Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:23 - ಪರಿಶುದ್ದ ಬೈಬಲ್‌

23 “ಮುಂದೆ ನೀವು ನಿಮ್ಮ ದೇಶವನ್ನು ಪ್ರವೇಶಿಸುವಿರಿ. ಆ ಸಮಯದ ಆಹಾರಕ್ಕಾಗಿ ಅನೇಕ ವಿಧಗಳ ಮರಗಳನ್ನು ನೆಡುವಿರಿ. ಸಸಿಯನ್ನು ನೆಟ್ಟನಂತರ, ನೀವು ಆ ಮರದಿಂದ ಹಣ್ಣನ್ನು ಉಪಯೋಗಿಸುವುದಕ್ಕೆ ಮೂರು ವರ್ಷಗಳು ಕಾಯಬೇಕು. ನೀವು ಆ ಹಣ್ಣನ್ನು ಉಪಯೋಗಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “‘ನೀವು ಆ ದೇಶದಲ್ಲಿ ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ, ಅದರ ಫಲವನ್ನು ಮೂರು ವರ್ಷದ ತನಕ ಅಶುದ್ಧವೆಂದೆಣಿಸಿ ತಿನ್ನದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ನೀವು ಆ ಕಾನಾನ್ ನಾಡನ್ನು ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ ಅದರ ಫಲವನ್ನು ಮೂರು ವರ್ಷದ ತನಕ ಅಶುದ್ಧವೆಂದೆಣಿಸಿ ಅದನ್ನು ತಿನ್ನದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀವು ಆ ದೇಶದಲ್ಲಿ ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ ಅದರ ಫಲವನ್ನು ಮೂರು ವರುಷದ ತನಕ ಅಶುದ್ಧವೆಂದೆಣಿಸಿ ತಿನ್ನದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ ‘ನೀವು ದೇಶದೊಳಗೆ ಬಂದು ಎಲ್ಲಾ ತರಹದ ಮರಗಳನ್ನು ಆಹಾರಕ್ಕೋಸ್ಕರ ನೆಟ್ಟಾಗ, ಅದರ ಫಲವನ್ನು ಮೂರು ವರುಷಗಳವರೆಗೆ ಅಶುದ್ಧವೆಂದೆಣಿಸಿ ಅದನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:23
12 ತಿಳಿವುಗಳ ಹೋಲಿಕೆ  

ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!


“ಕರುವಾಗಲಿ ಕುರಿಮರಿಯಾಗಲಿ ಅಥವಾ ಆಡಾಗಲಿ ಹುಟ್ಟಿದ ಬಳಿಕ ತನ್ನ ತಾಯಿಯೊಂದಿಗೆ ಏಳು ದಿನಗಳವರೆಗೆ ಇರಲೇಬೇಕು. ಎಂಟನೆಯ ದಿನದಲ್ಲಿ ಮತ್ತು ಅದರ ನಂತರ, ಆ ಪಶುವು ಸರ್ವಾಂಗಹೋಮಕ್ಕೆ ಯೋಗ್ಯವಾಗಿರುತ್ತದೆ.


ನಾನು ಯಾರೊಂದಿಗೆ ಮಾತನಾಡಲಿ? ನಾನು ಯಾರಿಗೆ ಎಚ್ಚರಿಕೆಯ ನುಡಿಗಳನ್ನು ಹೇಳಲಿ? ನನ್ನ ಮಾತನ್ನು ಯಾರು ಕೇಳುತ್ತಾರೆ? ಇಸ್ರೇಲಿನ ಜನರು ತಮ್ಮ ಕಿವಿಗಳನ್ನು ಮುಚ್ಚಿಕೊಂಡಿದ್ದಾರೆ. ಅವರು ನನ್ನ ಎಚ್ಚರಿಕೆಯ ನುಡಿಗಳನ್ನು ಕೇಳಲಾರರು. ಜನರಿಗೆ ಯೆಹೋವನ ಉಪದೇಶ ರುಚಿಸುವದಿಲ್ಲ. ಅವರು ಯೆಹೋವನ ನುಡಿಗಳನ್ನು ಕೇಳಬಯಸುವದಿಲ್ಲ.


“ನಾನು ನಿಮ್ಮ ಜನರಿಗೆ ಕಾನಾನ್ ದೇಶವನ್ನು ಕೊಡುತ್ತಿದ್ದೇನೆ. ನಿಮ್ಮ ಜನರು ಆ ದೇಶದಲ್ಲಿ ಪ್ರವೇಶಿಸಿ ನೆಲೆಸುವರು. ಆಗ ಯಾರ ಮನೆಯಲ್ಲಾದರೂ ಬೂಷ್ಟು ಉಂಟಾದರೆ,


ಎಂಟನೆಯ ದಿನದಲ್ಲಿ ಆ ಗಂಡುಮಗುವಿಗೆ ಸುನ್ನತಿ ಮಾಡಬೇಕು.


ಅದಕ್ಕೆ ಮೋಶೆ, “ಇಸ್ರೇಲರು ನನ್ನ ಮಾತನ್ನು ಕೇಳುವುದಿಲ್ಲ! ಆದ್ದರಿಂದ ಫರೋಹನು ನನ್ನ ಮಾತನ್ನು ಖಂಡಿತವಾಗಿ ಕೇಳುವುದಿಲ್ಲ. ನಾನು ಮಾತಾಡುವುದರಲ್ಲಿ ಜಾಣನಲ್ಲ” ಎಂದು ಹೇಳಿದನು.


ಆದರೆ ಮೋಶೆ ಯೆಹೋವನಿಗೆ, “ನಾನು ಒಳ್ಳೆಯ ಮಾತುಗಾರನಲ್ಲ. ರಾಜನು ನನ್ನ ಮಾತನ್ನು ಕೇಳುವನೇ?” ಎಂದು ಉತ್ತರಿಸಿದನು.


ಯಾಜಕನು ಅವನನ್ನು ಶುದ್ಧಿಮಾಡುವ ಕಾರ್ಯಗಳನ್ನು ಮಾಡುವನು. ಯಾಜಕನು ಯೆಹೋವನ ಸನ್ನಿಧಿಯಲ್ಲಿ ಆ ಟಗರನ್ನು ದೋಷಪರಿಹಾರಕ ಯಜ್ಞವಾಗಿ ಅರ್ಪಿಸುವನು. ಅದು ಆ ಪುರುಷನು ಮಾಡಿದ ಪಾಪಗಳ ಪರಿಹಾರಕ್ಕಾಗಿರುವುದು. ಆಗ ಅವನಿಗೆ ಕ್ಷಮಾಪಣೆಯಾಗುವುದು.


ನಾಲ್ಕನೆಯ ವರ್ಷದಲ್ಲಿ ಆ ಮರದ ಎಲ್ಲಾ ಹಣ್ಣುಗಳು ಯೆಹೋವನದಾಗುವುದು. ಅದು ಯೆಹೋವನ ಸ್ತುತಿಗೆ ಅರ್ಪಿತವಾಗುವ ಪವಿತ್ರ ಕಾಣಿಕೆಯಾಗಿರುವುದು.


ನೀವು ಯಾವ ಹೊಸ ಧಾನ್ಯವನ್ನಾಗಲಿ ಹಣ್ಣನ್ನಾಗಲಿ ಹೊಸ ಧಾನ್ಯದಿಂದ ಮಾಡಿದ ರೊಟ್ಟಿಯನ್ನಾಗಲಿ ದೇವರಿಗೆ ಅರ್ಪಿಸುವ ಮೊದಲು ತಿನ್ನಬಾರದು. ಈ ನಿಯಮವು ನಿಮ್ಮ ಎಲ್ಲಾ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸ ಸ್ಥಾನಗಳಲ್ಲಿಯೂ ಶಾಶ್ವತವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು