Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:38 - ಪರಿಶುದ್ದ ಬೈಬಲ್‌

38 ಯೆಹೋವನನ್ನು ಜ್ಞಾಪಕಮಾಡುವ ಸಬ್ಬತ್ ದಿನಗಳ ಜೊತೆಗೆ ನೀವು ಆ ಹಬ್ಬದ ದಿನಗಳನ್ನು ಆಚರಿಸಬೇಕು. ನೀವು ಆ ಕಾಣಿಕೆಗಳನ್ನು ನಿಮ್ಮ ಇತರ ಕಾಣಿಕೆಗಳ ಜೊತೆಗೆ ಅರ್ಪಿಸಬೇಕು. ನೀವು ಮಾಡಿದ ಹರಕೆಗಳನ್ನು ನೆರವೇರಿಸುವುದಕ್ಕಾಗಿ ಯೆಹೋವನಿಗೆ ಅರ್ಪಿಸುವ ಕಾಣಿಕೆಗಳ ಜೊತೆಗೆ ಅವುಗಳನ್ನು ಅರ್ಪಿಸಬೇಕು. ನೀವು ಯೆಹೋವನಿಗೆ ಅರ್ಪಿಸುವ ಯಾವುದೇ ವಿಶೇಷ ಸಮರ್ಪಣೆಗಳೊಂದಿಗೆ ಅವುಗಳನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಯೆಹೋವನಿಗೆ ಒಪ್ಪಿಸಬೇಕಾದ ಕಪ್ಪ, ಕಾಣಿಕೆ, ಹರಕೆ ಇವುಗಳನ್ನು ನೀವು ಯೆಹೋವನು ನೇಮಿಸಿರುವ ಸಬ್ಬತ್ ದಿನದಲ್ಲಿ ಮಾತ್ರವಲ್ಲದೆ ಮೇಲೆ ಸೂಚಿಸಿರುವ ಹಬ್ಬದ ದಿನಗಳಲ್ಲಿಯೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಸರ್ವೇಶ್ವರನಿಗೆ ಒಪ್ಪಿಸಬೇಕಾದ ಕಪ್ಪಕಾಣಿಕೆಗಳನ್ನೂ ಹರಕೆಗಳನ್ನೂ ಸಲ್ಲಿಸಬೇಕಲ್ಲದೆ, ಮೇಲೆ ಸೂಚಿಸಿರುವ ಹಬ್ಬಗಳಲ್ಲಿ ಆಯಾ ದಿನಕ್ಕೆ ನೇಮಿಸಿರುವ ಪ್ರಕಾರ ದಹನಬಲಿ, ನೈವೇದ್ಯದ್ರವ್ಯ, ಶಾಂತಿಸಮಾಧಾನದ ಬಲಿ, ಪಾನದ್ರವ್ಯ ಇವುಗಳನ್ನು ತಂದು ಸರ್ವೇಶ್ವರನ ಸನ್ನಿಧಿಯಲ್ಲಿ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಯೆಹೋವನಿಗೆ ಒಪ್ಪಿಸಬೇಕಾದ ಕಪ್ಪ, ಕಾಣಿಕೆ, ಹರಕೆ ಇವುಗಳನ್ನು ನೀವು ಸಮರ್ಪಿಸಬೇಕಲ್ಲದೆ ಮೇಲೆ ಸೂಚಿಸಿರುವ ಹಬ್ಬದ ದಿನಗಳಲ್ಲಿಯೂ ಆಯಾ ದಿನಕ್ಕೆ ನೇವಿುಸಿರುವ ಪ್ರಕಾರ ಸರ್ವಾಂಗಹೋಮ, ನೈವೇದ್ಯದ್ರವ್ಯ, ಸಮಾಧಾನಯಜ್ಞ, ಪಾನದ್ರವ್ಯ ಇವುಗಳನ್ನೂ ತಂದು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಯೆಹೋವ ದೇವರ ವಿಶ್ರಾಂತಿಯ ದಿನಗಳ ಹೊರತಾಗಿಯೂ, ನೀವು ಯೆಹೋವ ದೇವರಿಗೆ ಸಮರ್ಪಿಸುವ ನಿಮ್ಮ ದಾನಗಳ ಹೊರತಾಗಿಯೂ, ನಿಮ್ಮ ಎಲ್ಲಾ ಹರಕೆಗಳ ಹೊರತಾಗಿಯೂ, ನಿಮ್ಮ ಎಲ್ಲಾ ಸ್ವಯಿಚ್ಛೆಯ ಕಾಣಿಕೆಗಳ ಹೊರತಾಗಿಯೂ ಸಲ್ಲಿಸಬೇಕಾದ ಅರ್ಪಣೆಗಳಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:38
15 ತಿಳಿವುಗಳ ಹೋಲಿಕೆ  

“ಮೇಲೆ ತಿಳಿಸಿರುವ ಸಾರ್ವಜನಿಕ ಯಜ್ಞಗಳನ್ನು ಇಡೀ ಸಮುದಾಯಕ್ಕೋಸ್ಕರ ಹಬ್ಬದ ದಿನಗಳಲ್ಲಿ ನಿಮ್ಮ ಸರ್ವಾಂಗಹೋಮಗಳನ್ನಾಗಿಯೂ ಧಾನ್ಯಾರ್ಪಣೆಗಳನ್ನಾಗಿಯೂ ಪಾನದ್ರವ್ಯಾರ್ಪಣೆಗಳನ್ನಾಗಿಯೂ ಮತ್ತು ಸಮಾಧಾನಯಜ್ಞಗಳನ್ನಾಗಿಯೂ ಅರ್ಪಿಸಬೇಕು. ನಿಮ್ಮ ವೈಯಕ್ತಿಕ ಹರಕೆಯ ಅರ್ಪಣೆ ಮತ್ತು ಸ್ವಯಿಚ್ಛಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.”


ಅಲ್ಲಿಗೆ ನೀವು ನಿಮ್ಮ ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ನಿಮ್ಮ ಬೆಳೆಗಳಲ್ಲಿ ಮತ್ತು ಪಶುಗಳಲ್ಲಿ ದಶಾಂಶವನ್ನು, ನಿಮ್ಮ ವಿಶೇಷ ಕಾಣಿಕೆಗಳನ್ನು, ಯೆಹೋವನಿಗೆ ನೀವು ಹರಕೆ ಹೊತ್ತುಕೊಂಡ ಯಾವುದೇ ಕಾಣಿಕೆಗಳನ್ನು, ನೀವು ಕೊಡಲಿಚ್ಛಿಸುವ ಯಾವುದೇ ವಿಶೇಷ ಕಾಣಿಕೆಗಳನ್ನು, ನಿಮ್ಮ ಮಂದೆ ಮತ್ತು ಹಿಂಡುಗಳ ಚೊಚ್ಚಲುಮರಿಗಳನ್ನು ತರಬೇಕು.


“ಆರು ದಿನಗಳಲ್ಲಿ ನೀವು ಕೆಲಸಮಾಡಿರಿ. ಆದರೆ ಏಳನೆಯ ದಿನವು ವಿಶೇಷವಾದ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆ ದಿನದಲ್ಲಿ ಪವಿತ್ರಸಭೆ ಕೂಡಬೇಕು. ನೀವು ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಅದು ಯೆಹೋವನಿಗೆ ಮೀಸಲಾದ ಸಬ್ಬತ್ತಾಗಿದೆ.


“ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ನನ್ನ ವಿಶ್ರಾಂತಿಯ ವಿಶೇಷ ದಿನಗಳನ್ನು ಆಚರಿಸಬೇಕು. ನಾನೇ ನಿಮ್ಮ ದೇವರಾದ ಯೆಹೋವನು!


“ಯೆಹೋವನಿಗೆ ವಿಶೇಷ ಹಬ್ಬದ ದಿನಗಳು ಇವುಗಳೇ. ಈ ವಿಶೇಷ ದಿನಗಳಲ್ಲಿ ನೀವು ಪವಿತ್ರಸಭೆಯಾಗಿ ಸೇರಬೇಕು. ನೀವು ಅಗ್ನಿಯ ಮೂಲಕ ಯೆಹೋವನಿಗೆ ಸಮರ್ಪಣೆಯಾಗುವ ಸರ್ವಾಂಗಹೋಮ, ಧಾನ್ಯಸಮರ್ಪಣೆ, ಯಜ್ಞಗಳು ಮತ್ತು ಪಾನದ್ರವ್ಯಗಳನ್ನು ಅರ್ಪಿಸಬೇಕು. ನೀವು ಆ ಕಾಣಿಕೆಗಳನ್ನು ಸರಿಯಾದ ಸಮಯದಲ್ಲಿ ಅರ್ಪಿಸಬೇಕು.


“ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ನಿಮ್ಮ ದೇಶದಲ್ಲಿ ಪೈರುಗಳನ್ನು ಸಂಗ್ರಹಿಸಿದ ನಂತರ, ಏಳು ದಿನಗಳವರೆಗೆ ನೀವು ಯೆಹೋವನ ಹಬ್ಬವನ್ನು ಆಚರಿಸಬೇಕು. ನೀವು ಮೊದಲನೆಯ ಮತ್ತು ಎಂಟನೆಯ ದಿನದಲ್ಲಿ ವಿಶ್ರಮಿಸಬೇಕು.


“ರಾಜನು ತನ್ನ ಇಚ್ಛೆಯ ಪ್ರಕಾರ ಯೆಹೋವನಿಗೆ ಸರ್ವಾಂಗಹೋಮ ಅಥವಾ ಸಮಾಧಾನಯಜ್ಞ ಅಥವಾ ಮನಃಪೂರ್ವಕವಾದ ಕಾಣಿಕೆಯನ್ನು ಸಮರ್ಪಿಸುವಾಗ ಅವನಿಗಾಗಿ ಪೂರ್ವದ ಬಾಗಿಲು ತೆಗೆಯಲ್ಪಡಬೇಕು. ಆದರೆ ಅವನು ಸಬ್ಬತ್ ದಿನದಂತೆ ತನ್ನ ಕಾಣಿಕೆಗಳನ್ನು ಸಮರ್ಪಿಸಿದ ನಂತರ ಅವನು ಹಿಂತಿರುಗಿದಾಗ ಪ್ರವೇಶ ದ್ವಾರವು ಮುಚ್ಚಲ್ಪಡಬೇಕು.


ಕೋರೆ ಎಂಬ ಲೇವಿಯು ಜನರು ದೇವರಿಗೆ ಸ್ವ ಇಚ್ಛೆಯಿಂದ ಸಮರ್ಪಿಸಿದ ಕಾಣಿಕೆಗೆ ಮುಖ್ಯಸ್ತನಾಗಿದ್ದನು. ಅವನು ಅದರ ಲೆಕ್ಕವನ್ನು ಒಪ್ಪಿಸುತ್ತಿದ್ದನು. ಅಲ್ಲದೆ ಯೆಹೋವನಿಗೆ ಕೊಟ್ಟವುಗಳನ್ನು ಮತ್ತು ಯೆಹೋವನಿಗೆ ಮೀಸಲಾಗಿಟ್ಟ ಕಾಣಿಕೆಗಳನ್ನು ಹಂಚಿಕೊಡುವುದು ಅವನ ಜವಾಬ್ದಾರಿಕೆಯಾಗಿತ್ತು. ಅಲ್ಲದೆ ಅವನು ಪೂರ್ವದ ಬಾಗಿಲಿನ ದ್ವಾರಪಾಲಕನಾಗಿದ್ದನು. ಅವನು ಲೇವಿಯನಾದ ಇಮ್ನನ ಮಗನು.


ಯಾಕೆಂದರೆ ನೀನು ನನ್ನನ್ನು ಮರಣದಿಂದ ರಕ್ಷಿಸಿದೆ; ನೀನು ನನ್ನನ್ನು ಸೋಲಿನಿಂದ ತಪ್ಪಿಸಿದೆ. ಆದ್ದರಿಂದ, ಜೀವಂತರಾಗಿರುವ ಜನರು ಮಾತ್ರ ನೋಡಬಹುದಾದ ಬೆಳಕಿನಲ್ಲಿ ನಾನು ದೇವರನ್ನು ಆರಾಧಿಸುವೆನು.


ಆತನು ಮಹಾನಾಯಕರುಗಳನ್ನು ಸೋಲಿಸುವನು. ಭೂರಾಜರುಗಳೆಲ್ಲಾ ಆತನಿಗೆ ಭಯಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು