Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:23 - ಪರಿಶುದ್ದ ಬೈಬಲ್‌

23 ಆದರೆ ಅವನು ತೆರೆಯ ಬಳಿಗೆ ಹೋಗಬಾರದು; ಅವನು ಯಜ್ಞವೇದಿಕೆಯ ಬಳಿಗೆ ಹೋಗಬಾರದು. ಯಾಕೆಂದರೆ ಅವನು ಅಂಗವಿಕಲನಾಗಿದ್ದಾನೆ. ಅವನು ನನ್ನ ಪರಿಶುದ್ಧ ಸ್ಥಳಗಳನ್ನು ಅಶುದ್ಧಗೊಳಿಸಬಾರದು. ಯೆಹೋವನಾದ ನಾನೇ ಆ ಸ್ಥಳಗಳನ್ನು ಪರಿಶುದ್ಧಗೊಳಿಸಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದರೆ ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಬಲಿಪೀಠದ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವನಿಗೆ ಕಳಂಕವಿರುವದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಅವನು ನ್ಯೂನತೆವುಳ್ಳವನಾದ್ದರಿಂದ ತೆರೆಯ ಒಳಗೆ ಹೋಗಬಾರದು ಹಾಗು ಯಜ್ಞವೇದಿಯ ಬಳಿಗೆ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು. ಏಕೆಂದರೆ ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:23
13 ತಿಳಿವುಗಳ ಹೋಲಿಕೆ  

ಪ್ರಧಾನಯಾಜಕನು ದೇವರ ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗೆ ಹೋದರೆ ಅಶುದ್ಧನಾಗುವನು. ಅಲ್ಲದೆ ಅವನಿಂದ ದೇವರ ಪರಿಶುದ್ಧಸ್ಥಳವು ಅಶುದ್ಧವಾಗುವುದು. ಅಭಿಷೇಕತೈಲವು ಪ್ರಧಾನಯಾಜಕನ ತಲೆಯ ಮೇಲೆ ಹೊಯ್ಯಲ್ಪಟ್ಟಿದೆ. ಇದು ಅವನನ್ನು ಇತರ ಜನರಿಂದ ಪ್ರತ್ಯೇಕಗೊಳಿಸಿದೆ. ನಾನೇ ಯೆಹೋವನು!


“ಆದ್ದರಿಂದ ಅಶುದ್ಧತ್ವದ ಕುರಿತು ನೀವು ಇಸ್ರೇಲರನ್ನು ಎಚ್ಚರಿಸಬೇಕು. ನೀವು ಜನರನ್ನು ಎಚ್ಚರಿಸದಿದ್ದರೆ ಅವರು ನನ್ನ ಪವಿತ್ರ ಗುಡಾರವನ್ನು ಅಶುದ್ಧಮಾಡಿ ಸಾವಿಗೀಡಾಗುವರು.”


ನೀವು ಕುರುಡರಾದ ಮೂರ್ಖರು! ಯಾವುದು ಹೆಚ್ಚಿನದು? ಚಿನ್ನವೋ ಅಥವಾ ದೇವಾಲಯವೋ? ಆ ಚಿನ್ನವು ಪರಿಶುದ್ಧಗೊಂಡದ್ದು ದೇವಾಲಯದಿಂದಲೇ. ಆದ್ದರಿಂದ ದೇವಾಲಯವೇ ಹೆಚ್ಚಿನದು.


ಅವನು ಯಾಜಕರ ಕುಟುಂಬದವನಾಗಿರುವುದರಿಂದ ಪರಿಶುದ್ಧ ರೊಟ್ಟಿಯನ್ನೂ ಮಹಾಪರಿಶುದ್ಧ ರೊಟ್ಟಿಯನ್ನೂ ತಿನ್ನಬಹುದು.


ಹೀಗೆ ಮೋಶೆ ಈ ಸಂಗತಿಗಳನ್ನು ಆರೋನನಿಗೂ ಅವನ ಪುತ್ರರಿಗೂ ಮತ್ತು ಇಸ್ರೇಲರೆಲ್ಲರಿಗೂ ಹೇಳಿದನು.


“ಇಸ್ರೇಲರಿಗೆ ಹೀಗೆ ಹೇಳು: ನಾನೇ ನಿಮ್ಮ ದೇವರಾದ ಯೆಹೋವನು ನಾನು ಪರಿಶುದ್ಧನಾಗಿರುವಂತೆಯೇ ನೀವೂ ಪರಿಶುದ್ಧರಾಗಿರಬೇಕು!


“ನೀವು ನನಗೆ ವಿಶೇಷ ಜನರಾಗಿದ್ದೀರಿ. ನಿಮ್ಮನ್ನು ಪವಿತ್ರರನ್ನಾಗಿ ಮಾಡಿಕೊಳ್ಳಿರಿ. ಯಾಕೆಂದರೆ ನಾನೇ ನಿಮ್ಮ ದೇವರಾದ ಯೆಹೋವನು. ನಾನು ಪರಿಶುದ್ಧನಾಗಿದ್ದೇನೆ.


ಅವರು ತಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕು. ಅವರು ದೇವರ ಹೆಸರಿಗೆ ಗೌರವ ತೋರಿಸಬೇಕು. ಯಾಕೆಂದರೆ ಅವರು ಅಗ್ನಿಯ ಮೂಲಕ ಅರ್ಪಿಸಿದ ರೊಟ್ಟಿಯನ್ನು ಮತ್ತು ಕಾಣಿಕೆಗಳನ್ನು ಯೆಹೋವನಿಗೆ ತೆಗೆದುಕೊಂಡು ಹೋಗುತ್ತಾರೆ. ಆದ್ದರಿಂದ ಅವರು ಪವಿತ್ರರಾಗಿರಬೇಕು.


ಯಾಜಕರು ಅವುಗಳನ್ನು ಪರಿಶುದ್ಧವಾದವುಗಳೆಂದು ಪರಿಗಣಿಸದೆ ನೈವೇದ್ಯ ಪದಾರ್ಥಗಳನ್ನು ತಿಂದರೆ ಪಾಪಕ್ಕೆ ಒಳಗಾಗುವರು. ಯೆಹೋವನಾದ ನಾನೇ ಅವುಗಳನ್ನು ಪವಿತ್ರಗೊಳಿಸಿದ್ದೇನೆ.”


ನನ್ನ ದೇವರೇ, ಆ ಮನುಷ್ಯರನ್ನು ಶಿಕ್ಷಿಸು. ಅವರು ಯಾಜಕತ್ವವನ್ನು ಹೊಲಸು ಮಾಡಿದ್ದಾರೆ. ಅದನ್ನು ಅವರು ಸಾಮಾನ್ಯವೆಂದೆಣಿಸಿದ್ದಾರೆ. ಯಾಜಕರೊಂದಿಗೆ ಮತ್ತು ಲೇವಿಯರೊಂದಿಗೆ ನೀನು ಮಾಡಿದ ಒಡಂಬಡಿಕೆಯನ್ನು ಅವರು ತಿರಸ್ಕರಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು