Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:29 - ಪರಿಶುದ್ದ ಬೈಬಲ್‌

29 ಯಾವನಾದರೂ ಆ ಭಯಂಕರ ಪಾಪಗಳಲ್ಲಿ ಯಾವುದನ್ನಾದರೂ ಮಾಡಿದರೆ, ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯಾವನಾದರೂ ಈ ಅಸಹ್ಯವಾದ ಕೆಲಸಗಳಲ್ಲಿ ಒಂದನ್ನಾದರೂ ಮಾಡಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಯಾರಾದರೂ ಈ ಅಸಹ್ಯವಾದ ಕಾರ್ಯಗಳಲ್ಲಿ ಒಂದನ್ನು ಮಾಡಿದ್ದೇ ಆದರೆ ಅವನನ್ನು ಕುಲದಿಂದ ತೆಗೆದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯಾವನಾದರೂ ಈ ಹೇಸಿಗೆಯಾದ ಕೆಲಸಗಳಲ್ಲಿ ಒಂದನ್ನಾದರೂ ಮಾಡಿದರೆ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ ‘ಏಕೆಂದರೆ ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವುದನ್ನಾದರೂ ಮಾಡಿದರೆ, ಅವನನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:29
9 ತಿಳಿವುಗಳ ಹೋಲಿಕೆ  

“ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಗೆ ಹೋಗುವ ಯಾವುದೇ ವ್ಯಕ್ತಿಯಾದರೂ ಸರಿಯೇ ಅವನಿಗೆ ನಾನು ವಿರುದ್ಧವಾಗಿರುವೆನು. ಆ ವ್ಯಕ್ತಿ ನನಗೆ ಅಪನಂಬಿಗಸ್ತನಾಗಿದ್ದಾನೆ. ಆದ್ದರಿಂದ ನಾನು ಅವನನ್ನು ಅವನ ಕುಲದಿಂದ ತೆಗೆದುಹಾಕುವೆನು.


“ರಕ್ತವನ್ನು ತಿನ್ನುವ ಪ್ರತಿಯೊಬ್ಬನಿಗೂ ನಾನು ವಿರುದ್ಧವಾಗಿರುವೆನು. ಅವನು ನಿಮ್ಮ ಮಧ್ಯದಲ್ಲಿ ವಾಸವಾಗಿರುವ ಇಸ್ರೇಲನಾಗಲಿ ಪರದೇಶಸ್ಥನಾಗಲಿ ಆಗಿರಬಹುದು. ನಾನು ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕುವೆನು.


ಈ ಹಬ್ಬದಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನುವಿರಿ. ಹಬ್ಬದ ಪ್ರಥಮ ದಿನದಲ್ಲಿ ನೀವು ನಿಮ್ಮ ಮನೆಯಿಂದ ಎಲ್ಲಾ ಹುಳಿಯನ್ನು ತೆಗೆದುಹಾಕುವಿರಿ. ಈ ಹಬ್ಬದ ಏಳು ದಿನಗಳಲ್ಲಿ ಯಾವುದೇ ಹುಳಿಯನ್ನು ತಿನ್ನಬಾರದು. ಯಾವನಾದರೂ ಹುಳಿಯನ್ನು ತಿಂದರೆ, ನೀವು ಅವನನ್ನು ಇಸ್ರೇಲಿನಿಂದ ಬಹಿಷ್ಕರಿಸಬೇಕು.


ನೀವು ಈ ಕಾರ್ಯಗಳನ್ನು ಮಾಡಿದರೆ, ನೀವು ಆ ದೇಶವನ್ನು ಹೊಲೆಮಾಡುವಿರಿ. ಅದು ಮೊದಲು ವಾಸಿಸಿದ ಜನಾಂಗಗಳನ್ನು ಕಾರಿಬಿಟ್ಟಂತೆ ನಿಮ್ಮನ್ನೂ ಕಾರಿಬಿಡುವುದು.


ಅನ್ಯಜನರು ಆ ಭಯಂಕರ ಪಾಪಗಳನ್ನು ಮಾಡಿದ್ದಾರೆ. ಆದರೆ ನೀವು ನನ್ನ ಕಟ್ಟಳೆಗಳಿಗೆ ವಿಧೇಯರಾಗಬೇಕು. ನೀವು ಆ ಭಯಂಕರ ಪಾಪಗಳಲ್ಲಿ ಯಾವುದನ್ನೂ ಮಾಡಬಾರದು. ಆ ಭಯಂಕರ ಪಾಪಗಳಿಂದ ನಿಮ್ಮನ್ನು ಹೊಲೆ ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು.”


ಯಾವನಾದರೂ ಸುಗಂಧತೈಲವನ್ನು ಈ ಪವಿತ್ರತೈಲದಂತೆ ಮಾಡಿ ಯಾಜಕನಲ್ಲದ ಒಬ್ಬನಿಗೆ ಅದನ್ನು ಕೊಟ್ಟರೆ, ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”


ಆದರೆ ಒಬ್ಬನು ಅಶುದ್ಧನಾಗಿದ್ದು ಯೆಹೋವನಿಗೆ ಸೇರಿದ ಸಮಾಧಾನ ಸಮರ್ಪಣೆಗಳ ಮಾಂಸವನ್ನು ತಿಂದರೆ, ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.


“ಒಬ್ಬನಿಗೆ ಮನುಷ್ಯದೇಹದಿಂದ ಆಗಿರುವ ಅಶುದ್ಧ ವಸ್ತು, ಅಶುದ್ಧ ಮೃಗ, ನಿಷಿದ್ಧ ವಸ್ತು ಇವುಗಳಲ್ಲಿ ಯಾವುದಾದರೂ ಸ್ಪರ್ಶವಾಗಿದ್ದರೆ ಅವನು ಅಶುದ್ಧನಾಗಿದ್ದಾನೆ. ಅವನು ಯೆಹೋವನಿಗೆ ಸೇರಿದ ಸಮಾಧಾನಯಜ್ಞಗಳ ಮಾಂಸವನ್ನು ತಿಂದರೆ, ಅವನನ್ನು ಕುಲದಿಂದ ತೆಗೆದುಹಾಕಬೇಕು.”


ಅಂಥಾ ಜನರನ್ನು ಯೆಹೋವನು ಯೆಹೂದ ವಂಶದಿಂದಲೇ ತೆಗೆದುಹಾಕುವನು. ಅವರು ಯೆಹೋವನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬರಬಹುದು. ಆದರೆ ಅದು ಏನೂ ಪ್ರಯೋಜನವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು