Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:34 - ಪರಿಶುದ್ದ ಬೈಬಲ್‌

34 ಇಸ್ರೇಲರನ್ನು ಶುದ್ಧೀಕರಿಸುವ ಕಟ್ಟಳೆ ಶಾಶ್ವತವಾದದ್ದು. ನೀವು ಆ ಕಾರ್ಯಗಳನ್ನು ವರ್ಷಕ್ಕೊಮ್ಮೆ ಇಸ್ರೇಲರ ಪಾಪಗಳ ದೆಸೆಯಿಂದ ಮಾಡಬೇಕು.” ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಆ ಕಾರ್ಯಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಇಸ್ರಾಯೇಲರ ಎಲ್ಲಾ ದೋಷಗಳನ್ನು ನಿವಾರಣೆಮಾಡುವುದಕ್ಕಾಗಿ ಅವರಿಗೋಸ್ಕರ ವರ್ಷಕ್ಕೆ ಒಂದಾವರ್ತಿ ದೋಷಪರಿಹಾರವನ್ನು ಮಾಡಬೇಕೆಂಬುದೇ ನಿಮಗೆ ಶಾಶ್ವತನಿಯಮ” ಎಂದು ಹೇಳಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಇಸ್ರಯೇಲರ ಎಲ್ಲಾ ದೋಷಗಳನ್ನು ನಿವಾರಣೆಮಾಡುವುದಕ್ಕಾಗಿ ಅವರಿಗೋಸ್ಕರ ವರ್ಷಕ್ಕೆ ಒಂದಾವರ್ತಿ ಪ್ರಾಯಶ್ಚಿತ್ತ ಮಾಡಬೇಕಾದುದು ನಿಮಗೆ ಶಾಶ್ವತ ನಿಯಮವಾಗಿರಬೇಕು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಇಸ್ರಾಯೇಲ್ಯರ ಎಲ್ಲಾ ದೋಷಗಳನ್ನು ನಿವಾರಣೆಮಾಡುವದಕ್ಕಾಗಿ ಅವರಿಗೋಸ್ಕರ ವರುಷಕ್ಕೆ ಒಂದಾವರ್ತಿ ದೋಷಪರಿಹಾರವನ್ನು ಮಾಡಬೇಕೆಂಬದೇ ನಿಮಗೆ ಶಾಶ್ವತನಿಯಮ. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 “ಹೀಗೆ ಇಸ್ರಾಯೇಲರ ಎಲ್ಲಾ ಪಾಪಗಳಿಗಾಗಿ ವರ್ಷಕ್ಕೊಂದಾವರ್ತಿ ಪ್ರಾಯಶ್ಚಿತ್ತ ಮಾಡುವುದು, ನಿಮಗೆ ನಿರಂತರವಾದ ನಿಯಮವಾಗಿರುವುದು,” ಎಂದು ಹೇಳಿದರು. ಯೆಹೋವ ದೇವರು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:34
14 ತಿಳಿವುಗಳ ಹೋಲಿಕೆ  

ಆದರೆ ಪ್ರಧಾನಯಾಜಕನು ಮಾತ್ರ ಎರಡನೆ ಕೊಠಡಿಯ ಒಳಗೆ ಹೋಗಬಹುದಿತ್ತು. ಅವನು ವರ್ಷಕ್ಕೊಮ್ಮೆ ಮಾತ್ರ ಅದರೊಳಗೆ ಹೋಗುತ್ತಿದ್ದನು. ಅವನು ತನ್ನೊಂದಿಗೆ ರಕ್ತವನ್ನು ತೆಗೆದುಕೊಳ್ಳದೆ ಎಂದೂ ಅದರೊಳಗೆ ಪ್ರವೇಶಿಸುತ್ತಿರಲಿಲ್ಲ. ತನಗೋಸ್ಕರವಾಗಿಯೂ ಜನರು ತಿಳಿಯದೆ ಮಾಡಿದ ಪಾಪಗಳಿಗಾಗಿಯೂ ಅವನು ಆ ರಕ್ತವನ್ನು ದೇವರಿಗೆ ಅರ್ಪಿಸುತ್ತಿದ್ದನು.


ಪ್ರಧಾನಯಾಜಕನು ವರ್ಷಕ್ಕೊಮ್ಮೆ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವಾಗ ಅರ್ಪಿಸುವುದಕ್ಕಾಗಿ ಪಶುರಕ್ತವನ್ನು ತನ್ನೊಡನೆ ತೆಗೆದುಕೊಂಡು ಹೋಗುತ್ತಿದ್ದನು. ಆದರೆ ಅವನು ತನ್ನ ಸ್ವಂತ ರಕ್ತವನ್ನು ಅರ್ಪಿಸುತ್ತಿರಲಿಲ್ಲ. ಕ್ರಿಸ್ತನು ಪರಲೋಕಕ್ಕೆ ಹೋದದ್ದು, ಪ್ರಧಾನ ಯಾಜಕನು ಮತ್ತೆಮತ್ತೆ ರಕ್ತವನ್ನು ಅರ್ಪಿಸಿದಂತೆ ತನ್ನನ್ನು ಮತ್ತೆಮತ್ತೆ ಅರ್ಪಿಸಿಕೊಳ್ಳುವುದಕ್ಕಾಗಿಯಲ್ಲ.


“ಆರೋನನು ವರ್ಷಕ್ಕೊಮ್ಮೆ ಯೆಹೋವನಿಗೆ ವಿಶೇಷ ಯಜ್ಞವನ್ನು ಸಮರ್ಪಿಸಬೇಕು. ಜನರ ಪಾಪಗಳ ಪ್ರಾಯಶ್ಚಿತ್ತಕ್ಕಾಗಿ ಆರೋನನು ದೋಷಪರಿಹಾರಕ ಯಜ್ಞದ ರಕ್ತವನ್ನು ಉಪಯೋಗಿಸುವನು. ಆರೋನನು ಇದನ್ನು ಈ ಯಜ್ಞವೇದಿಕೆಯ ಕೊಂಬುಗಳಲ್ಲಿ ಮಾಡುವನು. ಆ ದಿನವು ದೋಷಪರಿಹಾರಕ ದಿನವೆಂದು ಕರೆಯಲ್ಪಡುವುದು. ಯೆಹೋವನಿಗೆ ಇದು ಅತೀ ಪರಿಶುದ್ಧವಾದ ವಿಶೇಷ ದಿನವಾಗಿದೆ.”


ಒಂದೇ ಯಜ್ಞದ ಮೂಲಕ ಆತನು ತನ್ನ ಜನರನ್ನು ಎಂದೆಂದಿಗೂ ನಿಷ್ಕಳಂಕರನ್ನಾಗಿ ಮಾಡಿದನು. ಪರಿಶುದ್ಧರಾಗಿ ಮಾಡಲ್ಪಡುತ್ತಿರುವ ಜನರೇ ಇವರು.


ಆ ಜನರು ಪ್ರತಿವರ್ಷ ಅರ್ಪಿಸುತ್ತಿದ್ದ ಯಜ್ಞಗಳು ಅವರ ಪಾಪಗಳನ್ನು ನೆನಪಿಗೆ ತರುತ್ತಿದ್ದವು.


“ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಆ ದಿನದಲ್ಲಿ ನೀವು ಉಪವಾಸ ಮಾಡಬೇಕು; ಯಾವ ಕೆಲಸವನ್ನೂ ಮಾಡಬಾರದು.


ನೀವು ಅಂದು ಯಾವ ಕೆಲಸವನ್ನೂ ಮಾಡಬಾರದು. ನೀವು ಎಲ್ಲೇ ವಾಸವಾಗಿದ್ದರೂ ಈ ಕಟ್ಟಳೆ ನಿಮಗೆ ಶಾಶ್ವತವಾಗಿದೆ.


ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ನೀವು ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ಯಾಕೆಂದರೆ ಅದು ದೋಷಪರಿಹಾರಕ ದಿನವಾಗಿರುತ್ತದೆ. ಆ ದಿನದಲ್ಲಿ ಯಾಜಕರು ಯೆಹೋವನ ಸನ್ನಿಧಿಗೆ ಹೋಗಿ ಆಚಾರವಿಧಿಗಳ ಪ್ರಕಾರ ನಿಮಗಾಗಿ ಪ್ರಾಯಶ್ಚಿತ್ತ ಮಾಡುವರು.


ಮೋಶೆಯು ಎಲ್ಲಾ ಕೆಲಸವನ್ನು ಸೂಕ್ಷ್ಮವಾಗಿ ಪರೀಕ್ಷಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಎಲ್ಲವೂ ಮಾಡಲ್ಪಟ್ಟಿದ್ದರಿಂದ ಮೋಶೆ ಅವರನ್ನು ಆಶೀರ್ವದಿಸಿದನು.


ನಿಮ್ಮ ಎಲ್ಲಾ ಸಂತತಿಗಳವರಿಗೆ ಈ ನಿಯಮವು ಶಾಶ್ವತವಾದದ್ದು. ನೀವೆಲ್ಲೇ ವಾಸಿಸಿದರೂ ಕೊಬ್ಬನ್ನಾಗಲಿ ರಕ್ತವನ್ನಾಗಲಿ ಎಂದಿಗೂ ತಿನ್ನಬಾರದು.”


ಆತನು ಹೇಳಿದ್ದೇನೆಂದರೆ: “ನಿನ್ನ ಸಹೋದರನಾದ ಆರೋನನೊಡನೆ ಮಾತಾಡು. ಅವನು ತನಗೆ ಇಷ್ಟಬಂದಾಗಲೆಲ್ಲಾ ತೆರೆಯ ಹಿಂದಿರುವ ಮಹಾ ಪವಿತ್ರಸ್ಥಳದೊಳಕ್ಕೆ ಹೋಗಬಾರದೆಂದು ಅವನಿಗೆ ಹೇಳು. ಆ ತೆರೆಯ ಹಿಂದೆ ಇರುವ ಕೋಣೆಯೊಳಗೆ ಪವಿತ್ರ ಪೆಟ್ಟಿಗೆಯು ಇರುತ್ತದೆ. ಕೃಪಾಸನವು ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿರುತ್ತದೆ. ಕೃಪಾಸನದ ಮೇಲೆ ಮೇಘದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಆರೋನನು ಆ ಕೋಣೆಯೊಳಗೆ ಹೋದರೆ ಸಾಯುವನು!


ಬಳಿಕ ಮೋಶೆಯು ಇಸ್ರೇಲರೊಂದಿಗೆ ಮಾತಾಡಿದನು. ಆಗ ಅವರು ದೂಷಣೆ ಮಾಡಿದ ಮನುಷ್ಯನನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಅವನಿಗೆ ಕಲ್ಲೆಸೆದು ಕೊಂದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು