Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:8 - ಪರಿಶುದ್ದ ಬೈಬಲ್‌

8 ಆರೋನನು ಚೀಟುಹಾಕಿ ಒಂದು ಹೋತವನ್ನು ಯೆಹೋವನಿಗಾಗಿಯೂ ಇನ್ನೊಂದನ್ನು ಅಜಾಜೇಲನಿಗಾಗಿಯೂ ಎಂದು ನಿರ್ಧರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಅವನು ಆ ಹೋತಗಳಲ್ಲಿ ಒಂದು ಯೆಹೋವನಿಗೋಸ್ಕರವೆಂದು ಮತ್ತೊಂದು ಅಜಾಜೇಲನಿಗೋಸ್ಕರವೆಂದು ಚೀಟುಗಳನ್ನು ಬರೆದು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಅವನು ಆ ಹೋತಗಳಲ್ಲಿ ಯಾವುದು ಸರ್ವೇಶ್ವರನಿಗೆ, ಯಾವುದು ಅಜಾಜೇಲನಿಗೆ ಎಂದು ತಿಳಿದುಕೊಳ್ಳಲು ದಾಳಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಅವನು ಆ ಹೋತಗಳ ವಿಷಯವಾಗಿ ಯೆಹೋವನಿಗೋಸ್ಕರವೆಂದೂ ಅಜಾಜೇಲನಿಗೋಸ್ಕರವೆಂದೂ ಚೀಟುಗಳನ್ನು ಬರೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆರೋನನು ಆ ಎರಡು ಹೋತಗಳಿಗಾಗಿ ಚೀಟುಹಾಕಬೇಕು. ಒಂದು ಚೀಟು ಯೆಹೋವ ದೇವರಿಗೋಸ್ಕರ, ಮತ್ತೊಂದು ಚೀಟು ಬಲಿಪಶುವಿಗೋಸ್ಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:8
12 ತಿಳಿವುಗಳ ಹೋಲಿಕೆ  

ಆಗ ಪ್ರಯಾಣಿಕರು, “ಯಾರ ನಿಮಿತ್ತ ನಮಗೆ ಈ ಆಪತ್ತು ಬಂತೆಂದು ತಿಳಿದುಕೊಳ್ಳಲು ಚೀಟು ಹಾಕೋಣ” ಅಂದರು. ಅವರು ಚೀಟು ಹಾಕಿದಾಗ ಆ ಚೀಟು ಯೋನನಿಗೆ ಬಂದಿತು; ಅವನೇ ಅವರ ಸಂಕಟಗಳಿಗೆ ಕಾರಣನೆಂಬುದು ನಿಶ್ಚಯವಾಯಿತು.


ಜನರು ಚೀಟುಹಾಕಿ ನಿರ್ಧಾರ ಮಾಡಿದರೂ ಆ ನಿರ್ಧಾರಗಳು ಬರುವುದು ಯೆಹೋವನಿಂದಲೇ.


ಈ ಪ್ರಾಂತ್ಯವನ್ನು ನೀವು ಇಸ್ರೇಲರ ಕುಲದವರಿಗೆ ವಿಭಾಗಿಸಿ ಹಂಚಬೇಕು. ಇದು ಪ್ರತೀ ಕುಲದವರಿಗೆ ದೊರಕುವ ಭೂಮಿಯ ವಿವರ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಲಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಸ್ವಾಸ್ತ್ಯವು ದೊರೆಯಬೇಕು. ಒಂದೊಂದು ಕುಲಕ್ಕೆ ಯಾವ ಯಾವ ಸ್ಥಳವನ್ನು ಸೂಚಿಸುತ್ತದೋ ಆ ಸ್ಥಳದಲ್ಲಿಯೇ ಆ ಕುಲದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.


ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವಾಸ್ತ್ಯವನ್ನು ಗೊತ್ತುಮಾಡಬೇಕು.


“ತರುವಾಯ ಆರೋನನು ಆ ಎರಡು ಹೋತಗಳನ್ನು ತೆಗೆದುಕೊಂಡು ಅವುಗಳನ್ನು ದೇವದರ್ಶನಗುಡಾರದ ಬಾಗಿಲಿನಲ್ಲಿ ಯೆಹೋವನ ಸನ್ನಿಧಿಗೆ ತರಬೇಕು.


“ಬಳಿಕ ಆರೋನನು ಚೀಟು ಹಾಕುವುದರ ಮೂಲಕ ಯೆಹೋವನಿಗೋಸ್ಕರ ಆರಿಸಲ್ಪಟ್ಟ ಹೋತವನ್ನು ಅರ್ಪಿಸುವನು. ಆರೋನನು ಈ ಹೋತವನ್ನು ಪಾಪಪರಿಹಾರಕ ಯಜ್ಞವಾಗಿ ಅರ್ಪಿಸಬೇಕು.


ಆದರೆ ಚೀಟು ಹಾಕುವುದರ ಮೂಲಕ ಅಜಾಜೇಲನಿಗಾಗಿ ಆರಿಸಲ್ಪಟ್ಟ ಹೋತವನ್ನು ಜೀವಂತವಾಗಿ ಯೆಹೋವನ ಸನ್ನಿಧಿಗೆ ತರಬೇಕು ಮತ್ತು ಈ ಹೋತವನ್ನು ಮರುಭೂಮಿಯಲ್ಲಿರುವ ಅಜಾಜೇಲನಿಗೆ ಕಳುಹಿಸಬೇಕು. ಜನರಿಗೋಸ್ಕರ ಪ್ರಾಯಶ್ಚಿತ್ತ ಮಾಡಲು ಹೀಗೆ ಮಾಡಬೇಕು.


“ಅಜಾಜೇಲನಿಗೆ ಹೋತವನ್ನು ನಡೆಸಿಕೊಂಡು ಹೋದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಿಂದ ತನ್ನ ಪೂರ್ಣಶರೀರವನ್ನು ತೊಳೆದುಕೊಳ್ಳಬೇಕು. ಬಳಿಕ ಅವನು ಪಾಳೆಯದೊಳಗೆ ಬರಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು