Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:13 - ಪರಿಶುದ್ದ ಬೈಬಲ್‌

13 ಆರೋನನು ಯೆಹೋವನ ಸನ್ನಿಧಿಯಲ್ಲಿ ಬೆಂಕಿಯ ಮೇಲೆ ಧೂಪವನ್ನು ಹಾಕಬೇಕು. ಆಗ ಒಡಂಬಡಿಕೆಯ ಪೆಟ್ಟಿಗೆ ಮೇಲಿರುವ ಕೃಪಾಸವನ್ನು ಧೂಪದ ಹೊಗೆಯು ಮುಚ್ಚಿಕೊಳ್ಳುವುದು. ಹೀಗೆ ಮಾಡುವುದರಿಂದ ಆರೋನನು ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನು ಆ ಧೂಪವನ್ನು ಯೆಹೋವನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಆ ಧೂಪದ ಹೊಗೆಯು ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಆವರಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆ ಧೂಪವನ್ನು ಸರ್ವೇಶ್ವರನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಧೂಪದ ಹೊಗೆ ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಮುಚ್ಚುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆ ಧೂಪವನ್ನು ಯೆಹೋವನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಧೂಪದ ಹೊಗೆ ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಮುಚ್ಚುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕರುಣಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಯೆಹೋವ ದೇವರ ಎದುರಿನಲ್ಲಿ ಬೆಂಕಿಯ ಮೇಲೆ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:13
16 ತಿಳಿವುಗಳ ಹೋಲಿಕೆ  

“ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಪೆಟ್ಟಿಗೆಯಲ್ಲಿಡಬೇಕು; ಕೃಪಾಸನವನ್ನು ಆ ಪೆಟ್ಟಿಗೆಯ ಮೇಲಿಡಬೇಕು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಜಾಲೀಮರದಿಂದ ಧೂಪವೇದಿಕೆಯನ್ನು ಮಾಡಿಸು.


ಕ್ರಿಸ್ತನು ಮಹಾ ಪವಿತ್ರಸ್ಥಳದೊಳಕ್ಕೆ ಹೋದನು. ಆದರೆ ಆತನು ಮಾನವನಿರ್ಮಿತವಾದ ಮಹಾಪವಿತ್ರಸ್ಥಳಕ್ಕೆ ಹೋಗಲಿಲ್ಲ. ಈ ಮಹಾಪವಿತ್ರಸ್ಥಳವು ನಿಜವಾದದ್ದರ ಪ್ರತಿರೂಪ ಮಾತ್ರವಾಗಿದೆ. ಆತನು ಪರಲೋಕಕ್ಕೆ ಹೋದನು; ನಮಗೆ ಸಹಾಯ ಮಾಡುವುದಕ್ಕೋಸ್ಕರ ಈಗ ದೇವರ ಸನ್ನಿಧಿಯಲ್ಲಿದ್ದಾನೆ.


ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.


ಮೋಶೆಯು ಆರೋನನಿಗೆ, “ಯೆಹೋವನಿಗೆ ಕೋಪವುಂಟಾಗಿ ಈ ಜನರೊಳಗೆ ಘೋರವ್ಯಾಧಿ ಪ್ರಾರಂಭವಾಗಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಕೆಯಿಂದ ತೆಗೆದ ಕೆಂಡಗಳನ್ನು ಇಟ್ಟು ಧೂಪಹಾಕಿ ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.


ಅದಕ್ಕನುಸಾರವಾಗಿ ಅವರೆಲ್ಲರೂ ತಮ್ಮತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಆರೋನರ ಜೊತೆಯಲ್ಲಿ ದೇವದರ್ಶನಗುಡಾರದ ಪ್ರವೇಶದ್ವಾರದಲ್ಲಿ ನಿಂತುಕೊಂಡರು.


ನಾಳೆ ಅಗ್ಗಿಷ್ಠಿಕೆಗಳನ್ನು ತೆಗೆದುಕೊಂಡು ಅವುಗಳ ಮೇಲೆ ಉರಿಯುವ ಕೆಂಡಗಳನ್ನು ಹಾಕಿರಿ ಮತ್ತು ಯೆಹೋವನ ಮುಂದೆ ಅವುಗಳ ಮೇಲೆ ಧೂಪವನ್ನು ಹಾಕಿರಿ. ಆಗ ಯೆಹೋವನು ಯಾರನ್ನು ಆರಿಸಿಕೊಳ್ಳುವನೋ ಅವನೇ ನಿಜವಾಗಿಯೂ ಪವಿತ್ರನಾದವನು. ಲೇವಿಯರಾದ ನೀವು ಅಧಿಕಾರವನ್ನು ಮತ್ತು ಘನತೆಯನ್ನು ಅತಿಯಾಗಿ ಅಪೇಕ್ಷಿಸುತ್ತೀರಿ.” ಎಂದು ಹೇಳಿದನು


“ಯಾಜಕರು ನನ್ನ ಅಗತ್ಯತೆಗಳನ್ನು ಎಚ್ಚರಿಕೆಯಿಂದ ಪೂರೈಸಿದರೆ ಅಪರಾಧಕ್ಕೆ ಒಳಗಾಗುವುದಿಲ್ಲ. ಅವರು ಪವಿತ್ರವಾದವುಗಳನ್ನು ಅಪವಿತ್ರಗೊಳಿಸಿದರೆ ಸಾಯುವರು. ಯೆಹೋವನಾದ ನಾನೇ ಅವರನ್ನು ಪರಿಶುದ್ಧರನ್ನಾಗಿ ಮಾಡಿದ್ದೇನೆ ಮತ್ತು ಈ ವಿಶೇಷ ಸೇವೆಗಾಗಿ ಪ್ರತ್ಯೇಕಿಸಿದ್ದೇನೆ.


ಆರೋನನು ಮತ್ತು ಅವನ ಗಂಡುಮಕ್ಕಳು ದೇವದರ್ಶನ ಗುಡಾರದೊಳಗೆ ಪ್ರವೇಶಿಸುವಾಗಲೆಲ್ಲಾ ಈ ಉಡುಪುಗಳನ್ನು ಧರಿಸಿಕೊಳ್ಳಬೇಕು. ಪವಿತ್ರಸ್ಥಳದಲ್ಲಿ ಯಾಜಕರಾಗಿ ಸೇವೆಮಾಡಲು ಯಜ್ಞವೇದಿಕೆಯ ಬಳಿಗೆ ಬರುವಾಗ ಅವರು ಈ ಬಟ್ಟೆಗಳನ್ನು ಧರಿಸಿಕೊಂಡಿರಬೇಕು. ಅವರು ಈ ಉಡುಪುಗಳನ್ನು ಧರಿಸಿಕೊಳ್ಳದಿದ್ದರೆ, ದೋಷಿಗಳಾಗಿ ಸಾಯುವರು. ಇವುಗಳೆಲ್ಲಾ ಆರೋನನಿಗೂ ಅವನ ನಂತರ ಅವನ ಕುಟುಂಬಸ್ಥರೆಲ್ಲರಿಗೂ ಶಾಶ್ವತವಾದ ಕಟ್ಟಳೆಯಾಗಿವೆ.”


“ಇಸ್ರೇಲರು ಪ್ರಯಾಣಮಾಡುವ ಸಮಯದಲ್ಲಿ ಆರೋನನು ಮತ್ತು ಅವನ ಪುತ್ರರು ಪವಿತ್ರವಸ್ತುಗಳಿಗೂ ಪವಿತ್ರ ಉಪಕರಣಗಳಿಗೂ ಹೊದಿಸಿದ ನಂತರ, ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಹೋಗಬಹುದು. ಈ ರೀತಿ ಅವರು ಪವಿತ್ರವಸ್ತುಗಳನ್ನು ಮುಟ್ಟಬಾರದು; ಅವರು ಮುಟ್ಟಿದರೆ ಸಾಯುತ್ತಾರೆ.


ಇಲ್ಲವಾದರೆ, ಕೆಹಾತ್ಯರು ಒಳಗೆ ಬಂದು ಪರಿಶುದ್ಧವಸ್ತುಗಳನ್ನು ಮುಟ್ಟುವರು. ಆ ಮಹಾ ಪರಿಶುದ್ಧವಸ್ತುಗಳನ್ನು ಅವರು ಒಂದು ಕ್ಷಣ ಮುಟ್ಟಿದರೂ ಸಾಯುತ್ತಾರೆ” ಎಂದು ಹೇಳಿದನು.


ಅವರು ಯಾಕೋಬ ವಂಶದವರಿಗೆ ನಿನ್ನ ವಿಧಿನಿಯಮಗಳನ್ನು ಕಲಿಸುವರು; ನಿನ್ನ ಕಟ್ಟಳೆಗಳನ್ನು ಇಸ್ರೇಲರಿಗೆ ಬೋಧಿಸುವರು. ಅವರು ನಿನ್ನ ಸನ್ನಿಧಾನದಲ್ಲಿ ಧೂಪಹಾಕುವರು. ಬಲಿಪೀಠದಲ್ಲಿ ನಿನಗೆ ಯಜ್ಞಾರ್ಪಣೆ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು