Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:25 - ಪರಿಶುದ್ದ ಬೈಬಲ್‌

25 “ಪರದೇಶಸ್ಥರಿಂದ ಯೆಹೋವನಿಗೆ ಬಲಿಪಶುಗಳನ್ನು ತೆಗೆದುಕೊಳ್ಳಬಾರದು. ಯಾಕೆಂದರೆ ಆ ಪಶುಗಳಿಗೆ ಒಂದುವೇಳೆ ಪೆಟ್ಟಾಗಿರಬಹುದು. ಅವುಗಳಲ್ಲಿ ಏನಾದರೂ ದೋಷವಿರಬಹುದು. ಅವುಗಳು ಸಮರ್ಪಕವಾಗುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅನ್ಯದೇಶದವನಿಂದ ತೆಗೆದುಕೊಂಡ ಅಂತಹ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದುದಲ್ಲ; ಆದಕಾರಣ ಸಮರ್ಪಣೆ ಆಗುವುದಿಲ್ಲ’” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅನ್ಯದೇಶದವನಿಂದ ತೆಗೆದುಕೊಂಡ ಅಂಥ ಪ್ರಾಣಿಯನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು. ಅದು ಕುಂದುಳ್ಳದ್ದು, ಕಳಂಕಿತವಾದದ್ದು. ಆದಕಾರಣ ಸ್ವೀಕೃತವಾಗದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅನ್ಯದೇಶದವನಿಂದ ತೆಗೆದುಕೊಂಡು ಅಂಥ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದದ್ದಲ್ಲ; ಆದಕಾರಣ ಸಮರ್ಪಕವಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದಲ್ಲದೆ ಪರಕೀಯನಿಂದ ತೆಗೆದುಕೊಂಡ ಅಂತಹ ಯಾವ ಪಶುವನ್ನೂ ನಿಮ್ಮ ದೇವರಿಗೆ ಆಹಾರವಾಗಿ ಅರ್ಪಿಸಬಾರದು. ಏಕೆಂದರೆ ಅವರ ಕುಂದುಳ್ಳದ್ದು ಮತ್ತು ದೋಷಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರವಾಗಿ ಅಂಗೀಕಾರವಾಗುವುದಿಲ್ಲ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:25
12 ತಿಳಿವುಗಳ ಹೋಲಿಕೆ  

ಯಾಜಕನು ವಿಶೇಷವಾದ ರೀತಿಯಲ್ಲಿ ದೇವರ ಸೇವೆ ಮಾಡುತ್ತಾನೆ. ಆದ್ದರಿಂದ ನೀವು ಅವನನ್ನು ವಿಶೇಷವಾದ ರೀತಿಯಲ್ಲಿ ನೋಡಿಕೊಳ್ಳಬೇಕು. ಯಾಕೆಂದರೆ ಅವನು ಪವಿತ್ರ ವಸ್ತುಗಳನ್ನು ಸಮರ್ಪಿಸುತ್ತಾನಲ್ಲ! ಅವನು ದೇವರ ಬಳಿಗೆ ಪವಿತ್ರ ರೊಟ್ಟಿಯನ್ನು ತರುತ್ತಾನೆ. ನಾನೇ ಪರಿಶುದ್ಧನು! ನಾನೇ ಯೆಹೋವನು! ಮತ್ತು ನಾನು ನಿಮ್ಮನ್ನು ಪರಿಶುದ್ಧಗೊಳಿಸುತ್ತೇನೆ.


ಅವರು ತಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕು. ಅವರು ದೇವರ ಹೆಸರಿಗೆ ಗೌರವ ತೋರಿಸಬೇಕು. ಯಾಕೆಂದರೆ ಅವರು ಅಗ್ನಿಯ ಮೂಲಕ ಅರ್ಪಿಸಿದ ರೊಟ್ಟಿಯನ್ನು ಮತ್ತು ಕಾಣಿಕೆಗಳನ್ನು ಯೆಹೋವನಿಗೆ ತೆಗೆದುಕೊಂಡು ಹೋಗುತ್ತಾರೆ. ಆದ್ದರಿಂದ ಅವರು ಪವಿತ್ರರಾಗಿರಬೇಕು.


ದೇವರಿಂದ ಹೊಸದಾಗಿ ಹುಟ್ಟಿದವನು ಪಾಪದಲ್ಲೇ ಮುಂದುವರಿಯುವುದಿಲ್ಲವೆಂದು ನಮಗೆ ತಿಳಿದಿದೆ. ದೇವರ ಮಗನಾದ ಯೇಸು ಅವನನ್ನು ಸುರಕ್ಷಿತವಾಗಿ ಕಾಪಾಡುತ್ತಾನೆ. ಕೆಡುಕನು ಅವನಿಗೆ ಕೇಡುಮಾಡಲಾಗುವುದಿಲ್ಲ.


ಪೂರ್ವಕಾಲದಲ್ಲಿ ನೀವು ಕ್ರಿಸ್ತನಿಲ್ಲದವರಾಗಿದ್ದಿರಿ ಎಂಬುದನ್ನು ಜ್ಞಾಪಿಸಿಕೊಳ್ಳಿರಿ. ನೀವು ಇಸ್ರೇಲಿನ ಪ್ರಜೆಗಳಾಗಿರಲಿಲ್ಲ. ದೇವರು ತನ್ನ ಜನರೊಂದಿಗೆ ಮಾಡಿಕೊಂಡಿದ್ದ ವಾಗ್ದಾನಗಳಿಗೆ ಸಂಬಂಧಪಟ್ಟ ಒಡಂಬಡಿಕೆಗಳನ್ನು ನೀವು ಹೊಂದಿರಲಿಲ್ಲ. ನಿಮಗೆ ನಿರೀಕ್ಷೆಯಿರಲಿಲ್ಲ ಮತ್ತು ನೀವು ದೇವರನ್ನು ತಿಳಿದಿರಲಿಲ್ಲ.


ಆರೋನನ ಕುಟುಂಬದವನು ಮಾತ್ರ ಯೆಹೋವನ ಎದುರಿನಲ್ಲಿ ಧೂಪವನ್ನು ಹಾಕತಕ್ಕದ್ದು ಮತ್ತು ಬೇರೆ ಯಾರಾದರೂ ಹಾಕಿದರೆ ಅವರು ಕೋರಹ ಮತ್ತು ಅವನ ಹಿಂಬಾಲಕರಂತೆ ಸಾಯುವರು ಎಂಬುದನ್ನು ಇಸ್ರೇಲರಿಗೆ ಆ ಮುಚ್ಚಳವು ನೆನಪು ಮಾಡುವ ಗುರುತಾಯಿತು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ನೀವು ನನ್ನ ಆಲಯದೊಳಗೆ ಅನ್ಯರನ್ನು ತಂದಿರುತ್ತೀರಿ. ಅವರು ಸುನ್ನತಿಯಾದವರಾಗಿರಲಿಲ್ಲ. ಅವರು ಸಂಪೂರ್ಣವಾಗಿ ನನ್ನನ್ನು ನಂಬಿರಲಿಲ್ಲ. ಈ ರೀತಿಯಾಗಿ ನೀವು ನನ್ನ ಆಲಯವನ್ನು ಹೊಲೆ ಮಾಡಿರುತ್ತೀರಿ. ನೀವು ನಾವು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಬಿಟ್ಟಿರಿ. ಭಯಂಕರ ಕೃತ್ಯಗಳನ್ನು ಮಾಡಿ ಆಮೇಲೆ ನನಗೆ ರೊಟ್ಟಿ, ಕೊಬ್ಬು, ರಕ್ತಗಳ ಕಾಣಿಕೆ ಅರ್ಪಿಸುತ್ತೀರಿ. ಆದರೆ ಇವೆಲ್ಲಾ ನನ್ನ ಆಲಯವನ್ನು ಅಶುದ್ಧಗೊಳಿಸುತ್ತಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು