Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:33 - ಪರಿಶುದ್ದ ಬೈಬಲ್‌

33 “ನಿಮ್ಮ ದೇಶದಲ್ಲಿ ವಾಸಿಸುವ ಪರದೇಶಸ್ಥರಿಗೆ ಕೆಟ್ಟದ್ದನ್ನು ಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 “‘ನಿಮ್ಮ ದೇಶದಲ್ಲಿ ವಾಸವಾಗಿರುವ ಪರದೇಶದವರಿಗೆ ಅನ್ಯಾಯವೇನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 “ನಿಮ್ಮ ನಾಡಿನಲ್ಲಿ ತಂಗಿರುವ ಹೊರನಾಡಿಗರಿಗೆ ಅನ್ಯಾಯವೇನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನಿಮ್ಮ ದೇಶದಲ್ಲಿ ಇಳುಕೊಂಡಿರುವ ಪರದೇಶದವರಿಗೆ ಅನ್ಯಾಯವೇನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 “ ‘ಒಬ್ಬ ಪರಕೀಯನು ನಿಮ್ಮ ದೇಶದಲ್ಲಿ ನಿನ್ನೊಂದಿಗೆ ಪ್ರವಾಸಿಯಾಗಿದ್ದರೆ, ಅವನನ್ನು ಉಪದ್ರವ ಪಡಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:33
12 ತಿಳಿವುಗಳ ಹೋಲಿಕೆ  

“ನೀವು ಪರದೇಶಸ್ಥರಿಗೆ ತೊಂದರೆ ಕೊಡಬಾರದು. ನೀವು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.


“ನೀವು ಮೊದಲು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದದ್ದನ್ನು ಜ್ಞಾಪಕಮಾಡಿಕೊಳ್ಳಿ. ಆದ್ದರಿಂದ ನೀವು ಮೋಸಮಾಡಬಾರದು; ನಿಮ್ಮ ದೇಶದಲ್ಲಿರುವ ಯಾವ ಪರದೇಶಸ್ಥನಿಗೂ ಕೇಡು ಮಾಡಬಾರದು.


ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಅಪರಿಚಿತರೊಂದಿಗೂ ನೀವು ನ್ಯಾಯಬದ್ಧವಾಗಿ ವರ್ತಿಸಬೇಕು. ವಿಧವೆಯರಿಗೆ ಮತ್ತು ಅನಾಥರಿಗೆ ನೀವು ಒಳ್ಳೆಯದನ್ನು ಮಾಡಬೇಕು. ನಿರ್ದೋಷಿಗಳ ಕೊಲೆ ಮಾಡಬಾರದು; ಅನ್ಯ ದೇವರುಗಳನ್ನು ಸೇವಿಸಬಾರದು. ಏಕೆಂದರೆ ಅವುಗಳು ನಿಮ್ಮ ಜೀವನವನ್ನು ಹಾಳುಮಾಡುತ್ತವೆ.


“ಬಡವನಾಗಿರುವ ದಿನಕೂಲಿಯವನಿಗೆ ಮೋಸ ಮಾಡಬಾರದು. ಅವನು ಇಸ್ರೇಲನಾಗಿರಬಹುದು ಅಥವಾ ಪರದೇಶಸ್ಥನಾಗಿರಬಹುದು.


“ಸಾಮಾನ್ಯ ಜನರು ಮೋಸ ಮಾಡುತ್ತಾರೆ ಮತ್ತು ದರೋಡೆ ಮಾಡುತ್ತಾರೆ. ತಾವು ಧನಿಕರಾಗುವದಕ್ಕೆ ನಿಸ್ಸಹಾಯಕರಾದ ಭಿಕ್ಷೆಗಾರರನ್ನು ಸುಲುಕೊಳ್ಳುವರು. ಅವರು ಪರದೇಶಿಗಳಿಗೆ ಮೋಸಮಾಡಿ ಅವರಿಗೆ ಅನ್ಯಾಯ ಮಾಡುವರು.


ಜೆರುಸಲೇಮಿನ ಜನರು ತಮ್ಮನ್ನು ಹೆತ್ತವರನ್ನು ಸನ್ಮಾನಿಸುವುದಿಲ್ಲ. ಪರದೇಶಸ್ಥರನ್ನು ಹಿಂಸಿಸುವರು. ಆ ಸ್ಥಳದಲ್ಲಿ ವಿಧೆವೆಯರಿಗೂ ಅನಾಥರಿಗೂ ಮೋಸ ಮಾಡುವರು.


“ಪರದೇಶಸ್ಥರನ್ನು ಮತ್ತು ಅನಾಥರನ್ನು ಯೋಗ್ಯವಾದ ರೀತಿಯಲ್ಲಿ ನೋಡಿಕೊಳ್ಳಬೇಕು. ವಿಧವೆಯರ ಬಟ್ಟೆಗಳನ್ನು ಒತ್ತೆಯಿಟ್ಟುಕೊಳ್ಳಕೂಡದು.


ನೀವು ಈಜಿಪ್ಟಿನಲ್ಲಿ ಬಡ ಗುಲಾಮರಾಗಿದ್ದುದನ್ನು ಸ್ಮರಿಸಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದ ನೀವು ಬಡವರಿಗೆ ದಯೆ ತೋರಿಸಬೇಕು.


“ಲೇವಿಯರು, ‘ಪರದೇಶಸ್ಥರಿಗೆ, ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯವಾದ ತೀರ್ಪನ್ನು ಕೊಡದವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


“ಸುಳ್ಳುದೇವರಿಗೆ ಯಜ್ಞವನ್ನರ್ಪಿಸುವವನನ್ನು ನಾಶ ಮಾಡಬೇಕು. ನೀವು ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು