Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:12 - ಪರಿಶುದ್ದ ಬೈಬಲ್‌

12 ಬಳಿಕ ಅವನು ಯೆಹೋವನ ಸನ್ನಿಧಿಯಲ್ಲಿರುವ ವೇದಿಕೆಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತೆಗೆದುಕೊಳ್ಳಬೇಕು. ಆರೋನನು ಪರಿಮಳ ಧೂಪ ದ್ರವ್ಯದ ಪುಡಿಯಲ್ಲಿ ಎರಡು ಹಿಡಿ ತೆಗೆದುಕೊಳ್ಳುವನು. ಆರೋನನು ಆ ಧೂಪವನ್ನು ತೆರೆಯ ಹಿಂದೆ ಇರುವ ಕೋಣೆಗೆ ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನು ತನಗೋಸ್ಕರ ಹೋರಿಯನ್ನು ವಧಿಸಿದ ಮೇಲೆ ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ, ಪರಿಮಳಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ಅವುಗಳನ್ನು ತೆರೆಯೊಳಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವನು ತನಗೋಸ್ಕರವಾದ ಆ ಹೋರಿಯನ್ನು ವಧಿಸಿದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ವೇದಿಕೆಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ ಪರಿಮಳ ಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ತೆರೆಯನ್ನು ದಾಟಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನು ತನಗೋಸ್ಕರವಾದ ಹೋರಿಯನ್ನು ವಧಿಸಿದ ಮೇಲೆ ಯೆಹೋವನ ಸನ್ನಿಧಿಯಲ್ಲಿರುವ ವೇದಿಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ ಪರಿಮಳಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ತೆರೆಯನ್ನು ದಾಟಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವನು ಯೆಹೋವ ದೇವರ ಸನ್ನಿಧಿಯಲ್ಲಿರುವ ಬಲಿಪೀಠದಿಂದ ಬೆಂಕಿಯ ಕೆಂಡಗಳನ್ನು ಧೂಪ ಸುಡುವ ಪಾತ್ರೆಯಲ್ಲಿ ತುಂಬಿಸಿ, ತನ್ನ ಎರಡು ಕೈತುಂಬ ಪರಿಮಳ ಧೂಪದ್ರವ್ಯದ ಚೂರ್ಣವನ್ನು ತೆಗೆದುಕೊಂಡು, ತೆರೆಯನ್ನು ದಾಟಿ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:12
13 ತಿಳಿವುಗಳ ಹೋಲಿಕೆ  

ತರುವಾಯ ಆರೋನನ ಪುತ್ರರಲ್ಲಿ ನಾದಾಬ ಮತ್ತು ಅಬೀಹು ಎಂಬಿಬ್ಬರು ಧೂಪ ಹಾಕಲು ಒಂದೊಂದು ಬಟ್ಟಲನ್ನು ತೆಗೆದುಕೊಂಡು ಅದರಲ್ಲಿ ಬೇರೆ ಬೆಂಕಿಯನ್ನಿಟ್ಟು ಯೆಹೋವನ ಮುಂದೆ ಧೂಪಹಾಕಿದರು. ಯೆಹೋವನ ಆಜ್ಞೆಗನುಸಾರವಾದ ಬೆಂಕಿಯನ್ನು ಅವರು ಉಪಯೋಗಿಸಲಿಲ್ಲ.


ಮೋಶೆಯು ಆರೋನನಿಗೆ, “ಯೆಹೋವನಿಗೆ ಕೋಪವುಂಟಾಗಿ ಈ ಜನರೊಳಗೆ ಘೋರವ್ಯಾಧಿ ಪ್ರಾರಂಭವಾಗಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಕೆಯಿಂದ ತೆಗೆದ ಕೆಂಡಗಳನ್ನು ಇಟ್ಟು ಧೂಪಹಾಕಿ ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.


ಅದಕ್ಕನುಸಾರವಾಗಿ ಅವರೆಲ್ಲರೂ ತಮ್ಮತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಆರೋನರ ಜೊತೆಯಲ್ಲಿ ದೇವದರ್ಶನಗುಡಾರದ ಪ್ರವೇಶದ್ವಾರದಲ್ಲಿ ನಿಂತುಕೊಂಡರು.


ಸುವಾಸನೆಯುಳ್ಳ ಅಭಿಷೇಕತೈಲ, ಪವಿತ್ರ ಸ್ಥಳದಲ್ಲಿ ಉಪಯೋಗಿಸುವ ಸುವಾಸನೆಯುಳ್ಳ ಧೂಪ. ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲೇ ಈ ಕೆಲಸಗಾರರು ಈ ವಸ್ತುಗಳನ್ನೆಲ್ಲಾ ಮಾಡತಕ್ಕದ್ದು.”


ಆದ್ದರಿಂದ ಆತನ ರಕ್ತವು ಖಚಿತವಾಗಿ ಅದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುತ್ತದೆ. ಆತನು ನಿತ್ಯಾತ್ಮನ ಮೂಲಕ ತನ್ನನ್ನು ತಾನೇ ದೇವರಿಗೆ ನಿಷ್ಕಳಂಕವಾದ ಯಜ್ಞವನ್ನಾಗಿ ಅರ್ಪಿಸಿಕೊಂಡನು. ಆತನ ರಕ್ತವು ನಮ್ಮನ್ನು ನಮ್ಮ ಕೆಟ್ಟಕಾರ್ಯಗಳಿಂದ ಪರಿಪೂರ್ಣವಾಗಿ ಬಿಡಿಸಿ ನಾವು ಜೀವಸ್ವರೂಪನಾದ ದೇವರನ್ನು ಆರಾಧಿಸಲು ಸಾಧ್ಯವಾಗುವಂತೆ ನಮ್ಮ ಹೃದಯವನ್ನೂ ಪರಿಶುದ್ಧಗೊಳಿಸುತ್ತದೆ.


ದೇವರು ಬೆಳಕಿನಲ್ಲಿದ್ದಾನೆ. ಆದ್ದರಿಂದ ನಾವೂ ಬೆಳಕಿನಲ್ಲಿ ಜೀವಿಸಬೇಕಾಗಿದೆ. ನಾವು ಬೆಳಕಿನಲ್ಲಿ ಜೀವಿಸುವವರಾಗಿದ್ದರೆ ಪರಸ್ಪರ ಅನ್ಯೋನ್ಯತೆಯಲ್ಲಿದ್ದೇವೆ ಮತ್ತು ದೇವರ ಮಗನಾದ ಯೇಸುವಿನ ರಕ್ತವು ನಮ್ಮ ಪಾಪಗಳನ್ನೆಲ್ಲಾ ನಿವಾರಣೆ ಮಾಡುತ್ತದೆ.


ತರುವಾಯ ಅವನು ಪವಿತ್ರವಾದ ಅಭಿಷೇಕತೈಲವನ್ನು ಮಾಡಿದನು. ಅವನು ಶುದ್ಧವಾದ ಪರಿಮಳಧೂಪವನ್ನು ಮಾಡಿದನು. ಸುಗಂಧದ್ರವ್ಯಕಾರರ ವಿದ್ಯೆಯ ಮೇರೆಗೆ ಈ ವಸ್ತುಗಳನ್ನು ಮಾಡಲಾಯಿತು.


ಆದರೆ ಪ್ರಧಾನಯಾಜಕನು ಮಾತ್ರ ಎರಡನೆ ಕೊಠಡಿಯ ಒಳಗೆ ಹೋಗಬಹುದಿತ್ತು. ಅವನು ವರ್ಷಕ್ಕೊಮ್ಮೆ ಮಾತ್ರ ಅದರೊಳಗೆ ಹೋಗುತ್ತಿದ್ದನು. ಅವನು ತನ್ನೊಂದಿಗೆ ರಕ್ತವನ್ನು ತೆಗೆದುಕೊಳ್ಳದೆ ಎಂದೂ ಅದರೊಳಗೆ ಪ್ರವೇಶಿಸುತ್ತಿರಲಿಲ್ಲ. ತನಗೋಸ್ಕರವಾಗಿಯೂ ಜನರು ತಿಳಿಯದೆ ಮಾಡಿದ ಪಾಪಗಳಿಗಾಗಿಯೂ ಅವನು ಆ ರಕ್ತವನ್ನು ದೇವರಿಗೆ ಅರ್ಪಿಸುತ್ತಿದ್ದನು.


ಆಗ ದೇವದೂತನು ಧೂಪವಿದ್ದ ಪಾತ್ರೆಯನ್ನು ಯಜ್ಞವೇದಿಕೆಯ ಬೆಂಕಿಯಿಂದ ತುಂಬಿಸಿ ಅದನ್ನು ಭೂಮಿಯ ಮೇಲೆ ಎಸೆದನು. ಆಗ ಮಿಂಚು ಗುಡುಗುಗಳೂ ಮತ್ತಿತರ ಧ್ವನಿಗಳೂ ಭೂಕಂಪಗಳೂ ಉಂಟಾದವು.


ಅವರು ಯಾಕೋಬ ವಂಶದವರಿಗೆ ನಿನ್ನ ವಿಧಿನಿಯಮಗಳನ್ನು ಕಲಿಸುವರು; ನಿನ್ನ ಕಟ್ಟಳೆಗಳನ್ನು ಇಸ್ರೇಲರಿಗೆ ಬೋಧಿಸುವರು. ಅವರು ನಿನ್ನ ಸನ್ನಿಧಾನದಲ್ಲಿ ಧೂಪಹಾಕುವರು. ಬಲಿಪೀಠದಲ್ಲಿ ನಿನಗೆ ಯಜ್ಞಾರ್ಪಣೆ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು