Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:24 - ಪರಿಶುದ್ದ ಬೈಬಲ್‌

24 “ಆ ದುರಾಚಾರಗಳಲ್ಲಿ ಯಾವುದರಿಂದಲೂ ನಿಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಬೇಡಿರಿ. ನಾನು ಜನಾಂಗಗಳನ್ನು ಅವರ ದೇಶಗಳಿಂದ ಹೊರಡಿಸಿ ಅವರ ದೇಶವನ್ನು ನಿಮಗೆ ಕೊಡುತ್ತಿದ್ದೇನೆ. ಯಾಕೆಂದರೆ ಅವರು ಅಂಥ ಭಯಂಕರ ಪಾಪಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “‘ಈ ದುರಾಚಾರಗಳಲ್ಲಿ ಯಾವುದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಮೊದಲು ಹೊರಡಿಸಿದ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ಇಂಥ ದುರಾಚಾರಗಳಾವುದರಿಂದಲೂ ನೀವು ಅಶುದ್ಧರಾಗಬಾರದು. ಏಕೆಂದರೆ ನಾನು ನಿಮಗೆ ಮುಂಚಿತವಾಗಿ ಹೊರಡಿಸುವ ಜನಾಂಗಗಳವರು ಇಂಥ ಅನಾಚಾರಗಳಿಂದಲೇ ಅಶುದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಈ ದುರಾಚಾರಗಳಲ್ಲಿ ಯಾವದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಹೊರಡಿಸುವ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ ‘ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು. ಏಕೆಂದರೆ ನಿಮ್ಮ ಮುಂದೆಯೇ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಿಂದ ಹೊಲೆಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:24
22 ತಿಳಿವುಗಳ ಹೋಲಿಕೆ  

ಇಂಥ ಕಾರ್ಯಗಳನ್ನು ಮಾಡುವ ಜನರನ್ನು ದೇವರು ದ್ವೇಷಿಸುತ್ತಾನೆ. ಆದ್ದರಿಂದಲೇ ಆ ಜನಾಂಗಗಳವರನ್ನು ನಿಮಗೋಸ್ಕರವಾಗಿ ಈ ದೇಶದಿಂದ ಹೊರಡಿಸುವನು.


ಅನ್ಯಜನರು ಆ ಭಯಂಕರ ಪಾಪಗಳನ್ನು ಮಾಡಿದ್ದಾರೆ. ಆದರೆ ನೀವು ನನ್ನ ಕಟ್ಟಳೆಗಳಿಗೆ ವಿಧೇಯರಾಗಬೇಕು. ನೀವು ಆ ಭಯಂಕರ ಪಾಪಗಳಲ್ಲಿ ಯಾವುದನ್ನೂ ಮಾಡಬಾರದು. ಆ ಭಯಂಕರ ಪಾಪಗಳಿಂದ ನಿಮ್ಮನ್ನು ಹೊಲೆ ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು.”


ಯಾವನಾದರೂ ದೇವರ ಆಲಯವನ್ನು ನಾಶಮಾಡಿದರೆ ದೇವರು ಅವನನ್ನು ನಾಶಮಾಡುವನು. ಏಕೆಂದರೆ ದೇವರ ಆಲಯವು ಪರಿಶುದ್ಧವಾದದ್ದು. ನೀವೇ ದೇವರ ಆಲಯವಾಗಿದ್ದೀರಿ.


ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ಆ ಜನರಲ್ಲಿಗೆ ಕಳಿಸಿಕೊಟ್ಟೆ. ಆ ಪ್ರವಾದಿಗಳು ನನ್ನ ಸೇವಕರಾಗಿದ್ದರು. ಆ ಪ್ರವಾದಿಗಳು ನನ್ನ ಸಂದೇಶವನ್ನು ಜನರಿಗೆ ತಿಳಿಸಿ ‘ಈ ದುಷ್ಕೃತ್ಯವನ್ನು ಮಾಡಬೇಡಿರಿ, ನೀವು ಈ ವಿಗ್ರಹಗಳ ಪೂಜೆಮಾಡುವದನ್ನು ನಾನು ದ್ವೇಷಿಸುತ್ತೇನೆ’ ಎಂದು ಹೇಳಿದರು.


ನಿಮ್ಮ ದೇವರಾದ ಯೆಹೋವನಿಗೆ ನೀವು ಆ ರೀತಿ ಮಾಡಬಾರದು. ಆ ರೀತಿಯಾಗಿ ಆತನನ್ನು ಆರಾಧಿಸಬಾರದು. ಯಾಕೆಂದರೆ ಅವರು ತಮ್ಮ ದೇವರೆದುರಿನಲ್ಲಿ ಅಸಹ್ಯವಾದ ಕಾರ್ಯಗಳನ್ನು ಮಾಡುತ್ತಾರೆ. ಅದನ್ನು ನಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ. ಅವರು ತಮ್ಮ ಮಕ್ಕಳನ್ನೇ ದೇವರಿಗೆ ಬಲಿ ಅರ್ಪಿಸುತ್ತಾರೆ.


ಹಿಂದೆ ನೀವು ಈಜಿಪ್ಟಿನಲ್ಲಿ ವಾಸಿಸಿದಿರಿ. ಈಜಿಪ್ಟಿನ ಜನರು ಆಚರಿಸುವ ಆಚಾರಗಳನ್ನು ನೀವು ಅನುಸರಿಸಬಾರದು. ಆ ದೇಶದಲ್ಲಿ ಮಾಡುತ್ತಿದ್ದ ಕಾರ್ಯಗಳನ್ನು ನೀವು ಮಾಡಬಾರದು. ನಾನು ನಿಮ್ಮನ್ನು ಕಾನಾನಿಗೆ ನಡೆಸುತ್ತಿದ್ದೇನೆ. ಆ ದೇಶದಲ್ಲಿ ಮಾಡುವ ಕಾರ್ಯಗಳನ್ನು ನೀವು ಮಾಡಕೂಡದು. ಅವರ ಸಂಪ್ರದಾಯಗಳನ್ನು ಅನುಸರಿಸಬೇಡಿ.


ನಾಲ್ಕು ತಲೆಮಾರುಗಳ ನಂತರ ನಿನ್ನ ಜನರು ಈ ನಾಡಿಗೆ ಹಿಂತಿರುಗುವರು. ಆ ಕಾಲದಲ್ಲಿ ನಿನ್ನ ಜನರು ಅಮೋರಿಯರನ್ನು ಸೋಲಿಸುವರು. ಇಲ್ಲಿ ವಾಸಿಸುತ್ತಿರುವ ಅಮೋರಿಯರನ್ನು ನಿನ್ನ ಜನರ ಮೂಲಕ ನಾನೇ ಶಿಕ್ಷಿಸುವೆನು. ಇದು ಮುಂದೆ ನಡೆಯುವ ಸಂಗತಿ. ಯಾಕೆಂದರೆ ಆ ಸಮಯದಲ್ಲಿ ಅಮೋರಿಯರು ಅಂಥ ಶಿಕ್ಷೆ ಅನುಭವಿಸುವಷ್ಟು ಕೆಟ್ಟವರಾಗಿರಲಿಲ್ಲ” ಎಂದು ಹೇಳಿದನು.


ನಾನು ವಾಸಿಸುವ ದೇಶವನ್ನು ನೀವು ಅಶುದ್ಧಮಾಡಬಾರದು, ಯಾಕೆಂದರೆ ಯೆಹೋವನಾದ ನಾನೇ ಇಸ್ರೇಲರೊಂದಿಗೆ ವಾಸಿಸುತ್ತೇನೆ.”


“ಅಲ್ಲಿಯ ಜನರನ್ನು ದೇವರಾದ ಯೆಹೋವನು ಹೊಡೆದೋಡಿಸುವನು. ಆದರೆ ನೀವು ನಿಮ್ಮ ಮನಸ್ಸಿನಲ್ಲಿ, ‘ನಾವು ನೀತಿವಂತರಾಗಿದುದ್ದರಿಂದ ಮತ್ತು ಒಳ್ಳೆಯವರಾಗಿದ್ದುದರಿಂದ ಆತನು ನಮ್ಮನ್ನು ಈ ಒಳ್ಳೆಯ ದೇಶಕ್ಕೆ ತಂದನು’ ಎಂದು ನೆನಸಿಕೊಳ್ಳಬೇಡಿ. ಅದು ಕಾರಣವಲ್ಲ. ಅಲ್ಲಿಯ ಜನರು ಬಹು ಕೆಟ್ಟವರಾಗಿದ್ದ ಕಾರಣ ಯೆಹೋವನು ಅವರನ್ನು ಹೊರಡಿಸಿದನು.


ಇವೆಲ್ಲಾ ಆದ ಬಳಿಕ ಇಸ್ರೇಲರ ಪ್ರಧಾನರು ನನ್ನ ಬಳಿಗೆ ಬಂದು, “ಎಜ್ರನೇ, ಇಸ್ರೇಲ್ ಜನರು ಸುತ್ತಲೂ ವಾಸಿಸುವ ಅನ್ಯಜನರಿಂದ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ಯಾಜಕರಾಗಲಿ ಲೇವಿಯರಾಗಲಿ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ದೇಶದಲ್ಲಿ ವಾಸವಾಗಿರುವ ಕಾನಾನ್ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ, ಅಮ್ಮೋನಿಯರ, ಮೋವಾಬ್ಯರ, ಅಮೋರಿಯರ, ಈಜಿಪ್ಟಿನವರ ಕೆಟ್ಟ ಜೀವಿತವು ಇಸ್ರೇಲರ ಮೇಲೆ ಪ್ರಭಾವಬೀರಿದೆ.


ತಮ್ಮ ಪಾಪಕೃತ್ಯಗಳಿಂದ ದೇವಜನರು ಮಲಿನಗೊಂಡರು. ಅವರು ದೇವರಿಗೆ ಅಪನಂಬಿಗಸ್ತರಾಗಿ ಅನ್ಯಜನರು ಮಾಡಿದವುಗಳನ್ನು ಮಾಡಿದರು.


ನೀವು ಉತ್ತಮ ರೀತಿಯಲ್ಲಿ ಜೀವಿಸುವಿರಿ ಎಂದು ದೇವರು ನಿಮಗೆ ಆ ದೇಶವನ್ನು ಕೊಡುವುದಿಲ್ಲ. ಅವರು ಕೆಟ್ಟದ್ದಾಗಿ ಜೀವಿಸುತ್ತಿರುವುದರಿಂದ ದೇವರು ಅವರನ್ನು ಹೊರಡಿಸಿ ನೀವು ಆ ದೇಶವನ್ನು ಅನುಭವಿಸುವಂತೆ ಮಾಡಿದನು; ಆತನು ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಟ್ಟಿರುವ ವಾಗ್ದಾನಗಳನ್ನು ನೆರವೇರಿಸುವುದಕ್ಕಾಗಿ ನಿಮಗೆ ಆ ದೇಶವನ್ನು ಕೊಡುವನು.


ಆದರೆ ರಾತ್ರಿ ಸಮಯದಲ್ಲಿ ಗಿಬೆಯ ನಗರದ ಮುಖಂಡರು ಬಂದು ನಾವು ಇಳಿದುಕೊಂಡ ಮನೆಗೆ ಮುತ್ತಿಗೆ ಹಾಕಿದರು. ಅವರು ನನ್ನನ್ನು ಕೊಲ್ಲಬೇಕೆಂದಿದ್ದರು. ಅವರು ನನ್ನ ಉಪಪತ್ನಿಯ ಮೇಲೆ ಬಲಾತ್ಕಾರ ಮಾಡಿದರು; ಆಗ ಅವಳು ಸತ್ತುಹೋದಳು.


ಬಳಿಕ ನಾನು ನನ್ನ ಉಪಪತ್ನಿಯ ದೇಹವನ್ನು ತುಂಡುತುಂಡಾಗಿ ಕತ್ತರಿಸಿ ಇಸ್ರೇಲರ ಪ್ರತಿಯೊಂದು ಕುಲಕ್ಕೂ ಒಂದು ತುಂಡನ್ನು ಕಳುಹಿಸಿದೆ. ಹೀಗೆ ನಾವು ಪಡೆದುಕೊಂಡ ಪ್ರದೇಶಗಳಿಗೆ ಹನ್ನೆರಡು ತುಂಡುಗಳನ್ನು ಕಳುಹಿಸಿದೆ. ಇಸ್ರೇಲಿನಲ್ಲಿ ಬೆನ್ಯಾಮೀನ್ಯರು ಇಂಥ ಭಯಾನಕ ಕೃತ್ಯವನ್ನು ಮಾಡಿದ್ದಕ್ಕಾಗಿ ನಾನು ಇದನ್ನು ಮಾಡಿದೆ.


ನಾವು ಇಸ್ರೇಲಿನ ಎಲ್ಲ ಕುಲಗಳಲ್ಲಿ ಪ್ರತಿ ನೂರು ಮಂದಿಗೆ ಹತ್ತು ಮಂದಿಯನ್ನು ಆರಿಸಿಕೊಳ್ಳೋಣ. ಪ್ರತಿ ಸಾವಿರ ಮಂದಿಗೆ ನೂರು ಮಂದಿಯನ್ನು ಆರಿಸಿಕೊಳ್ಳೋಣ. ಪ್ರತಿ ಹತ್ತು ಸಾವಿರ ಮಂದಿಗೆ ಒಂದು ಸಾವಿರ ಮಂದಿಯನ್ನು ಆರಿಸಿಕೊಳ್ಳೋಣ. ಹೀಗೆ, ನಾವು ಆರಿಸಿಕೊಂಡ ಜನರು ಸೈನ್ಯಕ್ಕೆ ಆಹಾರ ಸರಬರಾಜು ಮಾಡಲಿ. ಆಮೇಲೆ ಬೆನ್ಯಾಮೀನ್ಯರ ಪ್ರದೇಶದಲ್ಲಿರುವ ಗಿಬೆಯಕ್ಕೆ ಸೈನ್ಯ ಕಳುಹಿಸೋಣ. ಇಸ್ರೇಲರಿಗೆ ಹೀಗೆ ನಿಂದೆಗೆ ಗುರಿಮಾಡಿದ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆ ದೊರಕಲಿ” ಎಂದು ಹೇಳಿದರು.


ಯೆಹೋವನು ದುಷ್ಟತನವೆಂದು ಪರಿಗಣಿಸಿದ್ದನ್ನೇ ಮನಸ್ಸೆ ಮಾಡಿದನು. ಇಸ್ರೇಲರು ಆ ದೇಶವನ್ನು ವಶಪಡಿಸುವದಕ್ಕಿಂತ ಮುಂಚೆ ಅಲ್ಲಿ ವಾಸಿಸುತ್ತಿದ್ದ ಜನರ ಪಾಪಕೃತ್ಯಗಳನ್ನು ಅನುಸರಿಸಿದನು.


“ನರಪುತ್ರನೇ, ಇಸ್ರೇಲ್ ಜನಾಂಗವು ತನ್ನ ಸ್ವದೇಶದಲ್ಲಿ ವಾಸಿಸಿತು. ಆದರೆ ಅವರು ನಡೆಸಿದ ದುಷ್ಟತನದಿಂದ ದೇಶವನ್ನು ಮುಟ್ಟಾದ ಸ್ತ್ರೀಯಂತೆ ಅಶುದ್ಧಗೊಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು