Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:5 - ಪರಿಶುದ್ದ ಬೈಬಲ್‌

5 ಕಣತುಳಿಸುವ ಕೆಲಸವು ದ್ರಾಕ್ಷಿಯನ್ನು ಸಂಗ್ರಹಿಸುವ ಸಮಯದವರೆಗೂ ಮುಂದುವರಿಯುವುದು; ದ್ರಾಕ್ಷಿಯನ್ನು ಸಂಗ್ರಹಿಸುವ ಕೆಲಸವು ಬಿತ್ತನೆಯ ಕಾಲದವರೆಗೂ ಮುಂದುವರಿಯುವುದು. ಆಗ ನಿಮಗೆ ಆಹಾರವು ಸಮೃದ್ಧಿಯಾಗಿರುವುದು; ನೀವು ದೇಶದಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕಣತುಳಿಸುವ ಕೆಲಸವು ದ್ರಾಕ್ಷಿಯ ಬೆಳೆಯ ಕಾಲದ ತನಕ ಮತ್ತು ದ್ರಾಕ್ಷಿಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು, ನೀವು ಸಮೃದ್ಧಿಯಾಗಿ ಊಟ ಮಾಡುವಿರಿ, ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕಣತುಳಿಸುವ ಕೆಲಸ ದ್ರಾಕ್ಷಿ ಬೆಳೆಯ ಪರ್ಯಂತರವೂ ದ್ರಾಕ್ಷೀ ಬೆಳೆಯನ್ನು ಕೂಡಿಸುವ ಕೆಲಸ ಬಿತ್ತನೆಯ ಕಾಲದ ಪರ್ಯಂತರವೂ ನಡೆಯುವುವು. ಸಮೃದ್ಧಿಯಾಗಿ ಊಟಮಾಡುವಿರಿ, ನಾಡಿನಲ್ಲಿ ನಿರ್ಭಯವಾಗಿ ವಾಸಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕಣತುಳಿಸುವ ಕೆಲಸವು ದ್ರಾಕ್ಷೆಯಬೆಳೆಯ ಪರ್ಯಂತರವೂ ದ್ರಾಕ್ಷೆಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ಪರ್ಯಂತರವೂ ನಡೆಯುವವು; ನೀವು ಸಮೃದ್ಧಿಯಾಗಿ ಊಟಮಾಡುವಿರಿ. ನಿಮ್ಮ ದೇಶದಲ್ಲಿ ನಿರ್ಭಯವಾಗಿ ವಾಸಮಾಡುವಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕಣ ತುಳಿಸುವ ಕೆಲಸವು ದ್ರಾಕ್ಷಿ ಬೆಳೆಯುವವರೆಗೂ ದ್ರಾಕ್ಷಿ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿಯನ್ನು ತಿಂದು, ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:5
26 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುವುದೇನೆಂದರೆ, “ಒಂದು ಸಮಯವು ಬರುವುದು, ಆಗ ಉಳುವವನು ಕೊಯ್ಯುವವನನ್ನೇ ಮೀರಿಸಿ ಮುಂದೆ ಹೋಗುವನು. ದ್ರಾಕ್ಷಿನೆಡುವವನು ದ್ರಾಕ್ಷಿಯನ್ನು ಕೊಯ್ಯುವನನ್ನೇ ಮೀರಿಸಿ ಮುಂದೆ ಹೋಗುವನು. ಬೆಟ್ಟಗಳಿಂದಲೂ ಪರ್ವತಗಳಿಂದಲೂ ಸಿಹಿ ದ್ರಾಕ್ಷಾರಸವು ಹರಿದುಬರುವುದು.


ಆಗ ನಿಮಗೆ ತಿನ್ನಲು ಏನೂ ಕಡಿಮೆ ಇರುವುದಿಲ್ಲ. ನೀವು ಸಂತೃಪ್ತರಾಗುವಿರಿ. ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ. ಆತನು ನಿಮಗೆ ಆಶ್ಚರ್ಯವಾದ ಕಾರ್ಯವನ್ನು ಮಾಡಿದ್ದಾನೆ. ನನ್ನ ಜನರು ಇನ್ನು ಮುಂದೆ ಎಂದೂ ನಾಚಿಕೆಗೆ ಗುರಿಯಾಗರು.


ಯೆಹೋವನು ತನ್ನ ಜನರೊಂದಿಗೆ ಮಾತನಾಡಿ ಹೀಗೆ ಹೇಳಿದನು: “ನಾನು ನಿಮಗೆ ಧಾನ್ಯ, ದ್ರಾಕ್ಷಾರಸ, ಎಣ್ಣೆಯನ್ನು ಕಳುಹಿಸುವೆನು. ನಿಮಗೆ ಬೇಕಾದಷ್ಟು ಇರುವದು. ಅನ್ಯ ಜನಾಂಗದವರೆದುರು ನಿಮ್ಮನ್ನು ಇನ್ನು ಮುಂದೆ ನಾಚಿಕೆಗೆ ಗುರಿಪಡಿಸುವುದಿಲ್ಲ.


ಆದರೆ ನನಗೆ ವಿಧೇಯನಾಗುವವನು ಕ್ಷೇಮವಾಗಿಯೂ ಸುಖವಾಗಿಯೂ ಬದುಕುವನು. ಅವನು ಅಪಾಯಕ್ಕೆ ಭಯಪಡುವ ಅವಶ್ಯವಿಲ್ಲ.”


ನಿಮ್ಮ ಹೊಲಗಳಲ್ಲಿ ಮತ್ತು ನಿಮ್ಮ ಪಶುಗಳಿಗೆ ಹುಲ್ಲು ಹುಲುಸಾಗಿ ಬೆಳೆಯುವಂತೆ ಮಾಡುವೆನು. ನಿಮಗೆ ಆಹಾರವು ಸಮೃದ್ಧಿಕರವಾಗಿರುವುದು.’


ಇಹಲೋಕದ ವಿಷಯಗಳಲ್ಲಿ ಶ್ರೀಮಂತರಾಗಿರುವ ಜನರಿಗೆ ಈ ಆಜ್ಞೆಗಳನ್ನು ತಿಳಿಸು. ಗರ್ವಪಡದಂತೆಯೂ ಹಣವನ್ನು ಅವಲಂಬಿಸಿಕೊಳ್ಳದೆ ದೇವರಲ್ಲೇ ನಿರೀಕ್ಷೆಯಿಡುವಂತೆಯೂ ಅವರಿಗೆ ತಿಳಿಸು. ಹಣವು ಭರವಸೆಗೆ ಯೋಗ್ಯವಲ್ಲ. ದೇವರಾದರೋ ನಮ್ಮ ಸಂತೋಷಕ್ಕಾಗಿ ಸಮಸ್ತವನ್ನು ನಮಗೆ ಧಾರಾಳವಾಗಿ ದಯಪಾಲಿಸುತ್ತಾನೆ.


ದೇವರ ಶಕ್ತಿಯು ನಿಮ್ಮ ನಂಬಿಕೆಯ ಮೂಲಕ ನಿಮ್ಮನ್ನು ಕಾಯುತ್ತದೆ. ನಿಮಗೆ ರಕ್ಷಣೆಯಾಗುವವರೆಗೆ ನಿಮ್ಮನ್ನು ಸುರಕ್ಷಿತವಾಗಿಡುತ್ತದೆ. ಸಿದ್ಧವಾಗಿರುವ ಆ ರಕ್ಷಣೆಯು ಅಂತ್ಯಕಾಲದಲ್ಲಿ ನಿಮಗೆ ದೊರೆಯುವುದು.


ಆದರೆ ತಾನೊಬ್ಬನೇ ನಿಜದೇವರೆಂಬುದನ್ನು ಆತನು ತನ್ನ ಒಳ್ಳೆಯ ಕಾರ್ಯಗಳಿಂದ ನಿರೂಪಿಸುತ್ತಿದ್ದಾನೆ. ಆತನು ನಿಮಗೆ ಆಕಾಶದಿಂದ ಮಳೆಯನ್ನೂ ನಿಮ್ಮ ಆಹಾರಕೋಸ್ಕರ ಸಕಾಲದಲ್ಲಿ ಸುಗ್ಗಿಯನ್ನೂ ದಯಪಾಲಿಸಿ ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸುತ್ತಿದ್ದಾನೆ.”


“ಜೆರುಸಲೇಮೇ, ಜೆರುಸಲೇಮೇ! ಪ್ರವಾದಿಗಳನ್ನು ಕೊಲ್ಲುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ಕಲ್ಲುಗಳಿಂದ ಕೊಲ್ಲುವವಳೇ, ಅನೇಕ ಸಲ ನಿನ್ನ ಜನರಿಗೆ ನಾನು ಸಹಾಯ ಮಾಡಬೇಕೆಂದಿದ್ದೆನು. ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವ ಹಾಗೆ ನಿನ್ನ ಜನರನ್ನು ಸೇರಿಸಿಕೊಳ್ಳಲು ನನಗೆ ಮನಸ್ಸಿತ್ತು. ಆದರೆ ನೀನು ಒಪ್ಪಲಿಲ್ಲ.


ಸದ್ಧರ್ಮದ ‘ಸಸಿಯ’ ಸಮಯದಲ್ಲಿ ಯೆಹೂದದ ಜನರು ರಕ್ಷಿಸಲ್ಪಡುವರು ಮತ್ತು ಇಸ್ರೇಲ್ ಸುರಕ್ಷಿತವಾಗಿರುವುದು. ಯೆಹೋವನೇ, ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು.”


ಯೆಹೋವನ ಹೆಸರು ಬಲವಾದ ಗೋಪುರದಂತಿದೆ. ಒಳ್ಳೆಯವರು ಅದರೊಳಗೆ ಓಡಿಹೋಗಿ ಸುರಕ್ಷಿತವಾಗಿರುವರು.


ಯೆಹೋವನೇ, ತಲತಲಾಂತರಗಳಿಂದಲೂ ನೀನೇ ನಮ್ಮ ವಾಸಸ್ಥಾನ.


ಅಲ್ಲದೆ ಮೋಶೆಯು, “ನೀವು ಗೊಣಗುಟ್ಟುತ್ತಿರುವುದನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ರಾತ್ರಿಯಲ್ಲಿ ಆತನು ನಿಮಗೆ ಮಾಂಸವನ್ನು ಕೊಡುವನು. ಪ್ರತಿ ಮುಂಜಾನೆ ನಿಮಗೆ ಬೇಕಾದಷ್ಟು ರೊಟ್ಟಿಯು ದೊರಕುವುದು. ನೀವು (ಆರೋನನ ಮೇಲೂ ನನ್ನ ಮೇಲೂ) ಗೊಣಗುಟ್ಟುತ್ತಿದ್ದೀರಿ? ಆದರೆ ನಮಗೆ ದೂರು ಹೇಳಲು ನಾವೆಷ್ಟರವರು? ನೀವು ಯೆಹೋವನ ವಿರುದ್ಧವಾಗಿ ದೂರು ಹೇಳುತ್ತಿದ್ದೀರೆಂಬುದು ನಿಮ್ಮ ಜ್ಞಾಪಕದಲ್ಲಿರಲಿ” ಎಂದು ಹೇಳಿದನು.


“ಆ ಸಮಯದಲ್ಲಿ ನಾನು ಇಸ್ರೇಲರಿಗೋಸ್ಕರವಾಗಿ ಅಡವಿಯ ಮೃಗಗಳೊಂದಿಗೂ ಆಕಾಶದ ಪಕ್ಷಿಗಳೊಂದಿಗೂ ನೆಲದ ಮೇಲೆ ಹರಿದಾಡುವ ಜಂತುಗಳೊಂದಿಗೂ ಒಡಂಬಡಿಕೆ ಮಾಡುವೆನು. ನಾನು ಯುದ್ಧದ ಆಯುಧ, ಬಿಲ್ಲು, ಖಡ್ಗಗಳನ್ನು ತುಂಡು ಮಾಡುವೆನು. ಆ ದೇಶದೊಳಗೆ ಯಾವ ಆಯುಧವೂ ಇರದು. ಆಗ ಇಸ್ರೇಲಿನ ಜನರು ನಿಶ್ಟಿಂತೆಯಿಂದ ಮಲಗುವರು.


ನಮ್ಮ ಕಣಜಗಳು ಸಕಲ ಬಗೆಯ ದವಸಧಾನ್ಯಗಳಿಂದ ತುಂಬಿರುತ್ತವೆ. ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುತ್ತವೆ.


“ನೀವು ನನ್ನ ಮಾತನ್ನು ಕೇಳಿದರೆ ನಿಮ್ಮ ದೇಶದ ಉತ್ತಮ ಫಸಲುಗಳಿಂದ ಆನಂದಿಸುವಿರಿ.


ಆ ಸಮಯದಲ್ಲಿ ಯೆಹೋವನು ನಿಮಗಾಗಿ ಮಳೆ ಸುರಿಸುವನು. ನೀವು ಭೂಮಿಯಲ್ಲಿ ಬೀಜಬಿತ್ತಿದ್ದಾಗ ಫಸಲನ್ನು ಹೊಂದುವಿರಿ. ನಿಮಗೆ ಬಹುದೊಡ್ಡ ಸುಗ್ಗಿ ಆಗುವದು. ಹೊಲದಲ್ಲಿ ನಿಮ್ಮ ಪಶುಗಳಿಗೆ ಬೇಕಾದಷ್ಟು ಹುಲ್ಲು ಇರುವದು. ಮೇಯಲು ನಿಮ್ಮ ಕುರಿಗಳಿಗೆ ಬೇಕಾದಷ್ಟು ಬಯಲಿವೆ.


ನಿನ್ನನ್ನು ನಾನು ನನ್ನ ನಂಬಿಗಸ್ತಳಾದ ವಧುವನ್ನಾಗಿ ಮಾಡುವೆನು. ಆಗ ನೀನು ನನ್ನನ್ನು ನಿಜವಾಗಿಯೂ ಅರಿತುಕೊಳ್ಳುವೆ.


ಅಡವಿಯಲ್ಲಿರುವ ಪ್ರಾಣಿಗಳೇ, ಭಯಪಡಬೇಡಿ. ಮರುಭೂಮಿಯು ಹುಲ್ಲುಗಾವಲಾಗುವದು. ಮರಗಳು ಹಣ್ಣುಗಳನ್ನು ಬಿಡುವವು. ಅಂಜೂರದ ಮರಗಳೂ ದ್ರಾಕ್ಷಿಬಳ್ಳಿಗಳೂ ಬಹಳ ಹಣ್ಣುಗಳನ್ನು ಬಿಡುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು