Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:6 - ಪರಿಶುದ್ದ ಬೈಬಲ್‌

6 “ಸಬ್ಬತ್ ವರ್ಷದಲ್ಲಿ ಭೂಮಿಯು ತಾನಾಗಿ ಫಲಿಸುವ ಬೆಳೆಯಿಂದ ನಿಮಗೆ ಸಾಕಷ್ಟು ಆಹಾರವಿರುವುದು. ನಿಮ್ಮ ದಾಸದಾಸಿಯರಿಗೂ ಸಾಕಷ್ಟು ಆಹಾರವಿರುವುದು. ನಿಮ್ಮ ದೇಶದಲ್ಲಿ ವಾಸವಾಗಿರುವ ಕೂಲಿಯಾಳುಗಳಿಗೂ ಪರದೇಶಸ್ಥರಿಗೂ ಸಾಕಷ್ಟು ಆಹಾರವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಅಂತಹ ಸಬ್ಬತ್ ಸಂವತ್ಸರದಲ್ಲಿ ತಾನಾಗಿ ಭೂಮಿಯಲ್ಲಿ ಹುಟ್ಟಿದ್ದು ನಿಮಗೂ, ನಿಮ್ಮ ದಾಸದಾಸಿಯರಿಗೂ, ಕೂಲಿಯವರಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೆ ಅಂಥ ಸಬ್ಬತ್ ಸಂವತ್ಸರದಲ್ಲಿ ಭೂಮಿ ತಾನಾಗಿಯೇ ಬೆಳೆದದ್ದು ನಿಮಗೆ, ನಿಮ್ಮ ದಾಸದಾಸಿಯರಿಗೆ, ಕೂಲಿಯವರಿಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ಅಂಥ ಸಬ್ಬತ್ ಸಂವತ್ಸರದಲ್ಲಿ ತಾನಾಗಿ ಭೂವಿುಯಲ್ಲಿ ಹುಟ್ಟಿದ್ದು ನಿಮಗೂ ನಿಮ್ಮ ದಾಸದಾಸಿಯರಿಗೂ ಕೂಲಿಯವರಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇಶದ ಆ ಸಬ್ಬತ್ ವರ್ಷದಲ್ಲಿ ತಾನಾಗಿಯೇ ಬೆಳೆದದ್ದು ನಿಮ್ಮ ಆಹಾರಕ್ಕಾಗಿ ಇರುವುದು. ಅದು ನಿಮಗೂ, ನಿಮ್ಮ ದಾಸದಾಸಿಯರಿಗೂ, ನಿಮ್ಮ ಕೂಲಿಯವರಿಗೂ, ನಿಮ್ಮೊಂದಿಗೆ ಪ್ರವಾಸಿಯಾಗಿರುವ ಪರಕೀಯರಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:6
9 ತಿಳಿವುಗಳ ಹೋಲಿಕೆ  

ವಿಶ್ವಾಸಿಗಳ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಸಮುದಾಯದಲ್ಲಿದ್ದ ಯಾವನಾಗಲಿ ತನ್ನಲ್ಲಿರುವವುಗಳನ್ನು ತನ್ನದೆಂದು ಹೇಳುತ್ತಿರಲಿಲ್ಲ. ಬದಲಾಗಿ, ಅವರು ಪ್ರತಿಯೊಂದನ್ನು ಹಂಚಿಕೊಳ್ಳುತ್ತಿದ್ದರು.


ಎಲ್ಲಾ ವಿಶ್ವಾಸಿಗಳು ಒಟ್ಟಾಗಿ ವಾಸಿಸುತ್ತಿದ್ದರು. ಅವರು ಪ್ರತಿಯೊಂದನ್ನೂ ಹಂಚಿಕೊಳ್ಳುತ್ತಿದ್ದರು.


“ಒಂದುವೇಳೆ ನೀವು, ‘ನಾವು ಬೀಜಗಳನ್ನು ಬಿತ್ತದಿದ್ದರೆ ಅಥವಾ ಪೈರುಗಳನ್ನು ಸಂಗ್ರಹಿಸದಿದ್ದರೆ ಏಳನೆಯ ವರ್ಷದಲ್ಲಿ ನಮಗೆ ತಿನ್ನಲು ಏನೂ ಇರುವುದಿಲ್ಲ’ ಎಂದು ಹೇಳಬಹುದು.


ಆದರೆ ಏಳನೆಯ ವರ್ಷದಲ್ಲಿ ನಿಮ್ಮ ಭೂಮಿಯನ್ನು ಬೀಳುಬಿಡಿರಿ; ಬೀಜಬಿತ್ತಬೇಡಿರಿ. ಏಳನೆಯ ವರ್ಷ ನೀವು ಏನನ್ನೂ ಬೆಳೆಸಬಾರದು. ನಿಮ್ಮ ಭೂಮಿಯಲ್ಲಿ ಏನಾದರೂ ಬೆಳೆದರೆ ಅದನ್ನು ಬಡವರು ತಿನ್ನಲಿ. ಉಳಿದದ್ದನ್ನು ಪ್ರಾಣಿಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳ ವಿಷಯದಲ್ಲಿಯೂ ಆಲಿವ್ ಮರಗಳ ತೋಪಿನ ವಿಷಯದಲ್ಲಿಯೂ ಇದೇ ನಿಯಮವನ್ನು ಪಾಲಿಸಬೇಕು.


ಕೊಯ್ಲಿನ ನಂತರ ತನ್ನಷ್ಟಕ್ಕೆ ತಾನೇ ಬೆಳೆದ ಪೈರನ್ನೂ ಕೊಯ್ಯಬಾರದು. ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ದ್ರಾಕ್ಷಿಯನ್ನು ಸಂಗ್ರಹಿಸಬಾರದು. ಭೂಮಿಗೆ ಒಂದು ವರ್ಷದ ವಿಶ್ರಾಂತಿಯಿರುವುದು.


ನಿಮ್ಮ ದನಗಳಿಗೂ ಇತರ ಪ್ರಾಣಿಗಳಿಗೂ ತಿನ್ನುವುದಕ್ಕೆ ಸಾಕಷ್ಟು ಆಹಾರವಿರುವುದು.


ಚಿಂತೆ ಮಾಡಬೇಡಿರಿ! ಆರನೆಯ ವರ್ಷದಲ್ಲಿ ನನ್ನ ಆಶೀರ್ವಾದವು ನಿಮ್ಮ ಮೇಲಿರುವುದು. ಆ ವರ್ಷ ಭೂಮಿಯಲ್ಲಿ ಬೆಳೆದ ಪೈರುಗಳು ಮೂರು ವರ್ಷಗಳ ಬೆಳೆಯಷ್ಟಾಗುವದು.


“ನಾನು ನಿನಗೆ ಸಹಾಯ ಮಾಡುತ್ತೇನೆಂಬುದಕ್ಕೆ ಇದು ಸಾಕ್ಷಿಯ ಗುರುತಾಗಿದೆ: ಈ ವರ್ಷ ನೀವು ತಾನಾಗಿಯೇ ಬೆಳೆಯುವ ಧಾನ್ಯವನ್ನು ತಿನ್ನುತ್ತೀರಿ. ಮುಂದಿನ ವರ್ಷ ನೀವು ಬೀಜದಿಂದ ಬೆಳೆಯುವ ಧಾನ್ಯವನ್ನು ತಿನ್ನುತ್ತೀರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೆಳೆಸಿದ ಧಾನ್ಯವನ್ನು ಒಟ್ಟುಗೂಡಿಸುತ್ತೀರಿ. ನೀವು ದ್ರಾಕ್ಷಿತೋಟಗಳನ್ನು ಬೆಳೆಸುತ್ತೀರಿ; ಅವುಗಳ ದ್ರಾಕ್ಷಿಯನ್ನು ತಿನ್ನುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು