Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:6 - ಪರಿಶುದ್ದ ಬೈಬಲ್‌

6 “ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಗೆ ಹೋಗುವ ಯಾವುದೇ ವ್ಯಕ್ತಿಯಾದರೂ ಸರಿಯೇ ಅವನಿಗೆ ನಾನು ವಿರುದ್ಧವಾಗಿರುವೆನು. ಆ ವ್ಯಕ್ತಿ ನನಗೆ ಅಪನಂಬಿಗಸ್ತನಾಗಿದ್ದಾನೆ. ಆದ್ದರಿಂದ ನಾನು ಅವನನ್ನು ಅವನ ಕುಲದಿಂದ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “‘ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ, ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ಯಾರಾದರು ಭೂತ-ಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆಯನ್ನು ಕೇಳಿ, ದೇವದ್ರೋಹಿಯಾದರೆ ನಾನು ಅಂಥ ವ್ಯಕ್ತಿಗೆ ವಿಮುಖನಾಗಿ ಅವನನ್ನು ತನ್ನ ಜನತೆಯಿಂದ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ ‘ಇದಲ್ಲದೆ ಮಾಟಗಾರರನ್ನು ಮತ್ತು ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಅಂಥ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:6
17 ತಿಳಿವುಗಳ ಹೋಲಿಕೆ  

“ಸಲಹೆಗಾಗಿ, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಗೆ ಹೋಗಬೇಡಿರಿ. ಅವರು ನಿಮ್ಮನ್ನು ಕೇವಲ ಅಶುದ್ಧರನ್ನಾಗಿ ಮಾಡುವರು. ನಾನೇ ನಿಮ್ಮ ದೇವರಾದ ಯೆಹೋವನು!


ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”


“ಸತ್ತವರಲ್ಲಿ ವಿಚಾರಿಸುವವರು ಅಥವಾ ಬೇತಾಳಿಕರು, ಪುರುಷರಾಗಲಿ ಸ್ತ್ರೀಯರಾಗಲಿ ಆಗಿದ್ದರೂ, ಅವರಿಗೆ ಮರಣಶಿಕ್ಷೆಯಾಗಬೇಕು. ಜನರು ಅವರನ್ನು ಕಲ್ಲೆಸೆದು ಕೊಲ್ಲಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.”


ನಿನ್ನನ್ನು ತೊರೆದುಬಿಟ್ಟವರು ನಾಶವಾಗುವರು. ನಿನಗೆ ದ್ರೋಹಮಾಡಿದವರನ್ನೆಲ್ಲ ನೀನು ನಾಶಮಾಡುವೆ.


ನನ್ನ ಜನರು ಮರದ ತುಂಡುಗಳಿಂದ ಸಲಹೆಗಳನ್ನು ಕೇಳುವರು. ಆ ಮರದ ತುಂಡುಗಳು ಅವರಿಗೆ ಉತ್ತರಿಸುವವು ಎಂದು ಅವರು ನೆನಸುತ್ತಾರೆ. ಯಾಕೆಂದರೆ, ವೇಶ್ಯೆಯರಂತೆ ಅವರು ಆ ಸುಳ್ಳು ದೇವರುಗಳನ್ನು ಹಿಂದಟ್ಟಿಕೊಂಡು ಹೋಗುವರು. ಅವರು ತಮ್ಮ ದೇವರುಗಳನ್ನು ಬಿಟ್ಟು ವೇಶ್ಯೆಯರಂತೆ ವರ್ತಿಸುತ್ತಾರೆ.


ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನ್ನನ್ನು ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನ್ನು ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನ್ನು ತಾವೇ ದ್ವೇಷಿಸುವರು. ಹಿಂದಿನ ಕಾಲದಲ್ಲಿ ಅವರು ನನ್ನಿಂದ ದೂರವಾಗಿ ನನ್ನನ್ನು ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನ್ನು ಬಿಟ್ಟು ಬೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನ್ನೂ ಅನೇಕ ಅಸಹ್ಯಕರವಾದ ಕಾರ್ಯಗಳನ್ನು ಮಾಡಿದರು.


ಈ ಗೊಂಡೆಗಳನ್ನು ನೀವು ನೋಡುವಾಗ, ಯೆಹೋವನು ನಿಮಗೆ ಕೊಟ್ಟ ಅಪ್ಪಣೆಗಳನ್ನೆಲ್ಲ ಜ್ಞಾಪಕಮಾಡಿಕೊಳ್ಳಬೇಕು ಮತ್ತು ಅವುಗಳಿಗೆ ವಿಧೇಯರಾಗಬೇಕು. ನೀವು ನಿಮ್ಮ ಮನಸ್ಸಿಗೆ ಮತ್ತು ಕಣ್ಣಿಗೆ ತೋರಿದ ಪ್ರಕಾರ ನಡೆಯದೆ ನಂಬಿಗಸ್ತರಾಗಿರಬೇಕು.


“ರಕ್ತಸಹಿತವಾದ ಮಾಂಸವನ್ನು ನೀವು ತಿನ್ನಬಾರದು. “ನೀವು ಕಣಿ ಹೇಳಬಾರದು; ಮಂತ್ರತಂತ್ರಗಳನ್ನು ಮಾಡಬಾರದು.


ಒಂದು ಸಲ, ನಾವು ಪ್ರಾರ್ಥನಾಸ್ಥಳಕ್ಕೆ ಹೋಗುತ್ತಿದ್ದಾಗ ಒಂದು ಸಂಗತಿ ಸಂಭವಿಸಿತು. ದಾಸಿಯೊಬ್ಬಳು ನಮ್ಮನ್ನು ಎದುರುಗೊಂಡಳು. ಆಕೆಯಲ್ಲಿ ವಿಶೇಷವಾದ ಆತ್ಮವಿತ್ತು. ಆ ಆತ್ಮದ ಶಕ್ತಿಯಿಂದ ಅವಳು ಮುಂದೆ ಸಂಭವಿಸುವ ಸಂಗತಿಗಳ ಬಗ್ಗೆ ಹೇಳುತ್ತಿದ್ದಳು. ಇದರ ಮೂಲಕವಾಗಿ ಆಕೆ ತನ್ನ ಯಜಮಾನರಿಗೆ ಬಹಳ ಹಣವನ್ನು ಗಳಿಸಿ ಕೊಡುತ್ತಿದ್ದಳು.


“ಮಾಟಗಾರ್ತಿಯನ್ನು ನೀವು ಜೀವಸಹಿತ ಉಳಿಸಬಾರದು.


“ರಕ್ತವನ್ನು ತಿನ್ನುವ ಪ್ರತಿಯೊಬ್ಬನಿಗೂ ನಾನು ವಿರುದ್ಧವಾಗಿರುವೆನು. ಅವನು ನಿಮ್ಮ ಮಧ್ಯದಲ್ಲಿ ವಾಸವಾಗಿರುವ ಇಸ್ರೇಲನಾಗಲಿ ಪರದೇಶಸ್ಥನಾಗಲಿ ಆಗಿರಬಹುದು. ನಾನು ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕುವೆನು.


ನಾನು ಅವನಿಗೂ ಅವನ ಕುಟುಂಬಕ್ಕೂ ವಿರುದ್ಧನಾಗಿರುವೆನು; ನಾನು ಅವನನ್ನು ಅವನ ಜನರಿಂದ ಬೇರ್ಪಡಿಸುವೆನು. ಮೊಲೆಕನೊಡನೆ ಸೂಳೆತನ ಮಾಡುವ ಅವನನ್ನೂ ಅವನ ಹಿಂಬಾಲಕರನ್ನೂ ಅವರ ಜನರಿಂದ ಬೇರ್ಪಡಿಸುವೆನು.


“ಆದ್ದರಿಂದ ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ನಿಮಗೆ ಭಯಾನಕವಾದ ಕೇಡನ್ನು ಉಂಟುಮಾಡಬೇಕೆಂದು ನಾನು ನಿಶ್ಚಯ ಮಾಡಿದ್ದೇನೆ. ನಾನು ಯೆಹೂದದ ಇಡೀ ಕುಲವನ್ನು ನಾಶಮಾಡುವೆನು.


ತಂದೆಯು ತನ್ನ ಮಗಳನ್ನು ಅವನಿಗೆ ಕೊಡಲು ನಿರಾಕರಿಸಿದರೂ ಅವನು ತೆರವನ್ನು ಕೊಡಬೇಕು. ಅವನು ಅವಳಿಗೋಸ್ಕರ ಪೂರ್ಣ ತೆರವನ್ನು ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು