Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:3 - ಪರಿಶುದ್ದ ಬೈಬಲ್‌

3 “ದೋಷಪರಿಹಾರಕ ದಿನದಲ್ಲಿ ಆರೋನನು ಮಹಾ ಪವಿತ್ರಸ್ಥಳದೊಳಗೆ ಪ್ರವೇಶಿಸುವ ಮೊದಲು ಪಾಪಪರಿಹಾರಕ ಯಜ್ಞವಾಗಿ ಹೋರಿಯನ್ನೂ ಸರ್ವಾಂಗಹೋಮವಾಗಿ ಟಗರನ್ನೂ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಮುಂದೆ ಹೇಳುವ ರೀತಿಯಲ್ಲಿ ಬರಬೇಕು. ಅವನು ದೋಷಪರಿಹಾರಕ ಯಜ್ಞಕ್ಕಾಗಿ ಹೋರಿಯನ್ನು ಮತ್ತು ಸರ್ವಾಂಗಹೋಮಕ್ಕಾಗಿ ಟಗರನ್ನು ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಈ ರೀತಿಯಾಗಿ ಬರಬೇಕು. ದೋಷಪರಿಹಾರಕ ಬಲಿಗಾಗಿ ಹೋರಿಯನ್ನೂ ದಹನಬಲಿಗಾಗಿ ಟಗರನ್ನೂ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಮುಂದೆ ಹೇಳುವ ರೀತಿಯಾಗಿ ಬರಬೇಕು. ಅವನು ದೋಷಪರಿಹಾರಕಯಜ್ಞಕ್ಕಾಗಿ ಹೋರಿಯನ್ನೂ ಸರ್ವಾಂಗಹೋಮಕ್ಕಾಗಿ ಟಗರನ್ನೂ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಈ ಸೂಚನೆಗಳನ್ನು ಸಂಪೂರ್ಣವಾಗಿ ಅನುಸರಿಸಿದ ನಂತರವೇ ಆರೋನನು ಮಹಾಪರಿಶುದ್ಧ ಸ್ಥಳಕ್ಕೆ ಪ್ರವೇಶಿಸಬೇಕು: ಪಾಪ ಪರಿಹಾರದ ಬಲಿಗಾಗಿ ಒಂದು ಹೋರಿಯನ್ನು ಮತ್ತು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:3
13 ತಿಳಿವುಗಳ ಹೋಲಿಕೆ  

“ಅಭಿಷಿಕ್ತನಾದ ಯಾಜಕನು ತಪ್ಪುಮಾಡಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಅರ್ಪಿಸಬೇಕು.


ಆದರೆ ಪ್ರಧಾನಯಾಜಕನು ಮಾತ್ರ ಎರಡನೆ ಕೊಠಡಿಯ ಒಳಗೆ ಹೋಗಬಹುದಿತ್ತು. ಅವನು ವರ್ಷಕ್ಕೊಮ್ಮೆ ಮಾತ್ರ ಅದರೊಳಗೆ ಹೋಗುತ್ತಿದ್ದನು. ಅವನು ತನ್ನೊಂದಿಗೆ ರಕ್ತವನ್ನು ತೆಗೆದುಕೊಳ್ಳದೆ ಎಂದೂ ಅದರೊಳಗೆ ಪ್ರವೇಶಿಸುತ್ತಿರಲಿಲ್ಲ. ತನಗೋಸ್ಕರವಾಗಿಯೂ ಜನರು ತಿಳಿಯದೆ ಮಾಡಿದ ಪಾಪಗಳಿಗಾಗಿಯೂ ಅವನು ಆ ರಕ್ತವನ್ನು ದೇವರಿಗೆ ಅರ್ಪಿಸುತ್ತಿದ್ದನು.


ಬಳಿಕ ಮೋಶೆಯು ಸರ್ವಾಂಗಹೋಮದ ಟಗರನ್ನು ತಂದನು. ಆರೋನನು ಮತ್ತು ಅವನ ಪುತ್ರರು ತಮ್ಮ ಕೈಗಳನ್ನು ಟಗರಿನ ತಲೆಯ ಮೇಲೆ ಇಟ್ಟರು.


“ಒಬ್ಬನು ಕುರಿಯನ್ನಾಗಲಿ ಆಡನ್ನಾಗಲಿ ಸರ್ವಾಂಗಹೋಮವಾಗಿ ಅರ್ಪಿಸುವಾಗ, ಆ ಪ್ರಾಣಿಯು ಯಾವ ದೋಷವಿಲ್ಲದ ಗಂಡಾಗಿರಬೇಕು.


ಆತನು ಒಂದೇ ಒಂದು ಸಾರಿ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸಿದನು. ಆತನು ಹೋತಗಳ ಮತ್ತು ಹೋರಿಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತದಿಂದಲೇ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸಿ ನಮಗೆ ನಿತ್ಯಸ್ವಾತಂತ್ರ್ಯವನ್ನು ತಂದುಕೊಟ್ಟನು.


ಇಸ್ರೇಲರಿಗೆ ಹೀಗೆ ಹೇಳು: ‘ಪಾಪಪರಿಹಾರಕ ಯಜ್ಞಕ್ಕಾಗಿ ಹೋತವನ್ನು ತೆಗೆದುಕೊಳ್ಳಿರಿ; ಸರ್ವಾಂಗಹೋಮಕ್ಕಾಗಿ ಕರುವನ್ನೂ ಕುರಿಮರಿಯನ್ನೂ ತೆಗೆದುಕೊಳ್ಳಿರಿ. ಕರುವೂ ಕುರಿಮರಿಯೂ ಒಂದು ವರ್ಷದ್ದಾಗಿರಬೇಕು. ಆ ಪ್ರಾಣಿಗಳಲ್ಲಿ ಯಾವ ದೋಷವಿರಬಾರದು.


ತರುವಾಯ ಮೋಶೆಯು ಪಾಪಪರಿಹಾರಕ್ಕಾಗಿ ಯಜ್ಞದ ಹೋರಿಯನ್ನು ತಂದನು. ಆರೋನನು ಮತ್ತು ಅವನ ಪುತ್ರರು ಆ ಪಾಪಪರಿಹಾರಕ ಯಜ್ಞದ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.


“ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.


ಯೆಹೋವನು ಮೋಶೆಯೊಡನೆ ಮಾತನಾಡಿ ಹೇಳಿದ್ದೇನೆಂದರೆ:


ಬಳಿಕ ಆರೋನನು ಪಾಪಪರಿಹಾರಕ ಯಜ್ಞಕ್ಕೋಸ್ಕರ ಹೋರಿಯನ್ನು ಅರ್ಪಿಸಬೇಕು. ಈ ಪಾಪಪರಿಹಾರಕ ಯಜ್ಞವು ಅವನಿಗಾಗಿ ಇರುತ್ತದೆ. ಆರೋನನು ತನಗೂ ತನ್ನ ಕುಟುಂಬದವರಿಗೂ ಪ್ರಾಯಶ್ಚಿತ್ತ ಮಾಡಲು ಇದನ್ನು ಮಾಡಬೇಕು.


ಮೋಶೆಯು ಆರೋನನಿಗೆ ಹೀಗೆಂದನು; “ಒಂದು ಎಳೆಹೋರಿಯನ್ನೂ ಒಂದು ಟಗರನ್ನೂ ತೆಗೆದುಕೊ. ಆ ಪಶುಗಳಲ್ಲಿ ಏನೂ ದೋಷವಿರಬಾರದು. ಹೋರಿಯನ್ನು ಪಾಪಪರಿಹಾರಕ ಯಜ್ಞವಾಗಿಯೂ ಟಗರನ್ನು ಸರ್ವಾಂಗಹೋಮವಾಗಿಯೂ ಯೆಹೋವನಿಗೆ ಸಮರ್ಪಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು