Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 2:14 - ಪರಿಶುದ್ದ ಬೈಬಲ್‌

14 “ನೀವು ಪ್ರಥಮಫಲವನ್ನು ಯೆಹೋವನಿಗೆ ನೈವೇದ್ಯವಾಗಿ ಅರ್ಪಿಸುವಾಗ ಬೆಂಕಿಯಲ್ಲಿ ಸುಟ್ಟ ಗೋಧಿತೆನೆಗಳನ್ನು ತರಬೇಕು. ಅವುಗಳು ಜಜ್ಜಲ್ಪಟ್ಟ ಹಸಿ ತೆನೆಗಳಾಗಿರಬೇಕು. ಇದು ನಿಮ್ಮ ಪ್ರಥಮಫಲ ನೈವೇದ್ಯವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “‘ನೀವು ಯೆಹೋವನಿಗೆ ಧಾನ್ಯ ನೈವೇದ್ಯದ ಪ್ರಥಮಫಲವನ್ನು ಸಮರ್ಪಣೆ ಮಾಡಬೇಕಾದರೆ ಗೋದಿಯ ತಾಜವಾದ ಹಸೀ ತೆನೆಗಳನ್ನು ಬೆಂಕಿಯಲ್ಲಿ ಸುಟ್ಟು, ಉಮ್ಮಿಗೆಯನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ನೀವು ಸರ್ವೇಶ್ವರನಿಗೆ ಪ್ರಥಮ ಧಾನ್ಯ ನೈವೇದ್ಯವನ್ನು ಮಾಡಬೇಕಾದರೆ ಅದು ಬೆಂಕಿಯಲ್ಲಿ ಸುಟ್ಟ ಗೋದಿಯ ಹಸಿ ತೆನೆಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀವು ಯೆಹೋವನಿಗೆ ಪ್ರಥಮಫಲ ನೈವೇದ್ಯವನ್ನು ಮಾಡಬೇಕಾದರೆ ಗೋದಿಯ ಹಸೀ ತೆನೆಗಳನ್ನು ಬೆಂಕಿಯಲ್ಲಿ ಸುಟ್ಟು ಉವ್ಮಿುಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ ‘ನೀನು ನಿನ್ನ ಪ್ರಥಮ ಫಲಗಳ ಧಾನ್ಯ ಸಮರ್ಪಣೆಯನ್ನು ಯೆಹೋವ ದೇವರಿಗೆ ಮಾಡಿದರೆ, ನಿನ್ನ ಪ್ರಥಮ ಫಲ ಧಾನ್ಯ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 2:14
16 ತಿಳಿವುಗಳ ಹೋಲಿಕೆ  

“ಇಸ್ರೇಲರಿಗೆ ಹೀಗೆ ಹೇಳು: ನಾನು ನಿಮಗೆ ಕೊಡುವ ದೇಶದಲ್ಲಿ ನೀವು ನೆಲೆಸಿದ ನಂತರ ಅಲ್ಲಿ ಬೆಳೆಯನ್ನು ಕೊಯ್ಯುವಿರಿ. ಆ ಸಮಯದಲ್ಲಿ ನಿಮ್ಮ ಬೆಳೆಯ ಪ್ರಥಮ ಸಿವುಡನ್ನು ಯಾಜಕನ ಬಳಿಗೆ ತರಬೇಕು.


ಇವರು ಸ್ತ್ರೀ ಸಹವಾಸದಿಂದ ಮಲಿನರಾಗದೆ ಕನ್ನಿಕೆಯರಂತೆ ಉಳಿದಿದ್ದರು. ಕುರಿಮರಿಯಾದಾತನು ಹೋದಕಡೆಯಲ್ಲೆಲ್ಲಾ ಅವರು ಆತನನ್ನು ಹಿಂಬಾಲಿಸುತ್ತಾರೆ. ಭೂಲೋಕದ ಜನರ ಮಧ್ಯದಿಂದ ಬಿಡುಗಡೆ ಹೊಂದಿದವರೇ 1,44,000 ಮಂದಿ. ದೇವರಿಗೂ ಕುರಿಮರಿಯಾದಾತನಿಗೂ ಅರ್ಪಿತರಾದವರಲ್ಲಿ ಇವರೇ ಮೊದಲಿಗರಾಗಿದ್ದರು.


ಆದರೆ ಕ್ರಿಸ್ತನು ನಿಜವಾಗಿಯೂ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಿದ್ದಾನೆ. ನಿದ್ರೆಹೋದವರಲ್ಲಿ ಅಂದರೆ ಸತ್ತುಹೋದ ಎಲ್ಲಾ ವಿಶ್ವಾಸಿಗಳಲ್ಲಿ ಆತನೇ ಪ್ರಥಮ ಫಲವಾದನು.


“ಭೂಲೋಕದ ಜನರೆಲ್ಲಾ ನನ್ನ ಹೆಸರನ್ನು ಗೌರವಿಸುತ್ತಾರೆ; ಒಳ್ಳೆಯ ಕಾಣಿಕೆಗಳನ್ನು ತಂದೊಪ್ಪಿಸುತ್ತಾರೆ, ಒಳ್ಳೆಯ ಧೂಪವನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ. ಯಾಕೆಂದರೆ ಅವರಿಗೆಲ್ಲಾ ನನ್ನ ನಾಮ ಮಹತ್ತರವಾದದ್ದು, ವಿಶೇಷವಾದದ್ದು.” ಇದು ಸರ್ವಶಕ್ತನಾದ ಯೆಹೋವನ ನುಡಿ.


“ನೀನು ಇಸ್ರೇಲರಿಗೆ ಈ ಆಜ್ಞೆಯನ್ನು ಕೊಡು. ನೀವು ಎಚ್ಚರಿಕೆಯಾಗಿದ್ದು ನೇಮಿತ ಕಾಲಗಳಲ್ಲಿ ನನಗೆ ಅರ್ಪಿಸತಕ್ಕ ಧಾನ್ಯಸಮರ್ಪಣೆಗಳನ್ನು ನನಗೆ ಸುಗಂಧ ಹೋಮಮಾಡಬೇಕು.


ಬಾಳ್‌ಷಾಲಿಷಾದಿಂದ ಒಬ್ಬ ಮನುಷ್ಯನು ಪ್ರಥಮ ಸುಗ್ಗಿಯ ರೊಟ್ಟಿಗಳನ್ನು ದೇವಮನುಷ್ಯನಿಗೆ (ಎಲೀಷನಿಗೆ) ತೆಗೆದುಕೊಂಡು ಬಂದನು. ಇವನು ಇಪ್ಪತ್ತು ಜವೆಗೋಧಿ ರೊಟ್ಟಿಗಳನ್ನೂ ಒಂದು ಚೀಲದಲ್ಲಿ ಹಸೀ ತೆನೆಗಳನ್ನೂ ತಂದನು. ಆಗ ಎಲೀಷನು, “ಜನರಿಗೆ ಈ ಆಹಾರವನ್ನು ಕೊಡು, ಅವರು ತಿನ್ನಲಿ” ಎಂದು ಹೇಳಿದನು.


ಯೆಹೋವನು ಕೊಡುವ ಆ ದೇಶದಲ್ಲಿ ನೀವು ಪ್ರಥಮ ಬೆಳೆಯನ್ನು ಕೂಡಿಸುವಿರಿ. ಪುಟ್ಟಿಗಳಲ್ಲಿ ಧಾನ್ಯವನ್ನು ಕೂಡಿಸುವಾಗ ಪ್ರಥಮ ಭಾಗವನ್ನು ಪ್ರತ್ಯೇಕವಾಗಿಟ್ಟು ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸುವ ಸ್ಥಳಕ್ಕೆ ಅದನ್ನು ತೆಗೆದುಕೊಂಡು ಹೋಗಿ.


“ಯಾಜಕನು ಅವುಗಳನ್ನು ಪ್ರಥಮ ಬೆಳೆಯಿಂದ ಮಾಡಿದ ರೊಟ್ಟಿಯೊಂದಿಗೆ ನೈವೇದ್ಯವಾಗಿ ಎರಡು ಕುರಿಮರಿಗಳೊಂದಿಗೆ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವನು. ಅವು ಯೆಹೋವನಿಗೆ ಪವಿತ್ರವಾಗಿರುತ್ತವೆ. ಅವು ಯಾಜಕರಿಗೆ ಸಲ್ಲುತ್ತವೆ.


“ಯೆಹೋವನಿಗೆ ವಿಶೇಷ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸಲು ಬಯಸಿದರೆ, ಆ ಕಾಣಿಕೆಯನ್ನು ಯೆಹೋವನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಅರ್ಪಿಸಬೇಕು.


ಸ್ವಲ್ಪ ಕಾಲದ ನಂತರ ಕಾಯಿನನು ದೇವರಿಗೆ ಕೃತಜ್ಞತಾ ಕಾಣಿಕೆಯನ್ನು ತಂದನು. ಕಾಯಿನನು ತಾನು ಹೊಲದಲ್ಲಿ ಬೆಳೆದ ಕೆಲವು ಆಹಾರಪದಾರ್ಥಗಳನ್ನು ತಂದನು.


ನೀವು ಅದಕ್ಕೆ ಎಣ್ಣೆಯನ್ನು ಹಾಕಿ ಅದರ ಮೇಲೆ ಧೂಪವನ್ನಿಡಬೇಕು. ಅದು ಧಾನ್ಯಸಮರ್ಪಣೆಯಾಗಿದೆ.


ಯಾಜಕನು ಜಜ್ಜಿದ ಧಾನ್ಯದಲ್ಲಿ ಒಂದು ಭಾಗವನ್ನೂ ಎಣ್ಣೆಯನ್ನೂ ಎಲ್ಲಾ ಧೂಪವನ್ನೂ ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಹೋಮಮಾಡಬೇಕು. ಇದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಯಾಗಿದೆ.


ನೀವು ಎಣ್ಣೆ ಬೆರೆಸಿದ ಹದಿನಾರು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯಸಮರ್ಪಣೆಗಾಗಿ ಅರ್ಪಿಸಬೇಕು. ನೀವು ಕಾಲುಭಾಗ ದ್ರಾಕ್ಷಾರಸವನ್ನು ಅರ್ಪಿಸಬೇಕು. ಆ ಯಜ್ಞದ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಗಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು