Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:5 - ಪರಿಶುದ್ದ ಬೈಬಲ್‌

5 ಕೊಯ್ಲಿನ ನಂತರ ತನ್ನಷ್ಟಕ್ಕೆ ತಾನೇ ಬೆಳೆದ ಪೈರನ್ನೂ ಕೊಯ್ಯಬಾರದು. ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ದ್ರಾಕ್ಷಿಯನ್ನು ಸಂಗ್ರಹಿಸಬಾರದು. ಭೂಮಿಗೆ ಒಂದು ವರ್ಷದ ವಿಶ್ರಾಂತಿಯಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೊಲದಲ್ಲಿ ತಾನಾಗಿ ಬೆಳೆದ ಪೈರನ್ನು ನೀವು ಕೂಡಿಸಿಟ್ಟುಕೊಳ್ಳಬಾರದು, ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ಹಣ್ಣನ್ನು ಸಂಗ್ರಹಿಸಬಾರದು. ಆ ವರ್ಷವೆಲ್ಲಾ ಭೂಮಿಗೆ ಸಂಪೂರ್ಣವಾಗಿ ವಿಶ್ರಾಂತಿಯಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹೊಲದಲ್ಲಿ ತಾನಾಗಿ ಬೆಳೆದ ಫಸಲನ್ನು ನೀವು ಕೂಡಿಸಿಟ್ಟುಕೊಳ್ಳಬಾರದು. ತಾನಾಗಿಯೇ ಬೆಳೆದ ದ್ರಾಕ್ಷಿ ಹಣ್ಣನ್ನು ಶೇಖರಿಸಿಟ್ಟುಕೊಳ್ಳಬಾರದು. ಆ ವರ್ಷ ಪೂರ್ತಿ ಭೂಮಿಗೆ ಸಂಪೂರ್ಣ ವಿಶ್ರಾಂತಿಯಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೊಲದಲ್ಲಿ ತಾನಾಗಿ ಬೆಳೆದ ಪೈರನ್ನು ನೀವು ಕೂಡಿಸಿಟ್ಟುಕೊಳ್ಳಬಾರದು; ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ಹಣ್ಣನ್ನು ಸಂಗ್ರಹಿಸಬಾರದು. ಆ ವರುಷವೆಲ್ಲಾ ಭೂವಿುಗೆ ಸಂಪೂರ್ಣವಾಗಿ ವಿಶ್ರಾಂತಿಯಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ತನ್ನಷ್ಟಕ್ಕೆ ತಾನೇ ಬೆಳೆದಿರುವ ಪೈರನ್ನು ನೀವು ಕೊಯ್ಯಬಾರದು. ಇಲ್ಲವೆ ಕತ್ತರಿಸದಿರುವ ದ್ರಾಕ್ಷಿಯ ಬಳ್ಳಿಯ ದ್ರಾಕ್ಷಿಹಣ್ಣುಗಳನ್ನು ಕೂಡಿಸಬಾರದು. ಏಕೆಂದರೆ ಅದು ದೇಶಕ್ಕೆ ವಿಶ್ರಾಂತಿಯ ವರ್ಷವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:5
5 ತಿಳಿವುಗಳ ಹೋಲಿಕೆ  

ಆಗ ಯೆಹೋವನು ಹಿಜ್ಕೀಯನಿಗೆ, “ಈ ಮಾತುಗಳೆಲ್ಲಾ ಸತ್ಯವೆಂಬುದಕ್ಕೆ ನಿನಗೊಂದು ಗುರುತನ್ನು ಕೊಡುತ್ತೇನೆ. ಬೀಜ ಬಿತ್ತಲು ನಿನಗೆ ಸಾಧ್ಯವಿರಲಿಲ್ಲ. ಆದ್ದರಿಂದ ಈ ವರ್ಷದಲ್ಲಿ ಕೂಳೆಬೆಳೆಯನ್ನೂ ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ನೀನು ಊಟಮಾಡುವೆ. ಆದರೆ ಮೂರನೆಯ ವರ್ಷದಲ್ಲಿ ನೀನೇ ಬಿತ್ತಿದ ಬೀಜದಲ್ಲಿ ಬೆಳೆದ ಬೆಳೆಯನ್ನು ಊಟಮಾಡುವೆ. ಆ ಬೆಳೆಯಿಂದ ನಿನಗೆ ಬೇಕಾದಷ್ಟು ಆಹಾರ ಸಂಗ್ರಹವಾಗುವದು. ನೀನು ದ್ರಾಕ್ಷಾಲತೆಗಳನ್ನು ನೆಟ್ಟು ಅದರ ಫಲಗಳನ್ನು ತಿನ್ನುವೆ.


“ನಾನು ನಿನಗೆ ಸಹಾಯ ಮಾಡುತ್ತೇನೆಂಬುದಕ್ಕೆ ಇದು ಸಾಕ್ಷಿಯ ಗುರುತಾಗಿದೆ: ಈ ವರ್ಷ ನೀವು ತಾನಾಗಿಯೇ ಬೆಳೆಯುವ ಧಾನ್ಯವನ್ನು ತಿನ್ನುತ್ತೀರಿ. ಮುಂದಿನ ವರ್ಷ ನೀವು ಬೀಜದಿಂದ ಬೆಳೆಯುವ ಧಾನ್ಯವನ್ನು ತಿನ್ನುತ್ತೀರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೆಳೆಸಿದ ಧಾನ್ಯವನ್ನು ಒಟ್ಟುಗೂಡಿಸುತ್ತೀರಿ. ನೀವು ದ್ರಾಕ್ಷಿತೋಟಗಳನ್ನು ಬೆಳೆಸುತ್ತೀರಿ; ಅವುಗಳ ದ್ರಾಕ್ಷಿಯನ್ನು ತಿನ್ನುತ್ತೀರಿ.


ಆದರೆ ಏಳನೆಯ ವರ್ಷದಲ್ಲಿ ನೀವು ಭೂಮಿಗೆ ವಿಶ್ರಾಂತಿ ಕೊಡುವಿರಿ. ಇದು ಯೆಹೋವನನ್ನು ಸನ್ಮಾನಿಸಲು ನೇಮಕವಾದ ವಿಶ್ರಾಂತಿಯ ವಿಶೇಷ ಸಮಯವಾಗಿರುವುದು. ನೀವು ನಿಮ್ಮ ಹೊಲಗಳಲ್ಲಿ ಬೀಜವನ್ನು ಬಿತ್ತಬಾರದು, ದ್ರಾಕ್ಷಿತೋಟದ ಕೆಲಸವನ್ನು ಮಾಡಬಾರದು.


“ಸಬ್ಬತ್ ವರ್ಷದಲ್ಲಿ ಭೂಮಿಯು ತಾನಾಗಿ ಫಲಿಸುವ ಬೆಳೆಯಿಂದ ನಿಮಗೆ ಸಾಕಷ್ಟು ಆಹಾರವಿರುವುದು. ನಿಮ್ಮ ದಾಸದಾಸಿಯರಿಗೂ ಸಾಕಷ್ಟು ಆಹಾರವಿರುವುದು. ನಿಮ್ಮ ದೇಶದಲ್ಲಿ ವಾಸವಾಗಿರುವ ಕೂಲಿಯಾಳುಗಳಿಗೂ ಪರದೇಶಸ್ಥರಿಗೂ ಸಾಕಷ್ಟು ಆಹಾರವಿರುವುದು.


ಐವತ್ತನೆಯ ವರ್ಷವು ನಿಮಗೆ ವಿಶೇಷವಾದ ಆಚರಣೆಯಾಗಿರುವುದು. ಬೀಜವನ್ನು ಬಿತ್ತಬೇಡಿರಿ. ತನ್ನಷ್ಟಕ್ಕೆ ತಾನೇ ಬೆಳೆದ ಪೈರುಗಳನ್ನು ಕೊಯ್ಯಬೇಡಿರಿ. ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಿಂದ ದ್ರಾಕ್ಷಿಯನ್ನು ಸಂಗ್ರಹಿಸಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು