Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:30 - ಪರಿಶುದ್ದ ಬೈಬಲ್‌

30 ಅನ್ಯಜನರು ಆ ಭಯಂಕರ ಪಾಪಗಳನ್ನು ಮಾಡಿದ್ದಾರೆ. ಆದರೆ ನೀವು ನನ್ನ ಕಟ್ಟಳೆಗಳಿಗೆ ವಿಧೇಯರಾಗಬೇಕು. ನೀವು ಆ ಭಯಂಕರ ಪಾಪಗಳಲ್ಲಿ ಯಾವುದನ್ನೂ ಮಾಡಬಾರದು. ಆ ಭಯಂಕರ ಪಾಪಗಳಿಂದ ನಿಮ್ಮನ್ನು ಹೊಲೆ ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆದುದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡೆಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ನಿಯಮಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆದುದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡೆಸಿ ನಿಮ್ಮನ್ನೇ ಅಶುದ್ಧಮಾಡಿಕೊಳ್ಳದೆ ನನ್ನ ವಿಧಿಗಳನ್ನು ಅನುಸರಿಸಿ ನಡೆಯಬೇಕು. ನಾನೇ ನಿಮ್ಮ ದೇವರಾದ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆದದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡಿಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ವಿಧಿಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:30
14 ತಿಳಿವುಗಳ ಹೋಲಿಕೆ  

ಆ ದೇಶವನ್ನು ಬಿಟ್ಟುಹೋಗುವಂತೆ ಅಲ್ಲಿಯ ಜನರನ್ನು ನಾನು ಹೊರಡಿಸಿಬಿಡುತ್ತಿದ್ದೇನೆ. ಯಾಕೆಂದರೆ ಅವರು ಆ ಪಾಪಗಳನ್ನೆಲ್ಲಾ ಮಾಡಿದರು. ನಾನು ಆ ಪಾಪಗಳನ್ನು ದ್ವೇಷಿಸುತ್ತೇನೆ. ಆದ್ದರಿಂದ ಅವರು ಜೀವಿಸಿದಂತೆ ನೀವು ಜೀವಿಸಬೇಡಿರಿ!


“ಯಾಜಕರು ನನ್ನ ಅಗತ್ಯತೆಗಳನ್ನು ಎಚ್ಚರಿಕೆಯಿಂದ ಪೂರೈಸಿದರೆ ಅಪರಾಧಕ್ಕೆ ಒಳಗಾಗುವುದಿಲ್ಲ. ಅವರು ಪವಿತ್ರವಾದವುಗಳನ್ನು ಅಪವಿತ್ರಗೊಳಿಸಿದರೆ ಸಾಯುವರು. ಯೆಹೋವನಾದ ನಾನೇ ಅವರನ್ನು ಪರಿಶುದ್ಧರನ್ನಾಗಿ ಮಾಡಿದ್ದೇನೆ ಮತ್ತು ಈ ವಿಶೇಷ ಸೇವೆಗಾಗಿ ಪ್ರತ್ಯೇಕಿಸಿದ್ದೇನೆ.


“ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿರಿ. ಆತನು ಹೇಳಿದವುಗಳನ್ನೆಲ್ಲ ಮಾಡಿರಿ. ನೀವು ಕಟ್ಟಳೆಗಳಿಗೆ, ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ಯಾವಾಗಲೂ ವಿಧೇಯರಾಗಿರಬೇಕು.


ಯಾವನಾದರೂ ಆ ಭಯಂಕರ ಪಾಪಗಳಲ್ಲಿ ಯಾವುದನ್ನಾದರೂ ಮಾಡಿದರೆ, ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕಬೇಕು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಅಲ್ಲಿ ವಾಸಿಸುವ ಅನ್ಯಜನರನ್ನು ನೀವು ನಾಶಮಾಡಬೇಕು. ಇಲ್ಲದಿದ್ದಲ್ಲಿ ಅವರು ನಿಮಗೆ ಉರುಲಾಗುವರು; ಅವರ ವಿಗ್ರಹಗಳನ್ನು ಪೂಜಿಸದಂತೆ ಎಚ್ಚರಿಕೆಯಿಂದಿರಿ. ಆ ಸುಳ್ಳುದೇವರುಗಳಿಗೆ ಪ್ರಾರ್ಥಿಸಬೇಡಿ. ‘ಆ ಜನರು ಆ ಸುಳ್ಳುದೇವರುಗಳನ್ನು ಪೂಜಿಸಿದ ಹಾಗೆ ನಾನೂ ಪೂಜಿಸುವೆನು’ ಎಂದು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳಬೇಡಿ!


ನಿಮ್ಮ ದೇವರಾದ ಯೆಹೋವನಿಗೆ ನೀವು ಆ ರೀತಿ ಮಾಡಬಾರದು. ಆ ರೀತಿಯಾಗಿ ಆತನನ್ನು ಆರಾಧಿಸಬಾರದು. ಯಾಕೆಂದರೆ ಅವರು ತಮ್ಮ ದೇವರೆದುರಿನಲ್ಲಿ ಅಸಹ್ಯವಾದ ಕಾರ್ಯಗಳನ್ನು ಮಾಡುತ್ತಾರೆ. ಅದನ್ನು ನಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ. ಅವರು ತಮ್ಮ ಮಕ್ಕಳನ್ನೇ ದೇವರಿಗೆ ಬಲಿ ಅರ್ಪಿಸುತ್ತಾರೆ.


ಬಳಿಕ ನಾನು ನನ್ನ ಉಪಪತ್ನಿಯ ದೇಹವನ್ನು ತುಂಡುತುಂಡಾಗಿ ಕತ್ತರಿಸಿ ಇಸ್ರೇಲರ ಪ್ರತಿಯೊಂದು ಕುಲಕ್ಕೂ ಒಂದು ತುಂಡನ್ನು ಕಳುಹಿಸಿದೆ. ಹೀಗೆ ನಾವು ಪಡೆದುಕೊಂಡ ಪ್ರದೇಶಗಳಿಗೆ ಹನ್ನೆರಡು ತುಂಡುಗಳನ್ನು ಕಳುಹಿಸಿದೆ. ಇಸ್ರೇಲಿನಲ್ಲಿ ಬೆನ್ಯಾಮೀನ್ಯರು ಇಂಥ ಭಯಾನಕ ಕೃತ್ಯವನ್ನು ಮಾಡಿದ್ದಕ್ಕಾಗಿ ನಾನು ಇದನ್ನು ಮಾಡಿದೆ.


ಇತರ ದೇವರುಗಳ ಸೇವೆಗಾಗಿ ತಮ್ಮ ದೇಹಗಳನ್ನು ಲೈಂಗಿಕ ಸಂಬಂಧಕ್ಕೆ ಮಾರಾಟ ಮಾಡುವ ಗಂಡಸರೂ ಅಲ್ಲಿದ್ದರು. ಯೆಹೂದದ ಜನರು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದರು. ಆ ದೇಶದಲ್ಲಿ ಇವರಿಗಿಂತ ಮುಂಚೆ ನೆಲಸಿದ್ದ ಜನರು ಇಂತಹ ದುಷ್ಕೃತ್ಯಗಳನ್ನು ಮಾಡುತ್ತಿದ್ದರು. ದೇವರು ಆ ಜನರಿಂದ ಈ ದೇಶವನ್ನು ತೆಗೆದುಕೊಂಡು ಇಸ್ರೇಲರಿಗೆ ಕೊಟ್ಟಿದ್ದನು.


ಅಹಾಬನು ಬಹುಕೆಟ್ಟ ಪಾಪವನ್ನು ಮಾಡಿದನು ಮತ್ತು ವಿಗ್ರಹಗಳನ್ನು ಆರಾಧಿಸಿದನು. ಅಮೋರಿಯರು ಇಂತಹ ಕಾರ್ಯವನ್ನೇ ಮಾಡಿದ್ದರು. ಯೆಹೋವನು ಅವರನ್ನು ಅವರ ನಾಡಿನಿಂದ ಓಡಿಸಿದನು ಮತ್ತು ಅದನ್ನು ಇಸ್ರೇಲಿನ ಜನರಿಗೆ ದಯಪಾಲಿಸಿದನು.


ಇವೆಲ್ಲಾ ಆದ ಬಳಿಕ ಇಸ್ರೇಲರ ಪ್ರಧಾನರು ನನ್ನ ಬಳಿಗೆ ಬಂದು, “ಎಜ್ರನೇ, ಇಸ್ರೇಲ್ ಜನರು ಸುತ್ತಲೂ ವಾಸಿಸುವ ಅನ್ಯಜನರಿಂದ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ಯಾಜಕರಾಗಲಿ ಲೇವಿಯರಾಗಲಿ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ದೇಶದಲ್ಲಿ ವಾಸವಾಗಿರುವ ಕಾನಾನ್ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ, ಅಮ್ಮೋನಿಯರ, ಮೋವಾಬ್ಯರ, ಅಮೋರಿಯರ, ಈಜಿಪ್ಟಿನವರ ಕೆಟ್ಟ ಜೀವಿತವು ಇಸ್ರೇಲರ ಮೇಲೆ ಪ್ರಭಾವಬೀರಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು