Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:17 - ಪರಿಶುದ್ದ ಬೈಬಲ್‌

17 ನೀವು ಒಬ್ಬರಿಗೊಬ್ಬರು ಮೋಸ ಮಾಡಬಾರದು. ನೀವು ದೇವರಿಗೆ ಭಯಪಡಬೇಕು! ನಾನೇ ನಿಮ್ಮ ದೇವರಾದ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯ ಮಾಡಬಾರದು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ನಿಮ್ಮ ದೇವರಾದ ಸರ್ವೇಶ್ವರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದ್ದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು. ಆದರೆ ದೇವರಿಗೆ ನೀನು ಭಯಪಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:17
32 ತಿಳಿವುಗಳ ಹೋಲಿಕೆ  

“ವೃದ್ಧರ ಮುಂದೆ ಎದ್ದು ನಿಂತುಕೊಳ್ಳಿರಿ. ಹಿರಿಯರಿಗೆ ಗೌರವಕೊಡಿರಿ. ನಿಮ್ಮ ದೇವರನ್ನು ಸನ್ಮಾನಿಸಿರಿ. ನಾನೇ ಯೆಹೋವನು!


“ನೀವು ಕಿವುಡನನ್ನು ಶಪಿಸಬಾರದು. ಕುರುಡನು ಬೀಳುವಂತೆ ನೀವು ಅವನ ಮುಂದೆ ಅಡ್ಡವಾಗಿ ಏನನ್ನೂ ಇಡಬಾರದು. ಆದರೆ ನೀವು ನಿಮ್ಮ ದೇವರನ್ನು ಸನ್ಮಾನಿಸಬೇಕು. ನಾನೇ ನಿಮ್ಮ ದೇವರಾದ ಯೆಹೋವನು.


ನೀವು ಈ ವ್ಯಕ್ತಿಗೆ ಕ್ರೂರ ಯಾಜಮಾನರಾಗಿರಬಾರದು. ನೀವು ನಿಮ್ಮ ದೇವರನ್ನು ಗೌರವಿಸಬೇಕು.


ಆಗ ಮೋಶೆಯು ಜನರಿಗೆ, “ಭಯಪಡಬೇಡಿರಿ, ಯೆಹೋವನು ನಿಮ್ಮನ್ನು ಪರೀಕ್ಷಿಸಲು ಬಂದಿದ್ದಾನೆ. ನೀವು ಆತನಲ್ಲಿ ಭಕ್ತಿಯುಳ್ಳವರಾಗಿರಬೇಕೆಂದು ಆತನು ಬಯಸುತ್ತಾನೆ. ಆಗ ನೀವು ಪಾಪ ಮಾಡುವುದಿಲ್ಲ” ಎಂದು ಹೇಳಿದನು.


ಮೂರು ದಿನಗಳಾದ ಮೇಲೆ ಯೋಸೇಫನು ಅವರಿಗೆ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು. ನೀವು ಈ ಕಾರ್ಯವೊಂದನ್ನು ಮಾಡಿದರೆ ನಾನು ನಿಮ್ಮನ್ನು ಉಳಿಸುತ್ತೇನೆ;


ಈ ವಿಷಯದಲ್ಲಿ ನಿಮ್ಮಲ್ಲಿ ಯಾರೂ ಕ್ರಿಸ್ತನಲ್ಲಿ ಸಹೋದರನಾದವನನ್ನು ವಂಚಿಸಿ ಕೇಡುಮಾಡಬಾರದು. ನಾವು ಈಗಾಗಲೇ ನಿಮಗೆ ಹೇಳಿದಂತೆ ಮತ್ತು ಎಚ್ಚರಿಕೆ ನೀಡಿದಂತೆ ಇವೆಲ್ಲವುಗಳ ವಿಷಯದಲ್ಲಿ ದೇವರು ದಂಡಿಸುತ್ತಾನೆ.


ಅದು ಸತ್ಯ. ಆ ಕೊಂಬೆಗಳು ಮುರಿಯಲ್ಪಟ್ಟವು. ಅದಕ್ಕೆ ಅಪನಂಬಿಕೆಯೇ ಕಾರಣ. ನೀವು ಆ ಮರದ ಒಂದು ಭಾಗವಾದದ್ದು ನಿಮ್ಮ ನಂಬಿಕೆಯಿಂದಲೇ. ಆದ್ದರಿಂದ ಗರ್ವಪಡಬೇಡ, ಭಯದಿಂದಿರು.


“ಅವರಿಗೆ ದೇವರಲ್ಲಿ ಭಯವಾಗಲಿ ಗೌರವವಾಗಲಿ ಇಲ್ಲ.”


ತನ್ನನ್ನು ಆರಾಧಿಸುವ ನೀತಿವಂತರು ಯಾರೇ ಆಗಿದ್ದರೂ ಅವರನ್ನು ದೇವರು ಸ್ವೀಕರಿಸಿಕೊಳ್ಳುವನು. ಅವನು ಯಾವ ದೇಶದವನು ಎಂಬುದು ಮುಖ್ಯವಲ್ಲ.


ಕೊರ್ನೇಲಿಯನು ದೈವಭಕ್ತನಾಗಿದ್ದನು. ಅವನು ಮತ್ತು ಅವನ ಕುಟುಂಬದಲ್ಲಿ ವಾಸವಾಗಿದ್ದ ಇತರ ಎಲ್ಲಾ ಜನರು ನಿಜದೇವರನ್ನು ಆರಾಧಿಸುತ್ತಿದ್ದರು. ಅವನು ಬಡವರಿಗೆ ಧಾರಾಳವಾಗಿ ಹಣವನ್ನು ಕೊಡುತ್ತಿದ್ದನು. ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಿದ್ದನು.


ಇಂತಿರಲು, ಜುದೇಯ, ಗಲಿಲಾಯ ಮತ್ತು ಸಮಾರ್ಯ ಪ್ರದೇಶಗಳಲ್ಲಿ ಇದ್ದ ಸಭೆಗಳಲ್ಲಿ ಶಾಂತಿ ನೆಲೆಸಿತು. ಪವಿತ್ರಾತ್ಮನ ಸಹಾಯದಿಂದ ಸಭೆಗಳು ಬಲವಾಗತೊಡಗಿದವು. ವಿಶ್ವಾಸಿಗಳು ತಾವು ಪ್ರಭುವನ್ನು ಗೌರವಿಸುವುದಾಗಿ ತಮ್ಮ ಜೀವಿತಗಳ ಮೂಲಕ ತೋರಿಸಿಕೊಟ್ಟರು. ಇದರಿಂದ ವಿಶ್ವಾಸಿಗಳ ಸಭೆಯು ಹೆಚ್ಚುಹೆಚ್ಚು ಬೆಳೆಯತೊಡಗಿತು.


ನೀವು ಯಾರಿಗೆ ಭಯಪಡಬೇಕೆಂದರೆ, ನಿಮ್ಮನ್ನು ಕೊಂದು ನರಕಕ್ಕೆ ಹಾಕಲು ಅಧಿಕಾರವುಳ್ಳಾತನಿಗಷ್ಟೇ (ದೇವರಿಗೆ). ಹೌದು, ಆತನೊಬ್ಬನಿಗೇ ನೀವು ಭಯಪಡಬೇಕು.


ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಯೋಷೀಯನು ದೀನದರಿದ್ರರಿಗೆ ಸಹಾಯ ಮಾಡುತ್ತಿದ್ದನು. ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು. ಯೆಹೋಯಾಕೀಮನೇ, ‘ದೇವರನ್ನು ಅರಿತುಕೊಳ್ಳುವುದು ಎಂದರೇನು?’ ನ್ಯಾಯ ಮತ್ತು ನೀತಿಯಿಂದ ನಡೆದುಕೊಳ್ಳುವುದು, ನನ್ನನ್ನು ಅರಿತುಕೊಳ್ಳಲು ಬೇಕಾದದ್ದು ಅದೇ. ಇದು ಯೆಹೋವನಿಂದ ಬಂದ ಸಂದೇಶ:


ಅಸಹಾಯಕರಾದ ಬಡವರಿಂದ ಕದ್ದುಕೊಳ್ಳಬೇಡ; ನ್ಯಾಯಾಲಯದಲ್ಲಿ ಅವರಿಗೆ ಅನ್ಯಾಯಮಾಡಬೇಡ.


ಯೆಹೋವನಲ್ಲಿಟ್ಟಿರುವ ಭಯಭಕ್ತಿಯೇ ಜ್ಞಾನದ ಮೂಲ. ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ದ್ವೇಷಿಸುವರು.


ಯೆಹೋವನಲ್ಲಿಡುವ ಭಯಭಕ್ತಿಯು ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದು. ಯೆಹೋವನ ವಿಧಿಗಳು ಯಥಾರ್ಥವಾಗಿವೆ; ಅವು ಯಾವಾಗಲೂ ನ್ಯಾಯಾನುಸಾರವಾಗಿವೆ.


ನನಗಿಂತ ಮೊದಲು ರಾಜ್ಯಪಾಲರಾಗಿದ್ದವರು ಜನರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದರು. ಪ್ರತಿಯೊಬ್ಬರು ಒಂದು ಪೌಂಡ್ ಬೆಳ್ಳಿಯನ್ನೂ ಆಹಾರವನ್ನೂ ದ್ರಾಕ್ಷಾರಸವನ್ನೂ ಕೊಡಬೇಕಿತ್ತು. ಆ ರಾಜ್ಯಪಾಲರ ಅಧಿಕಾರಿಗಳು ಸಹ ಜನರ ಮೇಲೆ ದೊರೆತನ ನಡೆಸಿ ಅವರ ಜೀವನವನ್ನು ಮತ್ತಷ್ಟು ಕಠಿಣಗೊಳಿಸಿದರು. ಆದರೆ ದೇವರಲ್ಲಿ ಭಯಭಕ್ತಿ ಇದ್ದುದರಿಂದ ನಾನು ಆ ರೀತಿ ಮಾಡಲಿಲ್ಲ.


ನಾನು ಹೇಳುವುದನ್ನು ಮುಂದುವರಿಸುತ್ತಾ, “ನೀವು ತಪ್ಪು ಕೆಲಸ ಮಾಡುತ್ತಿದ್ದೀರಿ. ದೇವರಿಗೆ ಭಯಪಟ್ಟು ಆತನನ್ನು ಗೌರವಿಸಬೇಕೆಂದು ನಿಮಗೆ ಗೊತ್ತಿದೆ. ಇತರ ಜನರು ಮಾಡುವ ನಾಚಿಕೆಕರವಾದ ಕೆಲಸವನ್ನು ನೀವು ಮಾಡಬಾರದು.


ನಿಮ್ಮಲ್ಲಿ ಪ್ರತಿಯೊಬ್ಬರೂ ಯೆಹೋವನಿಗೆ ಭಯಪಡುವವರಾಗಿರಬೇಕು. ಆತನು ನ್ಯಾಯವಂತನಾಗಿದ್ದಾನೆ. ಆತನಿಗೆ ಎಲ್ಲಾ ಜನರು ಸಮಾನರೇ. ಆತನು ಲಂಚ ಸ್ವೀಕರಿಸಿ ನ್ಯಾಯವನ್ನು ಬದಲಾಯಿಸುವದಿಲ್ಲ” ಎಂದು ಹೇಳಿದನು.


ಆದರೆ ನೀವು ಯೆಹೋವನನ್ನು ಗೌರವಿಸಬೇಕು. ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವನ ಸೇವೆಯನ್ನು ನಿಜವಾಗಿಯೂ ಮಾಡಬೇಕು. ಆತನು ನಿಮಗಾಗಿ ಮಾಡಿದ ಮಹತ್ಕಾರ್ಯಗಳನ್ನು ನೆನಸಿಕೊಳ್ಳಿರಿ.


ಅಮಾಲೇಕ್ಯರು ದೇವರನ್ನು ಗೌರವಿಸಲಿಲ್ಲ. ನೀವು ಆಯಾಸಗೊಂಡು ಬಲಹೀನರಾಗಿದ್ದಾಗ ಅವರು ನಿಮ್ಮ ಮೇಲೆ ಬಿದ್ದರು. ನಿಮ್ಮ ಗುಂಪಿನಲ್ಲಿ ಹಿಂದೆ ಉಳಿದವರನ್ನೆಲ್ಲಾ ಕೊಂದರು.


“ಭೂಮಿಯನ್ನು ನೆರೆಯವನಿಗೆ ಮಾರುವಾಗ ಅಥವಾ ಅವನಿಂದ ಭೂಮಿಯನ್ನು ಕೊಂಡುಕೊಳ್ಳುವಾಗ ಮೋಸ ಮಾಡಬೇಡಿ.


ನನ್ನ ಧಣಿಯು ಈ ಮನೆಯ ಸರ್ವಾಧಿಕಾರವನ್ನು ನನಗೆ ಕೊಟ್ಟಿದ್ದರೂ ತನ್ನ ಧರ್ಮಪತ್ನಿಯಾದ ನಿನ್ನನ್ನು ನನಗೆ ಅಧೀನಪಡಿಸಿಲ್ಲ. ಹೀಗಿರಲು ಇಂಥಾ ಮಹಾ ದುಷ್ಕೃತ್ಯವನ್ನು ನಡೆಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ” ಎಂದು ಉತ್ತರಕೊಟ್ಟನು.


ಯೆಹೋವನ ದೂತನು, “ನಿನ್ನ ಮಗನನ್ನು ವಧಿಸಬೇಡ. ಅವನಿಗೆ ನೋವು ಮಾಡಬೇಡ. ನೀನು ನನಗೋಸ್ಕರವಾಗಿ ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೂ ಹಿಂಜರಿಯಲಿಲ್ಲ; ಆದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ತೋರಿಬಂದಿದೆ” ಎಂದು ಹೇಳಿದನು.


ಅಬ್ರಹಾಮನು ಅವನಿಗೆ, “ನನಗೆ ಹೆದರಿಕೆಯಾಗಿತ್ತು. ಈ ಸ್ಥಳದವರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದು ನಾನು ಭಾವಿಸಿಕೊಂಡೆ. ಯಾರಾದರೂ ನನ್ನನ್ನು ಕೊಂದು ಸಾರಳನ್ನು ತೆಗೆದುಕೊಳ್ಳಬಹುದೆಂದು ಯೋಚಿಸಿದೆ.


ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನಿಗೇ ಅವಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ.


“ನಿಮ್ಮ ನೆರೆಯವನಿಗೆ ಕೆಡುಕುಗಳನ್ನು ಮಾಡಬಾರದು. ನೀವು ಅವನನ್ನು ಸುಲಿಗೆ ಮಾಡಬಾರದು. ನಿಮ್ಮ ಕೂಲಿಯವರ ಕೂಲಿಯನ್ನು ಮರುದಿನದ ಮುಂಜಾನೆಯವರೆಗೆ ಹಿಡಿದಿಟ್ಟುಕೊಳ್ಳಬಾರದು.


ಅವನಿಗೆ ನೀವು ಸಾಲ ಕೊಡುವ ಹಣದ ಮೇಲೆ ಬಡ್ಡಿಯನ್ನು ಹೊರಿಸಬಾರದು. ದೇವರನ್ನು ಗೌರವಿಸಿರಿ. ನಿಮ್ಮ ಸ್ವಂತ ದೇಶದವನು ನಿಮ್ಮ ಸಂಗಡ ವಾಸಿಸಲಿ.


ಪ್ರೀತಿ ಮತ್ತು ನಂಬಿಗಸ್ತಿಕೆಗಳು ದೋಷಕ್ಕೆ ಪ್ರಾಯಶ್ಚಿತ್ತವಾಗಿವೆ. ಯೆಹೋವನಲ್ಲಿ ಭಯಭಕ್ತಿಯಿಂದಿರಿ, ಆಗ ನೀವು ದುಷ್ಟತನದಿಂದ ದೂರವಾಗುವಿರಿ.


ನಾಯಕರಿಗೂ ಹಿರಿಯರಿಗೂ ಅವರು ಮಾಡಿದ ಕಾರ್ಯಗಳ ವಿರುದ್ಧವಾಗಿ ಆತನು ನ್ಯಾಯತೀರಿಸುವನು. ಯೆಹೋವನು ಹೇಳುವುದೇನೆಂದರೆ: “ನೀವು ದಾಕ್ಷಾತೋಟವನ್ನು (ಯೆಹೂದವನ್ನು) ಸುಟ್ಟುಹಾಕಿದ್ದೀರಿ; ಬಡಜನರಿಂದ ನೀವು ಕಿತ್ತುಕೊಂಡ ವಸ್ತುಗಳನ್ನು ಈಗಲೂ ನಿಮ್ಮ ಮನೆಗಳಲ್ಲಿ ಇಟ್ಟುಕೊಂಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು