Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 17:3 - ಪರಿಶುದ್ದ ಬೈಬಲ್‌

3 ಇಸ್ರೇಲರಲ್ಲಿ ಯಾವನಾದರೂ ಹೋರಿಯನ್ನಾಗಲಿ ಕುರಿಮರಿಯನ್ನಾಗಲಿ ಹೋತವನ್ನಾಗಲಿ ಪಾಳೆಯದೊಳಗೆ ಅಥವಾ ಪಾಳೆಯದ ಹೊರಗೆ ವಧಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ಆಜ್ಞಾಪಿಸುವುದೇನೆಂದರೆ, ‘ಇಸ್ರಾಯೇಲರಲ್ಲಿ ಯಾವನಾದರೂ ಹೋರಿಯನ್ನಾಗಲಿ, ಕುರಿಯನ್ನಾಗಲಿ ಅಥವಾ ಆಡನ್ನಾಗಲಿ ಕೊಯ್ಯುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಸ್ರಯೇಲರಲ್ಲಿ ಯಾರಾದರು ಹೋರಿಯನ್ನಾಗಲಿ, ಕುರಿಯನ್ನಾಗಲಿ, ಆಡನ್ನಾಗಲಿ ಬಲಿಕೊಡುವಾಗ ಅದನ್ನು ಸರ್ವೇಶ್ವರನಿಗೆ ಸಮರ್ಪಿಸಲು ದೇವಗುಡಾರದ ಬಾಗಿಲಿಗೆ ತರದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಸ್ರಾಯೇಲ್ಯರಲ್ಲಿ ಯಾವನಾದರೂ ಹೋರಿಯನ್ನಾಗಲಿ ಕುರಿಯನ್ನಾಗಲಿ ಆಡನ್ನಾಗಲಿ ಕೊಯ್ಯುವಾಗ ಅದನ್ನು ಯೆಹೋವನಿಗೆ ಸಮರ್ಪಿಸುವದಕ್ಕಾಗಿ ಆತನ ಗುಡಾರದ ಬಾಗಲಿಗೆ ತಾರದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಸ್ರಾಯೇಲಿನ ಮನೆತನದಲ್ಲಿ ಯಾವನು ಒಂದು ಎತ್ತನ್ನಾಗಲಿ ಇಲ್ಲವೆ ಒಂದು ಕುರಿಯನ್ನಾಗಲಿ ಇಲ್ಲವೆ ಒಂದು ಆಡನ್ನಾಗಲಿ ಪಾಳೆಯದೊಳಗೆ ಆಗಲಿ ಇಲ್ಲವೆ ಪಾಳೆಯದ ಹೊರಗೆ ಆಗಲಿ ವಧಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 17:3
11 ತಿಳಿವುಗಳ ಹೋಲಿಕೆ  

“ಅಲ್ಲದೆ ಯಾವನಾದರೂ ತನ್ನಷ್ಟಕ್ಕೆ ಸತ್ತ ಪ್ರಾಣಿಯನ್ನು ತಿಂದರೆ ಅಥವಾ ಬೇರೆ ಪ್ರಾಣಿಯಿಂದ ಕೊಲ್ಲಲ್ಪಟ್ಟ ಪ್ರಾಣಿಯನ್ನು ತಿಂದರೆ, ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಿಕೊಳ್ಳಬೇಕು. ಅವನು ಇಸ್ರೇಲನಾಗಿದ್ದರೂ ನಿಮ್ಮ ಮಧ್ಯದಲ್ಲಿ ವಾಸಿಸುವ ಪರದೇಶಸ್ಥನಾಗಿದ್ದರೂ ಹಾಗೆಯೇ ಮಾಡಬೇಕು.


“ಜನರಿಗೆ ಹೇಳಬೇಕಾದದ್ದೇನೆಂದರೆ: ನಿಮ್ಮ ಮಧ್ಯದಲ್ಲಿ ವಾಸಿಸುತ್ತಿರುವ ಯಾವ ಇಸ್ರೇಲನಾಗಲಿ ಅನ್ಯನಾಗಲಿ ಸರ್ವಾಂಗಹೋಮವನ್ನಾಗಲಿ ಯಜ್ಞವನ್ನಾಗಲಿ ಅರ್ಪಿಸಬಹುದು.


ಆರೋನನೊಡನೆಯೂ ಅವನ ಪುತ್ರರೊಡನೆಯೂ ಇಸ್ರೇಲರೆಲ್ಲರೊಡನೆಯೂ ಮಾತಾಡು. ಯೆಹೋವನು ಹೀಗೆ ಆಜ್ಞಾಪಿಸಿದ್ದಾನೆಂದು ಹೇಳು. ಅದೇನೆಂದರೆ,


ಅವನು ಆ ಪ್ರಾಣಿಯನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಅವನು ಆ ಪಶುವಿನ ಒಂದು ಭಾಗವನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು. ಅವನು ರಕ್ತವನ್ನು ಸುರಿಸಿದ್ದರಿಂದ ತನ್ನ ಕಾಣಿಕೆಯನ್ನು ಯೆಹೋವನ ಪವಿತ್ರ ಗುಡಾರದೊಳಗೆ ತೆಗೆದುಕೊಂಡು ಹೋಗಬೇಕು. ಅವನು ಪ್ರಾಣಿಯ ಒಂದು ಭಾಗವನ್ನು ಯೆಹೋವನಿಗೆ ಉಡುಗೊರೆಯಾಗಿ ತೆಗೆದುಕೊಂಡು ಹೋಗದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು.


ದೇವಾಲಯದ ನಿರ್ಮಾಣವು ಇನ್ನೂ ಪೂರ್ಣಗೊಂಡಿರಲಿಲ್ಲ. ಆದ್ದರಿಂದ ಜನರು ಅದುವರೆವಿಗೂ ಎತ್ತರವಾದ ಸ್ಥಳಗಳಲ್ಲಿ ಯಜ್ಞವೇದಿಕೆಯ ಮೇಲೆ ಪಶುಗಳ ಯಜ್ಞಗಳನ್ನು ಸಮರ್ಪಿಸುತ್ತಿದ್ದರು.


ಆ ವ್ಯಕ್ತಿಯು ತನ್ನ ಕೈಯನ್ನು ಪಶುವಿನ ತಲೆಯ ಮೇಲಿಟ್ಟು ದೇವದರ್ಶನಗುಡಾರದ ಬಾಗಿಲಲ್ಲಿ ಅದನ್ನು ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ಆ ರಕ್ತವನ್ನು ಯಜ್ಞವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು