Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:21 - ಪರಿಶುದ್ದ ಬೈಬಲ್‌

21 ಆರೋನನು ಸಜೀವವಾದ ಹೋತದ ತಲೆಯ ಮೇಲೆ ತನ್ನ ಎರಡು ಕೈಗಳನ್ನಿಟ್ಟು ಇಸ್ರೇಲರು ಮಾಡಿದ ಪಾಪಗಳನ್ನು ಮತ್ತು ದ್ರೋಹಗಳನ್ನು ಅರಿಕೆಮಾಡುವನು. ಹೀಗೆ ಆರೋನನು ಜನರ ಪಾಪಗಳನ್ನು ಹೋತದ ತಲೆಯ ಮೇಲೆ ಹೊರಿಸುವನು. ಬಳಿಕ ಅವನು ಹೋತವನ್ನು ಮರುಭೂಮಿಗೆ ಕಳುಹಿಸಿಬಿಡುವನು. ಒಬ್ಬ ಮನುಷ್ಯನು ಹೋತವನ್ನು ನಡಿಸಿಕೊಂಡು ಹೋಗಲು ಸಿದ್ಧನಾಗಿ ನಿಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವನು ಅದರ ತಲೆಯ ಮೇಲೆ ಎರಡು ಕೈಗಳನ್ನು ಇಟ್ಟು, ಇಸ್ರಾಯೇಲರ ಎಲ್ಲಾ ಪಾಪಗಳನ್ನು, ದ್ರೋಹಗಳನ್ನು ಮತ್ತು ಅಪರಾಧಗಳನ್ನು ಯೆಹೋವನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ, ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಅರಣ್ಯಕ್ಕೆ ಕಳುಹಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದರ ತಲೆಯ ಮೇಲೆ ಎರಡು ಕೈಗಳನ್ನೂ ಇಟ್ಟು ಇಸ್ರಯೇಲರ ಎಲ್ಲಾ ಪಾಪಗಳನ್ನೂ ದ್ರೋಹಗಳನ್ನೂ, ಅಪರಾಧಗಳನ್ನೂ, ಸರ್ವೇಶ್ವರನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ, ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಮರುಭೂಮಿಗೆ ಕಳಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದರ ತಲೆಯ ಮೇಲೆ ಎರಡು ಕೈಗಳನ್ನೂ ಇಟ್ಟು ಇಸ್ರಾಯೇಲ್ಯರ ಎಲ್ಲಾ ಪಾಪಗಳನ್ನೂ ದ್ರೋಹಗಳನ್ನೂ ಅಪರಾಧಗಳನ್ನೂ ಯೆಹೋವನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಅರಣ್ಯಕ್ಕೆ ಕಳುಹಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆರೋನನು ಆ ಜೀವವುಳ್ಳ ಹೋತದ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು, ಅದರ ಮೇಲೆ ಇಸ್ರಾಯೇಲರ ಎಲ್ಲಾ ಅಕ್ರಮಗಳನ್ನೂ, ಅವರ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆಮಾಡಿ ಅವುಗಳನ್ನು ಹೋತದ ತಲೆಯ ಮೇಲೆ ಇರಿಸಿ, ನೇಮಕವಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:21
16 ತಿಳಿವುಗಳ ಹೋಲಿಕೆ  

ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲಾಡಿದೆವು. ನಮ್ಮ ಸ್ವಂತ ದಾರಿಯಲ್ಲಿ ನಾವು ಹೋದೆವು. ನಮ್ಮ ಅಪರಾಧಗಳಿಂದ ನಾವು ವಿಮುಕ್ತರಾಗುವಂತೆ ಯೆಹೋವನು ನಮ್ಮ ಅಪರಾಧಗಳನ್ನು ಆತನ ಮೇಲೆ ಹಾಕಿದನು.


ನಾನು ಪಾಪಮಾಡಿದ್ದೇನೆಂದು ನನಗೆ ಗೊತ್ತಿದೆ. ಆ ಪಾಪಗಳು ನನ್ನ ಮುಂದೆಯೇ ಇವೆ.


ದೇವಾಲಯದೆದುರು ಎಜ್ರನು ರೋಧಿಸುತ್ತಾ, ದೇವರಿಗೆ ಅಡ್ಡಬಿದ್ದು ಪ್ರಾರ್ಥಿಸುತ್ತಾ ಪಾಪದರಿಕೆ ಮಾಡುತ್ತಾ ಇರುವಾಗ ಅವನ ಸುತ್ತಲೂ ಅನೇಕ ಮಂದಿ ಇಸ್ರೇಲರ ಗಂಡಸರು, ಹೆಂಗಸರು, ಮಕ್ಕಳು ಸೇರಿಬಂದರು. ಅವರೂ ಗಟ್ಟಿಯಾಗಿ ಅಳಲು ಪ್ರಾರಂಭಿಸಿದರು.


ಹೌದು, ನಾವು ನಮ್ಮ ಹೃದಯಗಳಲ್ಲಿ ನಂಬುವುದರ ಮೂಲಕ ನೀತಿವಂತರಾಗುತ್ತೇವೆ. “ನಂಬುತ್ತೇವೆ” ಎಂದು ಬಾಯಾರೆ ಹೇಳುವುದರ ಮೂಲಕ ರಕ್ಷಣೆ ಹೊಂದುತ್ತೇವೆ.


ಪಾಪಗಳನ್ನು ಅಡಗಿಸಿಕೊಳ್ಳುವವನಿಗೆ ಯಶಸ್ಸು ಇಲ್ಲವೇ ಇಲ್ಲ. ತನ್ನ ಪಾಪವನ್ನು ಅರಿಕೆಮಾಡಿ ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ಆಗ ನಾನು ನನ್ನ ಪಾಪಗಳನ್ನೆಲ್ಲ ಯೆಹೋವನಿಗೆ ಅರಿಕೆಮಾಡಲು ನಿರ್ಧರಿಸಿದೆನು. ಯೆಹೋವನೇ, ನಾನು ನನ್ನ ಪಾಪಗಳನ್ನು ಅರಿಕೆಮಾಡಿಕೊಂಡಾಗ, ನನ್ನ ಯಾವ ದೋಷವನ್ನೂ ನಿನಗೆ ಮರೆಮಾಡಲಿಲ್ಲ. ನೀನು ನನ್ನ ಪಾಪಗಳನ್ನು ಕ್ಷಮಿಸಿದೆ.


“ಒಂದುವೇಳೆ ಜನರು ತಮ್ಮ ಪಾಪಗಳನ್ನೂ ತಮ್ಮ ಪೂರ್ವಿಕರ ಪಾಪಗಳನ್ನೂ ಅರಿಕೆ ಮಾಡಬಹುದು; ನನಗೆ ವಿರುದ್ಧವಾಗಿ ಪಾಪಮಾಡಿರುವುದಾಗಿಯೂ ನನಗೆ ವಿರೋಧವಾಗಿ ತಿರುಗಿರುವುದಾಗಿಯೂ ಅವರು ಒಪ್ಪಿಕೊಂಡು


“ತರುವಾಯ ನೀನು ಹೋರಿಯನ್ನು ದೇವದರ್ಶನಗುಡಾರದ ಎದುರಿಗೆ ತರಬೇಕು. ಆರೋನನು ಮತ್ತು ಅವನ ಪುತ್ರರು ತಮ್ಮ ಕೈಗಳನ್ನು ಹೋರಿಯ ತಲೆಯ ಮೇಲಿಡಬೇಕು.


ಈ ವಿಷಯಗಳಲ್ಲಿ ಯಾವುದಾದರೊಂದರಲ್ಲಿ ದೋಷಿಯಾದರೆ, ಅವನು ತನ್ನ ತಪ್ಪನ್ನು ಒಪ್ಪಿಕೊಂಡು ಅರಿಕೆ ಮಾಡಬೇಕು.


ಅವನು ತನ್ನ ಕೈಯನ್ನು ಪ್ರಾಣಿಯ ತಲೆಯ ಮೇಲಿಡಬೇಕು. ಆ ವ್ಯಕ್ತಿಯ ದೋಷಪರಿಹಾರಕ್ಕಾಗಿ ಯೆಹೋವನು ಆ ಸರ್ವಾಂಗಹೋಮವನ್ನು ಸ್ವೀಕರಿಸುವನು.


“ಹೀಗೆ ಆರೋನನು ಮಹಾ ಪವಿತ್ರಸ್ಥಳವನ್ನೂ ದೇವದರ್ಶನಗುಡಾರವನ್ನೂ ಯಜ್ಞವೇದಿಕೆಯನ್ನೂ ಶುದ್ಧೀಕರಿಸುವನು. ಬಳಿಕ ಆರೋನನು ಜೀವಂತವಾಗಿರುವ ಹೋತವನ್ನು ಯೆಹೋವನ ಬಳಿಗೆ ತರುವನು.


ಹೀಗೆ ಹೋತವು ಜನರ ಪಾಪಗಳನ್ನು ಹೊತ್ತುಕೊಂಡು ಬರಿದಾದ ಮರುಭೂಮಿಗೆ ಹೋಗುವುದು. ಹೋತವನ್ನು ನಡಿಸಿಕೊಂಡು ಹೋಗುವ ಮನುಷ್ಯನು ಮರುಭೂಮಿಯಲ್ಲಿ ಅದನ್ನು ಬಿಟ್ಟುಬಿಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು