Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:4 - ಪರಿಶುದ್ದ ಬೈಬಲ್‌

4 ಆದರೆ ಏಳನೆಯ ವರ್ಷದಲ್ಲಿ ನೀವು ಭೂಮಿಗೆ ವಿಶ್ರಾಂತಿ ಕೊಡುವಿರಿ. ಇದು ಯೆಹೋವನನ್ನು ಸನ್ಮಾನಿಸಲು ನೇಮಕವಾದ ವಿಶ್ರಾಂತಿಯ ವಿಶೇಷ ಸಮಯವಾಗಿರುವುದು. ನೀವು ನಿಮ್ಮ ಹೊಲಗಳಲ್ಲಿ ಬೀಜವನ್ನು ಬಿತ್ತಬಾರದು, ದ್ರಾಕ್ಷಿತೋಟದ ಕೆಲಸವನ್ನು ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ ಏಳನೆಯ ವರ್ಷ ಯಾವ ವ್ಯವಸಾಯ ಮಾಡಬಾರದ ವಿಶ್ರಾಂತಿ ಕಾಲವಾಗಿಯೂ ಮತ್ತು ಯೆಹೋವನಿಗೆ ಆಚರಿಸಬೇಕಾದ ಸಬ್ಬತ್ ಕಾಲವಾಗಿಯೂ ಇರಬೇಕು. ಹೊಲದಲ್ಲಿ ಬೀಜವನ್ನು ಬಿತ್ತಬಾರದು, ದ್ರಾಕ್ಷಿತೋಟದ ಕೆಲಸವನ್ನು ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದರೆ ಏಳನೆಯ ವರ್ಷ ಯಾವ ವ್ಯವಸಾಯವನ್ನೂ ಮಾಡಬಾರದು. ಅದು ವಿಶ್ರಾಂತಿಕಾಲವಾಗಿಯೂ ಸರ್ವೇಶ್ವರನ ಗೌರವಾರ್ಥ ಸಬ್ಬತ್ ಕಾಲವಾಗಿಯೂ ಇರಬೇಕು. ಆ ವರ್ಷ ಹೊಲದಲ್ಲಿ ವ್ಯವಸಾಯ ಮಾಡಬಾರದು; ದ್ರಾಕ್ಷೀ ತೋಟದ ಕೆಲಸವನ್ನೂ ಕೈಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದರೆ ಏಳನೆಯ ವರುಷವು ಯಾವ ಬೇಸಾಯವೂ ನಡೆಯಬಾರದ ವಿಶ್ರಾಂತಿಕಾಲವಾಗಿಯೂ ಯೆಹೋವನಿಗೆ ಆಚರಿಸಬೇಕಾದ ಸಬ್ಬತ್‍ಕಾಲವಾಗಿಯೂ ಇರಬೇಕು; ಹೊಲದಲ್ಲಿ ಬೀಜವನ್ನು ಬಿತ್ತಬಾರದು, ದ್ರಾಕ್ಷೇತೋಟದ ಕೆಲಸವನ್ನು ನಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಏಳನೆಯ ವರ್ಷವು ನೆಲಕ್ಕೆ ವಿಶ್ರಾಂತಿಕಾಲವಾಗಿರುವುದು. ಅದು ಯೆಹೋವ ದೇವರಿಗೆ ಸಬ್ಬತ್ ಕಾಲವಾಗಿರುವುದು. ನೀವು ಆ ವರ್ಷದಲ್ಲಿ ನಿಮ್ಮ ಹೊಲವನ್ನು ಬಿತ್ತಬಾರದು. ಇಲ್ಲವೆ ದ್ರಾಕ್ಷಿತೋಟವನ್ನು ಕತ್ತರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:4
6 ತಿಳಿವುಗಳ ಹೋಲಿಕೆ  

ಹೀಗೆ ಯೆಹೋವನು ತನ್ನ ಪ್ರವಾದಿಯಾದ ಯೆರೆಮೀಯನ ಮೂಲಕ ಹೇಳಿಸಿದ ಮಾತುಗಳನ್ನು ನೆರವೇರಿಸಿದನು. “ಈ ಸ್ಥಳವು ಎಪ್ಪತ್ತು ವರ್ಷಗಳ ತನಕ ಪಾಳುಬೀಳುವದು. ಜನರು ಆಚರಿಸದೆಹೋದ ಸಬ್ಬತ್ ಹಬ್ಬಗಳಿಗೆ ಅದು ಪರಿಹಾರವಾಗಿರುವುದು” ಎಂದು ಯೆರೆಮೀಯನು ಹೇಳಿದ್ದನು.


“ದೇಶವು ಬರಿದಾಗಿದ್ದು ವಿಶ್ರಾಂತಿಯನ್ನು ಅನುಭವಿಸುವುದು. ಆಗ ಜೀವಂತವಾಗಿ ಉಳಿದವರು ತಮ್ಮ ಪಾಪಗಳಿಗೆ ಬರತಕ್ಕ ಶಿಕ್ಷೆಯನ್ನು ಅನುಭವಿಸುವರು. ನನ್ನ ನಿಯಮಗಳನ್ನು ದ್ವೇಷಿಸಿ ನನ್ನ ವಿಧಿಗಳಿಗೆ ಅವಿಧೇಯರಾದ್ದರಿಂದ ತಮಗೆ ಶಿಕ್ಷೆಯಾಯಿತೆಂದು ಅವರು ಅರಿತುಕೊಳ್ಳುವರು.


ಕೊಯ್ಲಿನ ನಂತರ ತನ್ನಷ್ಟಕ್ಕೆ ತಾನೇ ಬೆಳೆದ ಪೈರನ್ನೂ ಕೊಯ್ಯಬಾರದು. ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ದ್ರಾಕ್ಷಿಯನ್ನು ಸಂಗ್ರಹಿಸಬಾರದು. ಭೂಮಿಗೆ ಒಂದು ವರ್ಷದ ವಿಶ್ರಾಂತಿಯಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು