Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:20 - ಪರಿಶುದ್ದ ಬೈಬಲ್‌

20 “ಹೀಗೆ ಆರೋನನು ಮಹಾ ಪವಿತ್ರಸ್ಥಳವನ್ನೂ ದೇವದರ್ಶನಗುಡಾರವನ್ನೂ ಯಜ್ಞವೇದಿಕೆಯನ್ನೂ ಶುದ್ಧೀಕರಿಸುವನು. ಬಳಿಕ ಆರೋನನು ಜೀವಂತವಾಗಿರುವ ಹೋತವನ್ನು ಯೆಹೋವನ ಬಳಿಗೆ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “ಆರೋನನು ಮಹಾಪವಿತ್ರಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ ಇವುಗಳಿಗೋಸ್ಕರ ದೋಷಪರಿಹಾರ ಮಾಡಿ ಮುಗಿಸಿದ ಮೇಲೆ ಆ ಸಜೀವವಾದ ಹೋತವನ್ನು ತರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮಹಾಪವಿತ್ರಸ್ಥಾನ, ದೇವದರ್ಶನದ ಗುಡಾರ, ಪೀಠ, ಇವುಗಳಿಗೋಸ್ಕರ ಆರೋನನು ದೋಷಪರಿಹಾರ ಮಾಡಿ ಮುಗಿಸಿದ ಮೇಲೆ, ಆ ಸಜೀವವಾದ ಹೋತವನ್ನು ತರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆರೋನನು ಮಹಾಪವಿತ್ರಸ್ಥಾನ, ದೇವದರ್ಶನದ ಗುಡಾರ, ವೇದಿ ಇವುಗಳಿಗೋಸ್ಕರ ದೋಷಪರಿಹಾರಮಾಡಿ ಮುಗಿಸಿದ ಮೇಲೆ ಆ ಸಜೀವವಾದ ಹೋತವನ್ನು ತರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಹೀಗೆ ಮಹಾಪರಿಶುದ್ಧ ಸ್ಥಳಕ್ಕೂ, ಸಭೆಯ ಗುಡಾರಕ್ಕೂ, ಬಲಿಪೀಠಕ್ಕೂ ಸಂಧಾನದ ಕೊನೆಯಲ್ಲಿ ಅವನು ಒಂದು ಜೀವವುಳ್ಳ ಹೋತವನ್ನು ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:20
12 ತಿಳಿವುಗಳ ಹೋಲಿಕೆ  

ಯಾರಾದರೂ ಆಕಸ್ಮಿಕವಾಗಿ ಅಥವಾ ತಿಳಿಯದೆ ಪಾಪಮಾಡಿದ್ದಲ್ಲಿ, ಹೀಗೆಯೇ ತಿಂಗಳಿನ ಏಳನೇ ದಿವಸದಲ್ಲಿಯೂ ಮಾಡಬೇಕು. ಈ ರೀತಿಯಾಗಿ ಆಲಯವನ್ನು ಶುದ್ಧೀಕರಿಸುವಿರಿ.


ಆರೋನನು ಮಹಾ ಪವಿತ್ರಸ್ಥಳವನ್ನು ಪರಿಶುದ್ಧ ಮಾಡಲು ಅನುಸರಿಸಬೇಕಾದ ನಿಯಮಗಳು: ಇಸ್ರೇಲರ ಅಶುದ್ಧತ್ವ, ದಂಗೆಕೋರತನ ಮತ್ತು ಅವರ ಯಾವುದೇ ಪಾಪಗಳ ಪರಿಹಾರಕ್ಕಾಗಿ ಆರೋನನು ಇದನ್ನು ಮಾಡಬೇಕು. ಅವರ ಅಶುದ್ಧತ್ವದ ನಡುವೆ ಇರುವ ದೇವದರ್ಶನಗುಡಾರಕ್ಕೂ ಅವನು ಇದನ್ನೇ ಮಾಡಬೇಕು.


ನಾನೇ ಜೀವಿಸುವಾತನು. ನಾನು ಸತ್ತೆನು, ಆದರೆ ಇಗೋ ನೋಡು, ನಾನು ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿವೆ.


ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.


ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ಸಮಾಧಾನವನ್ನು ಉಂಟುಮಾಡಿ ಭೂಪರಲೋಕಗಳಲ್ಲಿರುವ ಸಮಸ್ತವನ್ನು ತನಗೆ ಸಂಧಾನಪಡಿಸಿಕೊಳ್ಳಬೇಕೆಂಬುದೂ ದೇವರ ಚಿತ್ತವಾಗಿತ್ತು.


ಅಂದರೆ, ದೇವರು ಕ್ರಿಸ್ತನಲ್ಲಿ ಇಡೀ ಜಗತ್ತನ್ನೇ ತನ್ನೊಂದಿಗೆ ಸಮಾಧಾನಪಡಿಸಿಕೊಳ್ಳುತ್ತಿದ್ದನು. ದೇವರು ಕ್ರಿಸ್ತನಲ್ಲಿ ಜನರ ಅಪರಾಧಗಳನ್ನು ಪರಿಗಣಿಸುವುದಿಲ್ಲ. ಈ ಸಮಾಧಾನದ ಸಂದೇಶವನ್ನು ಜನರಿಗೆ ತಿಳಿಸುವ ಕೆಲಸವನ್ನು ದೇವರು ನಮಗೆ ಕೊಟ್ಟಿದ್ದಾನೆ.


ದೇವಜನರು ದೋಷಿಗಳೆಂದು ಯಾರು ಹೇಳಬಲ್ಲರು? ಯಾರು ಇಲ್ಲ! ಕ್ರಿಸ್ತ ಯೇಸು ನಮಗೋಸ್ಕರ ಪ್ರಾಣಕೊಟ್ಟನು. ಅಷ್ಟೇ ಅಲ್ಲ, ಆತನು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದನು. ಈಗ ಆತನು ದೇವರ ಬಲಗಡೆಯಲ್ಲಿದ್ದಾನೆ ಮತ್ತು ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಿದ್ದಾನೆ.


ನಮ್ಮ ಪಾಪಗಳ ದೆಸೆಯಿಂದ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು. ನಮ್ಮನ್ನು ನೀತಿವಂತರನ್ನಾಗಿ ಮಾಡುವುದಕ್ಕಾಗಿ ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಲಾಯಿತು.


ಬಳಿಕ ಮೋಶೆಯು ಹೋರಿಯನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ವೇದಿಕೆಯ ಎಲ್ಲಾ ಮೂಲೆಗಳಿಗೆ ರಕ್ತವನ್ನು ಹಚ್ಚಿದನು. ಹೀಗೆ ಮೋಶೆಯು ವೇದಿಕೆಯನ್ನು ಯಜ್ಞಗಳಿಗಾಗಿ ಶುದ್ಧಗೊಳಿಸಿ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದನು; ಜನರನ್ನು ಶುದ್ಧಿಮಾಡುವ ಯಜ್ಞಗಳನ್ನು ಸಮರ್ಪಿಸುವುದಕ್ಕಾಗಿ ವೇದಿಕೆಯನ್ನು ಪ್ರತಿಷ್ಠೆಗೊಳಿಸಿದನು.


ಆದರೆ ಪಾಪಪರಿಹಾರಕ ಯಜ್ಞದ ರಕ್ತವನ್ನು ದೇವದರ್ಶನಗುಡಾರದೊಳಗೆ ತೆಗೆದುಕೊಂಡು ಹೋಗಿ, ಜನರನ್ನು ಶುದ್ಧಿಗೊಳಿಸಲು ಪವಿತ್ರಸ್ಥಳದಲ್ಲಿ ಉಪಯೋಗಿಸಿದರೆ, ಆ ಪಾಪಪರಿಹಾರಕ ಯಜ್ಞವನ್ನು ಅಗ್ನಿಯಲ್ಲಿ ಸುಟ್ಟುಬಿಡಬೇಕು. ಯಾಜಕರು ಅದರ ಮಾಂಸವನ್ನು ತಿನ್ನಲೇಬಾರದು.


ಬಳಿಕ ಆರೋನನು ತನ್ನ ಬೆರಳಿನಿಂದ ಸ್ವಲ್ಪ ರಕ್ತವನ್ನು ಯಜ್ಞವೇದಿಕೆಯ ಮೇಲೆ ಏಳು ಸಲ ಚಿಮಿಕಿಸುವನು. ಹೀಗೆ ಆರೋನನು ಯಜ್ಞವೇದಿಕೆಯನ್ನು ಇಸ್ರೇಲರಿಂದ ಅದಕ್ಕುಂಟಾದ ಅಶುದ್ಧತ್ವದಿಂದ ದೂರಮಾಡಿ ಪರಿಶುದ್ಧಗೊಳಿಸುವನು.


ಆರೋನನು ಸಜೀವವಾದ ಹೋತದ ತಲೆಯ ಮೇಲೆ ತನ್ನ ಎರಡು ಕೈಗಳನ್ನಿಟ್ಟು ಇಸ್ರೇಲರು ಮಾಡಿದ ಪಾಪಗಳನ್ನು ಮತ್ತು ದ್ರೋಹಗಳನ್ನು ಅರಿಕೆಮಾಡುವನು. ಹೀಗೆ ಆರೋನನು ಜನರ ಪಾಪಗಳನ್ನು ಹೋತದ ತಲೆಯ ಮೇಲೆ ಹೊರಿಸುವನು. ಬಳಿಕ ಅವನು ಹೋತವನ್ನು ಮರುಭೂಮಿಗೆ ಕಳುಹಿಸಿಬಿಡುವನು. ಒಬ್ಬ ಮನುಷ್ಯನು ಹೋತವನ್ನು ನಡಿಸಿಕೊಂಡು ಹೋಗಲು ಸಿದ್ಧನಾಗಿ ನಿಂತಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು