Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:16 - ಪರಿಶುದ್ದ ಬೈಬಲ್‌

16 ಆಗ ನಾನು ನಿಮ್ಮ ಮಧ್ಯೆ ಭಯಂಕರ ಸಂಗತಿಗಳು ನಡೆಯುವಂತೆ ಮಾಡುವೆ. ನೀವು ವ್ಯಾಧಿಯಿಂದಲೂ ಜ್ವರದಿಂದಲೂ ನರಳುವಂತೆ ಮಾಡುವೆ. ಅವು ನಿಮ್ಮ ಕಣ್ಣುಗಳನ್ನು ನಾಶಮಾಡಿ ನಿಮ್ಮ ಪ್ರಾಣವನ್ನು ತೆಗೆದುಬಿಡುತ್ತವೆ; ನೀವು ಬೀಜ ಬಿತ್ತಿದರೂ ಅದರ ಫಲವು ದೊರೆಯುವುದಿಲ್ಲ: ನಿಮ್ಮ ವೈರಿಗಳು ನಿಮ್ಮ ಬೆಳೆಗಳನ್ನು ತಿಂದುಬಿಡುವರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ನಿಮಗೆ ಮಾಡುವುದೇನೆಂದರೆ, ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೀವು ಈ ದಂಡನೆಗಳಿಗೆ ಗುರಿಯಾಗುವಿರಿ. ನಿಮಗೆ ಕ್ಷಯ ರೋಗ, ಚಳಿಜ್ವರ ಮುಂತಾದ ಭೀಕರ ವ್ಯಾಧಿಗಳು ಬರುವಂತೆ ಮಾಡುವೆನು. ಇವುಗಳ ನಿಮಿತ್ತ ನೀವು ಕಂಗೆಡುವಿರಿ, ಮನಗುಂದಿ ಹೋಗುವಿರಿ. ನಿಮ್ಮ ಬಿತ್ತನೆಯ ಫಲ ನಿಮಗೆ ಸಿಗದೆ ಹೋಗುವುದು. ಅದು ಶತ್ರುಗಳ ಪಾಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ನಿಮಗೆ ಮಾಡುವದೇನಂದರೆ - ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜ ಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ಸಹ ಇದನ್ನು ನಿಮಗೆ ಮಾಡುವೆನು: ನಿಮ್ಮ ಮೇಲೆ ಭೀತಿಯನ್ನು ಉಂಟುಮಾಡುವ, ಕಣ್ಣುಗಳನ್ನು ಕ್ಷೀಣಿಸುವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗುವಂತೆಯೂ ಮಾಡುವ ಕ್ಷಯರೋಗವನ್ನೂ ಚಳಿಜ್ವರವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ಬೀಜವನ್ನು ಬಿತ್ತುವಿರಿ. ಏಕೆಂದರೆ ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:16
35 ತಿಳಿವುಗಳ ಹೋಲಿಕೆ  

ನಾನು ಬಿತ್ತಿ ಬೆಳೆಸಿದ ಬೆಳೆಗಳನ್ನು ಬೇರೆಯವರು ತಿನ್ನಲಿ; ನಾನು ಬೆಳೆಸಿದ ಸಸಿಗಳು ಕೀಳಲ್ಪಡಲಿ.


ನನ್ನ ಯಜ್ಞವೇದಿಕೆಯ ಬಳಿಯಲ್ಲಿ ಯಾಜಕಸೇವೆ ಮಾಡುವುದಕ್ಕಾಗಿ ನಾನು ಒಬ್ಬನನ್ನು ಉಳಿಸಿಕೊಳ್ಳುವೆನು. ಅವನು ಬಹುಮುಪ್ಪಿನವರೆಗೂ ಬದುಕುವನು. ಅವನ ಕಣ್ಣುಗಳು ಕಾಣದೆ ಹೋಗುವವರೆಗೂ ಬಲಹೀನನಾಗುವವರೆಗೂ ಅವನು ಬದುಕುವನು. ಉಳಿದ ನಿನ್ನ ಸಂತತಿಯವರೆಲ್ಲಾ ಖಡ್ಗದಿಂದ ಸಾಯುವರು.


ನೀವು ಬೀಜ ಬಿತ್ತುವಿರಿ, ಆದರೆ ಪೈರು ಕೊಯ್ಯುವುದಿಲ್ಲ. ಆಲೀವ್ ಕಾಯಿಗಳನ್ನು ಗಾಣದಲ್ಲಿ ಹಾಕಿ ಎಣ್ಣೆ ತೆಗೆಯುವಿರಿ. ಆದರೆ ನಿಮಗೆ ಎಣ್ಣೆಯೇ ಸಿಗುವದಿಲ್ಲ. ನೀವು ದ್ರಾಕ್ಷಿಹಣ್ಣುಗಳನ್ನು ತೊಟ್ಟಿಯಲ್ಲಿ ಹಾಕಿ ತುಳಿಯುವಿರಿ, ಆದರೆ ಕುಡಿಯಲು ದ್ರಾಕ್ಷಾರಸವೇ ಸಿಗುವದಿಲ್ಲ.


“ಆದ್ದರಿಂದ ನರಪುತ್ರನೇ, ನನ್ನ ಪರವಾಗಿ ಇಸ್ರೇಲ್ ಜನರೊಂದಿಗೆ ಮಾತನಾಡು. ‘ನಾವು ಪಾಪಮಾಡಿದ್ದೇವೆ. ಕಟ್ಟಳೆಗಳನ್ನು ಮೀರಿದ್ದೇವೆ. ನಮ್ಮ ಪಾಪಗಳು ಹೊರಲಾರದಷ್ಟು ಭಾರವಾಗಿವೆ. ನಾವು ಆ ಪಾಪಗಳಿಂದಾಗಿ ಕ್ಷೀಣಿಸುತ್ತಿದ್ದೇವೆ. ನಾವು ಜೀವಿಸಬೇಕಾದರೆ ಏನು ಮಾಡಬೇಕು?’ ಎಂದು ಅವರು ಕೇಳಿಯಾರು.


ಆ ಸೈನಿಕರು ನೀವು ಬೆಳೆದ ಬೆಳೆಯನ್ನು ತಿಂದುಬಿಡುವರು. ಅವರು ನಿಮ್ಮೆಲ್ಲ ಆಹಾರವನ್ನು ತಿಂದುಬಿಡುವರು. ಅವರು ನಿಮ್ಮ ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ತಿಂದುಬಿಡುವರು (ನಾಶಮಾಡುವರು). ಅವರು ನಿಮ್ಮ ದನಕರುಗಳ ಹಿಂಡುಗಳನ್ನು, ಕುರಿಗಳ ಮಂದೆಗಳನ್ನು ತಿಂದುಬಿಡುವರು. ಅವರು ನಿಮ್ಮ ದ್ರಾಕ್ಷಿಗಳನ್ನೂ ನಿಮ್ಮ ಅಂಜೂರಗಳನ್ನೂ ತಿಂದುಬಿಡುವರು. ಅವರು ತಮ್ಮ ಖಡ್ಗಗಳಿಂದ ನಿಮ್ಮ ಭದ್ರವಾದ ನಗರಗಳನ್ನು ನಾಶಮಾಡುವರು. ನೀವು ನಂಬಿಕೊಂಡಿದ್ದ ನಿಮ್ಮ ಭದ್ರವಾದ ನಗರಗಳನ್ನು ಅವರು ಹಾಳುಮಾಡುತ್ತಾರೆ.”


ಆದ್ದರಿಂದ ಆತನು ಆಪತ್ತುಗಳನ್ನು ಬರಮಾಡಿ ಅವರ ಅಯೋಗ್ಯ ಜೀವಿತಗಳನ್ನು ಉಸಿರಿನಂತೆ ಅಂತ್ಯಗೊಳಿಸಿದನು.


ಅವರು ನಿಮ್ಮ ಪಶುಗಳನ್ನು ಅಟ್ಟಿಸಿಕೊಂಡು ಹೋಗುವರು; ನೀವು ಬೆಳೆದ ಬೆಳೆಯನ್ನು ಕೊಂಡೊಯ್ಯುವರು. ನಿಮ್ಮನ್ನು ನಾಶಪಡಿಸುವ ತನಕ ಅವರು ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು. ಅವರು ನಿಮಗೆ ದವಸಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಹಸುಗಳನ್ನಾಗಲಿ ಕುರಿಗಳನ್ನಾಗಲಿ ಮೇಕೆಗಳನ್ನಾಗಲಿ ಬಿಟ್ಟುಹೋಗುವುದಿಲ್ಲ. ಅವರು ನಿಮ್ಮನ್ನು ನಾಶಪಡಿಸುವ ತನಕ ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು.


“ಪ್ರಭುವು ತನ್ನ ಜನರಿಗೆ ನ್ಯಾಯತೀರ್ಪು ನೀಡುತ್ತಾನೆ” ಎಂದು ಸಹ ದೇವರು ಹೇಳಿದ್ದಾನೆ. ಜೀವಸ್ವರೂಪನಾದ ದೇವರ ಹಿಡಿತಕ್ಕೆ ಸಿಕ್ಕಿ ಬೀಳುವುದು ಪಾಪಿಗೆ ಭಯಂಕರವಾಗಿದೆ.


ಆದರೆ ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧ ಮಾಡಿದ ಜನಾಂಗಗಳನ್ನೆಲ್ಲಾ ಯೆಹೋವನು ಶಿಕ್ಷಿಸುವನು. ಅವರಿಗೆ ಭಯಂಕರ ರೋಗವನ್ನು ಬರಮಾಡುವನು. ಅವರು ಜೀವಂತರಾಗಿರುವಾಗಲೇ ಅವರ ಚರ್ಮವು ಕೊಳೆತುಹೋಗುವದು. ಅವರ ಕಣ್ಣುಗಳು ಅವು ಇರುವಲ್ಲಿಯೇ ಕೊಳೆತುಹೋಗುವವು. ಅವರ ಬಾಯೊಳಗೆ ಅವರ ನಾಲಿಗೆಗಳು ಕೊಳೆತುಹೋಗುವವು.


ನೀವು ಬಹಳ ಬೀಜವನ್ನು ಭೂಮಿಯಲ್ಲಿ ಬಿತ್ತಿದ್ದರೂ ಸ್ವಲ್ಪವೇ ಪೈರನ್ನು ಕೊಯ್ದಿದ್ದೀರಿ. ನಿಮಗೆ ಊಟಮಾಡಲು ಆಹಾರವಿದ್ದರೂ ತೃಪ್ತಿಯಾಗುವಷ್ಟಿಲ್ಲ. ನಿಮ್ಮಲ್ಲಿ ಕುಡಿಯಲು ಸ್ವಲ್ಪ ಪಾನೀಯವಿದ್ದರೂ ಕುಡಿದು ಅಮಲೇರುವಷ್ಟು ಇಲ್ಲ. ನಿಮ್ಮಲ್ಲಿ ತೊಟ್ಟುಕೊಳ್ಳಲು ಸ್ವಲ್ಪ ಬಟ್ಟೆಯಿದ್ದರೂ ನಿಮ್ಮನ್ನು ಬೆಚ್ಚಗಿಟ್ಟುಕೊಳ್ಳುವಷ್ಟು ಇಲ್ಲ. ನೀವು ಸ್ವಲ್ಪ ಹಣ ಸಂಪಾದನೆ ಮಾಡಿದರೂ ಅದು ಹೇಗೆ ಖರ್ಚಾಗುತ್ತದೋ ನಿಮಗೆ ತಿಳಿಯುವುದಿಲ್ಲ. ನಿಮ್ಮ ಜೇಬಿಗೆ ರಂಧ್ರ ಇದೆಯೋ ಎಂಬಂತೆ ಅದು ಖರ್ಚಾಗುತ್ತದೆ.’”


ಅದು ನಿನ್ನ ಹೆಸರು. ಏಕೆಂದರೆ ಯೆಹೋವನು ಹೇಳುತ್ತಾನೆ: ‘ನಾನು ತಕ್ಷಣ ನಿನ್ನನ್ನು ನಿನಗೆ ಭಯಂಕಾರಿಯನ್ನಾಗಿ ಮಾಡುವೆನು. ನಾನು ನಿನ್ನನ್ನು ನಿನ್ನ ಎಲ್ಲಾ ಸ್ನೇಹಿತರಿಗೆ ಭಯಂಕಾರಿಯನ್ನಾಗಿ ಮಾಡುವೆನು. ವೈರಿಗಳು ಖಡ್ಗಗಳಿಂದ ನಿನ್ನ ಸ್ನೇಹಿತರನ್ನು ಕೊಲ್ಲುವುದನ್ನು ನೀನು ನೋಡುವೆ. ಯೆಹೂದದ ಎಲ್ಲಾ ಜನರನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುವೆನು. ಅವನು ಯೆಹೂದ್ಯರನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು; ಅವನ ಸೈನಿಕರು ಯೆಹೂದ್ಯರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕುವರು.


ಅನೇಕ ಹೆಂಗಸರು ತಮ್ಮ ಗಂಡಂದಿರನ್ನು ಕಳೆದುಕೊಳ್ಳುವರು. ಸಮುದ್ರದಡದಲ್ಲಿದ್ದ ಮರಳು ಕಣಗಳಿಗಿಂತ ವಿಧವೆಯರ ಸಂಖ್ಯೆ ಹೆಚ್ಚಾಗುವುದು. ಮಧ್ಯಾಹ್ನದಲ್ಲಿಯೇ ನಾನು ಬಾತುಕನನ್ನು ತರುವೆನು. ಆ ಘಾತುಕನು ಯೆಹೂದದ ತಾಯಂದಿರ ಮೇಲೆರಗುವನು. ನಾನು ಯೆಹೂದದ ಜನರಿಗೆ ನೋವನ್ನು ಮತ್ತು ಭಯವನ್ನು ತರುವೆನು; ಅತೀ ಶೀಘ್ರದಲ್ಲಿಯೇ ಹೀಗಾಗುವಂತೆ ಮಾಡುವೆನು.


ಜನರು ಗೋಧಿಯನ್ನು ಬಿತ್ತುವರು; ಆದರೆ ಅವರು ಕೇವಲ ಮುಳ್ಳಿನ ರಾಶಿಯನ್ನು ಕೊಯ್ಯುವರು. ಅವರು ತುಂಬ ದಣಿಯುವವರೆಗೆ ಕಷ್ಟಪಟ್ಟು ಕೆಲಸ ಮಾಡುವರು. ಆದರೆ ಆ ಎಲ್ಲಾ ಕೆಲಸದ ಪ್ರತಿಫಲವಾಗಿ ಅವರಿಗೆ ಏನೂ ಸಿಗುವದಿಲ್ಲ. ಅವರು ತಮ್ಮ ಬೆಳೆಗಳಿಂದ ನಾಚಿಕೆಪಟ್ಟುಕೊಳ್ಳುವರು. ಯೆಹೋವನ ರೋಷವು ಹಾಗೆಲ್ಲ ಮಾಡುವುದು.”


ನೀವು ಕೈದಿಗಳಂತೆ ತಲೆತಗ್ಗಿಸುವಿರಿ, ಸತ್ತಹೆಣಗಳಂತೆ ನೆಲದ ಮೇಲೆ ಬೀಳುವಿರಿ. ಆದರೆ ಅದರಿಂದ ನಿಮಗೆ ಪ್ರಯೋಜನವಾಗದು. ದೇವರು ನಿಮ್ಮ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ನಿಮ್ಮನ್ನು ಇನ್ನೂ ಶಿಕ್ಷಿಸಲು ಸಿದ್ಧನಾಗಿದ್ದಾನೆ.


ದಾವೀದನ ವಂಶದವರಿಗೆ ಒಂದು ಸಂದೇಶವು ಕಳುಹಿಸಲ್ಪಟ್ಟಿತು, “ಅರಾಮ್ಯರ ಸೈನ್ಯ ಮತ್ತು ಎಫ್ರಾಯೀಮ್ಯರ ಸೈನ್ಯ (ಇಸ್ರೇಲ್) ಒಟ್ಟಾಗಿ ಶಿಬಿರ ಹೂಡಿದ್ದಾರೆ” ಎಂಬುದೇ ಆ ಸಂದೇಶ. ಅರಸನಾದ ಆಹಾಜನು ಈ ಸಂದೇಶವನ್ನು ಕೇಳಿದಾಗ, ಅವನೂ ಅವನ ಜನರೂ ಬಹಳವಾಗಿ ಭಯಹಿಡಿದವರಾದರು. ಅಡವಿಯ ಮರಗಳು ಬಿರುಗಾಳಿಗೆ ತತ್ತರಿಸುತ್ತವೋ ಎಂಬಂತೆ ಅವರು ತತ್ತರಿಸಿದರು.


ನನ್ನ ವೈರಿಯನ್ನು ಅವನ ದುಷ್ಕೃತ್ಯಗಳಿಗೆ ತಕ್ಕಂತೆ ದಂಡಿಸು. ಅವನ ಮೇಲೆ ತಪ್ಪು ಹೊರಿಸಲು ದೂಷಕನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು.


ಇದ್ದಕ್ಕಿದ್ದಂತೆ ಆಪತ್ತು ಬರುವುದು, ಆಗ ಆ ಗರ್ವಿಷ್ಠರು ನಾಶವಾಗುವರು. ಭಯಂಕರವಾದ ಸಂಗತಿಗಳು ಅವರಿಗೆ ಸಂಭವಿಸುತ್ತವೆ; ಆಗ ಅವರು ಅಂತ್ಯಗೊಳ್ಳುವರು.


ಅವನು ಅದನ್ನು ಕೀಳಲು ಅದು ಬೆನ್ನಿನಿಂದ ಬರುವುದು; ಥಳಥಳಿಸುವ ಬಾಣದ ತುದಿಯು ಪಿತ್ತಕೋಶದೊಳಗಿಂದ ಬರುವುದು. ಅವನು ಅಪಾಯದಿಂದ ದಿಗ್ಭ್ರಾಂತನಾಗುವನು.


ಎಲ್ಲಾ ಕಡೆಗಳಿಂದಲೂ ಅಪಾಯವು ಅವನನ್ನು ಭಯಪಡಿಸುತ್ತದೆ. ಅವನಿಡುವ ಪ್ರತಿಯೊಂದು ಹೆಜ್ಜೆಯನ್ನೂ ಭಯವು ಹಿಂಬಾಲಿಸುತ್ತದೆ.


ಆ ಸಮಯದಲ್ಲಿ ಯೆಹೋವನ ದೂತನು ಗಿದ್ಯೋನ ಎಂಬ ವ್ಯಕ್ತಿಯ ಬಳಿಗೆ ಬಂದನು. ಯೆಹೋವನ ದೂತನು ಒಫ್ರ ಎಂಬ ಊರಲ್ಲಿ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಆ ಗಿಡವು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಯೋವಾಷನು ಗಿದ್ಯೋನನ ತಂದೆ. ಗಿದ್ಯೋನನು ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು. ಯೆಹೋವನ ದೂತನು ಗಿದ್ಯೋನನ ಹತ್ತಿರ ಕುಳಿತುಕೊಂಡನು. ಮಿದ್ಯಾನ್ಯರಿಗೆ ಗೋಧಿ ಕಾಣಬಾರದೆಂದು ಗಿದ್ಯೋನನು ಮರೆಯಾಗಿದ್ದನು.


ರಸ್ತೆಗಳಲ್ಲಿ ಸಿಪಾಯಿಗಳು ಅವರನ್ನು ಕೊಲ್ಲುವರು. ಅವರ ಮನೆಗಳಲ್ಲಿ ಭಯಂಕರ ಸಂಗತಿಗಳು ನಡೆಯುವವು. ಯುವಕಯುವತಿಯರನ್ನೂ ಸಿಪಾಯಿಗಳು ಕೊಲ್ಲುವರು, ಮುದುಕರನ್ನೂ ಎಳೆಗೂಸುಗಳನ್ನೂ ಸಂಹರಿಸುವರು.


ಆತನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಯೋಗ್ಯವಾದವುಗಳನ್ನು ಮಾಡಬೇಕು; ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಬೇಕು. ಆಗ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ಕಾಯಿಲೆಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನಾಗಿದ್ದೇನೆ” ಎಂದು ಹೇಳಿದನು.


“ಭೂಮಿಯು ಬಹಳ ಬರಡಾಗಿ ಅದರ ಮೇಲೆ ಬೆಳಗಳೇ ಬೆಳೆಯದಂತಾಗಬಹುದು, ಬಹುಶಃ ಘೋರವಾದ ವ್ಯಾಧಿಗಳು ಜನರಲ್ಲಿ ಹರಡಬಹುದು. ಬೆಳೆಯುವ ಬೆಳೆಗಳೆಲ್ಲ ಬಹುಶಃ ಕ್ರಿಮಿಕೀಟಗಳಿಂದ ನಾಶವಾಗಬಹುದು. ಇಲ್ಲವೆ ನಿನ್ನ ಜನರ ಮೇಲೆ ಕೆಲವು ನಗರಗಳಲ್ಲಿ ಅವರ ಶತ್ರುಗಳು ಆಕ್ರಮಣ ಮಾಡಬಹುದು. ನಿನ್ನ ಜನರಲ್ಲಿ ಅನೇಕರು ವ್ಯಾಧಿಗೆ ಒಳಗಾಗಬಹುದು.


ದುಷ್ಟರ ಮನೆಯ ಮೇಲೆ ಯೆಹೋವನ ಶಾಪವಿರುವುದು; ಆದರೆ ನೀತಿವಂತರ ಮನೆಯ ಮೇಲೆ ಆತನ ಆಶೀರ್ವಾದವಿರುವುದು.


ಯೆಹೋವನು ವಾಗ್ದಾನವನ್ನು ಮಾಡಿರುತ್ತಾನೆ. ಆತನ ಸ್ವಂತ ಹೆಸರೇ ಅದಕ್ಕೆ ಸಾಕ್ಷಿಯಾಗಿದೆ. ಆತನು ತನ್ನ ಸಾಮರ್ಥ್ಯದಿಂದ ವಾಗ್ದಾನವನ್ನು ನೆರವೇರಿಸುವನು. ಯೆಹೋವನು ಹೇಳಿದ್ದೇನೆಂದರೆ, “ನಿನ್ನ ಆಹಾರವನ್ನು ನಾನು ನಿನ್ನ ವೈರಿಗಳಿಗೆ ಮತ್ತೆ ಕೊಡುವದಿಲ್ಲವೆಂದು ವಾಗ್ದಾನ ಮಾಡುತ್ತೇನೆ. ನೀನು ತಯಾರಿಸುವ ದ್ರಾಕ್ಷಾರಸವನ್ನು ಇನ್ನು ಮುಂದೆ ನಿನ್ನ ವೈರಿಗಳು ಸೇವಿಸುವದಿಲ್ಲವೆಂದು ನಾನು ವಾಗ್ದಾನ ಮಾಡುತ್ತೇನೆ.


ನಾನು ಅವರ ವಿರುದ್ಧ ನಾಲ್ಕು ರೀತಿಯ ವಿನಾಶಕರನ್ನು ಕಳುಹಿಸುತ್ತೇನೆ.’ ಇದು ಯೆಹೋವನ ನುಡಿ. ‘ಅವರನ್ನು ಕೊಲೆಮಾಡಲು ಖಡ್ಗಧಾರಿಗಳಾದ ಶತ್ರುಗಳನ್ನು ಕಳುಹಿಸುತ್ತೇನೆ. ಅವರ ದೇಹಗಳನ್ನು ಎಳೆದುಕೊಂಡು ಹೋಗುವುದಕ್ಕಾಗಿ ನಾಯಿಗಳನ್ನು ಕಳುಹಿಸುತ್ತೇನೆ. ಅವರ ದೇಹಗಳನ್ನು ತಿನ್ನಲು ಮತ್ತು ನಾಶಮಾಡಲು ಗಾಳಿಯಲ್ಲಿ ಹಾರಾಡುವ ಪಕ್ಷಿಗಳನ್ನೂ ಕಾಡುಪ್ರಾಣಿಗಳನ್ನೂ ಕಳುಹಿಸುತ್ತೇನೆ.


ನೀವು ನಿಮ್ಮ ಮುಂಡಾಸವನ್ನು ಧರಿಸಿಕೊಂಡು ಕಾಲಿಗೆ ಕೆರವನ್ನು ಹಾಕಿಕೊಳ್ಳುವಿರಿ. ನೀವು ನಿಮ್ಮ ದುಃಖವನ್ನು ತೋರಿಸಿಕೊಳ್ಳುವುದಿಲ್ಲ. ನೀವು ಅಳುವದೂ ಇಲ್ಲ. ಆದರೆ ನೀವು ನಿಮ್ಮ ಪಾಪಗಳ ದೆಸೆಯಿಂದ ಕೃಶರಾಗುವಿರಿ. ನೀವು ಒಬ್ಬರಿಗೊಬ್ಬರು ದುಃಖದ ಶಬ್ದಗಳನ್ನು ಮಾಡುವಿರಿ.


“ನಿಮ್ಮ ಸಂತತಿಯವರನ್ನು ನಾನು ಶಿಕ್ಷಿಸುವೆನು. ಹಬ್ಬದ ದಿವಸಗಳಲ್ಲಿ ಯಾಜಕರೇ, ನೀವು ನನಗೆ ಯಜ್ಞಗಳನ್ನರ್ಪಿಸುತ್ತೀರಿ. ಪಶುವನ್ನು ಕೊಯಿದ ಬಳಿಕ ಅದರ ಒಳಗಿನ ಭಾಗಗಳನ್ನೂ ಅದರ ಮಲವನ್ನು ನಿಮ್ಮ ಮುಖಗಳಿಗೆ ಹಚ್ಚುವೆನು ಮತ್ತು ನೀವು ಅದರೊಂದಿಗೆ ಹೊರಗೆ ಬಿಸಾಡಲ್ಪಡುವಿರಿ.


ನೀವು ಅನ್ಯಾಯವಾಗಿ ಜನರಿಂದ ಸುಂಕ ವಸೂಲಿ ಮಾಡುವಿರಿ. ಗೋದಿಯ ಮೂಟೆಗಳನ್ನು ಅವರಿಂದ ಸುಲುಕೊಳ್ಳುತ್ತೀರಿ. ಕಲ್ಲುಗಳನ್ನು ಕೊರೆದು ನಿಮಗಾಗಿ ಅಂದವಾದ ಮನೆಗಳನ್ನು ಕಟ್ಟಿಸಿಕೊಳ್ಳುವಿರಿ. ಆದರೆ ಆ ಮನೆಗಳಲ್ಲಿ ನೀವು ವಾಸಿಸುವುದಿಲ್ಲ. ಸುಂದರವಾದ ದ್ರಾಕ್ಷಿತೋಟಗಳನ್ನು ನೆಡುವಿರಿ. ಆದರೆ ಅದರ ದ್ರಾಕ್ಷಾರಸವನ್ನು ನೀವು ಕುಡಿಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು