22 ನೀವು ಎಂಟನೆಯ ವರ್ಷದಲ್ಲಿ ಬೀಜ ಬಿತ್ತಿದಾಗ, ನೀವು ಇನ್ನೂ ಹಳೆಯ ಬೆಳೆಯನ್ನು ತಿನ್ನುತ್ತಿರುವಿರಿ. ಒಂಭತ್ತನೆಯ ವರ್ಷದವರೆಗೆ ಅಂದರೆ ಎಂಟನೆಯ ವರ್ಷದಲ್ಲಿ ಬೀಜ ಫಸಲು ಕೊಡುವವರೆಗೆ ನೀವು ಹಳೆಯ ಬೆಳೆಯನ್ನು ತಿನ್ನುವಿರಿ.
22 ನೀವು ಎಂಟನೆಯ ವರ್ಷದಲ್ಲಿ ಬಿತ್ತಿ, ಅದರ ಫಲವನ್ನು ಒಂಬತ್ತನೆಯ ವರ್ಷದವರೆಗೆ ತಿನ್ನುವಿರಿ. ಅದರ ಫಲ ಬರುವವರೆಗೆ ತಿನ್ನುವಿರಿ, ಅದರ ಫಲ ಬರುವವರೆಗೆ ನೀವು ಸಂಗ್ರಹಿಸಿದ ಹಳೆಯದನ್ನೇ ತಿನ್ನುವಿರಿ,” ಎಂದು ಹೇಳುತ್ತೇನೆ.
“ನಾನು ನಿನಗೆ ಸಹಾಯ ಮಾಡುತ್ತೇನೆಂಬುದಕ್ಕೆ ಇದು ಸಾಕ್ಷಿಯ ಗುರುತಾಗಿದೆ: ಈ ವರ್ಷ ನೀವು ತಾನಾಗಿಯೇ ಬೆಳೆಯುವ ಧಾನ್ಯವನ್ನು ತಿನ್ನುತ್ತೀರಿ. ಮುಂದಿನ ವರ್ಷ ನೀವು ಬೀಜದಿಂದ ಬೆಳೆಯುವ ಧಾನ್ಯವನ್ನು ತಿನ್ನುತ್ತೀರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೆಳೆಸಿದ ಧಾನ್ಯವನ್ನು ಒಟ್ಟುಗೂಡಿಸುತ್ತೀರಿ. ನೀವು ದ್ರಾಕ್ಷಿತೋಟಗಳನ್ನು ಬೆಳೆಸುತ್ತೀರಿ; ಅವುಗಳ ದ್ರಾಕ್ಷಿಯನ್ನು ತಿನ್ನುತ್ತೀರಿ.
ಒಂದು ವರ್ಷಕ್ಕಿಂತಲೂ ಹೆಚ್ಚು ಸಮಯದವರೆಗೆ ಉಳಿಯುವಂತೆ ನಿಮಗೆ ಬೇಕಾದಷ್ಟು ದವಸಧಾನ್ಯಗಳಿರುತ್ತದೆ. ನೀವು ಹೊಸ ಬೆಳೆಯನ್ನು ಕೊಯ್ಯುವಿರಿ. ಆದರೆ ಹೊಸ ಬೆಳೆಯನ್ನು ಸಂಗ್ರಹಿಸಬೇಕಾದರೆ ಹಳೆ ಬೆಳೆಯನ್ನು ಬಿಸಾಡಬೇಕಾಗುತ್ತದೆ.
ಆಗ ಯೆಹೋವನು ಹಿಜ್ಕೀಯನಿಗೆ, “ಈ ಮಾತುಗಳೆಲ್ಲಾ ಸತ್ಯವೆಂಬುದಕ್ಕೆ ನಿನಗೊಂದು ಗುರುತನ್ನು ಕೊಡುತ್ತೇನೆ. ಬೀಜ ಬಿತ್ತಲು ನಿನಗೆ ಸಾಧ್ಯವಿರಲಿಲ್ಲ. ಆದ್ದರಿಂದ ಈ ವರ್ಷದಲ್ಲಿ ಕೂಳೆಬೆಳೆಯನ್ನೂ ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ನೀನು ಊಟಮಾಡುವೆ. ಆದರೆ ಮೂರನೆಯ ವರ್ಷದಲ್ಲಿ ನೀನೇ ಬಿತ್ತಿದ ಬೀಜದಲ್ಲಿ ಬೆಳೆದ ಬೆಳೆಯನ್ನು ಊಟಮಾಡುವೆ. ಆ ಬೆಳೆಯಿಂದ ನಿನಗೆ ಬೇಕಾದಷ್ಟು ಆಹಾರ ಸಂಗ್ರಹವಾಗುವದು. ನೀನು ದ್ರಾಕ್ಷಾಲತೆಗಳನ್ನು ನೆಟ್ಟು ಅದರ ಫಲಗಳನ್ನು ತಿನ್ನುವೆ.
“ಭೂಮಿಯು ನನಗೆ ಸೇರಿದ್ದು. ಆದ್ದರಿಂದ ನೀವು ನಿಜವಾಗಿಯೂ ಅದನ್ನು ಶಾಶ್ವತವಾಗಿ ಮಾರುವುದಕ್ಕಾಗುವುದಿಲ್ಲ. ನೀವು ಕೇವಲ ನನ್ನ ಆಶ್ರಯದಲ್ಲಿ ವಾಸಿಸುತ್ತಿರುವ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೀರಿ.
ಪ್ರತಿದಿನವು ಅವರು ಒಂದು ದಿನಕ್ಕೆ ಬೇಕಾದಷ್ಟು ಆಹಾರವನ್ನು ಕೂಡಿಸಿಕೊಳ್ಳಬೇಕು. ಆದರೆ ಶುಕ್ರವಾರ ಅವರು ತಮ್ಮ ಆಹಾರವನ್ನು ಸಿದ್ಧಪಡಿಸುವಾಗ ಎರಡು ದಿನಗಳಿಗೆ ಬೇಕಾದಷ್ಟು ಆಹಾರವಿರುವುದನ್ನು ಅವರು ನೋಡುವರು” ಎಂದು ಹೇಳಿದನು.