29 “ಇದು ನಿಮಗೆ ಶಾಶ್ವತವಾದ ಕಟ್ಟಳೆ: ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಆಹಾರವನ್ನು ತೆಗೆದುಕೊಳ್ಳದೆ ಉಪವಾಸ ಮಾಡಬೇಕು. ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ದೇಶದಲ್ಲಿ ವಾಸಿಸುವ ಪ್ರವಾಸಿಗರಾಗಲಿ ಪರದೇಶಸ್ಥರಾಗಲಿ ಯಾವ ಕೆಲಸವನ್ನು ಮಾಡಬಾರದು.
29 “ಸ್ವದೇಶಸ್ಥರಾದ ನೀವೂ ಮತ್ತು ನಿಮ್ಮಲ್ಲಿ ವಾಸವಾಗಿರುವ ಅನ್ಯದೇಶದವರು, ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನು ಬಿಟ್ಟು ಉಪವಾಸಮಾಡಿ ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು. ಇದು ನಿಮಗೆ ಶಾಶ್ವತವಾದ ನಿಯಮ.
29 ಇದು ನಿಮಗೆ ಶಾಶ್ವತವಾದ ನಿಯಮ: ಸ್ವದೇಶೀಯರಾದ ನೀವೂ ನಿಮ್ಮಲ್ಲಿ ವಾಸಮಾಡುವ ಅನ್ಯದೇಶದವರೆಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನ ಸಕಲ ವಿಧವಾದ ದುಡಿಮೆಗಳನ್ನೂ ಬಿಟ್ಟು ತಮ್ಮನ್ನೇ ಪರಿತ್ಯಜಿಸಿಕೊಳ್ಳಬೇಕು.
29 ಇದು ನಿಮಗೆ ಶಾಶ್ವತವಾದ ನಿಯಮ; ಯಾವದಂದರೆ ಸ್ವದೇಶಸ್ಥರಾದ ನೀವೂ ನಿಮ್ಮಲ್ಲಿ ಇಳುಕೊಂಡಿರುವ ಅನ್ಯದೇಶದವರೂ ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನೂ ಬಿಟ್ಟು [ಉಪವಾಸಮಾಡಿ] ಪ್ರಾಣವನ್ನು ಕುಂದಿಸಿಕೊಳ್ಳಬೇಕು.
29 “ಇದು ನಿಮಗೆ ಶಾಶ್ವತವಾದ ನಿಯಮ: ಸ್ವದೇಶೀಯರಾದ ನೀವೂ, ನಿಮ್ಮೊಡನೆ ವಾಸಿಸುತ್ತಿರುವ ಪರಕೀಯರೂ, ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಎಲ್ಲಾ ಕೆಲಸಗಳನ್ನು ಬಿಟ್ಟು, ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು.
ಈಗ ಆ ಜನರು ಹೀಗೆ ಹೇಳುತ್ತಾರೆ, “ನಾವು ನಿನ್ನನ್ನು ಗೌರವಿಸಲು ಉಪವಾಸಮಾಡಿದೆವು. ನೀನು ನಮ್ಮನ್ನೇಕೆ ಗಮನಿಸುವದಿಲ್ಲ? ನಿನ್ನನ್ನು ಗೌರವಿಸುವದಕ್ಕಾಗಿ ನಾವು ನಮ್ಮ ದೇಹಗಳನ್ನು ದಂಡಿಸಿದೆವು. ನೀನೇಕೆ ನಮ್ಮನ್ನು ಗಮನಿಸುವದಿಲ್ಲ?” ಆದರೆ ಯೆಹೋವನು ಹೇಳುವುದೇನೆಂದರೆ: “ವಿಶೇಷ ದಿವಸಗಳಲ್ಲಿ ನಿಮ್ಮ ಇಷ್ಟಾನುಸಾರ ಉಪವಾಸ ಮಾಡುವಿರಿ. ನೀವು ನಿಮ್ಮ ಸ್ವಂತ ದೇಹಗಳನ್ನು ದಂಡಿಸದೆ ನಿಮ್ಮ ಸೇವಕರನ್ನು ದಂಡಿಸುತ್ತಿದ್ದೀರಿ.
ಆಮೇಲೆ ದರ್ಶನದಲ್ಲಿನ ಆ ಮನುಷ್ಯನು ಪುನಃ ಮಾತನಾಡಲು ಪ್ರಾರಂಭಿಸಿದನು. ಅವನು, “ದಾನಿಯೇಲನೇ, ಭಯಪಡಬೇಡ. ನೀನು ಜ್ಞಾನಸಂಪಾದನೆ ಮಾಡಬೇಕೆಂದೂ ದೇವರೆದುರಿಗೆ ಭಕ್ತಿವಿನಯಗಳಿಂದ ವರ್ತಿಸಬೇಕೆಂದೂ ತೀರ್ಮಾನಿಸಿದ ಮೊದಲ ದಿನದಿಂದಲೇ ಆತನು ನಿನ್ನ ಪ್ರಾರ್ಥನೆಗಳನ್ನು ಆಲಿಸುತ್ತಿದ್ದಾನೆ. ನೀನು ಪ್ರಾರ್ಥನೆ ಮಾಡಿದ್ದರಿಂದಲೇ ನಾನು ಇಲ್ಲಿಗೆ ಬಂದೆನು.
ಉಪವಾಸದ ದಿವಸಗಳಲ್ಲಿ ಜನರು ತಮ್ಮ ದೇಹದಂಡನೆ ಮಾಡುವದನ್ನು ನೋಡಲು ಆಶಿಸುತ್ತೇನೆ ಎಂದು ನೆನಸಿರುವಿರಾ? ಜನರು ತಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಕೆಂದು ನಾನು ಆಶಿಸುವುದಾಗಿ ನೀವು ತಿಳಿದುಕೊಂಡಿದ್ದೀರಾ? ಜನರು ಸತ್ತ ಸಸಿಗಳಂತೆ ನನಗೆ ಅಡ್ಡಬೀಳಬೇಕೆಂದೂ ಶೋಕವಸ್ತ್ರಗಳನ್ನು ಧರಿಸಬೇಕೆಂದೂ ನಾನು ಆಶಿಸುವುದಾಗಿ ತಿಳಿದುಕೊಂಡಿದ್ದೀರಾ? ಅವರು ಬೂದಿಯ ಮೇಲೆ ಕುಳಿತುಕೊಂಡು ತಮ್ಮ ದುಃಖವನ್ನು ವ್ಯಕ್ತಪಡಿಸಬೇಕೆಂದು ನಾನು ಆಶಿಸುತ್ತೇನೋ? ನೀವು ಉಪವಾಸದ ದಿವಸಗಳಲ್ಲಿ ಅದನ್ನೇ ಮಾಡುವವರಾಗಿರುತ್ತೀರಿ. ಯೆಹೋವನು ಅದನ್ನೇ ಆಶಿಸುವನೆಂದು ನಂಬುತ್ತೀರೋ?
ನೀವು ಏಳು ದಿನಗಳವರೆಗೆ ಅಗ್ನಿಯ ಮೂಲಕ ಯೆಹೋವನಿಗೆ ಯಜ್ಞವನ್ನು ಅರ್ಪಿಸಬೇಕು. ಎಂಟನೆಯ ದಿನದಲ್ಲಿ ಇನ್ನೊಂದು ಬಾರಿ ಸಭೆಯಾಗಿ ಸೇರಬೇಕು. ನೀವು ಅಗ್ನಿಯ ಮೂಲಕ ಯಜ್ಞವನ್ನು ಅರ್ಪಿಸಬೇಕು. ಇದು ಪವಿತ್ರಸಭೆಯಾಗಿರುವುದು. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು.
ಆದರೆ ಏಳನೆ ದಿನವು ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಲು ಮೀಸಲಾಗಿರುವ ವಿಶ್ರಾಂತಿ ದಿನವಾಗಿದೆ. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು. ನೀವಾಗಲಿ ನಿಮ್ಮ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಸೇವಕರಾಗಲಿ ಸೇವಕಿಯರಾಗಲಿ ನಿಮ್ಮ ಪಶುಗಳಾಗಲಿ ನಿಮ್ಮಲ್ಲಿರುವ ವಿದೇಶಿಯರಾಗಲಿ ಕೆಲಸ ಮಾಡಬಾರದು.
ಆ ಮೂರು ವಾರಗಳಲ್ಲಿ ನಾನು ಇಷ್ಟಪಡುತ್ತಿದ್ದ ಆಹಾರವನ್ನು ತಿನ್ನಲಿಲ್ಲ; ಮಾಂಸಾಹಾರವನ್ನು ಸೇವಿಸಲಿಲ್ಲ; ದ್ರಾಕ್ಷಾರಸವನ್ನು ಕುಡಿಯಲಿಲ್ಲ; ತಲೆಗೆ ಎಣ್ಣೆಯನ್ನು ಹಾಕಿಕೊಳ್ಳಲಿಲ್ಲ. ಮೂರು ವಾರಗಳವರೆಗೆ ಇದೆಲ್ಲವನ್ನು ನಾನು ನಿಲ್ಲಿಸಿಬಿಟ್ಟೆ.
ಸಬ್ಬತ್ತಿನ ವಿಷಯವಾಗಿ ಯೆಹೋವನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ನೀವು ಅನುಸರಿಸಿದರೆ ಮತ್ತು ಆ ವಿಶೇಷ ದಿನದಲ್ಲಿ ಸ್ವೇಚ್ಛೆಯಾಗಿ ನಡೆಯದಿದ್ದರೆ ಇದೆಲ್ಲಾ ನಿಮಗೆ ದೊರೆಯುವುದು. ಸಬ್ಬತ್ದಿವಸವನ್ನು ನೀವು ಸಂತಸದ ದಿವಸವೆಂದು ಕರೆಯಬೇಕು. ದೇವರ ಆ ವಿಶೇಷ ದಿವಸವನ್ನು ನೀವು ಸನ್ಮಾನಿಸಿ ಆ ದಿವಸದಲ್ಲಿ ನಿಮ್ಮ ಸ್ವಕಾರ್ಯಗಳನ್ನು ಮಾಡಕೂಡದು; ಹರಟೆ ಹೊಡೆಯಕೂಡದು.
ಆದ್ದರಿಂದ ಇಸ್ರೇಲಿನ ಜನರೆಲ್ಲರೂ ರಾಜನಾದ ಸೊಲೊಮೋನನ ಬಳಿಗೆ ಒಟ್ಟಾಗಿ ಬಂದರು. ಇದು ಏತನೀಮ್ ತಿಂಗಳಿನ (ಆಶ್ವೀಜ) ವಿಶೇಷ ದಿನದಂದು (ಪರ್ಣಶಾಲೆಗಳ ಹಬ್ಬ) ನಡೆಯಿತು. ಇದು ವರ್ಷದ ಏಳನೆಯ ತಿಂಗಳು.
“ಆರು ದಿನಗಳಲ್ಲಿ ನೀವು ಕೆಲಸಮಾಡಿರಿ. ಆದರೆ ಏಳನೆಯ ದಿನವು ವಿಶೇಷವಾದ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆ ದಿನದಲ್ಲಿ ಪವಿತ್ರಸಭೆ ಕೂಡಬೇಕು. ನೀವು ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಅದು ಯೆಹೋವನಿಗೆ ಮೀಸಲಾದ ಸಬ್ಬತ್ತಾಗಿದೆ.
“ಆರೋನನು ವರ್ಷಕ್ಕೊಮ್ಮೆ ಯೆಹೋವನಿಗೆ ವಿಶೇಷ ಯಜ್ಞವನ್ನು ಸಮರ್ಪಿಸಬೇಕು. ಜನರ ಪಾಪಗಳ ಪ್ರಾಯಶ್ಚಿತ್ತಕ್ಕಾಗಿ ಆರೋನನು ದೋಷಪರಿಹಾರಕ ಯಜ್ಞದ ರಕ್ತವನ್ನು ಉಪಯೋಗಿಸುವನು. ಆರೋನನು ಇದನ್ನು ಈ ಯಜ್ಞವೇದಿಕೆಯ ಕೊಂಬುಗಳಲ್ಲಿ ಮಾಡುವನು. ಆ ದಿನವು ದೋಷಪರಿಹಾರಕ ದಿನವೆಂದು ಕರೆಯಲ್ಪಡುವುದು. ಯೆಹೋವನಿಗೆ ಇದು ಅತೀ ಪರಿಶುದ್ಧವಾದ ವಿಶೇಷ ದಿನವಾಗಿದೆ.”
ಈ ಹಬ್ಬದ ಪ್ರಥಮ ಮತ್ತು ಕೊನೆಯ ದಿನಗಳಲ್ಲಿ ಪವಿತ್ರ ಸಭೆಯಾಗಿ ಕೂಡಿಬರಬೇಕು. ಈ ಹಬ್ಬದ ದಿನಗಳಲ್ಲಿ ನೀವು ಯಾವ ಕೆಲಸವನ್ನೂ ಮಾಡಬಾರದು. ಆದರೆ ನಿಮ್ಮ ಭೋಜನಕ್ಕಾಗಿ ಆಹಾರ ಸಿದ್ಧಪಡಿಸಬಹುದು.
“‘ಸಬ್ಬತ್ ದಿನವನ್ನು ವಿಶೇಷ ದಿನವೆಂದು ಪರಿಗಣಿಸಿ ಆಚರಿಸಿರಿ. ಆ ದಿನವನ್ನು ಬೇರೆ ದಿನದಂತೆ ಪರಿಗಣಿಸಿ ನಡೆಯುವವನಿಗೆ ಮರಣದಂಡನೆಯಾಗಬೇಕು. ಸಬ್ಬತ್ ದಿನದಲ್ಲಿ ಯಾವನಾದರೂ ಕೆಲಸಮಾಡಿದರೆ ಅವನನ್ನು ಬಹಿಷ್ಕರಿಸಬೇಕು.
ಕೆಲಸ ಮಾಡುವುದಕ್ಕೆ ವಾರದಲ್ಲಿ ಬೇರೆ ಆರು ದಿನಗಳಿವೆ. ಆದರೆ ಏಳನೆಯ ದಿನವು ವಿಶ್ರಾಂತಿಯ ಬಹು ವಿಶೇಷವಾದ ದಿನವಾಗಿದೆ. ಯೆಹೋವನನ್ನು ಸನ್ಮಾನಿಸಲು ಅದೊಂದು ವಿಶೇಷ ದಿನವಾಗಿದೆ. ಸಬ್ಬತ್ತಿನ ಸಮಯದಲ್ಲಿ ಕೆಲಸಮಾಡುವವನು ಕೊಲ್ಲಲ್ಪಡಬೇಕು.
ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿದರು. ಅವರು ನೀರನ್ನು ತೆಗೆದುಕೊಂಡು ಬಂದು ಯೆಹೋವನ ಮುಂದೆ ಅದನ್ನು ಸುರಿದರು. ಈ ರೀತಿ ಅಂದು ಅವರು ಉಪವಾಸವನ್ನು ಆರಂಭಿಸಿದರು. ಅಂದು ಅವರು ಯಾವ ಆಹಾರವನ್ನೂ ತೆಗೆದುಕೊಳ್ಳಲಿಲ್ಲ. ಅಲ್ಲದೆ ಅವರು ತಮ್ಮ ಪಾಪಗಳನ್ನು ಅರಿಕೆ ಮಾಡಿದರು. “ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಅವರು ಹೇಳಿದರು. ಹೀಗಿರಲು, ಸಮುವೇಲನು ಇಸ್ರೇಲರ ನ್ಯಾಯಾಧೀಶನಾಗಿ ಮಿಚ್ಪೆಯಲ್ಲಿ ಸೇವೆ ಸಲ್ಲಿಸಿದನು.
ಅಹವಾ ನದಿಯ ದಡದಲ್ಲಿದ್ದಾಗ ನಮಗೆ ಸುಖ ಪ್ರಯಾಣ ದೊರೆಯುವಂತೆ ಎಲ್ಲಾ ತರದ ತೊಂದರೆಗಳಿಂದ ಪಾರು ಮಾಡುವಂತೆ ಮತ್ತು ನಮ್ಮಲ್ಲಿರುವ ಸ್ವತ್ತುಗಳನ್ನು ಕಾಪಾಡುವಂತೆ ನಮ್ಮ ದೇವರಲ್ಲಿ ದೀನತೆಯಿಂದ ಉಪವಾಸ ಪ್ರಾರ್ಥನೆ ಮಾಡಬೇಕೆಂದು ನೆರೆದುಬಂದ ಜನರಿಗೆ ಪ್ರಕಟಿಸಿದೆನು.