Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:14 - ಪರಿಶುದ್ದ ಬೈಬಲ್‌

14 “ನೀವು ಕಿವುಡನನ್ನು ಶಪಿಸಬಾರದು. ಕುರುಡನು ಬೀಳುವಂತೆ ನೀವು ಅವನ ಮುಂದೆ ಅಡ್ಡವಾಗಿ ಏನನ್ನೂ ಇಡಬಾರದು. ಆದರೆ ನೀವು ನಿಮ್ಮ ದೇವರನ್ನು ಸನ್ಮಾನಿಸಬೇಕು. ನಾನೇ ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕಿವುಡರನ್ನು ದೂಷಿಸಬಾರದು; ಕುರುಡರು ನಡೆಯುವ ದಾರಿಯಲ್ಲಿ ಅವರ ಕಾಲು ಎಡವುವಂತೆ ಕಲ್ಲನ್ನು ಇಡಬಾರದು; ನಿಮ್ಮ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕಿವುಡರನ್ನು ದೂಷಿಸಬೇಡ; ಕುರುಡರು ನಡೆಯುವ ದಾರಿಯಲ್ಲಿ ಎರಡು ಕಲ್ಲನ್ನು ಇಡಬೇಡ, ನಿನ್ನ ದೇವರಲ್ಲಿ ಭಯಭಕ್ತಿಯಿರಲಿ, ನಾನೇ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕಿವುಡರನ್ನು ದೂಷಿಸಬಾರದು; ಕುರುಡರು ನಡೆಯುವ ದಾರಿಯಲ್ಲಿ ಕಾಲು ಎಡವುವಂತೆ ಕಲ್ಲನ್ನು ಇಡಬಾರದು; ನಿಮ್ಮ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ ‘ಕಿವುಡನನ್ನು ಶಪಿಸಬಾರದು. ಇಲ್ಲವೆ ಕಣ್ಣು ಕಾಣದವನನ್ನು ಮುಗ್ಗರಿಸುವಂತೆ ಮಾಡಬಾರದು. ನಿಮ್ಮ ದೇವರಿಗೆ ಭಯಪಡಬೇಕು. ನಾನೇ ಯೆಹೋವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:14
14 ತಿಳಿವುಗಳ ಹೋಲಿಕೆ  

“ಲೇವಿಯರು, ‘ಕುರುಡರಿಗೆ ತಪ್ಪುದಾರಿ ತೋರಿಸುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


“ವೃದ್ಧರ ಮುಂದೆ ಎದ್ದು ನಿಂತುಕೊಳ್ಳಿರಿ. ಹಿರಿಯರಿಗೆ ಗೌರವಕೊಡಿರಿ. ನಿಮ್ಮ ದೇವರನ್ನು ಸನ್ಮಾನಿಸಿರಿ. ನಾನೇ ಯೆಹೋವನು!


ಜನರೆಲ್ಲರಿಗೂ ಗೌರವವನ್ನು ತೋರಿಸಿರಿ. ದೇವರ ಕುಟುಂಬದ ಸಹೋದರ ಸಹೋದರಿಯರೆಲ್ಲರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ ಮತ್ತು ರಾಜನನ್ನು ಗೌರವಿಸಿರಿ.


ಆದ್ದರಿಂದ, ನಾವು ಒಬ್ಬರಿಗೊಬ್ಬರು ತೀರ್ಪುಕೊಡುವುದನ್ನು ಬಿಟ್ಟುಬಿಡಬೇಕು. ನಮ್ಮ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಬಲಹೀನಗೊಳಿಸುವಂಥ ಅಥವಾ ಪಾಪಕ್ಕೆ ಬೀಳಿಸುವಂಥ ಯಾವುದನ್ನೇ ಆಗಲಿ ಮಾಡದಂತೆ ನಾವು ನಿರ್ಧರಿಸಬೇಕು.


ನೀವು ಒಬ್ಬರಿಗೊಬ್ಬರು ಮೋಸ ಮಾಡಬಾರದು. ನೀವು ದೇವರಿಗೆ ಭಯಪಡಬೇಕು! ನಾನೇ ನಿಮ್ಮ ದೇವರಾದ ಯೆಹೋವನು!


“ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.


ನನಗಿಂತ ಮೊದಲು ರಾಜ್ಯಪಾಲರಾಗಿದ್ದವರು ಜನರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದರು. ಪ್ರತಿಯೊಬ್ಬರು ಒಂದು ಪೌಂಡ್ ಬೆಳ್ಳಿಯನ್ನೂ ಆಹಾರವನ್ನೂ ದ್ರಾಕ್ಷಾರಸವನ್ನೂ ಕೊಡಬೇಕಿತ್ತು. ಆ ರಾಜ್ಯಪಾಲರ ಅಧಿಕಾರಿಗಳು ಸಹ ಜನರ ಮೇಲೆ ದೊರೆತನ ನಡೆಸಿ ಅವರ ಜೀವನವನ್ನು ಮತ್ತಷ್ಟು ಕಠಿಣಗೊಳಿಸಿದರು. ಆದರೆ ದೇವರಲ್ಲಿ ಭಯಭಕ್ತಿ ಇದ್ದುದರಿಂದ ನಾನು ಆ ರೀತಿ ಮಾಡಲಿಲ್ಲ.


ನೀವು ದೇವರಲ್ಲಿ ಪ್ರಾರ್ಥಿಸುವಾಗ ಆತನನ್ನು ತಂದೆಯೆಂದು ಕರೆಯುತ್ತೀರಿ. ದೇವರು ಪ್ರತಿಯೊಬ್ಬರಿಗೆ ಅವರವರ ಕೆಲಸಕ್ಕೆ ತಕ್ಕಂತೆ ತೀರ್ಪುಕೊಡುವನು. ನೀವು ಈ ಲೋಕದಲ್ಲಿ ಪ್ರವಾಸಿಗಳಾಗಿರುವುದರಿಂದ ದೇವರಿಗೆ ಭಯಪಟ್ಟು ಜೀವಿಸಿ.


ನಿಮಗೆ ಕೇಡುಮಾಡುವವರನ್ನು ಶಪಿಸದೆ ಆಶೀರ್ವದಿಸಿರಿ.


ಮೂರು ದಿನಗಳಾದ ಮೇಲೆ ಯೋಸೇಫನು ಅವರಿಗೆ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು. ನೀವು ಈ ಕಾರ್ಯವೊಂದನ್ನು ಮಾಡಿದರೆ ನಾನು ನಿಮ್ಮನ್ನು ಉಳಿಸುತ್ತೇನೆ;


ಇತರ ಜನರು ಅಂದರೆ ಯೆಹೂದ್ಯರಾಗಲಿ ಗ್ರೀಕರಾಗಲಿ ಅಥವಾ ದೇವರ ಸಭೆಯವರಾಗಲಿ ತಪ್ಪುಮಾಡಲು ಕಾರಣವಾಗುವಂಥದ್ದನ್ನು ನೀವೆಂದಿಗೂ ಮಾಡಬೇಡಿರಿ.


“ನೀವು ಕೊಡುವ ತೀರ್ಪು ನ್ಯಾಯವಾಗಿರಬೇಕು. ಬಡವರ ಬಡತನವನ್ನಾಗಲಿ ಪ್ರಾಮುಖ್ಯರ ದೊಡ್ಡಸ್ತಿಕೆಯನ್ನಾಗಲಿ ಗಮನಿಸದೆ ಪಕ್ಷಪಾತವಿಲ್ಲದೆ ತೀರ್ಪುಕೊಡಬೇಕು. ನೀವು ನಿಮ್ಮ ನೆರೆಯವನಿಗೆ ತೀರ್ಪುಮಾಡುವಾಗ ನ್ಯಾಯದ ತೀರ್ಪುಕೊಡಿರಿ.


ಯೆಹೋವನ ಮೇಲಿರುವ ಭಯಭಕ್ತಿಗಳಿಂದಲೇ ಜ್ಞಾನವು ಆರಂಭವಾಗುತ್ತದೆ. ಆತನಲ್ಲಿ ಭಯಭಕ್ತಿಯುಳ್ಳವರು ಜ್ಞಾನಪೂರ್ಣರಾಗಿದ್ದಾರೆ. ಆತನಿಗೆ ಸದಾಕಾಲ ಸ್ತೋತ್ರವಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು