9 “ಯಾಜಕರು ನನ್ನ ಅಗತ್ಯತೆಗಳನ್ನು ಎಚ್ಚರಿಕೆಯಿಂದ ಪೂರೈಸಿದರೆ ಅಪರಾಧಕ್ಕೆ ಒಳಗಾಗುವುದಿಲ್ಲ. ಅವರು ಪವಿತ್ರವಾದವುಗಳನ್ನು ಅಪವಿತ್ರಗೊಳಿಸಿದರೆ ಸಾಯುವರು. ಯೆಹೋವನಾದ ನಾನೇ ಅವರನ್ನು ಪರಿಶುದ್ಧರನ್ನಾಗಿ ಮಾಡಿದ್ದೇನೆ ಮತ್ತು ಈ ವಿಶೇಷ ಸೇವೆಗಾಗಿ ಪ್ರತ್ಯೇಕಿಸಿದ್ದೇನೆ.
9 ಯಾಜಕರು ಈ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸತ್ತಾರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.
9 “ಈ ನನ್ನ ಆಜ್ಞೆಗಳನ್ನು ಅವರು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸಾಯುವರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.
9 ಈ ನನ್ನ ಆಜ್ಞೆಗಳನ್ನು ಅವರು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸತ್ತಾರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.
ಆರೋನನು ಮತ್ತು ಅವನ ಗಂಡುಮಕ್ಕಳು ದೇವದರ್ಶನ ಗುಡಾರದೊಳಗೆ ಪ್ರವೇಶಿಸುವಾಗಲೆಲ್ಲಾ ಈ ಉಡುಪುಗಳನ್ನು ಧರಿಸಿಕೊಳ್ಳಬೇಕು. ಪವಿತ್ರಸ್ಥಳದಲ್ಲಿ ಯಾಜಕರಾಗಿ ಸೇವೆಮಾಡಲು ಯಜ್ಞವೇದಿಕೆಯ ಬಳಿಗೆ ಬರುವಾಗ ಅವರು ಈ ಬಟ್ಟೆಗಳನ್ನು ಧರಿಸಿಕೊಂಡಿರಬೇಕು. ಅವರು ಈ ಉಡುಪುಗಳನ್ನು ಧರಿಸಿಕೊಳ್ಳದಿದ್ದರೆ, ದೋಷಿಗಳಾಗಿ ಸಾಯುವರು. ಇವುಗಳೆಲ್ಲಾ ಆರೋನನಿಗೂ ಅವನ ನಂತರ ಅವನ ಕುಟುಂಬಸ್ಥರೆಲ್ಲರಿಗೂ ಶಾಶ್ವತವಾದ ಕಟ್ಟಳೆಯಾಗಿವೆ.”
ನೀವು ಯಾವಾಗಲೂ ಉತ್ತಮ ಭಾಗವನ್ನು ಯೆಹೋವನಿಗೆ ಕೊಟ್ಟರೆ, ಸಂಕಟದ ದಂಡನೆಯಿಂದ ತಪ್ಪಿಸಿಕೊಳ್ಳುವಿರಿ. ಇಸ್ರೇಲರು ಕೊಟ್ಟ ಪವಿತ್ರವಾದ ಕಾಣಿಕೆಗಳಿಗೆ ನೀವು ಅಪಮಾನ ಮಾಡುವುದಿಲ್ಲ ಮತ್ತು ನೀವು ಸಾಯುವುದಿಲ್ಲ.”
ಆತನು ಹೇಳಿದ್ದೇನೆಂದರೆ: “ನಿನ್ನ ಸಹೋದರನಾದ ಆರೋನನೊಡನೆ ಮಾತಾಡು. ಅವನು ತನಗೆ ಇಷ್ಟಬಂದಾಗಲೆಲ್ಲಾ ತೆರೆಯ ಹಿಂದಿರುವ ಮಹಾ ಪವಿತ್ರಸ್ಥಳದೊಳಕ್ಕೆ ಹೋಗಬಾರದೆಂದು ಅವನಿಗೆ ಹೇಳು. ಆ ತೆರೆಯ ಹಿಂದೆ ಇರುವ ಕೋಣೆಯೊಳಗೆ ಪವಿತ್ರ ಪೆಟ್ಟಿಗೆಯು ಇರುತ್ತದೆ. ಕೃಪಾಸನವು ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿರುತ್ತದೆ. ಕೃಪಾಸನದ ಮೇಲೆ ಮೇಘದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಆರೋನನು ಆ ಕೋಣೆಯೊಳಗೆ ಹೋದರೆ ಸಾಯುವನು!
ಆರೋನನು ಯೆಹೋವನ ಸನ್ನಿಧಿಯಲ್ಲಿ ಬೆಂಕಿಯ ಮೇಲೆ ಧೂಪವನ್ನು ಹಾಕಬೇಕು. ಆಗ ಒಡಂಬಡಿಕೆಯ ಪೆಟ್ಟಿಗೆ ಮೇಲಿರುವ ಕೃಪಾಸವನ್ನು ಧೂಪದ ಹೊಗೆಯು ಮುಚ್ಚಿಕೊಳ್ಳುವುದು. ಹೀಗೆ ಮಾಡುವುದರಿಂದ ಆರೋನನು ಸಾಯುವುದಿಲ್ಲ.
ಅನ್ಯಜನರು ಆ ಭಯಂಕರ ಪಾಪಗಳನ್ನು ಮಾಡಿದ್ದಾರೆ. ಆದರೆ ನೀವು ನನ್ನ ಕಟ್ಟಳೆಗಳಿಗೆ ವಿಧೇಯರಾಗಬೇಕು. ನೀವು ಆ ಭಯಂಕರ ಪಾಪಗಳಲ್ಲಿ ಯಾವುದನ್ನೂ ಮಾಡಬಾರದು. ಆ ಭಯಂಕರ ಪಾಪಗಳಿಂದ ನಿಮ್ಮನ್ನು ಹೊಲೆ ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು.”