Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:2 - ಪರಿಶುದ್ದ ಬೈಬಲ್‌

2 “ಇಸ್ರೇಲರಿಗೆ ಹೀಗೆ ಹೇಳು: ನಾನೇ ನಿಮ್ಮ ದೇವರಾದ ಯೆಹೋವನು ನಾನು ಪರಿಶುದ್ಧನಾಗಿರುವಂತೆಯೇ ನೀವೂ ಪರಿಶುದ್ಧರಾಗಿರಬೇಕು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಸ್ರಾಯೇಲರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು, ‘ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನಿಮ್ಮ ದೇವರಾದ ಸರ್ವೇಶ್ವರನೆಂಬ ನಾನು ಪರಿಶುದ್ಧ ನಾಗಿರುವಂತೆ ನೀವು ಕೂಡ ಪರಿಶುದ್ಧ ರಾಗಿರಬೇಕು .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಇಸ್ರಾಯೇಲ್ಯರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು - ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲರ ಸಭೆಯವರೆಲ್ಲರ ಸಂಗಡ ಮಾತನಾಡಿ, ಅವರಿಗೆ ಹೀಗೆ ಹೇಳಬೇಕು: ‘ನೀವು ಪರಿಶುದ್ಧರಾಗಿರಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರಾದ ನಾನು ಪರಿಶುದ್ಧನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:2
20 ತಿಳಿವುಗಳ ಹೋಲಿಕೆ  

“ನೀವು ನನಗೆ ವಿಶೇಷ ಜನರಾಗಿದ್ದೀರಿ. ನಿಮ್ಮನ್ನು ಪವಿತ್ರರನ್ನಾಗಿ ಮಾಡಿಕೊಳ್ಳಿರಿ. ಯಾಕೆಂದರೆ ನಾನೇ ನಿಮ್ಮ ದೇವರಾದ ಯೆಹೋವನು. ನಾನು ಪರಿಶುದ್ಧನಾಗಿದ್ದೇನೆ.


ಆದ್ದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರಬೇಕು.


ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿ, ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ. ಆದ್ದರಿಂದ ನೀವು ಪರಿಶುದ್ಧರಾಗಿರಬೇಕು. ಯಾಕೆಂದರೆ ನಾನು ಯೆಹೋವನು ಮತ್ತು ನಾನು ಪರಿಶುದ್ಧನಾಗಿದ್ದೇನೆ.


ನೀವು ಯಾಜಕರ ರಾಜ್ಯ’ ಎಂಬ ವಿಶೇಷವಾದ ಜನಾಂಗವಾಗುವಿರಿ. ಮೋಶೆಯೇ, ನಾನು ನಿನಗೆ ಹೇಳಿದ ಸಂಗತಿಗಳನ್ನು ನೀನು ಇಸ್ರೇಲರಿಗೆ ಹೇಳಲೇಬೇಕು” ಎಂದನು.


ಯಾಜಕನು ವಿಶೇಷವಾದ ರೀತಿಯಲ್ಲಿ ದೇವರ ಸೇವೆ ಮಾಡುತ್ತಾನೆ. ಆದ್ದರಿಂದ ನೀವು ಅವನನ್ನು ವಿಶೇಷವಾದ ರೀತಿಯಲ್ಲಿ ನೋಡಿಕೊಳ್ಳಬೇಕು. ಯಾಕೆಂದರೆ ಅವನು ಪವಿತ್ರ ವಸ್ತುಗಳನ್ನು ಸಮರ್ಪಿಸುತ್ತಾನಲ್ಲ! ಅವನು ದೇವರ ಬಳಿಗೆ ಪವಿತ್ರ ರೊಟ್ಟಿಯನ್ನು ತರುತ್ತಾನೆ. ನಾನೇ ಪರಿಶುದ್ಧನು! ನಾನೇ ಯೆಹೋವನು! ಮತ್ತು ನಾನು ನಿಮ್ಮನ್ನು ಪರಿಶುದ್ಧಗೊಳಿಸುತ್ತೇನೆ.


ಪ್ರಿಯ ಸ್ನೇಹಿತರೇ, ನಾವು ದೇವರಿಂದ ಈ ವಾಗ್ದಾನಗಳನ್ನು ಹೊಂದಿದ್ದೇವೆ. ಆದ್ದರಿಂದ ನಮ್ಮನ್ನು ಶುದ್ಧರನ್ನಾಗಿ ಮಾಡಿಕೊಳ್ಳಬೇಕು. ನಮ್ಮ ದೇಹವನ್ನಾಗಲಿ ನಮ್ಮ ಆತ್ಮವನ್ನಾಗಲಿ ಅಶುದ್ಧಗೊಳಿಸುವ ಎಲ್ಲಾ ವಿಧದ ಮಲಿನತೆಯಿಂದ ನಾವು ದೂರವಿರೋಣ. ನಾವು ದೇವರನ್ನು ಗೌರವಿಸುವುದರಿಂದ ಪರಿಶುದ್ಧವಾದ ಬಾಳ್ವೆಯನ್ನು ನಡೆಸಲು ನಾವು ಪ್ರಯತ್ನಿಸಬೇಕು.


ಇಬ್ಬರು ಒಟ್ಟಾಗಿ ನಡೆಯಬೇಕಾದರೆ ಅದಕ್ಕೆ ಅವರಿಬ್ಬರೂ ಒಪ್ಪಿಕೊಂಡಿರಲೇಬೇಕು.


ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡನು. ತನ್ನ ಸನ್ನಿಧಿಯಲ್ಲಿ ನಾವು ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂಬುದು ಆತನ ಉದ್ದೇಶವಾಗಿತ್ತು.


“ನೀವು ನನ್ನ ವಿಶೇಷ ಜನರಾಗಿದ್ದೀರಿ. ಆದ್ದರಿಂದ ಕ್ರೂರಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯ ಮಾಂಸವನ್ನು ನೀವು ತಿನ್ನಬಾರದು. ಅದನ್ನು ನಾಯಿಗಳು ತಿನ್ನಲಿ.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಆಗ ಯೆಹೋಶುವನು ಅವರಿಗೆ, “ಅದು ನಿಜವಲ್ಲ, ನೀವು ಯೆಹೋವನ ಸೇವೆಯನ್ನು ಮುಂದುವರೆಸಿಕೊಂಡು ಹೋಗಲಾರಿರಿ. ನಮ್ಮ ದೇವರಾದ ಯೆಹೋವನು ಪವಿತ್ರನಾಗಿದ್ದಾನೆ; ತನ್ನ ಜನರು ಅನ್ಯದೇವರುಗಳನ್ನು ಪೂಜಿಸುವುದನ್ನು ಆತನು ದ್ವೇಷಿಸುತ್ತಾನೆ. ಒಂದುವೇಳೆ ನೀವೇನಾದರೂ ಆತನ ವಿರುದ್ಧವಾಗಿ ತಿರುಗಿಕೊಂಡರೆ ಆತನು ನಿಮ್ಮನ್ನು ಕ್ಷಮಿಸುವುದಿಲ್ಲ.


ಯೆಹೋವನಂತಹ ಪವಿತ್ರ ದೇವರು ಬೇರೆ ಯಾರೂ ಇಲ್ಲ. ನಿನ್ನ ಹೊರತು ಅನ್ಯದೇವರಿಲ್ಲ! ನಮ್ಮ ದೇವರಿಗಿಂತ ಬೇರೊಂದು ಬಂಡೆಯಿಲ್ಲ.


ಅವರೆಲ್ಲರೂ ನಿನ್ನ ಭಯಂಕರವಾದ ಹೆಸರನ್ನು ಕೊಂಡಾಡಲಿ. ಆತನೇ ಪರಿಶುದ್ಧನು.


ಹೀಗಾಗಿ ಜನರು ಅವನ ಮಕ್ಕಳಿಗೆ ಗೌರವ ತೋರಿಸುವರು. ಯೆಹೋವನಾಗಿರುವ ನಾನು ಪ್ರಧಾನಯಾಜಕನನ್ನು ಅವನ ವಿಶೇಷ ಕೆಲಸಕ್ಕಾಗಿ ಪ್ರತ್ಯೇಕಿಸಿದ್ದೇನೆ.”


ಆದರೆ ಅವನು ತೆರೆಯ ಬಳಿಗೆ ಹೋಗಬಾರದು; ಅವನು ಯಜ್ಞವೇದಿಕೆಯ ಬಳಿಗೆ ಹೋಗಬಾರದು. ಯಾಕೆಂದರೆ ಅವನು ಅಂಗವಿಕಲನಾಗಿದ್ದಾನೆ. ಅವನು ನನ್ನ ಪರಿಶುದ್ಧ ಸ್ಥಳಗಳನ್ನು ಅಶುದ್ಧಗೊಳಿಸಬಾರದು. ಯೆಹೋವನಾದ ನಾನೇ ಆ ಸ್ಥಳಗಳನ್ನು ಪರಿಶುದ್ಧಗೊಳಿಸಿದ್ದೇನೆ.”


ಆದ್ದರಿಂದ ಆತನು ಹೇಳಿದ್ದೆಲ್ಲವನ್ನೂ ಮಾಡಿರಿ. ನಾನು ಈ ಹೊತ್ತು ನಿಮಗೆ ಹೇಳುವಂಥ ಆತನ ಅಪ್ಪಣೆಗಳಿಗೂ ವಿಧಿನಿಯಮಗಳಿಗೂ ವಿಧೇಯರಾಗಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು