Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:28 - ಪರಿಶುದ್ದ ಬೈಬಲ್‌

28 ನೀವು ಈ ಕಾರ್ಯಗಳನ್ನು ಮಾಡಿದರೆ, ನೀವು ಆ ದೇಶವನ್ನು ಹೊಲೆಮಾಡುವಿರಿ. ಅದು ಮೊದಲು ವಾಸಿಸಿದ ಜನಾಂಗಗಳನ್ನು ಕಾರಿಬಿಟ್ಟಂತೆ ನಿಮ್ಮನ್ನೂ ಕಾರಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆ ದೇಶವು ನಿಮಗಿಂತ ಮುಂಚೆ ಇದ್ದ ಜನಾಂಗಗಳನ್ನು ತ್ಯಜಿಸಿದ ಪ್ರಕಾರವೇ ನಿಮ್ಮಿಂದ ಅಶುದ್ಧವಾದರೆ ನಿಮ್ಮನ್ನು ತ್ಯಜಿಸಿಬಿಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಿಮಗಿಂತ ಮುಂಚೆಯಿದ್ದ ಜನಾಂಗಗಳನ್ನು ಆ ನಾಡು ಕಕ್ಕಿಬಿಟ್ಟ ಪ್ರಕಾರವೇ ಅದು ನಿಮ್ಮಿಂದ ಅದು ಮಲಿನವಾದರೆ ನಿಮ್ಮನ್ನೂ ಅಂತೆಯೇ ಕಕ್ಕಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆ ದೇಶವು ನಿಮಗಿಂತ ಮುಂಚೆ ಇದ್ದ ಜನಾಂಗಗಳನ್ನು ಕಾರಿಬಿಟ್ಟ ಪ್ರಕಾರವೇ ನಿವ್ಮಿುಂದ ಅಶುದ್ಧವಾದರೆ ನಿಮ್ಮನ್ನೂ ಕಾರಿಬಿಟ್ಟೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನೀವೂ ಅದನ್ನು ಅಶುದ್ಧಮಾಡಿದರೆ, ಅದು ನಿಮಗಿಂತ ಮೊದಲಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:28
9 ತಿಳಿವುಗಳ ಹೋಲಿಕೆ  

ಆದರೆ ನೀನು ಬಿಸಿಯೂ ಇಲ್ಲದೆ ತಣ್ಣಗೂ ಇಲ್ಲದೆ ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯಿಂದ ಉಗುಳಿ ಬಿಡುವೆನು.


“ನೀವು ನನ್ನ ಕಟ್ಟಳೆ ಮತ್ತು ನಿಯಮಗಳನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು. ನೀವು ಅವುಗಳಿಗೆ ವಿಧೇಯರಾಗಬೇಕು. ನಾನು ನಿಮ್ಮನ್ನು ನಿಮ್ಮ ದೇಶಕ್ಕೆ ನಡಿಸುತ್ತಿದ್ದೇನೆ. ನೀವು ಆ ದೇಶದಲ್ಲಿ ವಾಸಿಸುವಿರಿ. ನೀವು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯರಾದರೆ, ಆಗ ಆ ದೇಶವು ನಿಮ್ಮನ್ನು ಕಾರಿಬಿಡುವುದಿಲ್ಲ.


ಆದ್ದರಿಂದ ದೇಶವು ಸಹ ಅಶುದ್ಧವಾಯಿತು. ಆದ್ದರಿಂದ ನಾನು ಅದನ್ನು ಅದರ ಪಾಪಗಳಿಗಾಗಿ ದಂಡಿಸಿದೆನು. ಆ ದೇಶವು ತನ್ನಲ್ಲಿ ವಾಸಿಸಿದ ಜನರನ್ನು ಕಾರಿಬಿಟ್ಟಿತು.


“ನರಪುತ್ರನೇ, ಇಸ್ರೇಲ್ ಜನಾಂಗವು ತನ್ನ ಸ್ವದೇಶದಲ್ಲಿ ವಾಸಿಸಿತು. ಆದರೆ ಅವರು ನಡೆಸಿದ ದುಷ್ಟತನದಿಂದ ದೇಶವನ್ನು ಮುಟ್ಟಾದ ಸ್ತ್ರೀಯಂತೆ ಅಶುದ್ಧಗೊಳಿಸಿದರು.


ದೇವರು ಸೃಷ್ಟಿಮಾಡಿದ ಪ್ರತಿಯೊಂದೂ, ಪ್ರಸವವೇದನೆ ಪಡುತ್ತಿರುವ ಸ್ತ್ರೀಯಂತೆ ನೋವಿನಿಂದ ನರಳುತ್ತಾ ಇಂದಿನವರೆಗೂ ಕಾಯುತ್ತಿದೆ ಎಂಬುದು ನಮಗೆ ಗೊತ್ತಿದೆ.


“ಚೀಯೋನಿನಿಂದ ಮಹಾಗೋಳಾಟವು ಕೇಳಿಸುತ್ತಿದೆ: ‘ನಿಜವಾಗಿಯೂ ನಾವು ಹಾಳಾಗಿಹೋದೆವು. ನಿಜವಾಗಿಯೂ ನಾವು ನಾಚಿಕೆಪಡುವಂತಾಗಿದೆ. ನಾವು ನಮ್ಮ ನಾಡನ್ನು ಬಿಡಬೇಕು, ಏಕೆಂದರೆ ನಮ್ಮ ಮನೆಗಳನ್ನು ನಾಶಪಡಿಸಲಾಗಿದೆ.’”


ನನ್ನ ಒಡೆಯನಾದ ಯೆಹೋವನು ಹೇಳಿದ ಮಾತುಗಳಿವು, “ಇಸ್ರೇಲ್ ದೇಶವೇ, ಜನರು ನಿನ್ನ ವಿಷಯದಲ್ಲಿ ಕೆಟ್ಟ ಮಾತುಗಳನ್ನು ಆಡುತ್ತಾರೆ. ನೀನು ನಿನ್ನ ಜನರನ್ನು ನಾಶ ಮಾಡಿದಿ ಎಂದು ಹೇಳುತ್ತಾರೆ. ನಿನ್ನ ಮಕ್ಕಳನ್ನು ನೀನೇ ತೆಗೆದುಹಾಕಿದಿ ಎಂದು ಹೇಳುತ್ತಾರೆ.


ನಿಮಗಿಂತ ಮುಂಚೆ ಈ ದೇಶದಲ್ಲಿ ವಾಸಿಸಿದ ಜನರು ಆ ಭಯಂಕರ ಕೃತ್ಯಗಳನ್ನು ಮಾಡಿದರು. ಆದ್ದರಿಂದ ದೇಶವು ಹೊಲೆಯಾಯಿತು.


ಯಾವನಾದರೂ ಆ ಭಯಂಕರ ಪಾಪಗಳಲ್ಲಿ ಯಾವುದನ್ನಾದರೂ ಮಾಡಿದರೆ, ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು