Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:14 - ಪರಿಶುದ್ದ ಬೈಬಲ್‌

14 “ಒಬ್ಬನು ಒಬ್ಬ ಸ್ತ್ರೀಯೊಂದಿಗೂ ಅವಳ ತಾಯಿಯೊಂದಿಗೂ ಲೈಂಗಿಕ ಸಂಬಂಧಗಳನ್ನು ಬೆಳೆಸಿದರೆ, ಆಗ ಇದು ಲೈಂಗಿಕ ಪಾಪವಾಗಿದೆ. ಜನರು ಆ ಮನುಷ್ಯನನ್ನು ಇಬ್ಬರು ಸ್ತ್ರೀಯರನ್ನು ಬೆಂಕಿಯಿಂದ ಸುಟ್ಟುಹಾಕಬೇಕು. ನಿಮ್ಮ ಜನರ ಮಧ್ಯದಲ್ಲಿ ಈ ಲೈಂಗಿಕ ಪಾಪ ನಡೆಯಲು ಬಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯಾವನಾದರೂ ಒಬ್ಬ ಸ್ತ್ರೀಯನ್ನು ಹಾಗೂ ಅವಳ ತಾಯಿಯನ್ನು ಸಂಗಮಿಸಿದರೆ ಅದು ಅತಿದುಷ್ಟಕಾರ್ಯವಾದುದರಿಂದ ಆ ಮೂರು ಜನರನ್ನು ಬೆಂಕಿಯಿಂದ ಸುಡಿಸಿಬಿಡಬೇಕು; ಅಂತಹ ದುರಾಚಾರವು ನಿಮ್ಮಲ್ಲಿ ಎಷ್ಟು ಮಾತ್ರವೂ ನಡೆಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯಾವನಾದರೂ ಒಬ್ಬ ಸ್ತ್ರೀಯನ್ನೂ ಅವಳ ತಾಯಿಯನ್ನೂ ಇಟ್ಟುಕೊಂಡರೆ ಅದು ಅತಿದುಷ್ಟಕಾರ್ಯವಾದುದರಿಂದ ಆ ಮೂರು ಮಂದಿಯನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು; ಅಂಥ ದುರಾಚಾರವು ನಿಮ್ಮಲ್ಲಿ ಎಷ್ಟುಮಾತ್ರವೂ ನಡೆಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯಾವನಾದರೂ ಒಬ್ಬ ಸ್ತ್ರೀಯನ್ನೂ ಅವಳ ತಾಯಿಯನ್ನೂ ಇಟ್ಟುಕೊಂಡರೆ ಅದು ಅತಿದುಷ್ಟಕಾರ್ಯವಾದದರಿಂದ ಆ ಮೂರು ಮಂದಿಯನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು; ಅಂಥ ದುರಾಚಾರವು ನಿಮ್ಮಲ್ಲಿ ಎಷ್ಟುಮಾತ್ರವೂ ನಡೆಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ ‘ಒಬ್ಬ ಮನುಷ್ಯನು ಒಬ್ಬ ಸ್ತ್ರೀಯನ್ನೂ, ಅವಳ ತಾಯಿಯನ್ನೂ ಮದುವೆ ಮಾಡಿಕೊಂಡರೆ ಅದು ದುಷ್ಟತನವಾಗಿದೆ. ಆದ್ದರಿಂದ ನಿಮ್ಮಲ್ಲಿ ದುಷ್ಟತನವು ಇರದಂತೆ ಆ ಮೂರು ಜನರನ್ನು ಬೆಂಕಿಯಿಂದ ಸುಡಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:14
6 ತಿಳಿವುಗಳ ಹೋಲಿಕೆ  

“ಒಬ್ಬ ಸ್ತ್ರೀಯೊಡನೆಯೂ ಆಕೆಯ ಮಗಳೊಡನೆಯೂ ಲೈಂಗಿಕ ಸಂಬಂಧ ಮಾಡಬಾರದು. ಆ ಸ್ತ್ರೀಯ ಮೊಮ್ಮಗಳೊಡನೆಯೂ ಲೈಂಗಿಕ ಸಂಬಂಧ ಮಾಡಬಾರದು. ಈ ಮೊಮ್ಮಗಳು ಈ ಸ್ತ್ರೀಯ ಮಗನ ಅಥವಾ ಮಗಳ ಮಗಳಾಗಿರಬಹುದು. ಆಕೆಯ ಮೊಮ್ಮಕ್ಕಳಾದ ಹೆಣ್ಣುಮಕ್ಕಳು ಆಕೆಯ ಹತ್ತಿರದ ಸಂಬಂಧಿಕರಾಗಿದ್ದಾರೆ. ಆಕೆಯೊಡನೆ ಲೈಂಗಿಕ ಸಂಬಂಧ ಮಾಡುವುದು ತಪ್ಪು.


“ಲೇವಿಯರು, ‘ತನ್ನ ಅತ್ತೆಯೊಡನೆ ಲೈಂಗಿಕ ಸಂಬಂಧವನ್ನಿಟ್ಟುಕೊಂಡವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


ಆ ಬಡಜನರ ಮುಖವನ್ನು ನೆಲದ ಮೇಲೆ ದೂಡಿ ಅವರ ಮೇಲೆ ನಡೆದರು. ಕಷ್ಟ ಅನುಭವಿಸುವ ಜನರ ಮೊರೆಯನ್ನು ಅವರು ಲಾಲಿಸದೆ ಹೋದರು. ತಂದೆಗಳೂ ಗಂಡುಮಕ್ಕಳೂ ಒಬ್ಬ ತರುಣಿಯೊಂದಿಗೇ ಲೈಂಗಿಕ ಸಂಬಂಧವನ್ನಿಟ್ಟುಕೊಂಡರು. ನನ್ನ ಪವಿತ್ರನಾಮವನ್ನು ಹಾಳುಮಾಡಿದರು.


ಆಗ ನಾವು ನಾಶಪಡಿಸಬೇಕಾಗಿದ್ದ ವಸ್ತುಗಳನ್ನು ಇಟ್ಟುಕೊಂಡ ಮನುಷ್ಯನು ಸಿಕ್ಕಿಬೀಳುತ್ತಾನೆ. ಬಳಿಕ ಆ ಮನುಷ್ಯನು ಬೆಂಕಿಯಿಂದ ನಾಶವಾಗುವನು. ಅವನ ಎಲ್ಲಾ ಸ್ವತ್ತು ಅವನೊಂದಿಗೆ ನಾಶವಾಗುವುದು. ಆ ಮನುಷ್ಯನು ಯೆಹೋವನ ಆಜ್ಞೆಯನ್ನು ಮೀರಿದ್ದಾನೆ. ಇಸ್ರೇಲರಿಗೆ ಕೇಡನ್ನು ಬರಮಾಡಿದ್ದಾನೆ’” ಎಂದನು.


ಆಗ ಯೆಹೋಶುವನು ಅವನಿಗೆ, “ನೀನು ನಮಗೆ ಕೇಡನ್ನು ಬರಮಾಡಿರುವೆ! ಆದ್ದರಿಂದ ಯೆಹೋವನು ನಿನಗೂ ಕೇಡನ್ನು ಮಾಡಲಿ!” ಎಂದನು. ಆಗ ಜನರೆಲ್ಲರೂ ಕಲ್ಲುಗಳನ್ನು ತೂರಿ ಆಕಾನನನ್ನೂ ಅವನ ಕುಟುಂಬದವರನ್ನೂ ಕೊಂದರು ಮತ್ತು ಅವನ ಎಲ್ಲ ಸ್ವತ್ತನ್ನು ಸುಟ್ಟುಹಾಕಿದರು.


“ಯಾಜಕನ ಮಗಳು ವೇಶ್ಯೆಯಾಗಿದ್ದರೆ, ಅವಳು ತನ್ನ ಗೌರವವನ್ನು ಹಾಳುಮಾಡಿಕೊಂಡವಳೂ ತನ್ನ ತಂದೆಗೆ ಅವಮಾನವನ್ನು ಉಂಟುಮಾಡಿದವಳೂ ಆಗಿದ್ದಾಳೆ. ಅವಳನ್ನು ಸುಟ್ಟುಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು