Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:4 - ಪರಿಶುದ್ದ ಬೈಬಲ್‌

4 “ವಿಗ್ರಹಾರಾಧನೆ ಮಾಡಬೇಡಿರಿ! ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “‘ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಶೂನ್ಯ ದೇವರುಗಳ ಕಡೆ ತಿರುಗಿಕೊಳ್ಳಬೇಡಿ; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬೇಡಿ. ನಾನೇ ನಿಮ್ಮ ದೇವರಾದ ಸರ್ವೇಶ್ವರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ ‘ನೀವು ವಿಗ್ರಹಗಳ ಕಡೆಗೆ ತಿರುಗಿಕೊಳ್ಳಬೇಡಿರಿ. ಇಲ್ಲವೆ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:4
19 ತಿಳಿವುಗಳ ಹೋಲಿಕೆ  

“ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ. ಆರಾಧಿಸಲು ಕೆತ್ತಿದ ವಿಗ್ರಹಗಳನ್ನಾಗಲಿ ಕಲ್ಲುಕಂಬಗಳನ್ನಾಗಲಿ ನಿಮ್ಮ ದೇಶದಲ್ಲಿ ಸ್ಥಾಪಿಸಬೇಡಿರಿ. ಯಾಕೆಂದರೆ ನಾನೇ ನಿಮ್ಮ ದೇವರಾದ ಯೆಹೋವನು!


“ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ.


ಆದ್ದರಿಂದ ನನ್ನೊಡನೆ ಸ್ಪರ್ಧಿಸಲು, ನೀವು ಬೆಳ್ಳಿಬಂಗಾರಗಳಿಂದ ಮೂರ್ತಿಗಳನ್ನು ಮಾಡಿಕೊಳ್ಳಬಾರದು. ಈ ಸುಳ್ಳು ದೇವರುಗಳನ್ನು ನೀವು ಮಾಡಿಕೊಳ್ಳಲೇಬಾರದು.”


ಆದ್ದರಿಂದ ಪ್ರಿಯ ಮಕ್ಕಳೇ, ನೀವು ಸುಳ್ಳುದೇವರುಗಳಿಂದ ದೂರವಾಗಿರಿ.


“‘ಸುಳ್ಳುದೇವರನ್ನು ಮಾಡಿ ಗುಪ್ತ ಸ್ಥಳದಲ್ಲಿಡುವವನು ಶಾಪಗ್ರಸ್ತನಾಗಲಿ; ಆ ದೇವರುಗಳು ಮನುಷ್ಯನ ಕೈಕೆಲಸವೇ; ಕಲ್ಲು, ಮರ, ಹಿತ್ತಾಳೆಗಳಿಂದ ಮಾಡಿದವುಗಳೇ. ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.’ “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


ಆದ್ದರಿಂದ, ನನ್ನ ಪ್ರಿಯ ಸ್ನೇಹಿತರೇ, ವಿಗ್ರಹಗಳ ಪೂಜೆಯ ಬಗ್ಗೆ ಯೋಚಿಸಲೂಬೇಡಿ.


ಅನ್ಯಜನಾಂಗಗಳ ದೇವರುಗಳೆಲ್ಲಾ ಕೇವಲ ಪ್ರತಿಮೆಗಳಾಗಿವೆ. ನಮ್ಮ ಯೆಹೋವನಾದರೋ ಆಕಾಶಮಂಡಲವನ್ನು ಸೃಷ್ಟಿಸಿದಾತನು.


ಆರೋನನು ಬಸವನ ಮೂರ್ತಿಯನ್ನು ಚಿನ್ನದಿಂದ ಎರಕಹೊಯ್ಯಿಸಿದನು. ಬಳಿಕ ಅವರು, “ಇಸ್ರೇಲರೇ, ನಿಮ್ಮ ದೇವರುಗಳು ಇಲ್ಲಿವೆ! ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳೇ” ಎಂದು ಹೇಳಿದರು.


ಯೆಹೋವನು ಹೀಗೆನ್ನುತ್ತಾನೆ, “ಈ ಹೊತ್ತು ಒಂಭತ್ತನೇ ತಿಂಗಳಿನ ಇಪ್ಪತ್ನಾಲ್ಕನೆಯ ದಿವಸವಾಗಿದೆ. ಆಲಯದ ಶಂಕುಸ್ಥಾಪನೆ ಮಾಡಿ ಮುಗಿಸಿರುತ್ತೀರಿ. ಇನ್ನು ಮುಂದಕ್ಕೆ ಏನು ನಡಿಯುತ್ತದೆಂದು ಗಮನಿಸಿರಿ.


“ನೀವು ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸುವಾಗ, ನೀವು ಅಂಗೀಕೃತರಾಗುವಂತೆ ಅವುಗಳನ್ನು ಅರ್ಪಿಸಬೇಕು.


ಯಾಕೆಂದರೆ ಜನಾಂಗಗಳಲ್ಲಿರುವ ಬೇರೆ ದೇವರುಗಳೆಲ್ಲಾ ಜಡಮೂರ್ತಿಗಳೇ. ಯೆಹೋವನಾದರೋ ಆಕಾಶಮಂಡಲವನ್ನು ಸೃಷ್ಟಿಸಿದಾತನು.


ಯಾಕೆಂದರೆ, ನಾನೇ ನಿಮ್ಮ ದೇವರಾದ ಯೆಹೋವನು. ನಾನು ಪರಿಶುದ್ಧನಾಗಿದ್ದೇನೆ, ಆದ್ದರಿಂದ ನೀವೂ ಪರಿಶುದ್ಧರಾಗಿರಬೇಕು. ಹರಿದಾಡುವ ಆ ಜಂತುಗಳಿಂದ ನಿಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಬೇಡಿರಿ.


ಬಳಿಕ ಐದನೆಯ ವರ್ಷದಲ್ಲಿ, ನೀವು ಆ ಮರದ ಹಣ್ಣುಗಳನ್ನು ತಿನ್ನಬಹುದು ಮತ್ತು ಮರವು ನಿಮಗೆ ಹೆಚ್ಚೆಚ್ಚಾಗಿ ಹಣ್ಣುಗಳನ್ನು ನೀಡುವುದು. ನಾನೇ ನಿಮ್ಮ ದೇವರಾದ ಯೆಹೋವನು!


ಆದ್ದರಿಂದ ಜಾಗ್ರತೆಯಿಂದಿರಬೇಕು. ನೀವು ಪಾಪಮಾಡಿ ನಿಮ್ಮನ್ನು ನಾಶಪಡಿಸಿಕೊಳ್ಳಬೇಡಿ. ಮನುಷ್ಯನ ರೂಪವನ್ನಾಗಲಿ


“ಅವರ ದೇವರುಗಳ ಪ್ರತಿಮೆಗಳನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು. ಅವರ ವಿಗ್ರಹಗಳಲ್ಲಿರುವ ಬೆಳ್ಳಿಬಂಗಾರಗಳನ್ನು ನೀವು ತೆಗೆದುಕೊಳ್ಳಬೇಡಿ. ನೀವು ತೆಗೆದುಕೊಂಡರೆ ಅವು ನಿಮಗೆ ಉರುಲಾಗಿ ನಿಮ್ಮನ್ನೇ ನಾಶಮಾಡುತ್ತವೆ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ವಿಗ್ರಹಗಳನ್ನು ದ್ವೇಷಿಸುತ್ತಾನೆ.


ಆದರೆ ನೀನು ಅನೇಕ ಪಾಪಗಳನ್ನು ಮಾಡಿರುವೆ. ನಿನಗಿಂತಲೂ ಮೊದಲು ಆಳಿದವರ ಪಾಪಗಳಿಗಿಂತ ನಿನ್ನ ಪಾಪಗಳು ಹೆಚ್ಚು ಭಯಂಕರವಾಗಿವೆ. ನೀನು ನನ್ನನ್ನು ಅನುಸರಿಸುವುದನ್ನು ಬಿಟ್ಟುಬಿಟ್ಟೆ. ನೀನು ವಿಗ್ರಹಗಳನ್ನು ಮತ್ತು ಅನ್ಯದೇವರುಗಳನ್ನು ನಿರ್ಮಿಸಿದೆ. ಇದು ನನ್ನಲ್ಲಿ ಹೆಚ್ಚು ಕೋಪವುಂಟುಮಾಡಿತು.


ಅವನು ಇಸ್ರೇಲರ ಅರಸರಂತೆ ಕೆಟ್ಟದಾರಿಯಲ್ಲಿ ನಡೆದನು. ಅವನು ಎರಕದ ಬೊಂಬೆಗಳನ್ನು ಮಾಡಿಸಿ ಬಾಳ್ ದೇವರ ವಿಗ್ರಹಗಳನ್ನು ಪೂಜಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು