Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:32 - ಪರಿಶುದ್ದ ಬೈಬಲ್‌

32 ಅದು ನಿಮಗಾಗಿ ವಿಶ್ರಾಂತಿಯ ವಿಶೇಷ ದಿನವಾಗಿರುವುದು. ನೀವು ಆಹಾರವನ್ನು ತಿನ್ನಬಾರದು. ತಿಂಗಳಿನ ಒಂಭತ್ತನೆಯ ದಿನದ ನಂತರ ಸಾಯಂಕಾಲದಲ್ಲಿ ಈ ವಿಶ್ರಾಂತಿಯ ವಿಶೇಷ ದಿನವನ್ನು ಪ್ರಾರಂಭಿಸುವಿರಿ. ಈ ವಿಶ್ರಾಂತಿಯ ವಿಶೇಷ ದಿನವು ಆ ಸಾಯಂಕಾಲದಿಂದ ಹಿಡಿದು ಮರುದಿನ ಸಾಯಂಕಾಲದವರೆಗೆ ಮುಂದುವರಿಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆ ಸಬ್ಬತ್ ದಿನವು ಸಂಪೂರ್ಣವಿರಾಮವುಳ್ಳ ದಿನವಾಗಿರಬೇಕು. ಆ ದಿನದಲ್ಲಿ ಉಪವಾಸದಿಂದಿರಬೇಕು. ಆ ತಿಂಗಳಿನ ಒಂಭತ್ತನೆಯ ದಿನದ ಸಾಯಂಕಾಲದಲ್ಲಿ ಪ್ರಾರಂಭಿಸಿ ಮರುದಿನದ ಸಾಯಂಕಾಲದ ವರೆಗೆ ನೀವು ಆ ವಿರಾಮದಿನವನ್ನು ಆಚರಿಸಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆ ದಿನವು ಸಂಪೂರ್ಣ ವಿರಾಮವುಳ್ಳ ವಿಶ್ರಾಂತಿದಿನವಾಗಿರಬೇಕು. ಅಂದು ಉಪವಾಸದಿಂದಿರಬೇಕು. ಆ ತಿಂಗಳಿನ ಒಂಬತ್ತನೆಯ ದಿನದ ಸಂಜೆ ಪ್ರಾರಂಭಿಸಿ ಮರುದಿನದ ಸಂಜೆಯವರೆಗೆ ನೀವು ಆ ವಿರಾಮ ದಿನವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆ ದಿನವು ಸಂಪೂರ್ಣ ವಿರಾಮವುಳ್ಳ ವಿಶ್ರಾಂತಿ ದಿನವಾಗಿರಬೇಕು. ಅದರಲ್ಲಿ ಉಪವಾಸದಿಂದಿರಬೇಕು. ಆ ತಿಂಗಳಿನ ಒಂಭತ್ತನೆಯ ದಿನದ ಸಾಯಂಕಾಲದಲ್ಲಿ ಪ್ರಾರಂಭಿಸಿ ಮರುದಿನದ ಸಾಯಂಕಾಲದವರೆಗೆ ನೀವು ಆ ವಿರಾಮದಿನವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇದು ನಿಮಗೆ ಸಬ್ಬತ್ ದಿನವಾಗಿರುವುದು. ನೀವು ನಿಮ್ಮನ್ನು ಉಪವಾಸ ಇಡಬೇಕು. ಆ ತಿಂಗಳಿನ ಒಂಬತ್ತನೆಯ ದಿವಸದ ಸಾಯಂಕಾಲದಿಂದ ಹಿಡಿದು ಮರುದಿನದ ಸಂಜೆಯವರೆಗೆ ಸಬ್ಬತ್ ದಿನವನ್ನು ಆಚರಿಸಬೇಕು,” ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:32
19 ತಿಳಿವುಗಳ ಹೋಲಿಕೆ  

ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಲು ನಮ್ಮಿಂದಾದಷ್ಟು ಪ್ರಯತ್ನಿಸೋಣ. ಆತನಿಗೆ ಅವಿಧೇಯರಾದ ಆ ಜನರನ್ನು ಅನುಸರಿಸಿ ನಮ್ಮಲ್ಲಿ ಯಾರೂ ವಿಫಲರಾಗದಂತೆ ನೋಡಿಕೊಳ್ಳೋಣ.


ನಂಬುವವರಾದ ನಾವು ದೇವರ ವಿಶ್ರಾಂತಿಯಲ್ಲಿ ಸೇರಲು ಸಮರ್ಥರಾಗಿದ್ದೇವೆ. ದೇವರು ಹೇಳಿದಂತೆ: “ಆ ಜನರು ನನ್ನ ವಿಶ್ರಾಂತಿಯಲ್ಲಿ ಎಂದಿಗೂ ಪ್ರವೇಶಿಸುವುದಿಲ್ಲವೆಂದು ನಾನು ಕೋಪಗೊಂಡು ಪ್ರಮಾಣ ಮಾಡಿದೆನು.” ಈ ಲೋಕವನ್ನು ಸೃಷ್ಟಿಸಿದ ನಂತರ ತನ್ನ ಕಾರ್ಯಗಳು ಮುಗಿದುಹೋಗಿದ್ದರೂ ದೇವರು ಹೀಗೆ ಹೇಳಿದನು.


ಆದರೆ ನಮ್ಮನ್ನು ನಾವೇ ಪರಿಶೋಧಿಸಿಕೊಂಡರೆ ನ್ಯಾಯತೀರ್ಪಿಗೆ ಒಳಗಾಗುವುದಿಲ್ಲ.


ಈಗ ದು:ಖದಿಂದಿರುವವರು ಧನ್ಯರು. ದೇವರು ಅವರನ್ನು ಸಂತೈಸುವನು.


ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”


ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.


ದೇವರೇ, ನೀನು ಅಪೇಕ್ಷಿಸುವ ಯಜ್ಞ ದೀನ ಮನಸ್ಸೇ. ದೀನತೆ ಮತ್ತು ವಿಧೇಯತೆಯುಳ್ಳ ಹೃದಯವನ್ನು ನೀನು ತಿರಸ್ಕರಿಸುವುದಿಲ್ಲ.


ಅವರು ಅಸ್ವಸ್ಥರಾಗಿದ್ದಾಗ ನಾನು ದುಃಖಪಟ್ಟೆನು; ಉಪವಾಸ ಮಾಡಿದೆನು. ನಾನು ಅವರಿಗೋಸ್ಕರ ಪ್ರಾರ್ಥಿಸಿದ್ದಕ್ಕೆ ಇದು ನನಗೆ ಪ್ರತಿಫಲವೇ?


“ಏಳನೆಯ ತಿಂಗಳಿನ ಹತ್ತನೆಯ ದಿನವು ದೋಷಪರಿಹಾರಕ ದಿನವಾಗಿರುವುದು. ಆಗ ಪವಿತ್ರ ಸಭೆಯಾಗಿ ಸೇರಬೇಕು. ನೀವು ಆಹಾರವನ್ನು ತಿನ್ನಬಾರದು. ನೀವು ಅಗ್ನಿಯ ಮೂಲಕ ಯೆಹೋವನಿಗೆ ಕಾಣಿಕೆಯನ್ನು ಸಲ್ಲಿಸಬೇಕು.


ಈ ದಿನವು ನಿಮಗೆ ಬಹಳ ಪ್ರಾಮುಖ್ಯವಾದ ವಿಶ್ರಾಂತಿ ದಿನವಾಗಿದೆ. ನೀವು ಉಪವಾಸ ಮಾಡಬೇಕು. ಈ ನಿಯಮ ಶಾಶ್ವತವಾದದ್ದು.


ನೀವು ಅಂದು ಯಾವ ಕೆಲಸವನ್ನೂ ಮಾಡಬಾರದು. ನೀವು ಎಲ್ಲೇ ವಾಸವಾಗಿದ್ದರೂ ಈ ಕಟ್ಟಳೆ ನಿಮಗೆ ಶಾಶ್ವತವಾಗಿದೆ.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಅಲ್ಲದೆ ಶುಕ್ರವಾರ ಸೂರ್ಯಸ್ತಮಾನಕ್ಕಿಂತ ಮುಂಚೆ ಜೆರುಸಲೇಮಿನ ಬಾಗಿಲ ಕದಗಳನ್ನು ಮುಚ್ಚಲು ಆಜ್ಞೆಯಿತ್ತೆನು. ಸಬ್ಬತ್‌ದಿನ ಮುಗಿದ ಬಳಿಕವೇ ಅವುಗಳನ್ನು ತೆರೆಯಲು ಅಪ್ಪಣೆಕೊಟ್ಟೆನು. ದ್ವಾರಗಳ ಬಳಿ ನನ್ನ ಕೆಲವು ಜನರನ್ನು ನಿಲ್ಲಿಸಿ, ಸಬ್ಬತ್ ದಿನದಲ್ಲಿ ಯಾವ ಮೂಟೆಯನ್ನೂ ನಗರದೊಳಗೆ ತರಲು ಬಿಡಬಾರದು ಎಂದು ಅವರಿಗೆ ಆಜ್ಞಾಪಿಸಿದೆನು.


“ಇದು ನಿಮಗೆ ಶಾಶ್ವತವಾದ ಕಟ್ಟಳೆ: ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಆಹಾರವನ್ನು ತೆಗೆದುಕೊಳ್ಳದೆ ಉಪವಾಸ ಮಾಡಬೇಕು. ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ದೇಶದಲ್ಲಿ ವಾಸಿಸುವ ಪ್ರವಾಸಿಗರಾಗಲಿ ಪರದೇಶಸ್ಥರಾಗಲಿ ಯಾವ ಕೆಲಸವನ್ನು ಮಾಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು