Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:23 - ಪರಿಶುದ್ದ ಬೈಬಲ್‌

23 “ಭೂಮಿಯು ನನಗೆ ಸೇರಿದ್ದು. ಆದ್ದರಿಂದ ನೀವು ನಿಜವಾಗಿಯೂ ಅದನ್ನು ಶಾಶ್ವತವಾಗಿ ಮಾರುವುದಕ್ಕಾಗುವುದಿಲ್ಲ. ನೀವು ಕೇವಲ ನನ್ನ ಆಶ್ರಯದಲ್ಲಿ ವಾಸಿಸುತ್ತಿರುವ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “‘ಭೂಮಿಯನ್ನು ಶಾಶ್ವತವಾಗಿ ಮಾರಬಾರದು. ಏಕೆಂದರೆ ಆ ಭೂಮಿ ನನ್ನದು; ನೀವಾದರೋ ಪರದೇಶದವರು ಹಾಗೂ ಪ್ರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳಿದುಕೊಂಡವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ಭೂಮಿಯನ್ನು ಶಾಶ್ವತವಾಗಿ ವಿಕ್ರಯಿಸಿ ಬಿಡಬಾರದು. ಏಕೆಂದರೆ ಭೂಮಿ ನನ್ನದು. ನೀವಾದರೋ ಪರವಾಸಿಗಳು, ನನ್ನ ಆಶ್ರಯದಲ್ಲಿ ತಂಗಿರುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಭೂವಿುಯನ್ನು ಶಾಶ್ವತವಾಗಿ ವಿಕ್ರಯಿಸಿಬಿಡಬಾರದು. ಯಾಕಂದರೆ ಆ ಭೂವಿು ನನ್ನದು; ನೀವಾದರೋ ಪರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳುಕೊಂಡವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ ‘ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು. ಏಕೆಂದರೆ ಭೂಮಿಯು ನನ್ನದು. ನನ್ನೊಂದಿಗೆ ನೀವು ಪರಕೀಯರೂ, ಪ್ರವಾಸಿಗಳೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:23
22 ತಿಳಿವುಗಳ ಹೋಲಿಕೆ  

ಪ್ರಿಯ ಸ್ನೇಹಿತರೇ, ನೀವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಪರದೇಶದವರಂತೆ ಇದ್ದೀರಿ. ಆದ್ದರಿಂದ ನಿಮ್ಮ ದೇಹಗಳಿಗೆ ಇಷ್ಟವಾದ ಕೆಟ್ಟಸಂಗತಿಗಳಿಂದ ದೂರವಾಗಿರಿ. ಇವು ನಿಮ್ಮ ಜೀವಾತ್ಮಕ್ಕೆ ವಿರುದ್ಧವಾಗಿ ಹೋರಾಡುತ್ತವೆ.


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು! ನನ್ನ ಮೊರೆಗೆ ಕಿವಿಗೊಡು! ನನ್ನ ಕಣ್ಣೀರನ್ನು ನೋಡು! ನಾನು ಈ ಜೀವಿತವನ್ನು ಕೇವಲ ಒಬ್ಬ ಪ್ರಯಾಣಿಕನಂತೆ ನಿನ್ನೊಂದಿಗೆ ಸಾಗಿಸುತ್ತಿರುವೆ. ನನ್ನ ಎಲ್ಲಾ ಪೂರ್ವಿಕರಂತೆ, ನಾನು ಇಲ್ಲಿ ಕೇವಲ ಸ್ವಲ್ಪಕಾಲ ಜೀವಿಸುವೆನು.


ಈ ಪ್ರದೇಶವನ್ನು ಲೇವಿಯರು ಮಾರಕೂಡದು, ಬದಲಾಯಿಸಕೂಡದು ಮತ್ತು ವಿಭಜಿಸಕೂಡದು. ಈ ಪ್ರದೇಶವು ಯೆಹೋವನಿಗೆ ಮೀಸಲಾಗಿರುವುದರಿಂದ ಅದು ಬಹಳ ವಿಶೇಷವಾಗಿದೆ ಅಲ್ಲದೆ ದೇಶದ ಅತ್ಯುತ್ತಮ ಭಾಗವಾಗಿದೆ.


ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದೇ. ಲೋಕವೂ ಅದರ ನಿವಾಸಿಗಳೂ ಆತನವೇ.


ನಾವು ನಮ್ಮ ಪೂರ್ವಿಕರಂತೆ ಈ ಲೋಕದಲ್ಲಿ ಪ್ರವಾಸಿಗಳಾಗಿದ್ದೇವೆ; ದಾಟಿಹೋಗುವ ನೆರಳಿನಂತೆ ನಾವು ಈ ಲೋಕದಲ್ಲಿರುತ್ತೇವೆ. ಅದನ್ನು ನಿಲ್ಲಿಸಲು ನಮಗೆ ಸಾಧ್ಯವಿಲ್ಲ.


“ಭೂಲೋಕವೆಲ್ಲಾ ದೇವಜನರಿಗಾಗಿ ಸಂತೋಷಿಸುವದು; ಯಾಕೆಂದರೆ ಆತನು ಅವರನ್ನು ಸಾಯಿಸುವನು; ತನ್ನ ಸೇವಕರನ್ನು ಸಂಹರಿಸುವವರನ್ನು ಶಿಕ್ಷಿಸುವನು; ತನ್ನ ವೈರಿಗಳಿಗೆ ತಕ್ಕ ದಂಡನೆ ಕೊಡುವನು. ತನ್ನ ದೇಶವನ್ನೂ ತನ್ನ ಜನರನ್ನೂ ಶುದ್ಧಿ ಮಾಡುವನು.”


ಆದ್ದರಿಂದ ನನ್ನ ಆಜ್ಞೆಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಹೇಳುತ್ತೇನೆ. ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಿರಿ. ಆಗ ನೀವು ನನಗೆ ವಿಶೇಷವಾದ ಜನರಾಗುವಿರಿ. ಈ ಲೋಕವೆಲ್ಲಾ ನನ್ನದೇ. ಆದರೆ ನಾನು ನಿಮ್ಮನ್ನು ನನ್ನ ಸ್ವಂತ ಜನಾಂಗವನ್ನಾಗಿ ಆರಿಸಿಕೊಳ್ಳುತ್ತಿದ್ದೇನೆ.


ಮತ್ತು ಎಲ್ಲಾ ಜನಾಂಗಗಳನ್ನು ನಾನು ಒಟ್ಟುಗೂಡಿಸುವೆನು. ಆ ದೇಶಗಳನ್ನು ಯೆಹೋಷಾಫಾಟ್ ತಗ್ಗಿಗೆ ಕರೆತರುವೆನು. ಅಲ್ಲಿ ಅವರಿಗೆ ನ್ಯಾಯತೀರಿಸುವೆನು. ಆ ದೇಶಗಳವರು ನನ್ನ ಜನರಾದ ಇಸ್ರೇಲರನ್ನು ಚದರಿಸಿದ್ದರು. ಅವರನ್ನು ಪರದೇಶಗಳಲ್ಲಿ ವಾಸಿಸುವಂತೆ ಮಾಡಿದರು. ಆದ್ದರಿಂದ ಆ ದೇಶಗಳವರನ್ನು ನಾನು ಶಿಕ್ಷಿಸುವೆನು. ಆ ದೇಶದವರು ನನ್ನ ದೇಶವನ್ನು ವಿಭಜಿಸಿದರು.


ಆಗ ಯೆಹೋವನು ತನ್ನ ದೇಶದ ಬಗ್ಗೆ ಆಸಕ್ತಿ ತೋರಿಸಿದನು. ತನ್ನ ಜನರ ಬಗ್ಗೆ ದುಃಖಿಸಿದನು.


ಯೆಹೋವನ ದೇಶದಲ್ಲಿ ಇಸ್ರೇಲು ವಾಸಿಸದು. ಎಫ್ರಾಯೀಮ್ ಈಜಿಪ್ಟಿಗೆ ಹಿಂದಿರುಗುವದು. ಅಶ್ಶೂರ್ಯದಲ್ಲಿ ಅವರು ತಮಗೆ ನಿಷೇಧಿಸಲ್ಪಟ್ಟ ಆಹಾರವನ್ನು ತಿನ್ನುವರು.


ಯೆಹೋವನೇ, ನಿನ್ನ ದೇಶಕ್ಕೆ ಕರುಣೆತೋರು. ಯಾಕೋಬನ ಜನರು ಪರದೇಶದಲ್ಲಿ ಸೆರೆಯಾಳುಗಳಾಗಿದ್ದಾರೆ. ಅವರನ್ನು ಸ್ವದೇಶಕ್ಕೆ ಮತ್ತೆ ಕರೆದುಕೊಂಡು ಬಾ.


ನಾನು ಇಸ್ರೇಲರನ್ನು ಅವರಿಗೆ ಕೊಟ್ಟಿರುವ ದೇಶದಿಂದ ತೆಗೆದುಹಾಕುವೆನು; ನನ್ನ ಹೆಸರಿಗೋಸ್ಕರ ಪವಿತ್ರ ಮಾಡಿದ ಈ ದೇವಾಲಯವನ್ನು ತೊರೆದುಬಿಡುವೆನು. ಈ ದೇವಾಲಯದ ಬಗ್ಗೆ ಲೋಕದ ಜನರು ಗೇಲಿಮಾಡುವಂತೆ ಮಾಡುವೆನು.


ಐವತ್ತನೆಯ ವರ್ಷವನ್ನು ನೀವು ವಿಶೇಷ ವರ್ಷವನ್ನಾಗಿ ಮಾಡಬೇಕು. ನಿಮ್ಮ ದೇಶದಲ್ಲಿ ವಾಸಿಸುವ ಜನರೆಲ್ಲರಿಗೆ ನೀವು ಸ್ವಾತಂತ್ರ್ಯವನ್ನು ಘೋಷಿಸಬೇಕು. ಈ ಸಮಯವು ‘ಜ್ಯೂಬಿಲಿ’ ಎಂಬುದಾಗಿ ಕರೆಯಲ್ಪಡುವುದು. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಸ್ವಾಸ್ತ್ಯಕ್ಕೆ ಹಿಂತಿರುಗಿ ಹೋಗುವನು; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಕುಟುಂಬಕ್ಕೆ ಹಿಂತಿರುಗುವನು.


ಆ ನೀರು ಹೊಳೆಯಿಂದಾಚೆ ಬಂದು ಯೆಹೂದದ ಮೇಲೆ ಹರಿಯುವುದು. ಆ ನೀರು ಏರುತ್ತಾಬಂದು ಯೆಹೂದವನ್ನು ಕುತ್ತಿಗೆಯ ತನಕ ಮುಳುಗಿಸುವದು ಮಾತ್ರವಲ್ಲ ಅದನ್ನು ಸಂಪೂರ್ಣವಾಗಿ ಮುಳುಗಿಸಿಬಿಡುವದು. “ಇಮ್ಮಾನುವೇಲನೇ, ಈ ಜಲಪ್ರವಾಹವು ಎಲ್ಲಾ ಕಡೆಗಳಿಗೆ ಹಬ್ಬುತ್ತಾ ನಿಮ್ಮ ದೇಶವನ್ನು ಪೂರ್ತಿಯಾಗಿ ಮುಚ್ಚಿಬಿಡುವದು.”


ನಾನು ಈ ದೇಶದಲ್ಲಿ ಅಪರಿಚಿತನಾಗಿದ್ದೇನೆ. ನಿನ್ನ ಆಜ್ಞೆಗಳನ್ನು ನನಗೆ ಮರೆಮಾಡಬೇಡ.


ನಾಬೋತನು, “ನಾನು ನನ್ನ ಭೂಮಿಯನ್ನು ಎಂದಿಗೂ ನಿನಗೆ ಕೊಡುವುದಿಲ್ಲ. ಅದು ನನ್ನ ವಂಶಕ್ಕೆ ಸೇರಿದ್ದು” ಎಂದು ಉತ್ತರಿಸಿದನು.


ಯಾಕೋಬನು ಫರೋಹನಿಗೆ, “ನಾನು ನನ್ನ ಅಲ್ಪಕಾಲದ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಿದೆನು. ಈಗ ನನಗೆ ನೂರಮೂವತ್ತು ವರ್ಷ. ನನ್ನ ತಂದೆಯೂ ಅವನ ಪೂರ್ವಿಕರೂ ನನಗಿಂತ ಹೆಚ್ಚು ವರ್ಷ ಜೀವಿಸಿದರು” ಎಂದು ಹೇಳಿದನು.


ಅವರಿಗೆ, “ನಾನು ಈ ನಾಡಿನವನಲ್ಲ. ನಾನು ಇಲ್ಲಿ ಕೇವಲ ಪ್ರವಾಸಿಗನಷ್ಟೇ. ಆದ್ದರಿಂದ ನನ್ನ ಹೆಂಡತಿಯನ್ನು ಸಮಾಧಿಮಾಡಲು ನನಗೆ ಸ್ವಲ್ಪ ಸ್ಥಳ ಬೇಕು” ಎಂದು ಹೇಳಿದನು.


ಚಿಪ್ಪೋರಳು ಗಂಡುಮಗುವಿಗೆ ಜನ್ಮವಿತ್ತಳು. ಮೋಶೆಯು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದ ಕಾರಣ ಆ ಮಗುವಿಗೆ “ಗೇರ್ಷೋಮ್” ಎಂದು ಹೆಸರಿಟ್ಟನು.


ಜನರು ತಮ್ಮ ಭೂಮಿಯನ್ನು ಮಾರಿದರೆ ಅದನ್ನು ಬಿಡಿಸಿಕೊಳ್ಳುವ ಹಕ್ಕು ಅವರ ಕುಟುಂಬಕ್ಕಿದೆ.


ನೀನು ಕೋಪದಿಂದ ನನ್ನ ಕಡೆಗೆ ನೋಡಬೇಡ! ಸಾಯುವುದಕ್ಕಿಂತ ಮೊದಲು ನನಗೆ ಸಂತೋಷವಿರಲಿ. ಇನ್ನು ಸ್ವಲ್ಪಕಾಲದಲ್ಲಿ ನಾನು ಇಲ್ಲವಾಗುವೆನು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು