ ಕಾರಣ ಅವನು ಅಶುದ್ಧನಾಗಿಯೇ ಇರುವನು. ಅವನ ಅಶುದ್ಧತ್ವ ಅವನಲ್ಲಿ ನೆಲೆಸುವುದು. ಅವನು ಅಶುದ್ಧನಾಗಿಯೇ ಇರುವನು.


ಅಲ್ಲದೆ ನನ್ನ ಪವಿತ್ರ ಆಲಯವನ್ನೂ ನನ್ನ ಪವಿತ್ರವಾದ ವಿಶೇಷ ವಿಶ್ರಾಂತಿ ದಿವಸಗಳನ್ನೂ ಆಲಕ್ಷ್ಯ ಮಾಡಿ ಅದಕ್ಕೆ ಮಹತ್ವವನ್ನು ಕೊಡದೆ ಹೋದರು.


ಅಂಥವರು ಗಂಡಸರೇ ಆಗಲಿ ಹೆಂಗಸರೇ ಆಗಲಿ ಅವರೆಲ್ಲರನ್ನೂ ಪಾಳೆಯದಿಂದ ಹೊರಡಿಸಬೇಕು. ನಾನೇ ಅವರ ಪಾಳೆಯದಲ್ಲಿ ವಾಸಮಾಡುವುದರಿಂದ ಅವರು ಅದನ್ನು ಅಪವಿತ್ರ ಮಾಡಬಾರದು.”


ಕೆಲವು ಜನರು ರಹಸ್ಯವಾಗಿ ನಿಮ್ಮ ಸಭೆಯಲ್ಲಿ ಪ್ರವೇಶಿಸಿದ್ದಾರೆ. ಇವರಿಗಾಗುವ ದಂಡನೆಯ ಕುರಿತು ಬಹುಕಾಲದ ಹಿಂದೆಯೇ ಪ್ರವಾದಿಗಳು ಬರೆದಿದ್ದಾರೆ. ಈ ಜನರು ದೇವರಿಗೆ ವಿರುದ್ಧವಾಗಿದ್ದಾರೆ. ಅವರು ಪಾಪಕೃತ್ಯಗಳನ್ನು ಮಾಡುವುದಕ್ಕಾಗಿ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಅವರು ನಮ್ಮ ಒಬ್ಬನೇ ಒಡೆಯನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನನ್ನು ಹಿಂಬಾಲಿಸದವರಾಗಿದ್ದಾರೆ.


ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.


ಯಾವನಾದರೂ ದೇವರ ಆಲಯವನ್ನು ನಾಶಮಾಡಿದರೆ ದೇವರು ಅವನನ್ನು ನಾಶಮಾಡುವನು. ಏಕೆಂದರೆ ದೇವರ ಆಲಯವು ಪರಿಶುದ್ಧವಾದದ್ದು. ನೀವೇ ದೇವರ ಆಲಯವಾಗಿದ್ದೀರಿ.


“ಯಾಜಕರು ಜನರಿಗೆ ಪವಿತ್ರ ವಸ್ತುಗಳ ಮತ್ತು ಪವಿತ್ರವಲ್ಲದ ವಸ್ತುಗಳ ಬಗ್ಗೆ ಉಪದೇಶಿಸಬೇಕು. ಒಬ್ಬನನ್ನು ಅಶುದ್ಧನನ್ನಾಗಿ ಮಾಡುವಂಥವುಗಳ ಬಗ್ಗೆ ಇರುವ ನಿಯಮಗಳನ್ನು ಅವರು ಜನರಿಗೆ ಉಪದೇಶಿಸಬೇಕು.


“ಆಗ ಭವಿಷ್ಯತ್ತಿನ ನಾಯಕನು ಬಹುಜನರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಆ ಒಪ್ಪಂದ ಒಂದು ವಾರದವರೆಗೆ ಮುಂದುವರೆಯುವದು. ಅರ್ಧವಾರದವರೆಗೆ ಯಜ್ಞ ಮತ್ತು ನೈವೇದ್ಯಗಳನ್ನು ನಿಲ್ಲಿಸಲಾಗುವುದು. ಒಬ್ಬ ಘಾತುಕನು ಬರುವನು. ಅವನು ಬಹುವಿನಾಶಕಾರಿ ಕೆಲಸಗಳನ್ನು ಮಾಡುವನು. ಆದರೆ ಆ ಘಾತುಕನನ್ನು ಮುಗಿಸಿಬಿಡಬೇಕೆಂದು ದೇವರ ಆಜ್ಞೆಯಾಗಿದೆ” ಎಂದು ಹೇಳಿದನು.


ನನ್ನ ಶುದ್ಧಹೃದಯವನ್ನು ಕಂಡು ಯೆಹೋವನು ಕಿವಿಗೊಟ್ಟನು.


“ನಿಮ್ಮಲ್ಲಿ ಯಾರಿಗಾದರೂ ಚರ್ಮರೋಗವಿದ್ದಲ್ಲಿ ಯಾಜಕನು ಹೇಳುವ ರೀತಿಯನ್ನು ಅನುಸರಿಸಬೇಕು. ನಾನು ಯಾಜಕರಿಗೆ ತಿಳಿಸಿದ ಮೇರೆಗೆ ನೀವು ಮಾಡಬೇಕು.


ಆದರೆ ಅವನು ತೆರೆಯ ಬಳಿಗೆ ಹೋಗಬಾರದು; ಅವನು ಯಜ್ಞವೇದಿಕೆಯ ಬಳಿಗೆ ಹೋಗಬಾರದು. ಯಾಕೆಂದರೆ ಅವನು ಅಂಗವಿಕಲನಾಗಿದ್ದಾನೆ. ಅವನು ನನ್ನ ಪರಿಶುದ್ಧ ಸ್ಥಳಗಳನ್ನು ಅಶುದ್ಧಗೊಳಿಸಬಾರದು. ಯೆಹೋವನಾದ ನಾನೇ ಆ ಸ್ಥಳಗಳನ್ನು ಪರಿಶುದ್ಧಗೊಳಿಸಿದ್ದೇನೆ.”


ನಾನು ಅವನಿಗೆ ವಿರುದ್ಧವಾಗಿರುವೆನು. ನಾನು ಅವನನ್ನು ಅವನ ಕುಟುಂಬದಿಂದ ಬೇರ್ಪಡಿಸುವೆನು. ಯಾಕೆಂದರೆ ಅವನು ತನ್ನ ಮಕ್ಕಳನ್ನು ಮೊಲೆಕನಿಗೆ ಅರ್ಪಿಸುವುದರ ಮೂಲಕ ನನ್ನ ಪವಿತ್ರಾಲಯವನ್ನು ಅಪವಿತ್ರಗೊಳಿಸಿದನು; ನನ್ನ ನಾಮಕ್ಕೆ ಅವಮಾನ ಮಾಡಿದನು.


“ನೀವು ನನ್ನ ಸಬ್ಬತ್ ದಿನಗಳನ್ನು ಅನುಸರಿಸಬೇಕು. ನನ್ನ ವಿಶ್ರಾಂತಿಯ ವಿಶೇಷ ದಿನಗಳಲ್ಲಿ ನೀವು ಕೆಲಸ ಮಾಡಬಾರದು. ನೀವು ನನ್ನ ಪವಿತ್ರಸ್ಥಳವನ್ನು ಗೌರವಿಸಬೇಕು. ನಾನೇ ಯೆಹೋವನು!


ಚರ್ಮದ ವಸ್ತುಗಳ ಮೇಲಾಗಲಿ ಬಟ್ಟೆಯ ಮೇಲಾಗಲಿ (ಅದು ಉಣ್ಣೆಯದ್ದಾಗಿರಲಿ ನಾರಿನದ್ದಾಗಿರಲಿ ನೇಯ್ದದ್ದಾಗಿರಲಿ ಅಥವಾ ಹೆಣೆದದ್ದಾಗಿರಲಿ) ಕಂಡು ಬರುವ ಬೂಷ್ಟಿನ ವಿಷಯದಲ್ಲಿ ಅನುಸರಿಸಬೇಕಾದ ನಿಯಮಗಳು ಇವೇ. ಶುದ್ಧವಾದವುಗಳೋ ಅಶುದ್ಧವಾದವುಗಳೋ ಎಂದು ನಿರ್ಧಾರ ಮಾಡಲು ಇದೇ ನಿಯಮಗಳನ್ನು ಅನುಸರಿಸಬೇಕು.


ಅಶುದ್ಧವಾದ ಮತ್ತು ಶುದ್ಧವಾದ ಪ್ರಾಣಿಗಳ ಕುರಿತು ತಿಳಿದುಕೊಳ್ಳಲು ನಿಮಗೆ ಈ ನಿಯಮಗಳು ಸಹಾಯಕವಾಗಿವೆ. ಜನರು ಯಾವ ಪ್ರಾಣಿಗಳ ಮಾಂಸವನ್ನು ತಿನ್ನಬಹುದು ಮತ್ತು ಯಾವುದನ್ನು ತಿನ್ನಬಾರದೆಂದು ಈ ನಿಯಮಗಳು ತಿಳಿಸುತ್ತವೆ.


ಸ್ರಾವವುಳ್ಳ ಜನರು ಅನುಸರಿಸಬೇಕಾದ ನಿಯಮಗಳು ಇವುಗಳೇ. ವೀರ್ಯಸ್ಖಲನದಿಂದ ಅಶುದ್ಧರಾದ ಪುರುಷರು ಅನುಸರಿಸಬೇಕಾದ ನಿಯಮಗಳು ಇವುಗಳೇ.


ಆದಕಾರಣವೇ, ಏಲಿಯ ಕುಟುಂಬವು ಅರ್ಪಿಸುವ ಯಜ್ಞವಾಗಲಿ ಧಾನ್ಯನೈವೇದ್ಯವಾಗಲಿ ಅವರ ಪಾಪಗಳಿಗೆ ಪ್ರಾಯಶ್ಚಿತ್ತವಾಗುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.


“ನರಪುತ್ರನೇ, ಇಸ್ರೇಲ್ ಜನಾಂಗವು ತನ್ನ ಸ್ವದೇಶದಲ್ಲಿ ವಾಸಿಸಿತು. ಆದರೆ ಅವರು ನಡೆಸಿದ ದುಷ್ಟತನದಿಂದ ದೇಶವನ್ನು ಮುಟ್ಟಾದ ಸ್ತ್ರೀಯಂತೆ ಅಶುದ್ಧಗೊಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು