Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:24 - ಪರಿಶುದ್ದ ಬೈಬಲ್‌

24 ಅವನು ತನ್ನ ಶರೀರವನ್ನು ಪವಿತ್ರಸ್ಥಳದಲ್ಲಿ ನೀರಿನಿಂದ ತೊಳೆದುಕೊಳ್ಳುವನು. ಬಳಿಕ ಅವನು ತನ್ನ ಇತರ ವಿಶೇಷ ಬಟ್ಟೆಗಳನ್ನು ಧರಿಸಿಕೊಳ್ಳುವನು. ಅವನು ಹೊರಗೆ ಬಂದು, ತನ್ನ ಸರ್ವಾಂಗಹೋಮವನ್ನು ಮತ್ತು ಜನರ ಸರ್ವಾಂಗಹೋಮವನ್ನು ಅರ್ಪಿಸುವನು. ಅವನು ತನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನು ಪವಿತ್ರ ಸ್ಥಳದ ಪ್ರಾಕಾರದಲ್ಲಿ ಸ್ನಾನಮಾಡಿ, ತನ್ನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಆಗ ಅವನು ಹೊರಗೆ ಬಂದು ತನಗಾಗಿಯೂ ಮತ್ತು ಜನಸಮೂಹಕ್ಕಾಗಿಯೂ ಸರ್ವಾಂಗಹೋಮಗಳನ್ನು ಸಮರ್ಪಿಸಿ, ತನಗಾಗಿಯೂ ಮತ್ತು ಜನರಿಗಾಗಿಯೂ ದೋಷಪರಿಹಾರ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಪ್ರಾಕಾರದಲ್ಲಿ ಸ್ನಾನಮಾಡಿ ತನ್ನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಆಗ ಅವನು ಹೊರಗೆ ಬಂದು ತನ್ನ ಹಾಗು ಜನಸಮೂಹದ ಪರವಾಗಿ ದಹನಬಲಿಗಳನ್ನು ಸಮರ್ಪಿಸಿ ತನ್ನ ಮತ್ತು ಜನರ ಪರವಾಗಿ ಪ್ರಾಯಶ್ಚಿತ್ತ ವಿಧಿಯನ್ನು ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಗ ಅವನು ಹೊರಗೆ ಬಂದು ತನಗೋಸ್ಕರವೂ ಜನಸಮೂಹಕ್ಕೋಸ್ಕರವೂ ಸರ್ವಾಂಗಹೋಮಗಳನ್ನು ಸಮರ್ಪಿಸಿ ತನಗೋಸ್ಕರವಾಗಿಯೂ ಜನರಿಗೋಸ್ಕರವಾಗಿಯೂ ದೋಷಪರಿಹಾರಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವನು ಪರಿಶುದ್ಧ ಸ್ಥಳದಲ್ಲಿ ನೀರಿನಲ್ಲಿ ಸ್ನಾನಮಾಡಿ, ತನ್ನ ಬಳಕೆಯ ಬಟ್ಟೆಗಳನ್ನು ಧರಿಸಿಕೊಂಡು, ಹೊರಗೆ ಬಂದು ತನ್ನ ದಹನಬಲಿಯನ್ನೂ, ಜನರ ದಹನಬಲಿಯನ್ನೂ ಸಮರ್ಪಿಸಿ ತನಗೋಸ್ಕರವೂ, ಜನರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:24
14 ತಿಳಿವುಗಳ ಹೋಲಿಕೆ  

ಆ ಯಜ್ಞಗಳು ಮತ್ತು ಕಾಣಿಕೆಗಳು ಅನ್ನಪಾನಾದಿಗಳನ್ನೂ ವಿಶೇಷವಾದ ಸ್ನಾನಗಳನ್ನೂ ಕುರಿತಾಗಿದ್ದವು. ಅವು ದೇಹಕ್ಕೆ ಸಂಬಂಧಿಸಿದ ನಿಯಮಗಳೇ ಹೊರತು ಜನರ ಹೃದಯಕ್ಕೆ ಸಂಬಂಧಿಸಿದ್ದವುಗಳಲ್ಲ. ಜನರಿಗೆ ದೇವರ ಹೊಸ ಮಾರ್ಗವು ಲಭಿಸುವ ಕಾಲದವರೆಗೆ, ಅವರು ಅನುಸರಿಸಲೆಂದು ಆ ನಿಯಮಗಳನ್ನು ದೇವರೇ ಕೊಟ್ಟನು.


ಒಬ್ಬನು ಅವುಗಳಲ್ಲಿ ಯಾವುದನ್ನು ಮುಟ್ಟಿದರೂ ಸಾಯಂಕಾಲದವರೆಗೆ ಅಶುದ್ಧನಾಗುವನು. ಅವನು ನೈವೇದ್ಯ ಪದಾರ್ಥಗಳಲ್ಲಿ ಯಾವುದನ್ನೂ ತಿನ್ನಬಾರದು. ಅವನು ತನ್ನನ್ನು ನೀರಿನಿಂದ ತೊಳೆದುಕೊಂಡರೂ ಪವಿತ್ರ ಪದಾರ್ಥವನ್ನು ತಿನ್ನಬಾರದು.


ಏಳನೆಯ ದಿನದಲ್ಲಿ ಅವನು ತನ್ನ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಳ್ಳಬೇಕು. ಅವನು ತನ್ನ ತಲೆಯ, ಗಡ್ಡದ ಮತ್ತು ಹುಬ್ಬಿನ ಕೂದಲನ್ನು, ಹೌದು, ಎಲ್ಲಾ ಕೂದಲನ್ನು ಕ್ಷೌರ ಮಾಡಿಸಿಕೊಳ್ಳಬೇಕು. ಬಳಿಕ ಅವನು ತನ್ನ ಬಟ್ಟೆಗಳನ್ನು ತೊಳೆದು ನೀರಿನಲ್ಲಿ ಸ್ನಾನಮಾಡಬೇಕು. ಅಂದಿನಿಂದ ಅವನು ಶುದ್ಧನಾಗಿರುವನು.


ಆರೋನನ ಗಂಡುಮಕ್ಕಳಿಗೂ ಅಂಗಿಗಳನ್ನು, ನಡುಕಟ್ಟುಗಳನ್ನು ಮತ್ತು ಮುಂಡಾಸಗಳನ್ನು ಮಾಡಿಸು. ಇವು ಅವರಿಗೆ ಘನತೆ ಮತ್ತು ಗೌರವಗಳನ್ನು ಕೊಡುತ್ತವೆ.


ನಿನ್ನ ಸಹೋದರನಾದ ಆರೋನನಿಗೆ ಮತ್ತು ಅವನ ಗಂಡುಮಕ್ಕಳಿಗೆ ಬಟ್ಟೆಗಳನ್ನು ತೊಡಿಸು. ಬಳಿಕ ಅವರನ್ನು ಯಾಜಕರನ್ನಾಗಿ ಮಾಡಲು ವಿಶೇಷ ತೈಲದಿಂದ ಅಭಿಷೇಕಿಸು. ಇದು ಅವರನ್ನು ಪ್ರತಿಷ್ಠಿಸುವುದು ಮತ್ತು ಪವಿತ್ರರನ್ನಾಗಿ ಮಾಡುವುದು. ಅವರು ಯಾಜಕರಾಗಿ ನನ್ನ ಸೇವೆ ಮಾಡುವರು.


ಬಳಿಕ ಅವನು ಪಾಪಪರಿಹಾರಕ ಯಜ್ಞದ ಕೊಬ್ಬನ್ನು ವೇದಿಕೆಯ ಮೇಲೆ ಹೋಮಮಾಡುವನು.


ಮೋಶೆಯು ಆರೋನನಿಗೆ, “ಯೆಹೋವನು ಆಜ್ಞಾಪಿಸಿದವುಗಳನ್ನು ಮಾಡು. ಯಜ್ಞವೇದಿಕೆಯ ಬಳಿಗೆ ಹೋಗಿ ಪಾಪಪರಿಹಾರಕ ಯಜ್ಞವನ್ನೂ ಸರ್ವಾಂಗಹೋಮವನ್ನೂ ಅರ್ಪಿಸು. ನಿನ್ನನ್ನೂ ಜನರನ್ನೂ ಶುದ್ಧಿಮಾಡುವ ಆ ಕಾರ್ಯಗಳನ್ನು ಮಾಡು. ಜನರು ತಂದದ್ದನ್ನು ತೆಗೆದುಕೊಂಡು ಅವರಿಗಾಗಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಿ ಅವರನ್ನು ಶುದ್ಧಿಮಾಡು” ಎಂದು ಹೇಳಿದನು.


ಈ ಪವಿತ್ರಸ್ಥಳಕ್ಕೆ ಪ್ರವೇಶಿಸುವ ಯಾಜಕರು ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲಿಯೇ ತೆಗೆದಿಟ್ಟು ಹೊರಗಿನ ಪ್ರಾಕಾರಕ್ಕೆ ಹೋಗಬೇಕು. ಯಾಕೆಂದರೆ ಆ ವಸ್ತುಗಳು ಪವಿತ್ರವಾದದ್ದು. ಒಬ್ಬ ಯಾಜಕನು ಇತರ ಜನರು ಇರುವ ಸ್ಥಳಕ್ಕೆ ಹೋಗಬೇಕಿದ್ದಲ್ಲಿ ಅವನು ಕೋಣೆಗೆ ಬಂದು ದೀಕ್ಷಾವಸ್ತ್ರಗಳನ್ನು ತೆಗೆದಿಟ್ಟು ಬೇರೆ ವಸ್ತ್ರಗಳನ್ನು ಹಾಕಿಕೊಂಡು ಹೋಗಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು