Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:1 - ಪರಿಶುದ್ದ ಬೈಬಲ್‌

1 “ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ. ಆರಾಧಿಸಲು ಕೆತ್ತಿದ ವಿಗ್ರಹಗಳನ್ನಾಗಲಿ ಕಲ್ಲುಕಂಬಗಳನ್ನಾಗಲಿ ನಿಮ್ಮ ದೇಶದಲ್ಲಿ ಸ್ಥಾಪಿಸಬೇಡಿರಿ. ಯಾಕೆಂದರೆ ನಾನೇ ನಿಮ್ಮ ದೇವರಾದ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಅಥವಾ ಕಲ್ಲು ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವುದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬೇಡಿ; ಕೆತ್ತಿದ ಪ್ರತಿಮೆಯನ್ನಾಗಲಿ, ಕಲ್ಲಿನ ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬೇಡಿ; ಆರಾಧನೆಗಾಗಿ ವಿಚಿತ್ರವಾಗಿ ಕೆತ್ತಿದ ಸ್ತಂಭಗಳನ್ನು ನಿಮ್ಮ ನಾಡಿನಲ್ಲಿ ಇಡಬೇಡಿ. ನಾನೇ ನಿಮ್ಮ ಸರ್ವೇಶ್ವರನಾದ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಕಲ್ಲುಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ ‘ನೀವು ನಿಮಗಾಗಿ ವಿಗ್ರಹಗಳನ್ನಾಗಲಿ, ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ, ಇಲ್ಲವೆ ನಿಲ್ಲಿಸುವ ಪ್ರತಿಮೆಯನ್ನು ಮಾಡಿಕೊಳ್ಳಬೇಡಿರಿ, ಕಲ್ಲಿನ ವಿಗ್ರಹಗಳನ್ನು ನಿಮ್ಮ ದೇಶದಲ್ಲಿಟ್ಟುಕೊಂಡು ಅದಕ್ಕೆ ಅಡ್ಡಬೀಳಬೇಡಿರಿ. ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:1
30 ತಿಳಿವುಗಳ ಹೋಲಿಕೆ  

“ವಿಗ್ರಹಾರಾಧನೆ ಮಾಡಬೇಡಿರಿ! ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು!


“‘ಸುಳ್ಳುದೇವರನ್ನು ಮಾಡಿ ಗುಪ್ತ ಸ್ಥಳದಲ್ಲಿಡುವವನು ಶಾಪಗ್ರಸ್ತನಾಗಲಿ; ಆ ದೇವರುಗಳು ಮನುಷ್ಯನ ಕೈಕೆಲಸವೇ; ಕಲ್ಲು, ಮರ, ಹಿತ್ತಾಳೆಗಳಿಂದ ಮಾಡಿದವುಗಳೇ. ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.’ “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


ಆ ದೇಶದ ನಿವಾಸಿಗಳನ್ನೆಲ್ಲ ಹೊರಡಿಸಿಬಿಟ್ಟು ಅವರ ಕೆತ್ತಿದ ಪ್ರತಿಮೆಗಳನ್ನು ಮತ್ತು ಲೋಹದ ವಿಗ್ರಹಗಳನ್ನು ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.


“ಅವರ ದೇವರುಗಳನ್ನು ಪೂಜಿಸಬೇಡಿರಿ. ಆ ದೇವರುಗಳಿಗೆ ನಮಸ್ಕರಿಸಬೇಡಿರಿ. ಅವರ ಆಚರಣೆಗಳನ್ನು ಅನುಸರಿಸಬೇಡಿರಿ. ನೀವು ಅವರ ವಿಗ್ರಹಗಳನ್ನು ನಾಶಮಾಡಬೇಕು. ಅವರ ಸ್ಮಾರಕ ಸ್ತಂಭಗಳನ್ನು ಕೆಡವಿಹಾಕಬೇಕು.


ಆದ್ದರಿಂದ ನನ್ನೊಡನೆ ಸ್ಪರ್ಧಿಸಲು, ನೀವು ಬೆಳ್ಳಿಬಂಗಾರಗಳಿಂದ ಮೂರ್ತಿಗಳನ್ನು ಮಾಡಿಕೊಳ್ಳಬಾರದು. ಈ ಸುಳ್ಳು ದೇವರುಗಳನ್ನು ನೀವು ಮಾಡಿಕೊಳ್ಳಲೇಬಾರದು.”


ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.


“ನಾವು ದೇವರ ಮಕ್ಕಳಾಗಿದ್ದೇವೆ. ಆದ್ದರಿಂದ ಜನರು ಊಹಿಸಿಕೊಳ್ಳುವ ರೀತಿಯಲ್ಲಾಗಲಿ ನಿರ್ಮಿಸುವ ರೀತಿಯಲ್ಲಾಗಲಿ ದೇವರಿದ್ದಾನೆಂದು ನೀವು ಯೋಚಿಸಕೂಡದು. ಆತನು ಬೆಳ್ಳಿಬಂಗಾರ ಮತ್ತು ಕಲ್ಲುಗಳ ರೂಪದಲ್ಲಿಲ್ಲ.


“ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ.


ಆ ಸಮಯದಲ್ಲಿ ಜನರು ತಮ್ಮ ಬೆಳ್ಳಿಬಂಗಾರಗಳ ವಿಗ್ರಹಗಳನ್ನೆತ್ತಿ ಬಿಸಾಡಿಬಿಡುವರು. ಈ ವಿಗ್ರಹಗಳನ್ನು ಜನರು ಪೂಜಿಸುವದಕ್ಕಾಗಿ ಮಾಡಿಕೊಂಡರು. ಬಾವಲಿಗಳೂ, ಇಲಿಗಳೂ ವಾಸಿಸುವ ಸಂದುಗಳಲ್ಲಿ ಈ ವಿಗ್ರಹಗಳನ್ನು


ಜನರು ತಮ್ಮ ವಿಗ್ರಹಗಳನ್ನು ಪೂಜಿಸುವರು. ಅವರು ತಮ್ಮ “ದೇವರುಗಳ” ಬಗ್ಗೆ ಜಂಬಕೊಚ್ಚುವರು. ಆದರೆ ಅವರು ನಾಚಿಕೆಗೀಡಾಗುವರು. ಅವರ “ದೇವರುಗಳು” ಯೆಹೋವನಿಗೆ ಅಡ್ಡಬಿದ್ದು ಆರಾಧಿಸುತ್ತವೆ.


“ಯೆಹೋವನೆಂಬ ನಾನೇ ನಿಮ್ಮ ದೇವರು. ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಆ ದೇಶದಿಂದ ಹೊರಗೆ ನಡಿಸಿದವನು ನಾನೇ.


ಯಾಕೆಂದರೆ, ಇಸ್ರೇಲರು ನನ್ನ ಸೇವಕರಾಗಿದ್ದಾರೆ. ನಾನು ಅವರನ್ನು ಈಜಿಪ್ಟಿನಲ್ಲಿ ದಾಸತ್ವದಿಂದ ಬಿಡಿಸಿದ್ದರಿಂದ ಅವರು ನನ್ನ ದಾಸರಾಗಿದ್ದಾರೆ. ನಾನೇ ನಿಮ್ಮ ದೇವರಾದ ಯೆಹೋವನು!


“ಯೆಹೋವನು ಹೇಳಿದ್ದೇನೆಂದರೆ: ‘ನಾನು ನಿಮ್ಮ ದೇವರಾದ ಯೆಹೋವನು. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ನಿಮ್ಮನ್ನು ಅಲ್ಲಿಂದ ಬಿಡುಗಡೆ ಮಾಡಿದೆನು. ಆದ್ದರಿಂದ ನೀವು ಈ ಆಜ್ಞೆಗಳಿಗೆ ವಿಧೇಯರಾಗಬೇಕು:


ಇಸ್ರೇಲರು ಎತ್ತರವಾದ ಸ್ಥಳಗಳನ್ನು ನಿರ್ಮಿಸಿ, ಆತನನ್ನು ಕೋಪಗೊಳಿಸಿದರು. ಸುಳ್ಳುದೇವರುಗಳ ವಿಗ್ರಹಗಳನ್ನು ರೂಪಿಸಿ ಆತನನ್ನು ರೇಗಿಸಿದರು.


ಪಶುವಿನ ಬಲ ತೊಡೆಯ ಭಾಗವು ಸಮಾಧಾನಯಜ್ಞದಲ್ಲಿ ರಕ್ತವನ್ನು ಮತ್ತು ಕೊಬ್ಬನ್ನು ಸಮರ್ಪಿಸುವ ಯಾಜಕನಿಗೆ ಸೇರುತ್ತವೆ.


ದಾನ್ಯರು ದಾನ್ ನಗರದಲ್ಲಿ ಆ ವಿಗ್ರಹಗಳನ್ನು ಪ್ರತಿಷ್ಠಾಪಿಸಿದರು. ಅವರು ಗೇರ್ಷೋಮನ ಮಗನಾದ ಯೆಹೋನಾತಾನನನ್ನು ತಮ್ಮ ಯಾಜಕನನ್ನಾಗಿ ಮಾಡಿಕೊಂಡರು. ಗೇರ್ಷೋಮನು ಮೋಶೆಯ ಮಗನಾಗಿದ್ದನು. ಇಸ್ರೇಲರನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗುವವರೆಗೆ ಯೆಹೋನಾತಾನನು ಮತ್ತು ಅವನ ಮಕ್ಕಳು ದಾನ್ಯರ ಯಾಜಕರಾಗಿದ್ದರು.


ಅನ್ಯರು ಮಾಡುವಂತಹ ಕಾರ್ಯಗಳನ್ನೇ ಮಾಡತೊಡಗಿದರು. ಇಸ್ರೇಲರು ಈಜಿಪ್ಟಿನಿಂದ ತಮ್ಮ ದೇಶಕ್ಕೆ ಬಂದಾಗ ಯೆಹೋವನು ಅಲ್ಲಿಯ ನಿವಾಸಿಗಳನ್ನು ಬಲವಂತವಾಗಿ ಹೊರಗಟ್ಟಿದ್ದನು. ಆದರೆ ಇಸ್ರೇಲರು ತಮ್ಮನ್ನು ಆಳುವುದಕ್ಕಾಗಿ ದೇವರನ್ನು ತೊರೆದು ರಾಜರನ್ನು ಆರಿಸಿಕೊಂಡರು.


ಇಸ್ರೇಲರು ಪ್ರತಿಯೊಂದು ಬೆಟ್ಟದ ಮೇಲೂ ಪ್ರತಿಯೊಂದು ಹಸಿರುಗಿಡಗಳ ಅಡಿಯಲ್ಲೂ ಸ್ಮಾರಕಕಲ್ಲುಗಳನ್ನು ಮತ್ತು ಅಶೇರ್ ವಿಗ್ರಹಕಲ್ಲುಗಳನ್ನು ನಿಲ್ಲಿಸಿದರು.


ಜನರು ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸುವುದನ್ನು ನಿಲ್ಲಿಸಿದರು. ಅವರು ಚಿನ್ನದ ಎರಡು ಬಸವನ ಮೂರ್ತಿಗಳನ್ನು ನಿರ್ಮಿಸಿದರು. ಅವರು ಅಶೇರ ಸ್ತಂಭಗಳನ್ನು ನಿರ್ಮಿಸಿದರು. ಅವರು ಪರಲೋಕದ ಎಲ್ಲಾ ನಕ್ಷತ್ರಗಳನ್ನು ಮತ್ತು ಬಾಳ್ ದೇವರನ್ನು ಪೂಜಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು