Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:14 - ಪರಿಶುದ್ದ ಬೈಬಲ್‌

14 ನೀವು ಯಾವ ಹೊಸ ಧಾನ್ಯವನ್ನಾಗಲಿ ಹಣ್ಣನ್ನಾಗಲಿ ಹೊಸ ಧಾನ್ಯದಿಂದ ಮಾಡಿದ ರೊಟ್ಟಿಯನ್ನಾಗಲಿ ದೇವರಿಗೆ ಅರ್ಪಿಸುವ ಮೊದಲು ತಿನ್ನಬಾರದು. ಈ ನಿಯಮವು ನಿಮ್ಮ ಎಲ್ಲಾ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸ ಸ್ಥಾನಗಳಲ್ಲಿಯೂ ಶಾಶ್ವತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದು ಕೊಡುವವರೆಗೂ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಬಾರದು. ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದ ಕಾಣಿಕೆಯನ್ನು ತಂದುಕೊಡುವವರೆಗೆ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ, ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಕೂಡದು. ನೀವು ಎಲ್ಲಿದ್ದರೂ ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದುಕೊಡುವವರೆಗೂ [ಆ ವರುಷದ ಬೆಳೆಯ] ರೊಟ್ಟಿಯನ್ನಾಗಲಿ ಸುಟ್ಟ ತೆನೆಗಳನ್ನಾಗಲಿ ಹಸಿತೆನೆಗಳನ್ನಾಗಲಿ ತಿನ್ನಲೇಕೂಡದು. ನಿಮಗೂ ನಿಮ್ಮ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಬಲಿಯನ್ನು ತರುವವರೆಗೆ ರೊಟ್ಟಿಯನ್ನಾಗಲಿ, ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿಯೂ ಶಾಶ್ವತವಾದ ನಿಯಮವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:14
15 ತಿಳಿವುಗಳ ಹೋಲಿಕೆ  

“ನೀವು ಕೊಯ್ಯುವ ಪ್ರಥಮವಾದ ಬೆಳೆಗಳನ್ನು ಯೆಹೋವನಿಗೆ ಕೊಡಿರಿ. ಅವುಗಳನ್ನು ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ತನ್ನಿರಿ. “ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಎಂದಿಗೂ ಬೇಯಿಸಬಾರದು.”


ಅವರಿಗೆ ನಿನ್ನ ವಿಶೇಷ ದಿನವಾದ ಸಬ್ಬತ್ತನ್ನು ತಿಳಿಸಿದೆ. ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಕಟ್ಟಳೆಗಳನ್ನು ತಿಳಿಸಿದೆ.


ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಿರಿ ಎಂದು ನೆನಪುಮಾಡಿಕೊಂಡು ಯೆಹೋವನ ವಿಧಿಗಳನ್ನು ತಪ್ಪದೇ ಅನುಸರಿಸಿರಿ.


ಯೆಹೋವನು ಮೋಶೆಯ ಮೂಲಕ ಇಸ್ರೇಲ್ ಜನರಿಗೆ ಕೊಟ್ಟ ಎಲ್ಲಾ ಕಟ್ಟಳೆಗಳನ್ನು ಅವರಿಗೆ ಬೋಧಿಸುವುದು ನಿನ್ನ ಜವಾಬ್ದಾರಿಯಾಗಿದೆ” ಎಂದು ಹೇಳಿದನು.


ನಿಮ್ಮ ಎಲ್ಲಾ ಸಂತತಿಗಳವರಿಗೆ ಈ ನಿಯಮವು ಶಾಶ್ವತವಾದದ್ದು. ನೀವೆಲ್ಲೇ ವಾಸಿಸಿದರೂ ಕೊಬ್ಬನ್ನಾಗಲಿ ರಕ್ತವನ್ನಾಗಲಿ ಎಂದಿಗೂ ತಿನ್ನಬಾರದು.”


ಯೆಹೋವನ ನಿಯಮಗಳು ನೀತಿಯ ಕಟ್ಟಳೆಗಳಾಗಿವೆ. ಅವು ಮನುಸ್ಸನ್ನು ಸಂತೋಷಗೂಳಿಸುತ್ತವೆ. ಯೆಹೋವನ ಆಜ್ಞೆಗಳು ಒಳ್ಳೆಯ ಆಜ್ಞೆಗಳಾಗಿವೆ. ಅವು ಕಣ್ಣುಗಳಿಗೆ ಬೆಳಕನ್ನು ನೀಡುತ್ತವೆ.


“ನೀವು ಪ್ರಥಮಫಲವನ್ನು ಯೆಹೋವನಿಗೆ ನೈವೇದ್ಯವಾಗಿ ಅರ್ಪಿಸುವಾಗ ಬೆಂಕಿಯಲ್ಲಿ ಸುಟ್ಟ ಗೋಧಿತೆನೆಗಳನ್ನು ತರಬೇಕು. ಅವುಗಳು ಜಜ್ಜಲ್ಪಟ್ಟ ಹಸಿ ತೆನೆಗಳಾಗಿರಬೇಕು. ಇದು ನಿಮ್ಮ ಪ್ರಥಮಫಲ ನೈವೇದ್ಯವಾಗಿರುವುದು.


ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.


ನೀವು ಅಂದು ಯಾವ ಕೆಲಸವನ್ನೂ ಮಾಡಬಾರದು. ನೀವು ಎಲ್ಲೇ ವಾಸವಾಗಿದ್ದರೂ ಈ ಕಟ್ಟಳೆ ನಿಮಗೆ ಶಾಶ್ವತವಾಗಿದೆ.


ನೀವು ಪ್ರತಿ ವರ್ಷ ಏಳು ದಿನಗಳವರೆಗೆ ಈ ಹಬ್ಬದ ದಿನವನ್ನು ಆಚರಿಸಬೇಕು. ಈ ನಿಯಮ ಶಾಶ್ವತವಾಗಿದೆ. ಏಳನೆಯ ತಿಂಗಳಲ್ಲಿ ಈ ಹಬ್ಬದ ದಿನವನ್ನು ನೀವು ಆಚರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು