Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 2:12 - ಪರಿಶುದ್ದ ಬೈಬಲ್‌

12 ನೀವು ಹುಳಿಯನ್ನು ಮತ್ತು ಜೇನುತುಪ್ಪವನ್ನು ಪ್ರಥಮಫಲವಾಗಿ ಅರ್ಪಿಸಬಹುದು. ಆದರೆ ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವುಗಳನ್ನು ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬಹುದೇ ಹೊರತು ಯಜ್ಞವೇದಿಯ ಮೇಲೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಅವುಗಳನ್ನು ಹೋಮಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವುಗಳನ್ನು ಪ್ರಥಮ ಫಲವಾಗಿ ಸರ್ವೇಶ್ವರನಿಗೆ ಸಮರ್ಪಿಸಬಹುದೇ ಹೊರತು ಬಲಿಪೀಠದ ಮೇಲೆ ಸುವಾಸನೆಯನ್ನುಂಟುಮಾಡುವುದಕ್ಕಾಗಿ ಹೋಮ ಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವುಗಳನ್ನು ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬಹುದೇ ಹೊರತು ಯಜ್ಞವೇದಿಯ ಮೇಲೆ ಸುವಾಸನೆಯನ್ನುಂಟುಮಾಡುವದಕ್ಕಾಗಿ ಹೋಮಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಪ್ರಥಮ ಫಲದ ಕಾಣಿಕೆಯ ವಿಷಯದಲ್ಲಿಯಾದರೋ ನೀವು ಅವುಗಳನ್ನು ಯೆಹೋವ ದೇವರಿಗೆ ಸಮರ್ಪಿಸಬೇಕು. ಆದರೆ ಅವುಗಳನ್ನು ಬಲಿಪೀಠದ ಮೇಲೆ ಸುವಾಸನೆಗಾಗಿ ಸುಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 2:12
15 ತಿಳಿವುಗಳ ಹೋಲಿಕೆ  

“ಸುಗ್ಗಿ ಕಾಲದಲ್ಲಿ ನಿಮ್ಮ ಬೆಳೆಯ ಫಲವನ್ನು ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ತರಬೇಕು. “ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.”


ಇವರು ಸ್ತ್ರೀ ಸಹವಾಸದಿಂದ ಮಲಿನರಾಗದೆ ಕನ್ನಿಕೆಯರಂತೆ ಉಳಿದಿದ್ದರು. ಕುರಿಮರಿಯಾದಾತನು ಹೋದಕಡೆಯಲ್ಲೆಲ್ಲಾ ಅವರು ಆತನನ್ನು ಹಿಂಬಾಲಿಸುತ್ತಾರೆ. ಭೂಲೋಕದ ಜನರ ಮಧ್ಯದಿಂದ ಬಿಡುಗಡೆ ಹೊಂದಿದವರೇ 1,44,000 ಮಂದಿ. ದೇವರಿಗೂ ಕುರಿಮರಿಯಾದಾತನಿಗೂ ಅರ್ಪಿತರಾದವರಲ್ಲಿ ಇವರೇ ಮೊದಲಿಗರಾಗಿದ್ದರು.


ದೇಶದ ಜನರೆಲ್ಲಾ ಅರಸನ ಈ ಆಜ್ಞೆಯನ್ನು ಕೇಳಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನುತುಪ್ಪ ಮುಂತಾದ ಎಲ್ಲವುಗಳಲ್ಲಿ ಮತ್ತು ಪ್ರಥಮ ಫಲಗಳಲ್ಲಿ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಕೊಟ್ಟರು.


ಈಗ, ಯೆಹೋವನೇ, ನೀನು ಕೊಟ್ಟ ದೇಶದಲ್ಲಿ ಬೆಳೆದ ಬೆಳೆಯಲ್ಲಿ ಪ್ರಥಮ ಫಲಗಳನ್ನು ತಂದಿದ್ದೇನೆ.’ “ಆ ಪ್ರಥಮ ಬೆಳೆಯನ್ನು ನಿಮ್ಮ ದೇವರಾದ ಯೆಹೋವನ ಮುಂದೆ ಇಟ್ಟು ಆತನನ್ನು ಆರಾಧಿಸಬೇಕು.


ನೀವು ಕಣದಲ್ಲಿರುವ ಗೋಧಿಯಲ್ಲಿ ಪ್ರಥಮಫಲವನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡುವಂತೆಯೇ ನೀವು ಪ್ರಥಮವಾಗಿ ನಾದಿದ ಹಿಟ್ಟಿನಿಂದ ಒಂದು ರೊಟ್ಟಿಯನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು.


“ಇಸ್ರೇಲರಿಗೆ ಹೀಗೆ ಹೇಳು: ನಾನು ನಿಮಗೆ ಕೊಡುವ ದೇಶದಲ್ಲಿ ನೀವು ನೆಲೆಸಿದ ನಂತರ ಅಲ್ಲಿ ಬೆಳೆಯನ್ನು ಕೊಯ್ಯುವಿರಿ. ಆ ಸಮಯದಲ್ಲಿ ನಿಮ್ಮ ಬೆಳೆಯ ಪ್ರಥಮ ಸಿವುಡನ್ನು ಯಾಜಕನ ಬಳಿಗೆ ತರಬೇಕು.


ಅವನು ದೇವರಿಗೆ ತನ್ನ ಕೃತಜ್ಞತೆಯನ್ನು ಸೂಚಿಸುವುದಕ್ಕಾಗಿ ಅರ್ಪಿಸುವ ಯಜ್ಞವೇ ಸಮಾಧಾನಯಜ್ಞವಾಗಿದೆ. ಈ ಯಜ್ಞದೊಡನೆ ಅವನು ಹುಳಿಯಿರುವ ರೊಟ್ಟಿಗಳ ನೈವೇದ್ಯವನ್ನು ಅರ್ಪಿಸಬೇಕು.


“ಸುಗ್ಗಿಕಾಲದಲ್ಲಿ ನೀವು ಪ್ರಥಮಫಲವಾದ ಧಾನ್ಯವನ್ನು ಮತ್ತು ನಿಮ್ಮ ಪ್ರಥಮಫಲವಾದ ದ್ರಾಕ್ಷಾರಸವನ್ನು ನನಗೆ ಕೊಡಬೇಕು. ನೀವು ಅದನ್ನು ನಿಮಗಾಗಿಯೇ ಇಟ್ಟುಕೊಳ್ಳಬಾರದು. “ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಪ್ರತಿಷ್ಠಿಸಬೇಕು.


ಈ ಜಮೀನು ಮಮ್ರೆಗೆ ಪೂರ್ವದಲ್ಲಿರುವ ಮಕ್ಪೇಲದಲ್ಲಿತ್ತು. ಅಬ್ರಹಾಮನು ಆ ಜಮೀನಿಗೂ ಅದರಲ್ಲಿದ್ದ ಗವಿಗೂ ಜಮೀನಿನಲ್ಲಿದ್ದ ಎಲ್ಲಾ ಮರಗಳಿಗೂ ಒಡೆಯನಾದನು. ಎಫ್ರೋನನಿಗೂ ಅಬ್ರಹಾಮನಿಗೂ ಆದ ಒಪ್ಪಂದಕ್ಕೆ ನಗರದವರೆಲ್ಲರು ಸಾಕ್ಷಿಗಳಾದರು.


ಆದರೆ ಕ್ರಿಸ್ತನು ನಿಜವಾಗಿಯೂ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಿದ್ದಾನೆ. ನಿದ್ರೆಹೋದವರಲ್ಲಿ ಅಂದರೆ ಸತ್ತುಹೋದ ಎಲ್ಲಾ ವಿಶ್ವಾಸಿಗಳಲ್ಲಿ ಆತನೇ ಪ್ರಥಮ ಫಲವಾದನು.


“ವಾರಗಳ ಹಬ್ಬವನ್ನು ಆಚರಿಸಿರಿ. ಈ ಹಬ್ಬಕ್ಕಾಗಿ ಗೋಧಿಬೆಳೆಯ ಪ್ರಥಮ ಕಾಳನ್ನು ಉಪಯೋಗಿಸಿರಿ ಮತ್ತು ವರ್ಷಾಂತ್ಯದಲ್ಲಿ ಸುಗ್ಗಿಹಬ್ಬವನ್ನು ಆಚರಿಸಿರಿ.


ಆ ದಿನದಲ್ಲಿ ನಿಮ್ಮ ಮನೆಗಳಿಂದ ಎರಡು ರೊಟ್ಟಿಗಳನ್ನು ತನ್ನಿರಿ. ಆ ರೊಟ್ಟಿಗಳು ನೈವೇದ್ಯವಾಗಿ ನಿವಾಳಿಸಲ್ಪಡುವುದಕ್ಕಾಗಿದೆಯಷ್ಟೆ. ಹುಳಿಯನ್ನು ಉಪಯೋಗಿಸಿ ಹದಿನಾರು ಬಟ್ಟಲು ಗೋಧಿಹಿಟ್ಟಿನಿಂದ ಎರಡು ರೊಟ್ಟಿಗಳನ್ನು ಮಾಡಿರಿ. ಅದು ನಿಮ್ಮ ಪ್ರಥಮ ಬೆಳೆಯಿಂದ ಯೆಹೋವನಿಗೆ ಸಮರ್ಪಿಸುವ ಕಾಣಿಕೆಯಾಗಿರುವುದು.


“ಇದಲ್ಲದೆ, ಇಸ್ರೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲದ ಪದಾರ್ಥಗಳಲ್ಲಿ ಅಂದರೆ ಉತ್ತಮವಾದ ಎಣ್ಣೆ, ಹೊಸ ದ್ರಾಕ್ಷಾರಸ, ಧಾನ್ಯ ಇವುಗಳನ್ನೆಲ್ಲ ನಾನು ನಿಮಗೆ ಕೊಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು