Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:22 - ಪರಿಶುದ್ದ ಬೈಬಲ್‌

22 ಕುರುಡಾದದ್ದನ್ನಾಗಲಿ ಮೂಳೆ ಮುರಿದುಕೊಂಡದ್ದನ್ನಾಗಲಿ ಕುಂಟಾದದ್ದನ್ನಾಗಲಿ ಸ್ರಾವವುಳ್ಳದ್ದನ್ನಾಗಲಿ ಕೆಟ್ಟದಾದ ಚರ್ಮರೋಗವುಳ್ಳದ್ದನ್ನಾಗಲಿ ನೀವು ಯೆಹೋವನಿಗೆ ಅರ್ಪಿಸಬಾರದು. ಯೆಹೋವನ ಯಜ್ಞವೇದಿಕೆಯ ಬೆಂಕಿಯಲ್ಲಿ ಅನಾರೋಗ್ಯವಾದ ಪ್ರಾಣಿಗಳನ್ನು ಅರ್ಪಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕುರುಡಾದದ್ದು, ಕುಂಟಾದದ್ದು, ಗಾಯವಾದದ್ದು, ಹುಣ್ಣುಳ್ಳದ್ದು, ಕಜ್ಜಿ ತುರಿಯುಳ್ಳದ್ದು ಇಂಥವುಗಳನ್ನು ಯೆಹೋವನಿಗೆ ಸಮರ್ಪಿಸಲೇಬಾರದು, ಯಜ್ಞವೇದಿಯ ಮೇಲೆ ಹೋಮ ಮಾಡಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಕುರುಡಾದುದು, ಹುಣ್ಣು, ಕಜ್ಜಿ, ತುರಿ ಉಳ್ಳದ್ದು ಇಂಥ ಪ್ರಾಣಿಗಳನ್ನು ಸರ್ವೇಶ್ವರನಿಗೆ ಸಮರ್ಪಿಸಬಾರದು; ಬಲಿಪೀಠದ ಮೇಲೆ ಹೋಮಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕುರುಡಾದದ್ದು ಕುಂಟಾದದ್ದು ಗಾಯವಾದದ್ದು ಹುಣ್ಣುಳ್ಳದ್ದು ಕಜ್ಜಿ ತುರಿಯುಳ್ಳದ್ದು ಇಂಥವುಗಳನ್ನು ಯೆಹೋವನಿಗೆ ಸಮರ್ಪಿಸಲೂಬಾರದು, ಯಜ್ಞವೇದಿಯ ಮೇಲೆ ಹೋಮಮಾಡಲೂ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಕುರುಡಾದದ್ದು, ಮುರಿದದ್ದು, ಅಂಗಹೀನವಾದದ್ದು, ಬೊಕ್ಕೆಯುಳ್ಳದ್ದು, ಕಜ್ಜಿ ತುರಿಯುಳ್ಳದ್ದು, ಇವುಗಳನ್ನು ನೀವು ಯೆಹೋವ ದೇವರಿಗೆ ಸಮರ್ಪಿಸಲೂಬಾರದು ಮತ್ತು ಅವುಗಳನ್ನು ಬಲಿಪೀಠದ ಮೇಲೆ ದಹನಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:22
9 ತಿಳಿವುಗಳ ಹೋಲಿಕೆ  

ನೀವು ಕುರುಡು ಪ್ರಾಣಿಗಳನ್ನು ಯಜ್ಞಕ್ಕಾಗಿ ತರುತ್ತೀರಿ. ಅದು ತಪ್ಪಲ್ಲವೇ? ಕುಂಟು, ರೋಗಪೀಡಿತ ಪಶುಗಳನ್ನು ಯಜ್ಞಾರ್ಪಣೆಗಾಗಿ ತರುತ್ತೀರಿ. ಅದು ತಪ್ಪಲ್ಲವೇ? ನಿಮ್ಮ ರಾಜ್ಯಪಾಲನಿಗೆ ನೀವು ಅಂಥಾ ಪ್ರಾಣಿಗಳನ್ನು ಕಾಣಿಕೆಯಾಗಿ ಕೊಟ್ಟರೆ ಅವನು ಅದನ್ನು ಸ್ವೀಕರಿಸುವನೋ? ಇಲ್ಲ, ಅಂಥಾ ಕಾಣಿಕೆಯನ್ನು ಅವನು ಸ್ವೀಕರಿಸುವದೇ ಇಲ್ಲ” ಸರ್ವಶಕ್ತನಾದ ಯೆಹೋವನು ಇದನ್ನು ಹೇಳುತ್ತಿದ್ದಾನೆ.


ಬಳಿಕ ಆರೋನನ ಪುತ್ರರು ಕೊಬ್ಬನ್ನು ವೇದಿಕೆಗೆ ತಂದು ಅದನ್ನು ಬೆಂಕಿಯಲ್ಲಿ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮದ ಮೇಲಿಡಬೇಕು. ಅದು ಅಗ್ನಿಯ ಮೂಲಕ ಅರ್ಪಿಸುವ ಹೋಮವಾಗಿರುತ್ತದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ಆ ಯಜ್ಞಪಶುವಿನ ವಪೆಯನ್ನೂ ಕರುಳುಗಳ ಮೇಲಿನ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ತೆಗೆದು ಪಿತ್ತಕೋಶದ ಹತ್ತಿರ ಮೂತ್ರಪಿಂಡಗಳವರೆಗೆ ಇರುವ ಕೊಬ್ಬನ್ನೂ ತೆಗೆದು ಯೆಹೋವನಿಗೆ ಹೋಮಮಾಡಬೇಕು.


ಯಾಜಕನು ಪಶುವಿನ ಕಾಲುಗಳನ್ನೂ ಒಳಗಿನ ಭಾಗಗಳನ್ನೂ ನೀರಿನಿಂದ ತೊಳೆಯಬೇಕು. ಬಳಿಕ ಯಾಜಕನು ಪಶುವಿನ ಈ ಎಲ್ಲಾ ಭಾಗಗಳನ್ನೂ ವೇದಿಕೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಸಮರ್ಪಿಸಲ್ಪಟ್ಟ ಸರ್ವಾಂಗಹೋಮವಾಗಿರುತ್ತದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ಯಾಜಕನು ಪಶುವಿನ ಕಾಲುಗಳನ್ನು ಮತ್ತು ಒಳಗಿನ ಭಾಗಗಳನ್ನು ನೀರಿನಿಂದ ತೊಳೆದು ಈ ಎಲ್ಲಾ ಭಾಗಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಈ ಸರ್ವಾಂಗಹೋಮದ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


“ಒಬ್ಬನು ಸಮಾಧಾನಯಜ್ಞವನ್ನು ಹರಕೆಯಾಗಿ ಅಥವಾ ಕಾಣಿಕೆಯಾಗಿ ಅರ್ಪಿಸುವಾಗ ಹೋರಿಯನ್ನಾಗಲಿ ಟಗರನ್ನಾಗಲಿ ಅರ್ಪಿಸಬೇಕು; ಅದು ಅಂಗದೋಷವಿಲ್ಲದ್ದಾಗಿರಬೇಕು; ಆರೋಗ್ಯವುಳ್ಳದ್ದಾಗಿರಬೇಕು. ಆಗ ಅದು ಸ್ವೀಕೃತವಾಗುವುದು.


“ಕಾಲು ಉದ್ದವಾಗಿರುವ ಅಥವಾ ಮೊಂಡಾಗಿರುವ ಹೋರಿಯನ್ನಾಗಲಿ ಕುರಿಯನ್ನಾಗಲಿ ಒಬ್ಬನು ಯೆಹೋವನಿಗೆ ಕಾಣಿಕೆಯಾಗಿ ಕೊಡಲು ಬಯಸಿದರೆ, ಆಗ ಅದು ಸ್ವೀಕೃತವಾಗುವುದು. ಆದರೆ, ಅವನು ಮಾಡಿದ ವಿಶೇಷ ಹರಕೆಯಾಗಿ ಅದು ಸ್ವೀಕೃತವಾಗುವುದಿಲ್ಲ. ಅದು ಸ್ವಇಚ್ಛೆಯಿಂದ ಅರ್ಪಿಸಿದ ಕಾಣಿಕೆಯಾಗಿ ಸ್ವೀಕರಿಸಲ್ಪಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು