Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:5 - ಪರಿಶುದ್ದ ಬೈಬಲ್‌

5 “ನೀವು ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸುವಾಗ, ನೀವು ಅಂಗೀಕೃತರಾಗುವಂತೆ ಅವುಗಳನ್ನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “‘ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸುವಾಗ ಆತನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಶಾಂತಿಸಮಾಧಾನದ ಬಲಿಗಳನ್ನು ಸರ್ವೇಶ್ವರನಿಗೆ ಸಮರ್ಪಿಸುವಾಗ ಅವರಿಗೆ ಮೆಚ್ಚುಗೆಯಾಗುವ ರೀತಿಯಲ್ಲಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸುವಾಗ ಆತನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ ‘ನೀವು ನಿಮ್ಮ ಯೆಹೋವ ದೇವರಿಗೆ ಸಮಾಧಾನದ ಬಲಿಯನ್ನು ಸಮರ್ಪಿಸುವುದಾದರೆ, ನೀವು ಆತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿಯೇ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:5
16 ತಿಳಿವುಗಳ ಹೋಲಿಕೆ  

“ಯೆಹೋವನಿಗೆ ವಿಶೇಷ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸಲು ಬಯಸಿದರೆ, ಆ ಕಾಣಿಕೆಯನ್ನು ಯೆಹೋವನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಅರ್ಪಿಸಬೇಕು.


“ಯಾವನಾದರೂ ಸ್ವಇಚ್ಛೆಯ ಕಾಣಿಕೆಗಾಗಲಿ ಹರಕೆಯನ್ನು ಸಲ್ಲಿಸುವುದಕ್ಕಾಗಲಿ ಸಮಾಧಾನಯಜ್ಞ ಅರ್ಪಿಸಬಹುದು ಅಥವಾ ಆ ವ್ಯಕ್ತಿ ದೇವರಿಗೆ ಕಾಣಿಕೆಯನ್ನು ಅರ್ಪಿಸಿದರೆ, ಅವನು ಅದರ ಯಜ್ಞಮಾಂಸವನ್ನು ಸಮರ್ಪಿಸಿದ ದಿನದಲ್ಲಿಯೇ ತಿನ್ನಬೇಕು. ಉಳಿದದ್ದನ್ನು ಮರುದಿನ ತಿನ್ನಬೇಕು.


ಅದು ಸ್ವೀಕೃತವಾಗುವಂತೆ ಪೂರ್ಣಾಂಗವಾದ ಹೋರಿಯನ್ನಾಗಲಿ ಟಗರನ್ನಾಗಲಿ ಹೋತವನ್ನಾಗಲಿ ಅರ್ಪಿಸಬೇಕು. ಅಂಗದೋಷವುಳ್ಳ ಯಾವುದನ್ನೂ ನೀವು ಸಮರ್ಪಿಸಬಾರದು. ಅಂಗದೋಷವುಳ್ಳವುಗಳನ್ನು ನಾನು ಸ್ವೀಕರಿಸುವುದಿಲ್ಲ.


“ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.


“ರಾಜನು ತನ್ನ ಇಚ್ಛೆಯ ಪ್ರಕಾರ ಯೆಹೋವನಿಗೆ ಸರ್ವಾಂಗಹೋಮ ಅಥವಾ ಸಮಾಧಾನಯಜ್ಞ ಅಥವಾ ಮನಃಪೂರ್ವಕವಾದ ಕಾಣಿಕೆಯನ್ನು ಸಮರ್ಪಿಸುವಾಗ ಅವನಿಗಾಗಿ ಪೂರ್ವದ ಬಾಗಿಲು ತೆಗೆಯಲ್ಪಡಬೇಕು. ಆದರೆ ಅವನು ಸಬ್ಬತ್ ದಿನದಂತೆ ತನ್ನ ಕಾಣಿಕೆಗಳನ್ನು ಸಮರ್ಪಿಸಿದ ನಂತರ ಅವನು ಹಿಂತಿರುಗಿದಾಗ ಪ್ರವೇಶ ದ್ವಾರವು ಮುಚ್ಚಲ್ಪಡಬೇಕು.


ಅಧಿಪತಿಯು ಆ ದ್ವಾರದ ಕೈಸಾಲೆಯೊಳಗೆ ಪ್ರವೇಶಿಸಿ ಅದರ ನಿಲುವು ಕಂಬದ ಬಳಿಯಲ್ಲಿ ನಿಲ್ಲುವನು. ಅಧಿಪತಿಯು ಕೊಡುವ ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞವನ್ನು ಆಗ ಯಾಜಕರು ಸಮರ್ಪಿಸುವರು. ಅಧಿಪತಿಯು ಆ ದ್ವಾರದ ಮುಂಭಾಗದಲ್ಲಿ ಆರಾಧಿಸುವನು. ಅನಂತರ ಅವನು ಹೊರಗೆ ಹೋಗುವನು. ಆ ದ್ವಾರದ ಕದಗಳು ಸಾಯಂಕಾಲದ ತನಕ ತೆರೆದೇ ಇರುವವು.


ಯಾಜಕರೂ ಲೇವಿಯರೂ ಬೇರೆಬೇರೆ ಗುಂಪುಗಳಾಗಿ ವಿಭಾಗಿಸಲ್ಪಟ್ಟಿದ್ದರು. ಪ್ರತಿಯೊಂದು ಗುಂಪಿನವರಿಗೂ ಪ್ರತ್ಯೇಕವಾದ ಸೇವಾಕಾರ್ಯವು ಕೊಡಲ್ಪಟ್ಟಿತ್ತು. ಅರಸನಾದ ಹಿಜ್ಕೀಯನು ಅವರ ಕೆಲಸಗಳನ್ನು ಮತ್ತೆ ಪ್ರಾರಂಭಿಸಲು ಈ ಗುಂಪಿನವರಿಗೆ ಹೇಳಿದನು. ಹೀಗೆ ಯಾಜಕರೂ ಲೇವಿಯರೂ ಮತ್ತೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುತ್ತಿದ್ದರು. ಅಲ್ಲದೆ ದೇವಾಲಯದೊಳಗೆ ದೇವರಿಗೆ ಸ್ತುತಿಗೀತೆ ಹಾಡುವ ಕೆಲಸವೂ ಅವರದೇ ಆಗಿತ್ತು.


“ಕಾಲು ಉದ್ದವಾಗಿರುವ ಅಥವಾ ಮೊಂಡಾಗಿರುವ ಹೋರಿಯನ್ನಾಗಲಿ ಕುರಿಯನ್ನಾಗಲಿ ಒಬ್ಬನು ಯೆಹೋವನಿಗೆ ಕಾಣಿಕೆಯಾಗಿ ಕೊಡಲು ಬಯಸಿದರೆ, ಆಗ ಅದು ಸ್ವೀಕೃತವಾಗುವುದು. ಆದರೆ, ಅವನು ಮಾಡಿದ ವಿಶೇಷ ಹರಕೆಯಾಗಿ ಅದು ಸ್ವೀಕೃತವಾಗುವುದಿಲ್ಲ. ಅದು ಸ್ವಇಚ್ಛೆಯಿಂದ ಅರ್ಪಿಸಿದ ಕಾಣಿಕೆಯಾಗಿ ಸ್ವೀಕರಿಸಲ್ಪಡುವುದು.


“ಒಬ್ಬನು ಸಮಾಧಾನಯಜ್ಞವನ್ನು ಹರಕೆಯಾಗಿ ಅಥವಾ ಕಾಣಿಕೆಯಾಗಿ ಅರ್ಪಿಸುವಾಗ ಹೋರಿಯನ್ನಾಗಲಿ ಟಗರನ್ನಾಗಲಿ ಅರ್ಪಿಸಬೇಕು; ಅದು ಅಂಗದೋಷವಿಲ್ಲದ್ದಾಗಿರಬೇಕು; ಆರೋಗ್ಯವುಳ್ಳದ್ದಾಗಿರಬೇಕು. ಆಗ ಅದು ಸ್ವೀಕೃತವಾಗುವುದು.


ಬಳಿಕ ಮೋಶೆಯು ಯಜ್ಞಗಳನ್ನು ಸಮರ್ಪಿಸುವುದಕ್ಕೆ ಇಸ್ರೇಲರ ಯೌವನಸ್ಥರನ್ನು ಕಳುಹಿಸಿದನು. ಅವರು ಯೆಹೋವನಿಗೆ ಎತ್ತುಗಳನ್ನು ಸರ್ವಾಂಗಹೋಮಗಳಾಗಿಯೂ ಸಮಾಧಾನಯಜ್ಞಗಳಾಗಿಯೂ ಅರ್ಪಿಸಿದರು.


“ವಿಗ್ರಹಾರಾಧನೆ ಮಾಡಬೇಡಿರಿ! ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು!


ನೀವು ಅರ್ಪಿಸಿದ ದಿನದಲ್ಲಿ ಅಥವಾ ಮರುದಿನದಲ್ಲಿ ಅದನ್ನು ತಿನ್ನಬಹುದು. ಆದರೆ ಆ ಯಜ್ಞದಲ್ಲಿ ಏನಾದರೂ ಮೂರನೆಯ ದಿನದವರೆಗೆ ಉಳಿದರೆ, ನೀವು ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ಒಬ್ಬನು ತನ್ನ ಸಮಾಧಾನಯಜ್ಞದಲ್ಲಿ ಉಳಿದದ್ದನ್ನು ಮೂರನೆಯ ದಿನದಲ್ಲಿ ತಿಂದರೆ, ಯೆಹೋವನು ಅವನ ವಿಷಯದಲ್ಲಿ ಸಂತೋಷಗೊಳ್ಳುವುದಿಲ್ಲ. ಯೆಹೋವನು ಆ ಯಜ್ಞವನ್ನು ಅವನ ಲೆಕ್ಕಕ್ಕೆ ತೆಗೆದುಕೊಳ್ಳುವುದಿಲ್ಲ. ಆ ಯಜ್ಞವು ಅಸಹ್ಯವಸ್ತುವಾಗುವುದು. ಆ ಮಾಂಸವನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು