Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:3 - ಪರಿಶುದ್ದ ಬೈಬಲ್‌

3 “ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಜ್ಞಾಪಕಮಾಡಿಕೊಂಡು ಅವುಗಳಿಗೆ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನೀವು ನನ್ನ ನಿಯಮಗಳನ್ನು ಕೈಕೊಂಡು, ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನೀವು ನನ್ನ ನಿಯಮಗಳನ್ನು ಕೈಗೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀವು ನನ್ನ ನಿಯಮಗಳನ್ನು ಕೈಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ ‘ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು, ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳಂತೆ ನಡೆದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:3
19 ತಿಳಿವುಗಳ ಹೋಲಿಕೆ  

“ನೀವು ನನ್ನ ಮಾತನ್ನು ಕೇಳಿದರೆ ನಿಮ್ಮ ದೇಶದ ಉತ್ತಮ ಫಸಲುಗಳಿಂದ ಆನಂದಿಸುವಿರಿ.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡ ಜನರೇ ಧನ್ಯರು. ಅವರು ಜೀವವೃಕ್ಷದ ಹಣ್ಣನ್ನು ತಿನ್ನಲು ಹಕ್ಕುಳ್ಳವರಾಗಿದ್ದಾರೆ. ಅವರು ಬಾಗಿಲುಗಳ ಮೂಲಕ ನಗರದೊಳಕ್ಕೆ ಹೋಗಬಲ್ಲರು.


“ನೀವು ಈ ಕಟ್ಟಳೆಗಳಿಗೆ ಕಿವಿಗೊಡುವುದಾದರೆ ಮತ್ತು ಅವುಗಳಿಗೆ ಎಚ್ಚರಿಕೆಯಿಂದ ವಿಧೇಯರಾದರೆ, ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರೊಡನೆ ಮಾಡಿಕೊಂಡ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವನು;


ನೀವು ನಿಮ್ಮ ದೇವರಾದ ಯೆಹೋವನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಾನು ನಿಮ್ಮೊಳಗಿಂದ ಎಲ್ಲಾ ವ್ಯಾಧಿಯನ್ನು ತೆಗೆದುಬಿಡುವೆನು.


ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನ್ನು ಹೊರತಂದಾಗ ನಾನು ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನ್ನು ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನ್ನ ಆಜ್ಞಾಪಾಲನೆಯನ್ನು ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನ್ನು ಮಾಡಿರಿ. ಆಗ ನೀವು ನನ್ನ ಭಕ್ತರಾಗುವಿರಿ. ನಾನು ನಿಮ್ಮ ದೇವರಾಗುವೆನು’ ಎಂದೆ.


“ಈ ಜನರು ನೆಮ್ಮದಿಯಿಂದ ಭೂಮಿಯ ಮೇಲೆ ನಡೆಯುವರು. ಅವರ ದ್ರಾಕ್ಷಾಲತೆಗಳು ದ್ರಾಕ್ಷಿಹಣ್ಣನ್ನು ಕೊಡುವವು. ದೇಶವು ಸಮೃದ್ಧಿಯಾದ ಬೆಳೆಯನ್ನು ಕೊಡುವದು. ಆಕಾಶವು ಮಳೆಯನ್ನು ಸುರಿಸುವದು. ಇವೆಲ್ಲವನ್ನು ನಾನು ನನ್ನ ಜನರಿಗೆ ಕೊಡುವೆನು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.


ಬಳಿಕ ಐದನೆಯ ವರ್ಷದಲ್ಲಿ, ನೀವು ಆ ಮರದ ಹಣ್ಣುಗಳನ್ನು ತಿನ್ನಬಹುದು ಮತ್ತು ಮರವು ನಿಮಗೆ ಹೆಚ್ಚೆಚ್ಚಾಗಿ ಹಣ್ಣುಗಳನ್ನು ನೀಡುವುದು. ನಾನೇ ನಿಮ್ಮ ದೇವರಾದ ಯೆಹೋವನು!


ಆದರೆ ನೀವು ಹಿಂತಿರುಗಿ ನನ್ನ ಬಳಿಗೆ ಬಂದು, ನನ್ನ ಕಟ್ಟಳೆಗಳಿಗೆ ವಿಧೇಯರಾದರೆ, ನಿಮ್ಮ ಜನರನ್ನು ಬಲವಂತವಾಗಿ ಭೂಲೋಕದ ಕಟ್ಟಕಡೆಯವರೆಗೆ ಕೊಂಡೊಯ್ದಿದ್ದರೂ ಅಲ್ಲಿಂದ ನನ್ನ ಹೆಸರನ್ನು ನೆಲೆಗೊಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸ್ಥಳಕ್ಕೆ ಕರೆದುಕೊಂಡು ಬರುವೆನು” ಎಂದು ಹೇಳಿರುವೆ.


ಆ ಸಮಯದಲ್ಲಿ ಯೆಹೋವನು ನಿಮಗಾಗಿ ಮಳೆ ಸುರಿಸುವನು. ನೀವು ಭೂಮಿಯಲ್ಲಿ ಬೀಜಬಿತ್ತಿದ್ದಾಗ ಫಸಲನ್ನು ಹೊಂದುವಿರಿ. ನಿಮಗೆ ಬಹುದೊಡ್ಡ ಸುಗ್ಗಿ ಆಗುವದು. ಹೊಲದಲ್ಲಿ ನಿಮ್ಮ ಪಶುಗಳಿಗೆ ಬೇಕಾದಷ್ಟು ಹುಲ್ಲು ಇರುವದು. ಮೇಯಲು ನಿಮ್ಮ ಕುರಿಗಳಿಗೆ ಬೇಕಾದಷ್ಟು ಬಯಲಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು