Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:19 - ಪರಿಶುದ್ದ ಬೈಬಲ್‌

19-20 ಅದು ಸ್ವೀಕೃತವಾಗುವಂತೆ ಪೂರ್ಣಾಂಗವಾದ ಹೋರಿಯನ್ನಾಗಲಿ ಟಗರನ್ನಾಗಲಿ ಹೋತವನ್ನಾಗಲಿ ಅರ್ಪಿಸಬೇಕು. ಅಂಗದೋಷವುಳ್ಳ ಯಾವುದನ್ನೂ ನೀವು ಸಮರ್ಪಿಸಬಾರದು. ಅಂಗದೋಷವುಳ್ಳವುಗಳನ್ನು ನಾನು ಸ್ವೀಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದು ಸಮರ್ಪಕವಾಗುವಂತೆ ದನಗಳಿಂದಾಗಲಿ ಅಥವಾ ಆಡು ಮತ್ತು ಕುರಿಗಳಿಂದಾಗಲಿ ಪೂರ್ಣಾಂಗವಾದ ಗಂಡನ್ನೇ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದು ಸ್ವೀಕೃತವಾಗಬೇಕಾದರೆ ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು; ಹೋರಿ, ಟಗರು ಅಥವಾ ಹೋತವೇ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅದು ಸಮರ್ಪಕವಾಗುವಂತೆ ದನಗಳಿಂದಾಗಲಿ ಆಡುಕುರಿಗಳಿಂದಾಗಲಿ ಪೂರ್ಣಾಂಗವಾದ ಗಂಡನ್ನೇ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀವು ನಿಮ್ಮ ಸ್ವಯಿಚ್ಛೆಯಿಂದ ಕಳಂಕರಹಿತವಾದ ಗಂಡು ಪಶು, ಕುರಿ ಅಥವಾ ಮೇಕೆಯನ್ನೇ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:19
21 ತಿಳಿವುಗಳ ಹೋಲಿಕೆ  

“ಒಬ್ಬನು ಕುರಿಯನ್ನಾಗಲಿ ಆಡನ್ನಾಗಲಿ ಸರ್ವಾಂಗಹೋಮವಾಗಿ ಅರ್ಪಿಸುವಾಗ, ಆ ಪ್ರಾಣಿಯು ಯಾವ ದೋಷವಿಲ್ಲದ ಗಂಡಾಗಿರಬೇಕು.


“ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.


ನಿಮ್ಮ ಪಾಪಗಳಿಗಾಗಿ ಕ್ರಿಸ್ತನು ಒಂದೇಸಾರಿ ಬಾಧೆ ಅನುಭವಿಸಿ ಸತ್ತನು. ನೀತಿವಂತನಾಗಿದ್ದ ಆತನು ಅಪರಾಧಿಗಳಿಗಾಗಿ ಪ್ರಾಣಕೊಟ್ಟನು. ನಿಮ್ಮೆಲ್ಲರನ್ನು ದೇವರ ಬಳಿಗೆ ನಡೆಸುವುದಕ್ಕಾಗಿ ಆತನು ಹೀಗೆ ಮಾಡಿದನು. ಆತನ ದೇಹವು ಕೊಲ್ಲಲ್ಪಟ್ಟಿತು, ಆದರೆ ಆತನು ಆತ್ಮಸಂಬಂಧದಲ್ಲಿ ಮತ್ತೆ ಜೀವಂತನಾದನು.


ಪೂರ್ಣಾಂಗವಾದ ಮತ್ತು ಪರಿಶುದ್ಧವಾದ ಕುರಿಮರಿಯಾದ ಕ್ರಿಸ್ತನ ಅಮೂಲ್ಯವಾದ ರಕ್ತದಿಂದ ನಿಮಗೆ ಬಿಡುಗಡೆಯಾಯಿತು.


ಮಹಿಮಾಪೂರ್ಣಳಾದ ಕನ್ನಿಕೆಯೋ ಎಂಬಂತಿರುವ ಸಭೆಯನ್ನು ತನಗೇ ಕೊಡಬೇಕೆಂದು ಆತನು ಪ್ರಾಣಕೊಟ್ಟನು. ಸಭೆಯು ದೋಷವಿಲ್ಲದೆ ಶುದ್ಧವಾಗಿರಬೇಕೆಂದು ಮತ್ತು ದುಷ್ಟತ್ವವಾಗಲಿ ಪಾಪವಾಗಲಿ ಅಥವಾ ಬೇರೆ ಯಾವುದೇ ತಪ್ಪಾಗಲಿ ಸಭೆಯಲ್ಲಿರಕೂಡದೆಂದು ಆತನು ಪ್ರಾಣಕೊಟ್ಟನು.


ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


ಪಿಲಾತನು ಮತ್ತೆ ಹೊರಗೆ ಬಂದು, ಯೆಹೂದ್ಯರಿಗೆ, “ನೋಡಿ! ನಾನು ಯೇಸುವನ್ನು ನಿಮ್ಮ ಬಳಿಗೆ ತರುತ್ತಿದ್ದೇನೆ. ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ ಎಂಬುದು ನಿಮಗೆ ತಿಳಿದಿರಲಿ” ಎಂದು ಹೇಳಿದನು.


ಅಲ್ಲಿದ್ದ ಶತಾಧಿಪತಿ ನಡೆದದ್ದನ್ನು ನೋಡಿ, “ಈ ಮನುಷ್ಯನು ಒಳ್ಳೆಯವನೆಂದು ನನಗೆ ಗೊತ್ತಿತ್ತು” ಎಂದು ಹೇಳಿ ದೇವರನ್ನು ಸ್ತುತಿಸಿದನು.


ನೀನೂ ನಾನೂ ಅಪರಾಧಿಗಳಾಗಿದ್ದೇವೆ. ನಾವು ತಪ್ಪು ಮಾಡಿದ್ದರಿಂದ ಶಿಕ್ಷಿಸಲ್ಪಡಬೇಕು. ಆದರೆ ಈ ಮನುಷ್ಯನು (ಯೇಸು) ಯಾವ ತಪ್ಪನ್ನೂ ಮಾಡಲಿಲ್ಲ!” ಎಂದು ಹೇಳಿದನು.


ಅವರಿಗೆ, “ನೀವು ಈ ಮನುಷ್ಯನನ್ನು (ಯೇಸುವನ್ನು) ನನ್ನ ಬಳಿಗೆ ಕರೆದುಕೊಂಡು ಬಂದಿರಿ. ಇವನು ಜನರನ್ನು ತಪ್ಪುದಾರಿಗೆ ನಡೆಸುತ್ತಿದ್ದಾನೆ ಎಂದು ಹೇಳಿದಿರಿ. ಆದರೆ ನಾನು ನಿಮ್ಮೆಲ್ಲರ ಮುಂದೆ ಇವನನ್ನು ವಿಚಾರಣೆ ಮಾಡಿದೆನು. ಆದರೆ ನಾನು ಇವನಲ್ಲಿ ಯಾವ ತಪ್ಪನ್ನೂ ಕಾಣಲಿಲ್ಲ. ನಿಮ್ಮ ದೋಷಾರೋಪಣೆಗಳು ಇವನಿಗೆ ಅನ್ವಯಿಸುವುದಿಲ್ಲ.


ಯೇಸುವನ್ನು ಕಾಯುತ್ತಿದ್ದ ಸೇನಾಧಿಪತಿ ಮತ್ತು ಸೈನಿಕರು ಭೂಕಂಪವನ್ನು ಮತ್ತು ನಡೆದದ್ದನ್ನು ಕಂಡು ಬಹಳವಾಗಿ ಹೆದರಿ, “ಈತನು ನಿಜವಾಗಿಯೂ ದೇವರ ಮಗನಾಗಿದ್ದನು!” ಎಂದು ಹೇಳಿದರು.


ಜನರ ಮನಸ್ಸನ್ನು ಬದಲಾಯಿಸಲು ತನಗೆ ಸಾಧ್ಯವಿಲ್ಲವೆಂದೂ ಜನರು ಗಲಭೆ ಆರಂಭಿಸಲಿದ್ದಾರೆಂದೂ ತಿಳಿದುಕೊಂಡ ಪಿಲಾತನು ಸ್ವಲ್ಪ ನೀರನ್ನು ತೆಗೆದುಕೊಂಡು ಜನರೆಲ್ಲರ ಎದುರಿನಲ್ಲಿ ತನ್ನ ಕೈಗಳನ್ನು ತೊಳೆದುಕೊಳ್ಳುತ್ತಾ, “ಈ ಮನುಷ್ಯನ ಸಾವಿಗೆ ನಾನು ಜವಾಬ್ದಾರನಲ್ಲ. ಆತನನ್ನು ಶಿಲುಬೆಗೇರಿಸುತ್ತಿರುವವರು ನೀವೇ!” ಎಂದು ಹೇಳಿದನು.


ಪಿಲಾತನು ನ್ಯಾಯಸ್ಥಾನದಲ್ಲಿ ಕುಳಿತುಕೊಂಡಿದ್ದಾಗ ಅವನ ಪತ್ನಿಯು ಒಂದು ಸಂದೇಶವನ್ನು ಕಳುಹಿಸಿದ್ದಳು. “ಆ ಮನುಷ್ಯನಿಗೆ ಏನನ್ನೂ ಮಾಡಬೇಡ. ಅವನು ತಪ್ಪಿತಸ್ಥನಲ್ಲ. ಆತನ ನಿಮಿತ್ತ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ” ಎಂಬುದೇ ಆ ಸಂದೇಶ.


“ನಾನು ಪಾಪ ಮಾಡಿದೆ, ನಿರಪರಾಧಿಯನ್ನು ಕೊಲ್ಲಲು ನಿಮಗೆ ಒಪ್ಪಿಸಿಬಿಟ್ಟೆ” ಎಂದು ಹೇಳಿದನು. ಯೆಹೂದ್ಯ ನಾಯಕರು, “ಅದಕ್ಕೆ ನಾವೇನು ಮಾಡೋಣ! ಅದು ನಿನ್ನ ಸಮಸ್ಯೆ, ನಮ್ಮದಲ್ಲ!” ಎಂದು ಉತ್ತರಕೊಟ್ಟರು.


“ಆ ವ್ಯಕ್ತಿಯು ಕುರಿಮರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ತರುವುದಾದರೆ ಅದು ದೋಷವಿಲ್ಲದ ಹೆಣ್ಣು ಕುರಿಮರಿಯಾಗಿರಬೇಕು.


ಅದು ಒಂದು ವರ್ಷದ ಗಂಡು ಕುರಿಯಾಗಿರಬೇಕು ಅಥವಾ ಆಡಾಗಿರಬೇಕು. ಅಲ್ಲದೆ ಕಳಂಕ ರಹಿತವಾಗಿರಬೇಕು.


ಆದ್ದರಿಂದ ಆತನ ರಕ್ತವು ಖಚಿತವಾಗಿ ಅದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುತ್ತದೆ. ಆತನು ನಿತ್ಯಾತ್ಮನ ಮೂಲಕ ತನ್ನನ್ನು ತಾನೇ ದೇವರಿಗೆ ನಿಷ್ಕಳಂಕವಾದ ಯಜ್ಞವನ್ನಾಗಿ ಅರ್ಪಿಸಿಕೊಂಡನು. ಆತನ ರಕ್ತವು ನಮ್ಮನ್ನು ನಮ್ಮ ಕೆಟ್ಟಕಾರ್ಯಗಳಿಂದ ಪರಿಪೂರ್ಣವಾಗಿ ಬಿಡಿಸಿ ನಾವು ಜೀವಸ್ವರೂಪನಾದ ದೇವರನ್ನು ಆರಾಧಿಸಲು ಸಾಧ್ಯವಾಗುವಂತೆ ನಮ್ಮ ಹೃದಯವನ್ನೂ ಪರಿಶುದ್ಧಗೊಳಿಸುತ್ತದೆ.


ಯಾವ ಅಂಗವಿಕಲನೂ ಯಾಜಕನಾಗಿ ಸೇವೆಮಾಡಬಾರದು; ನನಗೆ ಯಜ್ಞಗಳನ್ನು ಅರ್ಪಿಸಬಾರದು. ಯಾಜಕರಾಗಿ ಸೇವೆ ಮಾಡಬಾರದವರು ಯಾರೆಂದರೆ: ಕುರುಡರು, ಕುಂಟರು, ತಮ್ಮ ಮುಖಗಳಲ್ಲಿ ಕೆಟ್ಟದಾದ ಗಾಯದ ಗುರುತುಗಳುಳ್ಳವರು, ಬಹಳ ಉದ್ದವಾದ ಕೈಕಾಲುಗಳುಳ್ಳವರು.


“ಆದರೆ ಆ ಚೊಚ್ಚಲು ಪ್ರಾಣಿಗಳು ಕುಂಟಾಗಿದ್ದರೆ, ಕುರುಡಾಗಿದ್ದರೆ ಅಥವಾ ಬೇರೆ ಯಾವ ಅಂಗವಿಕಲತೆಗೆ ಒಳಗಾಗಿದ್ದರೆ, ನಿಮ್ಮ ದೇವರಾದ ಯೆಹೋವನಿಗೆ ಅವುಗಳನ್ನು ಸಮರ್ಪಿಸಕೂಡದು.


“ಇಸ್ರೇಲರಿಗೆ ನೀನು ಹೇಳಬೇಕಾದದ್ದೇನೆಂದರೆ, ನೀವು ಯೆಹೋವನಿಗೆ ಯಜ್ಞವನ್ನು ಕಾಣಿಕೆಯಾಗಿ ಅರ್ಪಿಸುವುದಾದರೆ ನೀವು ಸಾಕಿದ ಪಶುಗಳನ್ನೇ ಅರ್ಪಿಸಬೇಕು. ಅದು ದನವಾಗಲಿ ಕುರಿಯಾಗಲಿ ಆಡಾಗಲಿ ಆಗಿರಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು