Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:8 - ಪರಿಶುದ್ದ ಬೈಬಲ್‌

8 ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಓಡಿಸುವರು; ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಓಡಿಸುವರು; ನೀವು ನಿಮ್ಮ ವೈರಿಗಳನ್ನು ಸೋಲಿಸಿ ಕತ್ತಿಯಿಂದ ಕೊಲ್ಲುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿಮ್ಮಲ್ಲಿ ಐದು ಜನರು ನೂರು ಜನರನ್ನೂ ಮತ್ತು ನೂರು ಜನರು ಹತ್ತು ಸಾವಿರ ಜನರನ್ನೂ ಓಡಿಸುವರು; ನಿಮ್ಮ ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನೂ, ನೂರು ಮಂದಿ ಹತ್ತು ಸಾವಿರ ಮಂದಿಯನ್ನೂ ಓಡಿಸುವರು. ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿಮ್ಮಲ್ಲಿ ಐದು ಮಂದಿಯು ನೂರು ಮಂದಿಯನ್ನೂ ನೂರು ಮಂದಿಯು ಹತ್ತುಸಾವಿರ ಮಂದಿಯನ್ನೂ ಓಡಿಸುವರು; ನಿಮ್ಮ ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿಮ್ಮಲ್ಲಿಯ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿಯ ನೂರು ಮಂದಿ, ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ಖಡ್ಗದಿಂದ ನಿಮ್ಮ ಮುಂದೆ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:8
15 ತಿಳಿವುಗಳ ಹೋಲಿಕೆ  

ಯೆಹೋವನ ಸಹಾಯದಿಂದ ನಿಮ್ಮಲ್ಲಿ ಒಬ್ಬ ಇಸ್ರೇಲಿಯು ಒಂದು ಸಾವಿರ ಮಂದಿ ಶತ್ರುಗಳನ್ನು ಸೋಲಿಸುವಂತಾಯಿತು; ಏಕೆಂದರೆ ನಿಮ್ಮ ದೇವರಾದ ಯೆಹೋವನು ನಿಮಗಾಗಿ ಯುದ್ಧ ಮಾಡುವುದಾಗಿ ಪ್ರಮಾಣ ಮಾಡಿದ್ದಾನೆ.


“ವೈರಿಗಳು ನಿಮ್ಮೆದುರಾಗಿ ಯುದ್ಧಮಾಡಲು ಬಂದಾಗ ನಿಮಗೆ ಆತನು ಸಹಾಯ ಮಾಡುವನು. ವೈರಿಗಳು ಒಂದು ದಿಕ್ಕಿನಿಂದ ಬಂದರೆ ಏಳು ದಾರಿಯಲ್ಲಿ ಪಲಾಯನ ಮಾಡುವರು.


ಒಬ್ಬನು ಸಾವಿರ ಮಂದಿಯನ್ನು ಓಡಿಸಬಲ್ಲನೇ? ಇಬ್ಬರು ಹತ್ತು ಸಾವಿರ ಮಂದಿಯನ್ನು ಓಡಿಸುವರೇ? ಯೆಹೋವನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುವಾಗ ಹಾಗೆಯೇ ಆಗುವುದು, ಅವರ ಬಂಡೆಯಾದ ದೇವರು ಅವರನ್ನು ಗುಲಾಮರನ್ನಾಗಿ ಮಾರುವನು;


ಯೋವಾಬನ ತಮ್ಮನಾದ ಅಬ್ಷೈಯು ಬೇರೆ ಮೂರು ಮಂದಿ ಪರಾಕ್ರಮಿಗಳ ನಾಯಕನಾಗಿದ್ದನು. ಆ ಮೂವರು ಪರಾಕ್ರಮಿಗಳಷ್ಟೇ ಇವನೂ ಪ್ರಖ್ಯಾತನಾಗಿದ್ದನು. ಅವನು ತನ್ನ ಬರ್ಜಿಯಿಂದ ಮುನ್ನೂರು ಮಂದಿಯೊಂದಿಗೆ ಯುದ್ಧಮಾಡಿ ಅವರನ್ನು ಹತಮಾಡಿದನು.


ಹೀಗಿರುವುದರಿಂದ ಯೆಹೋವನಿಗೆ ವಿರುದ್ಧವಾಗಿ ಏಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ನಾವು ಅವರನ್ನು ಸೋಲಿಸಬಹುದು. ಅವರಿಗೆ ಯಾವ ಸಂರಕ್ಷಣೆ ಇರುವುದಿಲ್ಲ. ಆದರೆ ನಮ್ಮ ಕಡೆ ಯೆಹೋವನು ಇದ್ದಾನೆ. ಆದ್ದರಿಂದ ಭಯಪಡಬೇಡಿರಿ” ಅಂದರು.


ದಾವೀದನ ಸೈನ್ಯದಲ್ಲಿದ್ದ ಪರಾಕ್ರಮಿಗಳು ಯಾರೆಂದರೆ: ಹೆಕ್ಮೋನಿಯನಾದ ಯಾಷೊಬ್ಬಾಮನು. ಇವನು ರಥಾಶ್ವಗಳ ಅಧಿಕಾರಿಗಳಿಗೆ ಅಧಿಪತಿಯಾಗಿದ್ದನು; ಒಂದೇ ಸಾರಿ ಮುನ್ನೂರು ಮಂದಿಯನ್ನು ತನ್ನ ಬರ್ಜಿಯಿಂದ ಕೊಂದಿದ್ದನು.


“ನೀವು ನಿಮ್ಮ ವೈರಿಗಳನ್ನು ಸೋಲಿಸಿ ಓಡಿಸಿಬಿಡುವಿರಿ. ನಿಮ್ಮ ಕತ್ತಿಗಳಿಂದ ಅವರನ್ನು ಕೊಲ್ಲುವಿರಿ.


ಸಂಸೋನನು ಸತ್ತಕತ್ತೆಯ ದವಡೇ ಎಲುಬನ್ನು ಕಂಡನು. ಅವನು ಆ ದವಡೇ ಎಲುಬನ್ನು ತೆಗೆದುಕೊಂಡು ಅದರಿಂದ ಒಂದು ಸಾವಿರ ಫಿಲಿಷ್ಟಿಯರನ್ನು ಕೊಂದುಹಾಕಿದನು.


ಅದೇ ಸಮಯದಲ್ಲಿ ಇತರ ಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಾವು ಬಲಹೊಂದುವಂತೆ ಒಟ್ಟಾಗಿ ಸೇರಿ ಒಗ್ಗಟ್ಟಿನಲ್ಲಿದ್ದು ತಮ್ಮ ವೈರಿಗಳನ್ನು ಸಂಪೂರ್ಣವಾಗಿ ನಿರ್ನಾಮ ಮಾಡಿದರು. ಹೀಗೆ ಒಟ್ಟು ಎಪ್ಪತ್ತೈದು ಸಾವಿರ ಜನರು ಹತಿಸಲ್ಪಟ್ಟರು. ಆದರೆ ಅವರ ಆಸ್ತಿಯನ್ನು ಸೂರೆ ಮಾಡಲಿಲ್ಲ.


ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ಯೆಹೋವನು ಕಾಪಾಡುತ್ತಾನೆ. ಬಲಹೀನ ಮನುಷ್ಯನೂ ದಾವೀದನಂತೆ ಶೂರನಾಗುವನು. ದಾವೀದನ ಸಂತತಿಯ ಜನರು ದೇವರುಗಳಂತಿದ್ದು ದೇವರ ಸ್ವಂತ ದೂತರಂತೆ ತಮ್ಮ ಜನರನ್ನು ನಡಿಸುವರು.


ಇಸ್ರೇಲಿನ ಕುಲಗಳವರಲ್ಲಿ ಪ್ರತಿಯೊಂದು ಕುಲದಿಂದ ಒಂದು ಸಾವಿರ ಗಂಡಸರನ್ನು ದಂಡೆಯಾತ್ರೆಗೆ ಕಳುಹಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು