Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:20 - ಪರಿಶುದ್ದ ಬೈಬಲ್‌

20 “ಯಾಜಕನು ಅವುಗಳನ್ನು ಪ್ರಥಮ ಬೆಳೆಯಿಂದ ಮಾಡಿದ ರೊಟ್ಟಿಯೊಂದಿಗೆ ನೈವೇದ್ಯವಾಗಿ ಎರಡು ಕುರಿಮರಿಗಳೊಂದಿಗೆ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವನು. ಅವು ಯೆಹೋವನಿಗೆ ಪವಿತ್ರವಾಗಿರುತ್ತವೆ. ಅವು ಯಾಜಕರಿಗೆ ಸಲ್ಲುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾಜಕನು ಇವುಗಳನ್ನು, ಪ್ರಥಮಫಲದ ರೊಟ್ಟಿಗಳನ್ನು ಮತ್ತು ಎರಡು ಕುರಿಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯಾಜಕನು ಇವುಗಳನ್ನೂ ಪ್ರಥಮಫಲದ ರೊಟ್ಟಿಗಳನ್ನೂ ಎರಡು ಕುರಿಗಳನ್ನೂ ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯವಾಗಿ ಆರತಿ ಎತ್ತಬೇಕು. ಅವು ಸರ್ವೇಶ್ವರನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯಾಜಕನು ಇವುಗಳನ್ನೂ ಪ್ರಥಮ ಫಲದ ರೊಟ್ಟಿಗಳನ್ನೂ ಎರಡು ಕುರಿಗಳನ್ನೂ ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯಾಜಕನು ಯೆಹೋವ ದೇವರ ಸನ್ನಿಧಿಯಲ್ಲಿ ಪ್ರಥಮ ಫಲದ ರೊಟ್ಟಿಯೊಂದಿಗೂ, ಎರಡು ಕುರಿಮರಿಗಳೊಂದಿಗೂ ಅವುಗಳನ್ನು ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವ ದೇವರಿಗೆ ಪರಿಶುದ್ಧವಾಗಿದ್ದು ಯಾಜಕನಿಗೋಸ್ಕರ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:20
12 ತಿಳಿವುಗಳ ಹೋಲಿಕೆ  

ನಿಮ್ಮ ಯಾಜಕರಿಗೆ ನಿಮ್ಮ ಬೆಳೆಯ ಪ್ರಥಮ ಫಲವನ್ನು ಕೊಡಬೇಕು. ನಿಮ್ಮ ಧಾನ್ಯಗಳ ಪ್ರಥಮ ಫಲವನ್ನು, ದ್ರಾಕ್ಷಾರಸದಲ್ಲಿ, ಎಣ್ಣೆಯಲ್ಲಿ ಮತ್ತು ನಿಮ್ಮ ಉಣ್ಣೆಯಲ್ಲಿ ಪ್ರಥಮ ಫಲವನ್ನು ಕೊಡಬೇಕು.


ಕ್ರಿಸ್ತನಿಂದ ಈಗ ನಮಗೆ ಸಮಾಧಾನ ದೊರೆತಿದೆ. ಕ್ರಿಸ್ತನು ಯೆಹೂದ್ಯರನ್ನೂ ಯೆಹೂದ್ಯರಲ್ಲದವರನ್ನೂ ಒಂದೇ ಜನಾಂಗವನ್ನಾಗಿ ಮಾಡಿದ್ದಾನೆ. ಯೆಹೂದ್ಯರೂ ಯೆಹೂದ್ಯರಲ್ಲದವರೂ ತಮ್ಮ ಮಧ್ಯೆ ಒಂದು ಅಡ್ಡಗೋಡೆಯಿದೆಯೋ ಎಂಬಂತೆ ಬೇರ್ಪಟ್ಟಿದ್ದರು. ಅವರು ಒಬ್ಬರನ್ನೊಬ್ಬರು ದ್ವೇಷಿಸಿದರು. ಆದರೆ ಕ್ರಿಸ್ತನು ತನ್ನ ದೇಹವನ್ನೇ ಅರ್ಪಿಸುವುದರ ಮೂಲಕ ದ್ವೇಷವೆಂಬ ಆ ಗೋಡೆಯನ್ನು ಕೆಡವಿದನು.


ನಾವು ನಿಮ್ಮ ಮಧ್ಯದಲ್ಲಿ ಆತ್ಮಿಕ ಬೀಜವನ್ನು ಬಿತ್ತಿದೆವು. ಆದ್ದರಿಂದ ಈ ಜೀವನಕ್ಕೆ ಬೇಕಾದ ದೈನಂದಿನ ಅಗತ್ಯತೆಗಳನ್ನು ನಿಮ್ಮಿಂದ ನಾವು ಪಡೆದುಕೊಳ್ಳಬೇಕು. ಖಂಡಿತವಾಗಿ ಇದು ಹೆಚ್ಚೇನೂ ಅಲ್ಲ.


“ಮೇಲಿನಲೋಕಗಳಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದವರಿಗೆ ಸಮಾಧಾನ” ಎಂದು ಹೇಳುತ್ತಾ ದೇವರನ್ನು ಸ್ತುತಿಸಿದರು.


ಆ ದಿನದಲ್ಲಿ ನಿಮ್ಮ ಮನೆಗಳಿಂದ ಎರಡು ರೊಟ್ಟಿಗಳನ್ನು ತನ್ನಿರಿ. ಆ ರೊಟ್ಟಿಗಳು ನೈವೇದ್ಯವಾಗಿ ನಿವಾಳಿಸಲ್ಪಡುವುದಕ್ಕಾಗಿದೆಯಷ್ಟೆ. ಹುಳಿಯನ್ನು ಉಪಯೋಗಿಸಿ ಹದಿನಾರು ಬಟ್ಟಲು ಗೋಧಿಹಿಟ್ಟಿನಿಂದ ಎರಡು ರೊಟ್ಟಿಗಳನ್ನು ಮಾಡಿರಿ. ಅದು ನಿಮ್ಮ ಪ್ರಥಮ ಬೆಳೆಯಿಂದ ಯೆಹೋವನಿಗೆ ಸಮರ್ಪಿಸುವ ಕಾಣಿಕೆಯಾಗಿರುವುದು.


ಮೋಶೆ ಎದೆಯ ಭಾಗವನ್ನು ತೆಗೆದುಕೊಂಡು ಯೆಹೋವನ ಮುಂದೆ ನೈವೇದ್ಯವಾಗಿ ನಿವಾಳಿಸಿದನು. ಅದು ಯಾಜಕರನ್ನು ನೇಮಿಸುವುದಕ್ಕಾಗಿ ಅರ್ಪಿಸಲ್ಪಟ್ಟ ಟಗರಿನಲ್ಲಿ ಮೋಶೆಯ ಪಾಲಾಗಿತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು.


ಇವುಗಳನ್ನು ಆರೋನನಿಗೂ ಅವನ ಪುತ್ರರಿಗೂ ಕೊಡು. ಯೆಹೋವನ ಮುಂದೆ ಇವುಗಳನ್ನು ತಮ್ಮ ಕೈಯಲ್ಲಿ ಹಿಡಿದುಕೊಂಡು ನಿವಾಳಿಸಬೇಕೆಂದು ಅವರಿಗೆ ಹೇಳು. ಇದು ಯೆಹೋವನಿಗೆ ವಿಶೇಷವಾದ ನೈವೇದ್ಯಾರ್ಪಣೆಯಾಗಿದೆ.


ನೀವು ಪಾಪಪರಿಹಾರಕ ಸಮರ್ಪಣೆಯಾಗಿ ಒಂದು ಹೋತವನ್ನೂ ಸಮಾಧಾನಯಜ್ಞವಾಗಿ ಒಂದು ವರ್ಷದ ಎರಡು ಟಗರುಗಳನ್ನೂ ಅರ್ಪಿಸಬೇಕು.


ಅದೇ ದಿನದಲ್ಲಿ ನೀವು ಪವಿತ್ರಸಭೆಯಾಗಿ ಕೂಡಬೇಕು. ನೀವು ಯಾವ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಈ ನಿಯಮವು ಶಾಶ್ವತವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು