Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:1 - ಪರಿಶುದ್ದ ಬೈಬಲ್‌

1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಯಾಜಕರಾದ ಆರೋನನ ಮಕ್ಕಳಿಗೆ ಈ ಸಂಗತಿಗಳನ್ನು ಹೇಳು: ಯಾಜಕನು ಸತ್ತ ವ್ಯಕ್ತಿಯನ್ನು ಮುಟ್ಟಿ ತನ್ನನ್ನು ಅಶುದ್ಧಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮೋಶೆಯೊಂದಿಗೆ ಮಾತನಾಡಿ, “ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು, ‘ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆರೋನನ ಮಕ್ಕಳಾದ ಯಾಜಕರಿಗೆ ಈ ಕೆಳಕಂಡಂತೆ ಆಜ್ಞಾಪಿಸಬೇಕೆಂದು ಸರ್ವೇಶ್ವರ ಸ್ವಾಮಿ ಮೋಶೆಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು - ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ, ಅವರಿಗೆ ಹೀಗೆ ಹೇಳು: ಸತ್ತವರ ದೇಹವನ್ನು ಮುಟ್ಟುವುದರಿಂದ ಯಾವ ಯಾಜಕನೂ ಅಪವಿತ್ರನಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:1
12 ತಿಳಿವುಗಳ ಹೋಲಿಕೆ  

ಸತ್ತ ಹೆಣದ ಬಳಿಗೆ ಹೋಗಿ ಅವರು ತಮ್ಮನ್ನು ಅಪವಿತ್ರ ಮಾಡಿಕೊಳ್ಳಬಾರದು. ಆದರೆ ಸತ್ತವರು ತಮ್ಮ ಹೆತ್ತವರಾಗಲಿ ಮಕ್ಕಳಾಗಲಿ ಅಥವಾ ಮದುವೆಯಾಗದಿದ್ದ ಸಹೋದರ ಸಹೋದರಿಯರಾಗಲಿ ಆಗಿದ್ದಲ್ಲಿ ಅವರು ತಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಕಾಗುತ್ತದೆ.


“ಯಾವನಾದರೂ ಗುಡಾರದಲ್ಲಿ ಸತ್ತರೆ ಅನುಸರಿಸಬೇಕಾದ ನಿಯಮವಿದು: ಒಬ್ಬನು ಗುಡಾರದಲ್ಲಿ ಸತ್ತರೆ, ಆ ಗುಡಾರವನ್ನು ಪ್ರವೇಶಿಸುವ ಪ್ರತಿಯೊಬ್ಬನು ಮತ್ತು ಆ ಗುಡಾರದಲ್ಲಿರುವ ಪ್ರತಿಯೊಬ್ಬನು ಅಶುದ್ಧನಾಗುವನು. ಅವರು ಏಳು ದಿನಗಳವರೆಗೆ ಅಶುದ್ಧರಾಗಿರುವರು.


ಅವನು ಹೆಣವನ್ನು ಮುಟ್ಟಿ ತನ್ನನ್ನು ಅಶುದ್ಧನನ್ನಾಗಿ ಮಾಡಿಕೊಳ್ಳಬಾರದು. ಅದು ಅವನ ತಂದೆಯ ಶವವಾಗಿದ್ದರೂ ಸರಿ, ಅಥವಾ ತಾಯಿಯ ಶವವಾಗಿದ್ದರೂ ಸರಿ, ಅವನು ಅದರ ಬಳಿಗೆ ಹೋಗಬಾರದು.


ಸತ್ತವರನ್ನು ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಿಮ್ಮ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಚುಚ್ಚಿಸಿಕೊಳ್ಳಬಾರದು. ನಾನೇ ಯೆಹೋವನು!


ಆಗ ನೀವು ನಾನು ಈ ಆಜ್ಞೆಯನ್ನು ಯಾಕೆ ಕೊಡುತ್ತಿದ್ದೇನೆಂದು ಅರಿಯುವಿರಿ. ಲೇವಿಯರೊಂದಿಗೆ ನಾನು ಮಾಡಿರುವ ಒಡಂಬಡಿಕೆಯು ಮುಂದುವರಿಯುವ ಹಾಗೆ ನಾನು ಈ ಸಂಗತಿಗಳನ್ನು ನಿಮಗೆ ತಿಳಿಸುತ್ತಿದ್ದೇನೆ.” ಸೇನಾಧೀಶ್ವರನಾದ ಯೆಹೋವನು ಈ ಮಾತುಗಳನ್ನು ಅಂದಿದ್ದಾನೆ.


“ಯಾಜಕರೇ, ನನ್ನ ಮಾತನ್ನು ಕೇಳಿರಿ. ನಾನು ಹೇಳುವುದಕ್ಕೆ ಗಮನ ಕೊಡಿರಿ. ಈ ನಿಯಮಗಳನ್ನು ನಿಮಗಾಗಿ ಹೇಳುತ್ತಿದ್ದೇನೆ.


“ಯಾಜಕರೇ, ಇಸ್ರೇಲ್ ಜನಾಂಗವೇ, ಅರಸನ ಪರಿವಾರದವರೇ, ನನ್ನ ಮಾತುಗಳಿಗೆ ಕಿವಿಗೊಡಿರಿ. ಯಾಕೆಂದರೆ ನಿಮಗೆ ನ್ಯಾಯತೀರ್ಪು ಬಂದಿದೆ. “ಮಿಚ್ಪದಲ್ಲಿ ನೀವು ಉರುಲಿನಂತೆ ಇದ್ದಿರಿ. ತಾಬೋರಿನಲ್ಲಿ ನೆಲದ ಮೇಲೆ ಹರಡಿಸಿದ್ದ ಬಲೆಯಂತೆ ಇದ್ದಿರಿ.


ಹೊರಗೆ ಹೋಗಿರುವವನು ಯುದ್ಧದಲ್ಲಿ ಸತ್ತವನ ಶವವನ್ನಾಗಲಿ ಸಹಜವಾಗಿ ಸತ್ತವನ ಶವವನ್ನಾಗಲಿ ಮನುಷ್ಯನ ಮೂಳೆಯನ್ನಾಗಲಿ ಅಥವಾ ಸಮಾಧಿಯನ್ನಾಗಲಿ ಮುಟ್ಟಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರವನು.


“ಭಯಂಕರವಾದ ಚರ್ಮರೋಗವುಳ್ಳವರನ್ನೂ ದೈಹಿಕಸ್ರಾವವುಳ್ಳವರನ್ನೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನೂ ಪಾಳೆಯದಿಂದ ಹೊರಗಿಡಬೇಕೆಂದು ಇಸ್ರೇಲರಿಗೆ ಆಜ್ಞಾಪಿಸು.


“ಅವನು ಯೆಹೋವನಿಗೋಸ್ಕರ ಹರಕೆ ಮಾಡಿಕೊಂಡ ಕಾಲವೆಲ್ಲಾ, ಯಾವ ಶವದ ಬಳಿಗೆ ಹೋಗಕೂಡದು.


ಯಾವನಾದರೂ ಮನುಷ್ಯನ ಶವವನ್ನು ಮುಟ್ಟಿದರೆ, ಏಳು ದಿನಗಳವರೆಗೆ ಅಶುದ್ಧನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು