Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 17:7 - ಪರಿಶುದ್ದ ಬೈಬಲ್‌

7 ಅವರು “ಅಜದೇವತೆಗಳಿಗೆ” ಇನ್ನು ಮುಂದೆ ಬಲಿಕೊಡಬಾರದು. ಅವರು ಅನ್ಯದೇವತೆಗಳ ಹಿಂದೆ ಹೋಗಿದ್ದಾರೆ. ಆ ರೀತಿಯಲ್ಲಿ ಅವರು ಸೂಳೆಯರ ಹಾಗೆ ವರ್ತಿಸಿದ್ದಾರೆ. ಈ ನಿಯಮಗಳು ಶಾಶ್ವತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಮತ್ತು ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಅವರ ಸಂತತಿಯವರಿಗೂ ಇದು ಶಾಶ್ವತ ನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಜಾರತ್ವ ಮಾಡುವಂತೆ ಅವರು ಇದುವರೆಗೆ ಪೂಜಿಸುತ್ತಿದ್ದ ಆ ಮೇಕೆ ದೇವತೆಗಳಿಗೆ ಇನ್ನೆಂದಿಗೂ ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾದ ನಿಯಮ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 17:7
23 ತಿಳಿವುಗಳ ಹೋಲಿಕೆ  

ನಾನು ಹೇಳುತ್ತಿರುವುದೇನೆಂದರೆ, ಜನರು ವಿಗ್ರಹಗಳಿಗೆ ಅರ್ಪಿಸಿದ ಪದಾರ್ಥಗಳು ದೆವ್ವಗಳಿಗೆ ಅರ್ಪಿತವಾದುವುಗಳೇ ಹೊರತು ದೇವರಿಗಲ್ಲ. ನೀವು ದೆವ್ವಗಳೊಂದಿಗೆ ಯಾವ ವಿಷಯದಲ್ಲಿಯೂ ಪಾಲು ಹೊಂದಬಾರದೆಂಬುದು ನನ್ನ ಆಸೆ.


“ಎಚ್ಚರಿಕೆಯಾಗಿರಿ, ಆ ದೇಶದಲ್ಲಿ ವಾಸಿಸುವ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬೇಡಿರಿ. ಇಲ್ಲವಾದರೆ ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ನೀವು ಅವರೊಂದಿಗೆ ಸೇರಿಕೊಳ್ಳುವಿರಿ. ಅವರೊಂದಿಗೆ ಸೇರಿಕೊಳ್ಳುವಂತೆ ನಿಮ್ಮನ್ನು ಆಹ್ವಾನಿಸುವರು; ಅವರ ಯಜ್ಞಾರ್ಪಣೆಗಳನ್ನು ತಿನ್ನುವಿರಿ.


ಯಾರೊಬ್ಬಾಮನು ತನಗೆ ಬೇಕಾದ ಯಾಜಕರನ್ನು ಆರಿಸಿ ತಾನು ಮಾಡಿಸಿದ ಬಸವನ ಮತ್ತು ಆಡುಗಳ ಪ್ರತಿಮೆಗಳನ್ನು ಉನ್ನತಸ್ಥಳಗಳಲ್ಲಿ ಪ್ರತಿಷ್ಠಾಪಿಸಿ ಆರಾಧಿಸಲು ನೇಮಿಸಿದನು.


ಅವರು ದೆವ್ವಗಳಿಗೆ ಯಜ್ಞವನ್ನರ್ಪಿಸಿದರು. ಅವುಗಳು ನಿಜ ದೇವರುಗಳಲ್ಲ. ಅವುಗಳು ಮಾಡಲ್ಪಟ್ಟ ದೇವರುಗಳೆಂದು ಅವರಿಗೆ ಗೊತ್ತಿರಲಿಲ್ಲ. ಅವುಗಳು ಕೈಯಿಂದ ಮಾಡಲ್ಪಟ್ಟ ದೇವರುಗಳು. ಅವರ ಪೂರ್ವಿಕರಿಗೆ ತಿಳಿಯದಂಥ ದೇವರುಗಳು.


ದೇವಜನರು ತಮ್ಮ ಸ್ವಂತ ಮಕ್ಕಳನ್ನೂ ಆ ದೆವ್ವಗಳಿಗೆ ಬಲಿಕೊಟ್ಟರು.


ಈ ಉಪದ್ರವಗಳಿಂದ ಸಾಯದೆ ಉಳಿದ ಜನರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಲಿಲ್ಲ. ತಮ್ಮ ಸ್ವಂತ ಕೈಗಳಿಂದ ನಿರ್ಮಿಸಿದ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಅವರು ದೆವ್ವಗಳ ಆರಾಧನೆಯನ್ನು ನಿಲ್ಲಿಸಲಿಲ್ಲ. ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಿಂದ ಮಾಡಲ್ಪಟ್ಟು, ನಡೆಯಲಾರದ, ನೋಡಲಾರದ ಮತ್ತು ಕೇಳಲಾರದ ವಿಗ್ರಹಗಳನ್ನು ಪೂಜಿಸುವುದನ್ನು ಅವರು ನಿಲ್ಲಿಸಲಿಲ್ಲ.


ಇದರ ಜೊತೆಯಲ್ಲಿಯೇ ಈಜಿಪ್ಟಿನೊಂದಿಗೆ ತನ್ನ ಪ್ರಣಯ ಸಂಬಂಧವನ್ನು ಮುಂದುವರಿಸುತ್ತಿದ್ದಳು. ಆಕೆಯು ಇನ್ನೂ ಎಳೆಯ ಹುಡುಗಿಯಾಗಿದ್ದಾಗಲೇ ಈಜಿಪ್ಟ್ ಆಕೆಯೊಂದಿಗೆ ಸಂಭೋಗ ಮಾಡಿತ್ತು. ಅವಳ ಎಳೆ ಸ್ತನಗಳನ್ನು ಹಿಸುಕಿದವರಲ್ಲಿ ಮೊದಲನೆಯವರು ಈಜಿಪ್ಟಿನವರೇ. ಈಜಿಪ್ಟ್ ತನ್ನ ಅನೈತಿಕ ಪ್ರೀತಿಯನ್ನು ಆಕೆಯ ಮೇಲೆ ಸುರಿಯಿತು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಬೇಗನೇ ಸಾಯುವೆ. ನಿನ್ನ ಪೂರ್ವಿಕರ ಬಳಿಗೆ ನೀನು ಸೇರಿದಾಗ ಈ ಜನರು ನನಗೆ ನಂಬಿಗಸ್ತರಾಗಿರುವುದಿಲ್ಲ. ನಾನು ಅವರೊಡನೆ ಮಾಡಿರುವ ಒಡಂಬಡಿಕೆಯನ್ನು ಅವರು ಮುರಿಯುವರು. ಅವರು ನನ್ನನ್ನು ತೊರೆದು ತಾವು ಸ್ವಾಧೀನಮಾಡಿಕೊಳ್ಳುವ ದೇಶದ ಅನ್ಯದೇವತೆಗಳನ್ನು ಪೂಜಿಸುವರು.


ನಾನು ಅವನಿಗೂ ಅವನ ಕುಟುಂಬಕ್ಕೂ ವಿರುದ್ಧನಾಗಿರುವೆನು; ನಾನು ಅವನನ್ನು ಅವನ ಜನರಿಂದ ಬೇರ್ಪಡಿಸುವೆನು. ಮೊಲೆಕನೊಡನೆ ಸೂಳೆತನ ಮಾಡುವ ಅವನನ್ನೂ ಅವನ ಹಿಂಬಾಲಕರನ್ನೂ ಅವರ ಜನರಿಂದ ಬೇರ್ಪಡಿಸುವೆನು.


ನಾನು ಅವರಿಗೆ ಆಜ್ಞಾಪಿಸಿದವುಗಳಿಗೆ ಬಹುಬೇಗನೆ ಅವಿಧೇಯರಾಗಿದ್ದಾರೆ. ಚಿನ್ನವನ್ನು ಕರಗಿಸಿ ಅದರಿಂದ ಬಸವನನ್ನು ಮಾಡಿಕೊಂಡು ಅದನ್ನು ಪೂಜಿಸುತ್ತಾ ಅದಕ್ಕೆ ಯಜ್ಞಗಳನ್ನು ಸಮರ್ಪಿಸುತ್ತಿದ್ದಾರೆ. ‘ಇಸ್ರೇಲರೇ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳು’ ಎಂದು ಜನರು ಹೇಳುತ್ತಿದ್ದಾರೆ” ಎಂದನು.


“ಸುಳ್ಳುದೇವರಿಗೆ ಯಜ್ಞವನ್ನರ್ಪಿಸುವವನನ್ನು ನಾಶ ಮಾಡಬೇಕು. ನೀವು ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನರ್ಪಿಸಬೇಕು.


ಹೌದು, ಮೊದಲು ನೀವು ಆ ಪಾಪಗಳನ್ನೇ ಮಾಡುತ್ತಿದ್ದಿರಿ. ಈ ಲೋಕದ ಮಾರ್ಗಗಳಿಗನುಸಾರವಾಗಿ ನೀವು ಜೀವಿಸಿದಿರಿ. ವಾಯುಮಂಡಲದಲ್ಲಿರುವ ದುಷ್ಟಶಕ್ತಿಗಳ ಅಧಿಪತಿಯನ್ನು ನೀವು ಅನುಸರಿಸಿದಿರಿ. ದೇವರಿಗೆ ಅವಿಧೇಯರಾದ ಜನರಲ್ಲಿ ಈಗ ಕಾರ್ಯಮಾಡುತ್ತಿರುವುದು ಅದೇ ಆತ್ಮ.


ಈ ಲೋಕದ ಅಧಿಪತಿಯು (ಸೈತಾನನು) ನಂಬದವರ ಮನಸ್ಸುಗಳನ್ನು ಕುರುಡುಗೊಳಿಸಿದ್ದಾನೆ. ಕ್ರಿಸ್ತನ ಮಹಿಮೆಯ ವಿಷಯವಾದ ಸುವಾರ್ತೆಯ ಬೆಳಕನ್ನು (ಸತ್ಯವನ್ನು) ಅವರು ಕಾಣಲಾರರು. ಕ್ರಿಸ್ತನೊಬ್ಬನೇ ದೇವರಿಗೆ ಪ್ರತಿರೂಪವಾಗಿದ್ದಾನೆ.


“ನಾನು ನಿಮ್ಮೊಂದಿಗೆ ಇನ್ನು ಬಹಳ ಹೊತ್ತು ಮಾತಾಡುವುದಿಲ್ಲ. ಈ ಲೋಕದ ಅಧಿಪತಿಯು (ಸೈತಾನನು) ಬರುತ್ತಿದ್ದಾನೆ. ಅವನಿಗೆ ನನ್ನ ಮೇಲೆ ಯಾವ ಅಧಿಕಾರವೂ ಇಲ್ಲ.


ಈ ಲೋಕಕ್ಕೆ ತೀರ್ಪಾಗುವ ಕಾಲ ಇದೇ ಆಗಿದೆ. ಈಗ ಈ ಲೋಕದ ಅಧಿಪತಿಯನ್ನು (ಸೈತಾನ) ಹೊರಗೆ ದಬ್ಬಲಾಗುವುದು.


ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.


ನಿಮ್ಮ ಎಲ್ಲಾ ಸಂತತಿಗಳವರಿಗೆ ಈ ನಿಯಮವು ಶಾಶ್ವತವಾದದ್ದು. ನೀವೆಲ್ಲೇ ವಾಸಿಸಿದರೂ ಕೊಬ್ಬನ್ನಾಗಲಿ ರಕ್ತವನ್ನಾಗಲಿ ಎಂದಿಗೂ ತಿನ್ನಬಾರದು.”


“ಜನರಿಗೆ ಹೇಳಬೇಕಾದದ್ದೇನೆಂದರೆ: ನಿಮ್ಮ ಮಧ್ಯದಲ್ಲಿ ವಾಸಿಸುತ್ತಿರುವ ಯಾವ ಇಸ್ರೇಲನಾಗಲಿ ಅನ್ಯನಾಗಲಿ ಸರ್ವಾಂಗಹೋಮವನ್ನಾಗಲಿ ಯಜ್ಞವನ್ನಾಗಲಿ ಅರ್ಪಿಸಬಹುದು.


ತಮ್ಮ ಪಾಪಕೃತ್ಯಗಳಿಂದ ದೇವಜನರು ಮಲಿನಗೊಂಡರು. ಅವರು ದೇವರಿಗೆ ಅಪನಂಬಿಗಸ್ತರಾಗಿ ಅನ್ಯಜನರು ಮಾಡಿದವುಗಳನ್ನು ಮಾಡಿದರು.


ಅವರು ಈಜಿಪ್ಟಿನಲ್ಲಿ ಇನ್ನೂ ಎಳೆ ಪ್ರಾಯದಲ್ಲಿರುವಾಗಲೇ ಸೂಳೆಯರಾದರು. ಈಜಿಪ್ಟಿನಲ್ಲಿ ಅವರು ಮೊದಲ ಬಾರಿ ಸಂಭೋಗಿಸಿದರು. ಪುರುಷರು ತಮ್ಮ ಮೊಲೆತೊಟ್ಟುಗಳನ್ನು ಮುಟ್ಟಿ ಅವರ ಎಳೆಸ್ತನಗಳನ್ನು ಹಿಡಿಯಲು ಬಿಟ್ಟರು.


“ಪಶುಸಂಗ ಮಾಡಿದವನಿಗೆ ಮರಣದಂಡನೆಯಾಗಬೇಕು.


ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು